HomeUncategorizedನಮ್ಮ ಗೌರಿಗೆ ನ್ಯೂಸಿಯಂ ಗೌರವ

ನಮ್ಮ ಗೌರಿಗೆ ನ್ಯೂಸಿಯಂ ಗೌರವ

- Advertisement -
- Advertisement -

ನಮ್ಮೆಲ್ಲರ ಪ್ರೀತಿಯ ಸಂಗಾತಿ, ದಿಟ್ಟ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಮೇರಿಕಾದ ನ್ಯೂಸಿಯಂ ತನ್ನ ಪತ್ರಕರ್ತರ ಸ್ಮಾರಕಕ್ಕೆ ಸೇರ್ಪಡೆ ಮಾಡಿ ಗೌರವಿಸಿದೆ. ಇಡೀ ದೇಶದಲ್ಲಿ ಇಂತಹ ಗೌರವಕ್ಕೆ ಪಾತ್ರರಾದ ಮತ್ತೊಬ್ಬ ಪತ್ರಕರ್ತ ತ್ರಿಪುರಾದ ಸುದೀಪ್ ದತ್ತ ಭೌಮಿಕ್.
ನ್ಯೂಸಿಯಂ ಎಂಬುದು ಅಮೇರಿಕಾದ ‘ಫ್ರೀಡಂ ಫೋರಂ ಇಸ್ಟಿಟ್ಯೂಟ್’ ಅಡಿಯಲ್ಲಿರುವ ಪತ್ರಿಕಾ ಮ್ಯೂಸಿಯಂ. ವಿಶ್ವದಾದ್ಯಂತ ಪತ್ರಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಎತ್ತಿತೋರಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಈ ಸಂಸ್ಥೆ ಜಾಗೃತಿ ಮೂಡಿಸುತ್ತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯೋಜನೆಯ ಭಾಗವಾಗಿಯೇ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ. ಪತ್ರಿಕಾ ವೃತ್ತಿಗಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ಪತ್ರಕರ್ತರನ್ನು ಈ ಸ್ಮಾರಕಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ.
ನ್ಯೂಸಿಯಂ ಸ್ಮಾರಕವು ಪತ್ರಕರ್ತರು ತಮ್ಮ ಕರ್ತವ್ಯದ ಅವಧಿಯಲ್ಲಿ ಮರಣಕ್ಕೊಳಪಟ್ಟ ಪತ್ರಕರ್ತರನ್ನು ಸ್ಮರಿಸುತ್ತದೆ. ಪತ್ರಿಕಾ ವೃತ್ತಿಯಲ್ಲಿ ಅಪಾಯಗಳನ್ನು ಎದುರಿಸಿ ದಿಟ್ಟ ಪತ್ರಕರ್ತರಾಗಿ ಪ್ರಾಣಕಳೆದುಕೊಂಡ ಪತ್ರಕರ್ತರನ್ನು ಗುರುತಿಸಿ ಪ್ರತಿ ವರ್ಷ ತನ್ನ ವಾರ್ಷಿಕ ಸಮಾರಂಭದಲ್ಲಿ ಗೌರವಿಸುತ್ತದೆ. ಸ್ಮಾರಕಕ್ಕೆ ಆಯ್ಕೆಯಾದ ನೂರಾರು ಪತ್ರಕರ್ತರ ಛಾಯಾಚಿತ್ರಗಳನ್ನು ಮತ್ತು ವಿವರವಾದ ಮಾಹಿತಿಯನ್ನು ಸಹ ನ್ಯೂಸಿಯಂ ಒಳಗೊಂಡಿದೆ. ನ್ಯೂಸಿಯಂ ಪತ್ರಿಕೋದ್ಯಮದ ಅಪಾಯಕಾರಿ ಕಾರ್ಯಾಚರಣೆಗಳ ಕಲಾಕೃತಿಯನ್ನು ಪ್ರದರ್ಶಿಸುತ್ತದೆ.

