Homeಕರ್ನಾಟಕಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

ಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

- Advertisement -
- Advertisement -

ಬಿಗ್‌ ಬಾಸ್‌ ಕನ್ನಡ 10ನೇ ಅವೃತ್ತಿ ಆರಂಭಗೊಂಡಿದ್ದು, ವಿವಿಧ ಕ್ಷೇತ್ರಗಳ 17 ಮಂದಿ ಸ್ಪರ್ಧಿಗಳು ಬಿಗ್‌ ಬಾಸ್‌ ಮನೆಗೆ ಪ್ರವೇಶ ಮಾಡಿದ್ದಾರೆ. ಆದರೆ ಅಚ್ಚರಿ ಎಂಬಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರು ಬಿಗ್ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಅವರು ಬಿಗ್‌ ಬಾಸ್‌ ಮನೆಯನ್ನು ಪ್ರವೇಶ ಮಾಡುವ ವಿಡಿಯೋ ಪ್ರೊಮೊವನ್ನು ಕಲರ್ಸ್‌ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಜನರಿಂದ ಆಯ್ಕೆಯಾದ ಶಾಸಕನೋರ್ವ ಜನರ ಸಂಪರ್ಕ ಇಲ್ಲದೆ ಇರುವ ಮನೆಯಲ್ಲಿ 3 ತಿಂಗಳ ಕಾಲ ಇರುವುದು ಎಷ್ಟು ಸರಿ ಎಂಬ ಬಗ್ಗೆ ಪ್ರಶ್ನೆ ಭುಗಿಲೆದ್ದಿದೆ.

ಈ ವಾರ 11 ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಉಳಿದವರನ್ನು ಮುಂದಿನ ವಾರ ಆಯ್ಕೆ ಮಾಡಲಾಗುವುದು ಎಂದು ನಿರೂಪಕ ಕಿಚ್ಚ ಸುದೀಪ್‌ ತಿಳಿಸಿದ್ದರು. ಆದರೆ ಮೊದಲ ದಿನವೇ ಇದ್ದಕ್ಕಿದ್ದಂತೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಕೊಟ್ಟಿದ್ದಾರೆ.  ನಾನು ನಿನ್ನೆಯೇ ಬಿಗ್‌ ಬಾಸ್‌ ವೇದಿಕೆಗೆ ಬರಬೇಕಿತ್ತು. ಸ್ಪರ್ಧಿಯಾಗಿ ಇಲ್ಲಿ ಸೇರಿದ್ದಕ್ಕೆ ತುಂಬ ಖುಷಿಯಾಗುತ್ತಿದೆ. ಗೆಲ್ಲೋದರಲ್ಲಿ ನಮಗೆ ಕಾಂಪ್ರಮೈಸ್‌ ಇಲ್ಲ ಎಂದು ಸ್ಪರ್ಧಿಗಳ ಮುಂದೆ ಹೇಳಿದ್ದಾರೆ.

ಪ್ರದೀಪ್ ಈಶ್ವರ್‌ ಅವರು ಬಿಗ್‌ ಬಾಸ್‌ ಮನೆಗೆ ಎಂಟ್ರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ಬುಕ್ ಪೋಸ್ಟ್ ಮಾಡಿದ ಬಾಲು ವಿಲ್‌, ದಯವಿಟ್ಟು ಈಶ್ವರ ಶಾಸಕನನ್ನು ಈ ಕಾರ್ಯಕ್ರಮದಿಂದ ವಾಪಸ್ ಕರೆಸಿ ಇಲ್ಲ ವಜಾಮಾಡಿ. ಜನ ಆರಿಸಿರೋದು ಇವರ ಮಂಗ ಆಟ ನೋಡೊದಕ್ಕೆ ಅಲ್ಲ. ಯಾವನದ್ದೋ ಟಿಅರ್‌ಪಿಗೋಸ್ಕರ ಜನ ಆರಿಸಿಲ್ಲ, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಅವರು ದಯವಿಟ್ಟು ಗಮನಿಸಿ ಎಂದು ಬರೆದಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿ ಹನುಮೇಶ ಗುಂಡೂರು ಅವರು ಫೇಸ್ಬುಕ್ ಪೋಸ್ಟ್ ಹಾಕಿದ್ದು, ಜನಪ್ರತಿನಿಧಿ ಆಗಿರುವ ವ್ಯಕ್ತಿ ಈ ತರಹ ಜನರಿಗೆ ಅನುಕೂಲ ಇಲ್ಲದೇ ಇರುವ ಕಾರ್ಯಕ್ರಮಕ್ಕೆ ಹೋಗೋದು ಜನರಿಗೆ ಮಾಡುವ ದ್ರೋಹ ಎಂದು ಬರೆದಿದ್ದಾರೆ.

