HomeUncategorizedನಮ್ಮ ಗೌರಿಗೆ ನ್ಯೂಸಿಯಂ ಗೌರವ

ನಮ್ಮ ಗೌರಿಗೆ ನ್ಯೂಸಿಯಂ ಗೌರವ

- Advertisement -
- Advertisement -

ನಮ್ಮೆಲ್ಲರ ಪ್ರೀತಿಯ ಸಂಗಾತಿ, ದಿಟ್ಟ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಅಮೇರಿಕಾದ ನ್ಯೂಸಿಯಂ ತನ್ನ ಪತ್ರಕರ್ತರ ಸ್ಮಾರಕಕ್ಕೆ ಸೇರ್ಪಡೆ ಮಾಡಿ ಗೌರವಿಸಿದೆ. ಇಡೀ ದೇಶದಲ್ಲಿ ಇಂತಹ ಗೌರವಕ್ಕೆ ಪಾತ್ರರಾದ ಮತ್ತೊಬ್ಬ ಪತ್ರಕರ್ತ ತ್ರಿಪುರಾದ ಸುದೀಪ್ ದತ್ತ ಭೌಮಿಕ್.
ನ್ಯೂಸಿಯಂ ಎಂಬುದು ಅಮೇರಿಕಾದ ‘ಫ್ರೀಡಂ ಫೋರಂ ಇಸ್ಟಿಟ್ಯೂಟ್’ ಅಡಿಯಲ್ಲಿರುವ ಪತ್ರಿಕಾ ಮ್ಯೂಸಿಯಂ. ವಿಶ್ವದಾದ್ಯಂತ ಪತ್ರಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಎತ್ತಿತೋರಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಈ ಸಂಸ್ಥೆ ಜಾಗೃತಿ ಮೂಡಿಸುತ್ತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಯೋಜನೆಯ ಭಾಗವಾಗಿಯೇ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ. ಪತ್ರಿಕಾ ವೃತ್ತಿಗಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡ ಪತ್ರಕರ್ತರನ್ನು ಈ ಸ್ಮಾರಕಕ್ಕೆ ಆಯ್ಕೆ ಮಾಡಿಕೊಳ್ಳುತ್ತದೆ.
ನ್ಯೂಸಿಯಂ ಸ್ಮಾರಕವು ಪತ್ರಕರ್ತರು ತಮ್ಮ ಕರ್ತವ್ಯದ ಅವಧಿಯಲ್ಲಿ ಮರಣಕ್ಕೊಳಪಟ್ಟ ಪತ್ರಕರ್ತರನ್ನು ಸ್ಮರಿಸುತ್ತದೆ. ಪತ್ರಿಕಾ ವೃತ್ತಿಯಲ್ಲಿ ಅಪಾಯಗಳನ್ನು ಎದುರಿಸಿ ದಿಟ್ಟ ಪತ್ರಕರ್ತರಾಗಿ ಪ್ರಾಣಕಳೆದುಕೊಂಡ ಪತ್ರಕರ್ತರನ್ನು ಗುರುತಿಸಿ ಪ್ರತಿ ವರ್ಷ ತನ್ನ ವಾರ್ಷಿಕ ಸಮಾರಂಭದಲ್ಲಿ ಗೌರವಿಸುತ್ತದೆ. ಸ್ಮಾರಕಕ್ಕೆ ಆಯ್ಕೆಯಾದ ನೂರಾರು ಪತ್ರಕರ್ತರ ಛಾಯಾಚಿತ್ರಗಳನ್ನು ಮತ್ತು ವಿವರವಾದ ಮಾಹಿತಿಯನ್ನು ಸಹ ನ್ಯೂಸಿಯಂ ಒಳಗೊಂಡಿದೆ. ನ್ಯೂಸಿಯಂ ಪತ್ರಿಕೋದ್ಯಮದ ಅಪಾಯಕಾರಿ ಕಾರ್ಯಾಚರಣೆಗಳ ಕಲಾಕೃತಿಯನ್ನು ಪ್ರದರ್ಶಿಸುತ್ತದೆ.

