Homeಕರ್ನಾಟಕಬಿಜೆಪಿ-ಜೆಡಿಎಸ್‌ ಮೈತ್ರಿ: ರಾಷ್ಟ್ರೀಯ ನಾಯಕರ ನಿರ್ಧಾರವನ್ನು ತಿರಸ್ಕರಿಸಿದ ಕೇರಳ ಜೆಡಿಎಸ್‌ ಘಟಕ

ಬಿಜೆಪಿ-ಜೆಡಿಎಸ್‌ ಮೈತ್ರಿ: ರಾಷ್ಟ್ರೀಯ ನಾಯಕರ ನಿರ್ಧಾರವನ್ನು ತಿರಸ್ಕರಿಸಿದ ಕೇರಳ ಜೆಡಿಎಸ್‌ ಘಟಕ

- Advertisement -
- Advertisement -

ಜೆಡಿಎಸ್‌ ಕೇರಳ ಘಟಕವು ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ.

ಕೊಚ್ಚಿಯಲ್ಲಿ ನಡೆದ ಜೆಡಿಎಸ್‌ನ ಕೇರಳ ಘಟಕದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ 2024ರ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷದ ವರಿಷ್ಠರ ನಿರ್ಧಾರದ ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ.

ಸಭೆಯ ಬಳಿಕ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ, ಶಾಸಕ ಮ್ಯಾಥ್ಯೂ ಟಿ.ಥಾಮಸ್, ರಾಷ್ಟ್ರೀಯ ನಾಯಕತ್ವದ ಎನ್‌ಡಿಎ ಸೇರುವ ನಿರ್ಧಾರವನ್ನು ವಿರೋಧಿಸುತ್ತೇವೆ. ಜೆಡಿಎಸ್‌ನ ಕೇರಳ ಘಟಕ ಆಡಳಿತರೂಢ ಎಡರಂಗದೊಂದಿಗಿನ ತನ್ನ ನಾಲ್ಕೂವರೆ ದಶಕಗಳ ಮೈತ್ರಿಯನ್ನು ಮುಂದುವರಿಸಲಿದೆ ಎಂದು ಹೇಳಿದ್ದಾರೆ.

ಜಾತ್ಯತೀತತೆ, ಸಮಾಜವಾದ ಹಾಗೂ ಪ್ರಜಾಪ್ರಭುತ್ವದ ನಿಲುವುಗಳಿಗೆ ಪಕ್ಷ ಬದ್ದವಾಗಿರುವುದರಿಂದ ಜೆಡಿಎಸ್‌ನ ಕೇರಳ ಘಟಕ ಎಡರಂಗದೊಂದಿಗಿನ ಮೈತ್ರಿ ಮುಂದುವರಿಸಲಿದೆ. ಬಿಜೆಪಿ ಸೇರಲು ದೇವೆಗೌಡ ಅವರು ನೀಡಿದ ಕಾರಣ ನಮಗೆ ತೃಪ್ತಿ ನೀಡಿಲ್ಲಎಂದು ಶಾಸಕ ಮ್ಯಾಥ್ಯೂ ಟಿ. ಥಾಮಸ್ ಹೇಳಿದ್ದಾರೆ.

ಪಕ್ಷದ ಯಾವುದೇ ವೇದಿಕೆಯಲ್ಲಿ ಚರ್ಚೆ ನಡೆಸದೆ ರಾಷ್ಟ್ರೀಯ ನಾಯಕತ್ವ ಮೈತ್ರಿ ಘೋಷಣೆ ಮಾಡಿದೆ. ಬಿಜೆಪಿ ಜೊತೆ ಕೈಜೋಡಿಸಿ ಎಂಬ ಘೋಷಣೆ ಸಂಘಟನಾ ನೀತಿಗೆ ವಿರುದ್ಧವಾಗಿದೆ. ಜೆಡಿಎಸ್‌ನ ಕೇರಳ ಘಟಕವು ಮೈತ್ರಿಗೆ ವಿರದ್ಧವಾಗಿದೆ ಎಂದು ಹೇಳಿದ್ದಾರೆ.

ಜೆಡಿಎಸ್‌ನ ರಾಷ್ಟ್ರೀಯ ನಾಯಕತ್ವವು ಬಿಜೆಪಿಯೊಂದಿಗೆ ಸಂಬಂಧವನ್ನು ಘೋಷಿಸಿದ ನಂತರವೂ ಸಹ ತನ್ನ ಮಿತ್ರಪಕ್ಷವಾಗಿ ಜೆಡಿಎಸ್‌ನ್ನು ಉಳಿಸಿಕೊಳ್ಳಲು ಕೇರಳದ ಆಡಳಿತಾರೂಢ ಸಿಪಿಎಂ ಇಚ್ಚಿಸಿದೆ ಎಂದು ಕಾಂಗ್ರೆಸ್ ಟೀಕಿಸಿದ ಬೆನ್ನಲ್ಲೇ ಜೆಡಿಎಸ್‌ ಕೇರಳ ಘಟಕ ಈ ಸ್ಪಷ್ಟನೆಯನ್ನು ನೀಡಿದೆ.

ಇದನ್ನು ಓದಿ: ದ್ವೇಷ ಭಾಷಣ: ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...