ವಾಷಿಂಗ್ಟನ್‍ನಲ್ಲಿ ನಡೆದ ವಾರ್ಷಿಕ ಸಮಾರಂಭದಲ್ಲಿ ಭಾರತದ ಇಬ್ಬರು ಪತ್ರಕರ್ತರನ್ನು ಒಳಗೊಂಡು 18 ಪತ್ರಕರ್ತರನ್ನು ಸೇರಿಸಿಕೊಳ್ಳಲಾಯಿತು. ಆಯ್ಕೆಯಾದ ಈ ಪತ್ರಕರ್ತರ ಪೈಕಿ 8 ಮಹಿಳಾ ಪತ್ರಕರ್ತೆಯರೂ ಕೂಡ ಇದ್ದಾರೆ. ಗËರಿ ಮೇಡಂ ಅವರನ್ನು ನ್ಯೂಸಿಯಂ ವಿಶೇಷವಾಗಿ ಗುರುತಿಸಿದೆ. ‘ಇವರು ತಮ್ಮ ‘ಗೌರಿ ಲಂಕೇಶ್’ ವಾರ ಪತ್ರಿಕೆಯ ಸಂಪಾದಕರಾಗಿದ್ದರು, ಜಾತಿ ಪದ್ದತಿ ಹಾಗೂ ಹಿಂದೂ ಮೂಲಭೂತವಾದದ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ರಾಷ್ಟ್ರೀಯವಾದಿಗಳನ್ನು ನೇರವಾಗಿ ಟೀಕಿಸಿದ್ದ ಕರ್ನಾಟಕದ ದಿಟ್ಟ ಪತ್ರಕರ್ತೆ’ ಎಂದು ನ್ಯೂಸಿಯಂ ಹೇಳಿದೆ.
ಹಾಗೆಯೇ ತ್ರಿಪುರಾದ ಸ್ಥಳೀಯ ದಿನಪತ್ರಿಕೆ ಪತ್ರಕರ್ತರಾದ ‘ಸುದೀಪ್ ದತ್ತಾ ಭೌಮಿಕ್ ಅವರು ಸ್ಥಳೀಯ ಅರೆಸೇನಾ ಮುಖ್ಯಸ್ಥ ತಪನ್ ದೇವ್ ವರ್ಮಾ ಭಾಗಿಯಾಗಿದ್ದ ಹಲವಾರು ಆರ್ಥಿಕ ಅಕ್ರಮಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳನ್ನು ಬಹಿರಂಗಪಡಿಸಿದ್ದರು, ಇವರನ್ನು ದೇವ್ ವರ್ಮಾ ಅಂಗರಕ್ಷಕರೇ ಹತ್ಯೆ ಮಾಡಿದ್ದಾರೆ’ ಎಂದು ನ್ಯೂಸಿಯಂ ತಿಳಿಸಿದೆ.
ಭೌಮಿಕ್ ಅವರು ಪೊಲೀಸರ ಭ್ರಷ್ಟಾಚಾರ ಕುರಿತು ತನಿಖಾ ವರದಿಯನ್ನು ಪ್ರಕಟಿಸಿದ್ದರು. 2017ರ 21ರಂದು ತಪನ್ ದೇವ್ ವರ್ಮಾರನ್ನು ಭೇಟಿ ಮಾಡಿದ್ದರು. ಭೇಟಿಯಾದ ಒಂದು ವಾರದ ನಂತರ ಭೌಮಿಕ್ ಅರೆಸೇನಾ ಪಡೆಯಲ್ಲಿರುವ ಭ್ರಷ್ಟಾಚಾರದ ಬಗ್ಗೆ ವರದಿ ಪ್ರಕಟಿಸಿದ್ದರು. ತ್ರಿಪುರ ಬೆಟಾಲಿಯನ್ ಕಮಾಂಡೆಂಟ್ ತಪನ್ ದೇವ್ ವರ್ಮಾ ಅಸ್ತಿತ್ವದಲ್ಲೇ ಇರುವ ಕಂಪನಿಯಿಂದ 10 ಕೋಟಿ ಮೌಲ್ಯದ ವಸ್ತುಗಳನ್ನು ಖರೀದಿಸಿರುವುದಾಗಿ ಖೊಟ್ಟಿ ಬಿಲ್ಲುಗಳನ್ನು ಸೃಷ್ಟಿಸಿ, ಹಣ ಗುಳುಂ ಮಾಡಿದ್ದರು. ತಮ್ಮ ಬಂಡವಾಳ ಬಯಲಾಗಿದ್ದರಿಂದ ಕೆರಳಿದ ಬಟಾಲಿಯನ್ ಕಮಾಂಡೆಂಟ್, ಪತ್ರಕರ್ತ ಭೌಮಿಕ್ ಅವರನ್ನು ತಮ್ಮ ಅಂಗರಕ್ಷಕರ ಮೂಲಕ ಕೊಲ್ಲಿಸಿದ್ದರು. ಭಾರೀ ಹೋರಾಟದ ನಂತರ ಬಂಧನಕ್ಕೊಳಗಾಗಿರುವ ಕಮಾಂಡೆಂಟ್ ಸದ್ಯ ಜೈಲಿನಲ್ಲಿದ್ದಾನೆ.
ಸತ್ಯದ ಪರವಾಗಿ ದಿಟ್ಟವಾಗಿ ನಿಂತ ಪತ್ರಕರ್ತರ ಪಾಲಿಗೆ ಭಾರತ ಅತ್ಯಂತ ಅಪಾಯಕಾರಿ ದೇಶವಾಗಿ ಪರಿಣಮಿಸಿದೆ. ಪತ್ರಿಕಾ ಸ್ವಾತಂತ್ರ್ಯದ ಕ್ರಮಾಂಕದಲ್ಲಿ ಭಾರತ ನೆರೆಯ ಪಾಕಿಸ್ತಾನ, ಶ್ರೀಲಂಕಾ ದೇಶಗಳಿಗಿಂತಲೂ ಕೆಳಕ್ಕೆ ಜಾರಿ ಇದೀಗ 138ನೇ ಸ್ಥಾನಕ್ಕೆ ಕುಸಿದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...