ವಾಷಿಂಗ್ಟನ್‍ನಲ್ಲಿ ನಡೆದ ವಾರ್ಷಿಕ ಸಮಾರಂಭದಲ್ಲಿ ಭಾರತದ ಇಬ್ಬರು ಪತ್ರಕರ್ತರನ್ನು ಒಳಗೊಂಡು 18 ಪತ್ರಕರ್ತರನ್ನು ಸೇರಿಸಿಕೊಳ್ಳಲಾಯಿತು. ಆಯ್ಕೆಯಾದ ಈ ಪತ್ರಕರ್ತರ ಪೈಕಿ 8 ಮಹಿಳಾ ಪತ್ರಕರ್ತೆಯರೂ ಕೂಡ ಇದ್ದಾರೆ. ಗËರಿ ಮೇಡಂ ಅವರನ್ನು ನ್ಯೂಸಿಯಂ ವಿಶೇಷವಾಗಿ ಗುರುತಿಸಿದೆ. ‘ಇವರು ತಮ್ಮ ‘ಗೌರಿ ಲಂಕೇಶ್’ ವಾರ ಪತ್ರಿಕೆಯ ಸಂಪಾದಕರಾಗಿದ್ದರು, ಜಾತಿ ಪದ್ದತಿ ಹಾಗೂ ಹಿಂದೂ ಮೂಲಭೂತವಾದದ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ರಾಷ್ಟ್ರೀಯವಾದಿಗಳನ್ನು ನೇರವಾಗಿ ಟೀಕಿಸಿದ್ದ ಕರ್ನಾಟಕದ ದಿಟ್ಟ ಪತ್ರಕರ್ತೆ’ ಎಂದು ನ್ಯೂಸಿಯಂ ಹೇಳಿದೆ.
ಹಾಗೆಯೇ ತ್ರಿಪುರಾದ ಸ್ಥಳೀಯ ದಿನಪತ್ರಿಕೆ ಪತ್ರಕರ್ತರಾದ ‘ಸುದೀಪ್ ದತ್ತಾ ಭೌಮಿಕ್ ಅವರು ಸ್ಥಳೀಯ ಅರೆಸೇನಾ ಮುಖ್ಯಸ್ಥ ತಪನ್ ದೇವ್ ವರ್ಮಾ ಭಾಗಿಯಾಗಿದ್ದ ಹಲವಾರು ಆರ್ಥಿಕ ಅಕ್ರಮಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳನ್ನು ಬಹಿರಂಗಪಡಿಸಿದ್ದರು, ಇವರನ್ನು ದೇವ್ ವರ್ಮಾ ಅಂಗರಕ್ಷಕರೇ ಹತ್ಯೆ ಮಾಡಿದ್ದಾರೆ’ ಎಂದು ನ್ಯೂಸಿಯಂ ತಿಳಿಸಿದೆ.
ಭೌಮಿಕ್ ಅವರು ಪೊಲೀಸರ ಭ್ರಷ್ಟಾಚಾರ ಕುರಿತು ತನಿಖಾ ವರದಿಯನ್ನು ಪ್ರಕಟಿಸಿದ್ದರು. 2017ರ 21ರಂದು ತಪನ್ ದೇವ್ ವರ್ಮಾರನ್ನು ಭೇಟಿ ಮಾಡಿದ್ದರು. ಭೇಟಿಯಾದ ಒಂದು ವಾರದ ನಂತರ ಭೌಮಿಕ್ ಅರೆಸೇನಾ ಪಡೆಯಲ್ಲಿರುವ ಭ್ರಷ್ಟಾಚಾರದ ಬಗ್ಗೆ ವರದಿ ಪ್ರಕಟಿಸಿದ್ದರು. ತ್ರಿಪುರ ಬೆಟಾಲಿಯನ್ ಕಮಾಂಡೆಂಟ್ ತಪನ್ ದೇವ್ ವರ್ಮಾ ಅಸ್ತಿತ್ವದಲ್ಲೇ ಇರುವ ಕಂಪನಿಯಿಂದ 10 ಕೋಟಿ ಮೌಲ್ಯದ ವಸ್ತುಗಳನ್ನು ಖರೀದಿಸಿರುವುದಾಗಿ ಖೊಟ್ಟಿ ಬಿಲ್ಲುಗಳನ್ನು ಸೃಷ್ಟಿಸಿ, ಹಣ ಗುಳುಂ ಮಾಡಿದ್ದರು. ತಮ್ಮ ಬಂಡವಾಳ ಬಯಲಾಗಿದ್ದರಿಂದ ಕೆರಳಿದ ಬಟಾಲಿಯನ್ ಕಮಾಂಡೆಂಟ್, ಪತ್ರಕರ್ತ ಭೌಮಿಕ್ ಅವರನ್ನು ತಮ್ಮ ಅಂಗರಕ್ಷಕರ ಮೂಲಕ ಕೊಲ್ಲಿಸಿದ್ದರು. ಭಾರೀ ಹೋರಾಟದ ನಂತರ ಬಂಧನಕ್ಕೊಳಗಾಗಿರುವ ಕಮಾಂಡೆಂಟ್ ಸದ್ಯ ಜೈಲಿನಲ್ಲಿದ್ದಾನೆ.
ಸತ್ಯದ ಪರವಾಗಿ ದಿಟ್ಟವಾಗಿ ನಿಂತ ಪತ್ರಕರ್ತರ ಪಾಲಿಗೆ ಭಾರತ ಅತ್ಯಂತ ಅಪಾಯಕಾರಿ ದೇಶವಾಗಿ ಪರಿಣಮಿಸಿದೆ. ಪತ್ರಿಕಾ ಸ್ವಾತಂತ್ರ್ಯದ ಕ್ರಮಾಂಕದಲ್ಲಿ ಭಾರತ ನೆರೆಯ ಪಾಕಿಸ್ತಾನ, ಶ್ರೀಲಂಕಾ ದೇಶಗಳಿಗಿಂತಲೂ ಕೆಳಕ್ಕೆ ಜಾರಿ ಇದೀಗ 138ನೇ ಸ್ಥಾನಕ್ಕೆ ಕುಸಿದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...