ಈ ಬಗ್ಗೆ ಫೇಸ್ಬುಕ್ ಪೋಸ್ಟ್‌ ಹಾಕಿದ ಸುಭಾಷ್ ರಾಜಮಾನೆ, ಸಂವಿಧಾನಬದ್ದ ಚುನಾವಣೆಗಳ ಮೂಲಕ ಪ್ರಜೆಗಳಿಂದ ಆಯ್ಕೆಯಾದ ಶಾಸಕರೊಬ್ಬರು ಬಿಗ್ ಬಾಸ್  ಮನೆಯಲ್ಲಿ ಮೂರು ತಿಂಗಳು ಬಂಧಿಯಾಗುವುದು ಎಷ್ಟು ಸರಿ? ಅಲ್ಲಿ ನಡೆಯುವ ಹುಚ್ಚಾಟಗಳಿಗೆ ಕೊನೆಯೇ ಇಲ್ಲ. ಇನ್ನು ಬಿಗ್ ಬಾಸ್ ಮನೆಗೆ ಹೋಗಿ ಬಂದವರು ಹುಚ್ಚರಂತೆ ಆಡುವುದನ್ನು ನೋಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ನಾನು ಗೌರಿ.ಕಾಂ ಜೊತೆ ಮಾತನಾಡಿದ ಚಿಕ್ಕಬಳ್ಳಾಪರ ಕ್ಷೇತ್ರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾದ ಆಂಜನೇಯ ರೆಡ್ಡಿ ಆರ್‌, ಶಾಸಕರು ಹೋಗಿದ್ದು ತಪ್ಪು ಅಥವಾ ಇಲ್ಲಿರುವ ಇತರ ಶಾಸಕರ ದೊಡ್ಡ ಕೆಲಸ ಮಾಡುತ್ತಾರೆ ಎನ್ನಲು ಸಾಧ್ಯವಿಲ್ಲ. ಕ್ಷೇತ್ರದ ಸಮಸ್ಯೆ ಬಗ್ಗೆ ಯಾರೂ ಕೂಡ ಗಮನ ಹರಿಸುವುದು ಕಂಡು ಬಂದಿಲ್ಲ. ಆದ್ದರಿಂದ ಯಾವುದೇ ಶಾಸಕರು ಕ್ಷೇತ್ರದಲ್ಲೇ ಇದ್ದರೂ, ಅಥವಾ ಬೆಂಗಳೂರು, ಸಿಂಗಪುರ ಎಲ್ಲಿ ಇದ್ದರೂ ಏನು ಕೂಡ ಪ್ರಯೋಜನ ಇಲ್ಲ. ಇಲ್ಲಿ ನೀರಿನ ಕೊರತೆ ಇದೆ. ಕುಡಿಯುವ ನೀರಿನಲ್ಲಿ ರಾಸಾಯನಿಕ ಮಿಶ್ರಣವಾಗಿ ಕಲುಷಿತವಾಗಿದೆ. ದನಕರುಗಳ ಮೇವಿನ ಸಮಸ್ಯೆ, ಎತ್ತಿನ ಹೊಳೆಯಲ್ಲಿ ಲೂಟಿ, ವಿದ್ಯುತ್‌ ಅಸಮರ್ಪಕ ಪೂರೈಕೆ ಸಮಸ್ಯೆ ಇದೆ. ಜಿಲ್ಲೆಯ ನಿಜವಾದ ಸಮಸ್ಯೆ ಬಗ್ಗೆ ಶಾಸಕರಿಗೆ ಅರಿವಿಲ್ಲ. ಎಲ್ಲರೂ ಅವರವರ ಪ್ರಚಾರಕ್ಕೆ ಒದ್ದಾಡುತ್ತಿರತ್ತಾರೆ, ಇದು ಕೂಡ ಪ್ರಚಾರದ ಒಂದು ವೇದಿಕೆಯಾಗಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ಶಾಸಕರು ಇರುವ ಸಮಯದಲ್ಲಿ ಜಿಲ್ಲೆಯ ಸಮಸ್ಯೆಗೆ ಸ್ಪಂದಿಸಬೇಕು. ಜಿಲ್ಲೆಯಲ್ಲಿ ಐವರು ಶಾಸಕರಿದ್ದಾರೆ. ಅವರಿಗೆ ನಿಜವಾದ ಸಮಸ್ಯೆಯ ಅರಿವಿಲ್ಲ ಎಂದು ಹೇಳಿದ್ದಾರೆ. ಬಿಗ್ ಬಾಸ್‌ ಮನೆಗೆ ಅವರು ಹೋದ ಕಾರಣಕ್ಕೆ ಜನರ ಸಂಪರ್ಕಕ್ಕೆ ಅವರು  ಸಿಗಲ್ಲ ಭ್ರಮೆಯಲ್ಲಿ ಕೂಡ ನಾನು ಇಲ್ಲ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಪ್ರದೀಪ್ ಈಶ್ವರ್ ಹೆಚ್ಚು ದಿನ ಬಿಗ್ ಬಾಸ್  ಮನೆಯಲ್ಲಿ ಇರುವುದಿಲ್ಲ ಎನ್ನಲಾಗಿದೆ. ತಮ್ಮ ನೀಟ್ ಅಕಾಡೆಮಿ, ಪಿಯು ಕಾಲೇಜು ಹಾಗೂ ಕ್ಷೇತ್ರದ ಜವಾಬ್ದಾರಿ ಇರುವುದರಿಂದ ಕೇವಲ ಅತಿಥಿಯಾಗಿ ಮಾತ್ರ ಪ್ರವೇಶ ಪಡೆದಿದ್ದಾರೆ ಎನ್ನಲಾಗಿದೆ. ಆದರೆ ಎಷ್ಟು ದಿನ ಇರ್ತಾರೆ ಎನ್ನುವುದು ಮಾತ್ರ ಇನ್ನು ಕೂಡ ನಿಗೂಡವಾಗಿದೆ.

ಇದನ್ನು ಓದಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...