Homeಮುಖಪುಟಪತ್ರಕರ್ತರ ಮೇಲೆ UAPA ವಿಧಿಸಿರುವುದು ಅಘೋಷಿತ ತುರ್ತು ಪರಿಸ್ಥಿತಿಯನ್ನು ಸೂಚಿಸುತ್ತದೆ: NWMI

ಪತ್ರಕರ್ತರ ಮೇಲೆ UAPA ವಿಧಿಸಿರುವುದು ಅಘೋಷಿತ ತುರ್ತು ಪರಿಸ್ಥಿತಿಯನ್ನು ಸೂಚಿಸುತ್ತದೆ: NWMI

- Advertisement -
- Advertisement -

ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ, ಇಂಡಿಯಾ (ಎನ್‌ಡಬ್ಲ್ಯುಎಂಐ) ಚೆನ್ನೈ ಘಟಕದ ಸದಸ್ಯರು, ನ್ಯೂಸ್‌ಕ್ಲಿಕ್‌ ವಿರುದ್ಧದ ಪೊಲೀಸರ ಕ್ರಮವನ್ನು ವಿರೋಧಿಸಿ ಶನಿವಾರ ಚೆನ್ನೈ ಪ್ರೆಸ್ ಕ್ಲಬ್‌ನ ಹೊರಗೆ ಪ್ರತಿಭಟಿಸಿದ್ದು, ಪೊಲೀಸರ ಕ್ರಮ ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಹೇಳಿದ್ದಾರೆ.

ಅವರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA)ಯನ್ನು ಪತ್ರಕರ್ತರ ಮೇಲೆ ವಿಧಿಸಿರುವುದನ್ನು ‘ಅಘೋಷಿತ ತುರ್ತುಪರಿಸ್ಥಿತಿ’ ಎಂದು ಕರೆದಿದ್ದಾರೆ. UAPAಯ ಭಯೋತ್ಪಾದಕ ಕೃತ್ಯಗಳಿಗೆ ಹಣವನ್ನು ಸಂಗ್ರಹಣೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಕಾಯ್ದೆಯಲ್ಲಿನ ಪದಗಳು ಅಸ್ಪಷ್ಟವಾಗಿರುವುದರಿಂದ, ಪ್ರಾಸಿಕ್ಯೂಷನ್ ಯಾವುದೇ ಕೃತ್ಯವನ್ನು ಅಪರಾಧ ಅಥವಾ ಭಯೋತ್ಪಾದನೆ ಎಂದು ಹೆಸರಿಸಬಹುದು. ಯಾವುದೇ ಸಂಸ್ಥೆಗೆ ಸಂಬಂಧಿಸಿದ ಪುಸ್ತಕ ಅಥವಾ ವಸ್ತುವನ್ನು ಹೊಂದಿರುವುದು ಈ ಹಿಂದೆ ದೋಷಾರೋಪಣೆ ಎಂದು ಪರಿಗಣಿಸಲಾಗಿದೆ ಎಂದು ಫ್ರಂಟ್‌ಲೈನ್‌ನ ಸಂಪಾದಕ ವೈಷ್ಣಾ ರಾಯ್ ಹೇಳಿದ್ದಾರೆ.

ನ್ಯೂಸ್‌ಕ್ಲಿಕ್ ಚೀನಿಯರಿಂದ ಹಣವನ್ನು ತೆಗೆದುಕೊಂಡಿದೆ ಎಂದು ಎಫ್‌ಐಆರ್ ಹೇಳಿಕೊಂಡಿದೆ. ಭಾರತ ಸರ್ಕಾರದ ವಿರುದ್ಧ ಪೇಯ್ಡ್ ನ್ಯೂಸ್ ಪ್ರಕಟಿಸಲು ನ್ಯೂಸ್‌ಕ್ಲಿಕ್ ಚೀನಿಯರಿಂದ ಹಣ ಪಡೆದಿದೆ ಎಂದು ಎಫ್‌ಐಆರ್ ಹೇಳಿಕೊಂಡಿದ್ದರೂ, ಅಂತಹ ಯಾವುದೇ ಸುದ್ದಿಯನ್ನು ಪರಿಶೀಲನೆ ನಡೆಸಿಲ್ಲ ಎಂದು ಹೇಳಿದ್ದಾರೆ.

ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂನ ಅಧ್ಯಕ್ಷ ಶಶಿಕುಮಾರ್ ಮಾತನಾಡಿ, 1975ರ ತುರ್ತು ಪರಿಸ್ಥಿತಿಗೆ ದೇಶದ ಪರಿಸ್ಥಿತಿಯನ್ನು ಹೋಲಿಸಲು ಹಿಂಜರಿಯುತ್ತಿದ್ದವರೂ ಸಹ ಈಗ ಅದೇ ಪರಿಸ್ಥಿತಿಯನ್ನು ಹೊಂದಿದ್ದಾರೆ ಎಂಬುದನ್ನು ಮನವರಿಕೆಮಾಡಿಕೊಂಡಿದ್ದಾರೆ. ಇದು ಅಘೋಷಿತ ತುರ್ತು ಪರಿಸ್ಥಿತಿ. ನೀವು ಮುಕ್ತ ಮಾದ್ಯಮವನ್ನು ಕಂಬಿಯ ಹಿಂದೆ ಹಾಕಿದರೆ, ನಿಮ್ಮನ್ನು ನೀವು ಪ್ರಜಾಪ್ರಭುತ್ವ ವಾದಿಗಳು ಎಂದು ಕರೆಯುವ ಹಕ್ಕಿಲ್ಲ. ಚುನಾವಣೆಯಲ್ಲಿ ಅನೇಕ ಫ್ಯಾಸಿಸ್ಟರು ಆಯ್ಕೆಯಾಗಿ ಅಧಿಕಾರಕ್ಕೆ ಬಂದರೆ ಚುನಾವಣೆಗಳು ಪ್ರಜಾಪ್ರಭುತ್ವವನ್ನು ರೂಪಿಸುವುದಿಲ್ಲ ಎಂದು ಅವರು ಹೇಳಿದರು.

ಇದನ್ನು ಓದಿ: ಇಸ್ರೇಲ್ ಮೇಲೆ ಹಮಾಸ್ ಗುಂಪಿನ ರಾಕೆಟ್‌ ದಾಳಿಯಲ್ಲಿ ಕನಿಷ್ಠ 40 ಜನರು ಸಾವು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...