Homeಕರ್ನಾಟಕಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

ಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

- Advertisement -
- Advertisement -

ಬಿಗ್‌ ಬಾಸ್‌ ಕನ್ನಡ 10ನೇ ಅವೃತ್ತಿ ಆರಂಭಗೊಂಡಿದ್ದು, ವಿವಿಧ ಕ್ಷೇತ್ರಗಳ 17 ಮಂದಿ ಸ್ಪರ್ಧಿಗಳು ಬಿಗ್‌ ಬಾಸ್‌ ಮನೆಗೆ ಪ್ರವೇಶ ಮಾಡಿದ್ದಾರೆ. ಆದರೆ ಅಚ್ಚರಿ ಎಂಬಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರು ಬಿಗ್ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಅವರು ಬಿಗ್‌ ಬಾಸ್‌ ಮನೆಯನ್ನು ಪ್ರವೇಶ ಮಾಡುವ ವಿಡಿಯೋ ಪ್ರೊಮೊವನ್ನು ಕಲರ್ಸ್‌ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಜನರಿಂದ ಆಯ್ಕೆಯಾದ ಶಾಸಕನೋರ್ವ ಜನರ ಸಂಪರ್ಕ ಇಲ್ಲದೆ ಇರುವ ಮನೆಯಲ್ಲಿ 3 ತಿಂಗಳ ಕಾಲ ಇರುವುದು ಎಷ್ಟು ಸರಿ ಎಂಬ ಬಗ್ಗೆ ಪ್ರಶ್ನೆ ಭುಗಿಲೆದ್ದಿದೆ.

ಈ ವಾರ 11 ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಉಳಿದವರನ್ನು ಮುಂದಿನ ವಾರ ಆಯ್ಕೆ ಮಾಡಲಾಗುವುದು ಎಂದು ನಿರೂಪಕ ಕಿಚ್ಚ ಸುದೀಪ್‌ ತಿಳಿಸಿದ್ದರು. ಆದರೆ ಮೊದಲ ದಿನವೇ ಇದ್ದಕ್ಕಿದ್ದಂತೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಕೊಟ್ಟಿದ್ದಾರೆ.  ನಾನು ನಿನ್ನೆಯೇ ಬಿಗ್‌ ಬಾಸ್‌ ವೇದಿಕೆಗೆ ಬರಬೇಕಿತ್ತು. ಸ್ಪರ್ಧಿಯಾಗಿ ಇಲ್ಲಿ ಸೇರಿದ್ದಕ್ಕೆ ತುಂಬ ಖುಷಿಯಾಗುತ್ತಿದೆ. ಗೆಲ್ಲೋದರಲ್ಲಿ ನಮಗೆ ಕಾಂಪ್ರಮೈಸ್‌ ಇಲ್ಲ ಎಂದು ಸ್ಪರ್ಧಿಗಳ ಮುಂದೆ ಹೇಳಿದ್ದಾರೆ.

ಪ್ರದೀಪ್ ಈಶ್ವರ್‌ ಅವರು ಬಿಗ್‌ ಬಾಸ್‌ ಮನೆಗೆ ಎಂಟ್ರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ಬುಕ್ ಪೋಸ್ಟ್ ಮಾಡಿದ ಬಾಲು ವಿಲ್‌, ದಯವಿಟ್ಟು ಈಶ್ವರ ಶಾಸಕನನ್ನು ಈ ಕಾರ್ಯಕ್ರಮದಿಂದ ವಾಪಸ್ ಕರೆಸಿ ಇಲ್ಲ ವಜಾಮಾಡಿ. ಜನ ಆರಿಸಿರೋದು ಇವರ ಮಂಗ ಆಟ ನೋಡೊದಕ್ಕೆ ಅಲ್ಲ. ಯಾವನದ್ದೋ ಟಿಅರ್‌ಪಿಗೋಸ್ಕರ ಜನ ಆರಿಸಿಲ್ಲ, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಅವರು ದಯವಿಟ್ಟು ಗಮನಿಸಿ ಎಂದು ಬರೆದಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿ ಹನುಮೇಶ ಗುಂಡೂರು ಅವರು ಫೇಸ್ಬುಕ್ ಪೋಸ್ಟ್ ಹಾಕಿದ್ದು, ಜನಪ್ರತಿನಿಧಿ ಆಗಿರುವ ವ್ಯಕ್ತಿ ಈ ತರಹ ಜನರಿಗೆ ಅನುಕೂಲ ಇಲ್ಲದೇ ಇರುವ ಕಾರ್ಯಕ್ರಮಕ್ಕೆ ಹೋಗೋದು ಜನರಿಗೆ ಮಾಡುವ ದ್ರೋಹ ಎಂದು ಬರೆದಿದ್ದಾರೆ.

