Homeಕರ್ನಾಟಕಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

ಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

- Advertisement -
- Advertisement -

ಬಿಗ್‌ ಬಾಸ್‌ ಕನ್ನಡ 10ನೇ ಅವೃತ್ತಿ ಆರಂಭಗೊಂಡಿದ್ದು, ವಿವಿಧ ಕ್ಷೇತ್ರಗಳ 17 ಮಂದಿ ಸ್ಪರ್ಧಿಗಳು ಬಿಗ್‌ ಬಾಸ್‌ ಮನೆಗೆ ಪ್ರವೇಶ ಮಾಡಿದ್ದಾರೆ. ಆದರೆ ಅಚ್ಚರಿ ಎಂಬಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರು ಬಿಗ್ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಅವರು ಬಿಗ್‌ ಬಾಸ್‌ ಮನೆಯನ್ನು ಪ್ರವೇಶ ಮಾಡುವ ವಿಡಿಯೋ ಪ್ರೊಮೊವನ್ನು ಕಲರ್ಸ್‌ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಜನರಿಂದ ಆಯ್ಕೆಯಾದ ಶಾಸಕನೋರ್ವ ಜನರ ಸಂಪರ್ಕ ಇಲ್ಲದೆ ಇರುವ ಮನೆಯಲ್ಲಿ 3 ತಿಂಗಳ ಕಾಲ ಇರುವುದು ಎಷ್ಟು ಸರಿ ಎಂಬ ಬಗ್ಗೆ ಪ್ರಶ್ನೆ ಭುಗಿಲೆದ್ದಿದೆ.

ಈ ವಾರ 11 ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಉಳಿದವರನ್ನು ಮುಂದಿನ ವಾರ ಆಯ್ಕೆ ಮಾಡಲಾಗುವುದು ಎಂದು ನಿರೂಪಕ ಕಿಚ್ಚ ಸುದೀಪ್‌ ತಿಳಿಸಿದ್ದರು. ಆದರೆ ಮೊದಲ ದಿನವೇ ಇದ್ದಕ್ಕಿದ್ದಂತೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಕೊಟ್ಟಿದ್ದಾರೆ.  ನಾನು ನಿನ್ನೆಯೇ ಬಿಗ್‌ ಬಾಸ್‌ ವೇದಿಕೆಗೆ ಬರಬೇಕಿತ್ತು. ಸ್ಪರ್ಧಿಯಾಗಿ ಇಲ್ಲಿ ಸೇರಿದ್ದಕ್ಕೆ ತುಂಬ ಖುಷಿಯಾಗುತ್ತಿದೆ. ಗೆಲ್ಲೋದರಲ್ಲಿ ನಮಗೆ ಕಾಂಪ್ರಮೈಸ್‌ ಇಲ್ಲ ಎಂದು ಸ್ಪರ್ಧಿಗಳ ಮುಂದೆ ಹೇಳಿದ್ದಾರೆ.

ಪ್ರದೀಪ್ ಈಶ್ವರ್‌ ಅವರು ಬಿಗ್‌ ಬಾಸ್‌ ಮನೆಗೆ ಎಂಟ್ರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ಬುಕ್ ಪೋಸ್ಟ್ ಮಾಡಿದ ಬಾಲು ವಿಲ್‌, ದಯವಿಟ್ಟು ಈಶ್ವರ ಶಾಸಕನನ್ನು ಈ ಕಾರ್ಯಕ್ರಮದಿಂದ ವಾಪಸ್ ಕರೆಸಿ ಇಲ್ಲ ವಜಾಮಾಡಿ. ಜನ ಆರಿಸಿರೋದು ಇವರ ಮಂಗ ಆಟ ನೋಡೊದಕ್ಕೆ ಅಲ್ಲ. ಯಾವನದ್ದೋ ಟಿಅರ್‌ಪಿಗೋಸ್ಕರ ಜನ ಆರಿಸಿಲ್ಲ, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಅವರು ದಯವಿಟ್ಟು ಗಮನಿಸಿ ಎಂದು ಬರೆದಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿ ಹನುಮೇಶ ಗುಂಡೂರು ಅವರು ಫೇಸ್ಬುಕ್ ಪೋಸ್ಟ್ ಹಾಕಿದ್ದು, ಜನಪ್ರತಿನಿಧಿ ಆಗಿರುವ ವ್ಯಕ್ತಿ ಈ ತರಹ ಜನರಿಗೆ ಅನುಕೂಲ ಇಲ್ಲದೇ ಇರುವ ಕಾರ್ಯಕ್ರಮಕ್ಕೆ ಹೋಗೋದು ಜನರಿಗೆ ಮಾಡುವ ದ್ರೋಹ ಎಂದು ಬರೆದಿದ್ದಾರೆ.

