Homeಮುಖಪುಟಜುನೈದ್‌, ನಾಸಿರ್ ಕೊಲೆ ಪ್ರಕರಣ: ಸ್ವಯಂ ಘೋಷಿತ ಗೋರಕ್ಷಕ ಮಾನೇಸರ್‌ಗೆ ಪೊಲೀಸ್‌ ಕಸ್ಟಡಿ

ಜುನೈದ್‌, ನಾಸಿರ್ ಕೊಲೆ ಪ್ರಕರಣ: ಸ್ವಯಂ ಘೋಷಿತ ಗೋರಕ್ಷಕ ಮಾನೇಸರ್‌ಗೆ ಪೊಲೀಸ್‌ ಕಸ್ಟಡಿ

- Advertisement -
- Advertisement -

ಗುರುಗ್ರಾಮದಲ್ಲಿ ಜುನೈದ್‌–ನಾಸಿರ್ ಕೊಲೆ ಪ್ರಕರಣದ ಆರೋಪಿ ಬಜರಂಗದಳದ ಕಾರ್ಯಕರ್ತ, ಸ್ವಯಂ ಘೋಷಿತ ಗೋರಕ್ಷಕ ಮೋನು ಮಾನೇಸರ್‌ನನ್ನು ನಾಲ್ಕು ದಿನ ಪೊಲೀಸ್‌ ವಶಕ್ಕೆ ನೀಡಿ ಸ್ಥಳೀಯ ನ್ಯಾಯಾಲಯ ಶನಿವಾರ ಆದೇಶಿಸಿದೆ.

ಪಟೌದಿಯ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ತರನ್ನುಮ್‌ ಖಾನ್ ಅವರೆದುರು ಮಾನೇಸರ್‌ಗೆ  ಹಾಜರುಪಡಿಸಲಾಗಿತ್ತು. ಪಾತಕಿಗಳ ಗುಂಪಿನೊಂದಿಗೆ ಮಾನೇಸರ್ ನಂಟು ಹೊಂದಿದ್ದಾರೆಯೇ ಎಂಬ ಬಗ್ಗೆ ವಿಚಾರಣೆ ನಡೆಸಬೇಕಿದೆ. ಹೀಗಾಗಿ 7 ದಿನ ಆರೋಪಿಯನ್ನು ವಶಕ್ಕೆ ನೀಡಬೇಕು ಎಂದು ಗುರುಗ್ರಾಮ ಪೊಲೀಸರು ಮನವಿ ಮಾಡಿದ್ದರು. ಆದರೆ ಕೋರ್ಟ್‌ ನಾಲ್ಕು ದಿನ ಆತನಿಗೆ ವಶಕ್ಕೆ ನೀಡಿದೆ.

ಗುರುಗ್ರಾಮ್ ಮೂಲದ ಮೋಹಿತ್ ಯಾದವ್ ಎಂದೂ ಕರೆಯಲ್ಪಡುವ ಮೋನು ಮಾನೇಸರ್ ರಾಜಸ್ಥಾನದ ಭರತ್‌ಪುರ ಜಿಲ್ಲೆಯ ನಾಸಿರ್ ಮತ್ತು ಜುನೈದ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ. ಫೆಬ್ರವರಿ 15 ರಂದು  ಹರಿಯಾಣದ ಭಿವಾನಿಯಲ್ಲಿ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿತ್ತು.

ಈ ಪ್ರಕರಣದಲ್ಲಿ ರಾಜಸ್ಥಾನ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಮೋನು ಮಾನೇಸರ್‌ನನ್ನು ಪ್ರಮುಖ ಆರೋಪಿ ಎಂದು ಪಟ್ಟಿ ಮಾಡಿದ್ದರು. ಆದರೆ ಆತ ಹಲವಾರು ತಿಂಗಳುಗಳವರೆಗೆ ಬಂಧನದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ.

ಇದಲ್ಲದೆ ಮೋನು ಮಾನೇಸರ್ ಇತ್ತೀಚೆಗೆ ಹರಿಯಾಣದ ನುಹ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ. ಈತನ ಮೇಲೆ ನುಹ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಇದೆ. ನುಹ್‌ನಲ್ಲಿ ನಡೆದ ಹಿಂಸಾಚಾರದ ಪರಿಣಾಮವಾಗಿ ಆರು ಮಂದಿ ಮೃತಪಟ್ಟಿದ್ದರು. ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ‘ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆ’ ವೇಳೆ ಹಿಂಸಾಚಾರ ಪ್ರಾರಂಭವಾಯಿತು, ಇದು ಗುರುಗ್ರಾಮ್ ಸೇರಿದಂತೆ ಸುತ್ತಮುತ್ತಲಿನ ಇತರ ಪ್ರದೇಶಗಳಿಗೆ ವ್ಯಾಪಿಸಿತ್ತು.

ಇದನ್ನು ಓದಿ: ಮಧ್ಯಪ್ರದೇಶ: ಒಂದೇ ಗ್ರಾಮದ 50ಶೇ. ಜನರಲ್ಲಿ ಕಾಣಿಸಿಕೊಂಡ ಡೆಂಗ್ಯೂ: ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...