ಈ ಬಗ್ಗೆ ಫೇಸ್ಬುಕ್ ಪೋಸ್ಟ್‌ ಹಾಕಿದ ಸುಭಾಷ್ ರಾಜಮಾನೆ, ಸಂವಿಧಾನಬದ್ದ ಚುನಾವಣೆಗಳ ಮೂಲಕ ಪ್ರಜೆಗಳಿಂದ ಆಯ್ಕೆಯಾದ ಶಾಸಕರೊಬ್ಬರು ಬಿಗ್ ಬಾಸ್  ಮನೆಯಲ್ಲಿ ಮೂರು ತಿಂಗಳು ಬಂಧಿಯಾಗುವುದು ಎಷ್ಟು ಸರಿ? ಅಲ್ಲಿ ನಡೆಯುವ ಹುಚ್ಚಾಟಗಳಿಗೆ ಕೊನೆಯೇ ಇಲ್ಲ. ಇನ್ನು ಬಿಗ್ ಬಾಸ್ ಮನೆಗೆ ಹೋಗಿ ಬಂದವರು ಹುಚ್ಚರಂತೆ ಆಡುವುದನ್ನು ನೋಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ನಾನು ಗೌರಿ.ಕಾಂ ಜೊತೆ ಮಾತನಾಡಿದ ಚಿಕ್ಕಬಳ್ಳಾಪರ ಕ್ಷೇತ್ರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾದ ಆಂಜನೇಯ ರೆಡ್ಡಿ ಆರ್‌, ಶಾಸಕರು ಹೋಗಿದ್ದು ತಪ್ಪು ಅಥವಾ ಇಲ್ಲಿರುವ ಇತರ ಶಾಸಕರ ದೊಡ್ಡ ಕೆಲಸ ಮಾಡುತ್ತಾರೆ ಎನ್ನಲು ಸಾಧ್ಯವಿಲ್ಲ. ಕ್ಷೇತ್ರದ ಸಮಸ್ಯೆ ಬಗ್ಗೆ ಯಾರೂ ಕೂಡ ಗಮನ ಹರಿಸುವುದು ಕಂಡು ಬಂದಿಲ್ಲ. ಆದ್ದರಿಂದ ಯಾವುದೇ ಶಾಸಕರು ಕ್ಷೇತ್ರದಲ್ಲೇ ಇದ್ದರೂ, ಅಥವಾ ಬೆಂಗಳೂರು, ಸಿಂಗಪುರ ಎಲ್ಲಿ ಇದ್ದರೂ ಏನು ಕೂಡ ಪ್ರಯೋಜನ ಇಲ್ಲ. ಇಲ್ಲಿ ನೀರಿನ ಕೊರತೆ ಇದೆ. ಕುಡಿಯುವ ನೀರಿನಲ್ಲಿ ರಾಸಾಯನಿಕ ಮಿಶ್ರಣವಾಗಿ ಕಲುಷಿತವಾಗಿದೆ. ದನಕರುಗಳ ಮೇವಿನ ಸಮಸ್ಯೆ, ಎತ್ತಿನ ಹೊಳೆಯಲ್ಲಿ ಲೂಟಿ, ವಿದ್ಯುತ್‌ ಅಸಮರ್ಪಕ ಪೂರೈಕೆ ಸಮಸ್ಯೆ ಇದೆ. ಜಿಲ್ಲೆಯ ನಿಜವಾದ ಸಮಸ್ಯೆ ಬಗ್ಗೆ ಶಾಸಕರಿಗೆ ಅರಿವಿಲ್ಲ. ಎಲ್ಲರೂ ಅವರವರ ಪ್ರಚಾರಕ್ಕೆ ಒದ್ದಾಡುತ್ತಿರತ್ತಾರೆ, ಇದು ಕೂಡ ಪ್ರಚಾರದ ಒಂದು ವೇದಿಕೆಯಾಗಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ಶಾಸಕರು ಇರುವ ಸಮಯದಲ್ಲಿ ಜಿಲ್ಲೆಯ ಸಮಸ್ಯೆಗೆ ಸ್ಪಂದಿಸಬೇಕು. ಜಿಲ್ಲೆಯಲ್ಲಿ ಐವರು ಶಾಸಕರಿದ್ದಾರೆ. ಅವರಿಗೆ ನಿಜವಾದ ಸಮಸ್ಯೆಯ ಅರಿವಿಲ್ಲ ಎಂದು ಹೇಳಿದ್ದಾರೆ. ಬಿಗ್ ಬಾಸ್‌ ಮನೆಗೆ ಅವರು ಹೋದ ಕಾರಣಕ್ಕೆ ಜನರ ಸಂಪರ್ಕಕ್ಕೆ ಅವರು  ಸಿಗಲ್ಲ ಭ್ರಮೆಯಲ್ಲಿ ಕೂಡ ನಾನು ಇಲ್ಲ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಪ್ರದೀಪ್ ಈಶ್ವರ್ ಹೆಚ್ಚು ದಿನ ಬಿಗ್ ಬಾಸ್  ಮನೆಯಲ್ಲಿ ಇರುವುದಿಲ್ಲ ಎನ್ನಲಾಗಿದೆ. ತಮ್ಮ ನೀಟ್ ಅಕಾಡೆಮಿ, ಪಿಯು ಕಾಲೇಜು ಹಾಗೂ ಕ್ಷೇತ್ರದ ಜವಾಬ್ದಾರಿ ಇರುವುದರಿಂದ ಕೇವಲ ಅತಿಥಿಯಾಗಿ ಮಾತ್ರ ಪ್ರವೇಶ ಪಡೆದಿದ್ದಾರೆ ಎನ್ನಲಾಗಿದೆ. ಆದರೆ ಎಷ್ಟು ದಿನ ಇರ್ತಾರೆ ಎನ್ನುವುದು ಮಾತ್ರ ಇನ್ನು ಕೂಡ ನಿಗೂಡವಾಗಿದೆ.

ಇದನ್ನು ಓದಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...