ಈ ಬಗ್ಗೆ ಫೇಸ್ಬುಕ್ ಪೋಸ್ಟ್‌ ಹಾಕಿದ ಸುಭಾಷ್ ರಾಜಮಾನೆ, ಸಂವಿಧಾನಬದ್ದ ಚುನಾವಣೆಗಳ ಮೂಲಕ ಪ್ರಜೆಗಳಿಂದ ಆಯ್ಕೆಯಾದ ಶಾಸಕರೊಬ್ಬರು ಬಿಗ್ ಬಾಸ್  ಮನೆಯಲ್ಲಿ ಮೂರು ತಿಂಗಳು ಬಂಧಿಯಾಗುವುದು ಎಷ್ಟು ಸರಿ? ಅಲ್ಲಿ ನಡೆಯುವ ಹುಚ್ಚಾಟಗಳಿಗೆ ಕೊನೆಯೇ ಇಲ್ಲ. ಇನ್ನು ಬಿಗ್ ಬಾಸ್ ಮನೆಗೆ ಹೋಗಿ ಬಂದವರು ಹುಚ್ಚರಂತೆ ಆಡುವುದನ್ನು ನೋಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ನಾನು ಗೌರಿ.ಕಾಂ ಜೊತೆ ಮಾತನಾಡಿದ ಚಿಕ್ಕಬಳ್ಳಾಪರ ಕ್ಷೇತ್ರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾದ ಆಂಜನೇಯ ರೆಡ್ಡಿ ಆರ್‌, ಶಾಸಕರು ಹೋಗಿದ್ದು ತಪ್ಪು ಅಥವಾ ಇಲ್ಲಿರುವ ಇತರ ಶಾಸಕರ ದೊಡ್ಡ ಕೆಲಸ ಮಾಡುತ್ತಾರೆ ಎನ್ನಲು ಸಾಧ್ಯವಿಲ್ಲ. ಕ್ಷೇತ್ರದ ಸಮಸ್ಯೆ ಬಗ್ಗೆ ಯಾರೂ ಕೂಡ ಗಮನ ಹರಿಸುವುದು ಕಂಡು ಬಂದಿಲ್ಲ. ಆದ್ದರಿಂದ ಯಾವುದೇ ಶಾಸಕರು ಕ್ಷೇತ್ರದಲ್ಲೇ ಇದ್ದರೂ, ಅಥವಾ ಬೆಂಗಳೂರು, ಸಿಂಗಪುರ ಎಲ್ಲಿ ಇದ್ದರೂ ಏನು ಕೂಡ ಪ್ರಯೋಜನ ಇಲ್ಲ. ಇಲ್ಲಿ ನೀರಿನ ಕೊರತೆ ಇದೆ. ಕುಡಿಯುವ ನೀರಿನಲ್ಲಿ ರಾಸಾಯನಿಕ ಮಿಶ್ರಣವಾಗಿ ಕಲುಷಿತವಾಗಿದೆ. ದನಕರುಗಳ ಮೇವಿನ ಸಮಸ್ಯೆ, ಎತ್ತಿನ ಹೊಳೆಯಲ್ಲಿ ಲೂಟಿ, ವಿದ್ಯುತ್‌ ಅಸಮರ್ಪಕ ಪೂರೈಕೆ ಸಮಸ್ಯೆ ಇದೆ. ಜಿಲ್ಲೆಯ ನಿಜವಾದ ಸಮಸ್ಯೆ ಬಗ್ಗೆ ಶಾಸಕರಿಗೆ ಅರಿವಿಲ್ಲ. ಎಲ್ಲರೂ ಅವರವರ ಪ್ರಚಾರಕ್ಕೆ ಒದ್ದಾಡುತ್ತಿರತ್ತಾರೆ, ಇದು ಕೂಡ ಪ್ರಚಾರದ ಒಂದು ವೇದಿಕೆಯಾಗಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ಶಾಸಕರು ಇರುವ ಸಮಯದಲ್ಲಿ ಜಿಲ್ಲೆಯ ಸಮಸ್ಯೆಗೆ ಸ್ಪಂದಿಸಬೇಕು. ಜಿಲ್ಲೆಯಲ್ಲಿ ಐವರು ಶಾಸಕರಿದ್ದಾರೆ. ಅವರಿಗೆ ನಿಜವಾದ ಸಮಸ್ಯೆಯ ಅರಿವಿಲ್ಲ ಎಂದು ಹೇಳಿದ್ದಾರೆ. ಬಿಗ್ ಬಾಸ್‌ ಮನೆಗೆ ಅವರು ಹೋದ ಕಾರಣಕ್ಕೆ ಜನರ ಸಂಪರ್ಕಕ್ಕೆ ಅವರು  ಸಿಗಲ್ಲ ಭ್ರಮೆಯಲ್ಲಿ ಕೂಡ ನಾನು ಇಲ್ಲ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಪ್ರದೀಪ್ ಈಶ್ವರ್ ಹೆಚ್ಚು ದಿನ ಬಿಗ್ ಬಾಸ್  ಮನೆಯಲ್ಲಿ ಇರುವುದಿಲ್ಲ ಎನ್ನಲಾಗಿದೆ. ತಮ್ಮ ನೀಟ್ ಅಕಾಡೆಮಿ, ಪಿಯು ಕಾಲೇಜು ಹಾಗೂ ಕ್ಷೇತ್ರದ ಜವಾಬ್ದಾರಿ ಇರುವುದರಿಂದ ಕೇವಲ ಅತಿಥಿಯಾಗಿ ಮಾತ್ರ ಪ್ರವೇಶ ಪಡೆದಿದ್ದಾರೆ ಎನ್ನಲಾಗಿದೆ. ಆದರೆ ಎಷ್ಟು ದಿನ ಇರ್ತಾರೆ ಎನ್ನುವುದು ಮಾತ್ರ ಇನ್ನು ಕೂಡ ನಿಗೂಡವಾಗಿದೆ.

ಇದನ್ನು ಓದಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...