Homeಮುಖಪುಟಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

- Advertisement -
- Advertisement -

ಕೇಂದ್ರ ಚುನಾವಣಾ ಆಯೋಗ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆಗಳಿಗೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು, ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ”ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ನಡೆಯುವ ಚುನಾವಣೆಯಲ್ಲಿ ಒಟ್ಟು 8.2 ಕೋಟಿ ಪುರುಷ ಮತ್ತು 7.8 ಕೋಟಿ ಮಹಿಳಾ ಮತದಾರರು ಇರಲಿದ್ದಾರೆ. ಈ ಪೈಕಿ 60.2 ಲಕ್ಷ ಮಂದಿ ಮೊದಲ ಬಾರಿಗೆ ಮತದಾರರಾಗಿದ್ದಾರೆ” ಎಂದು ಹೇಳಿದರು.

”ಐದು ವಿಧಾನಸಭಾ ಚುನಾವಣೆಗೆ ಮುನ್ನ ನಾವು ರಾಜಕೀಯ ಪಕ್ಷಗಳು ಮತ್ತು ಜಾರಿ ಸಂಸ್ಥೆಗಳು ಸೇರಿದಂತೆ ಎಲ್ಲಾ ಮಧ್ಯಸ್ಥಗಾರರು, ರಾಜಕೀಯ ಪಕ್ಷಗಳ ವಕ್ತಾರರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ” ಎಂದು ಹೇಳಿದ್ದಾರೆ.

ಚುನಾವಣಾ ಆಯುಕ್ತರು ನೀಡಿರುವ ಮಾಹಿತಿಯಂತೆ ಮಿಜೋರಾಂ ವಿಧಾನಸಭೆಯ ಅವಧಿ ಡಿಸೆಂಬರ್ 17ಗೆ ಕೊನೆಗೊಳ್ಳಲ್ಲಿದ್ದು, ಛತ್ತೀಸ್ಗಢ ವಿಧಾನಸಭೆ ಅವಧಿ ಜನವರಿ 3, ಮಧ್ಯಪ್ರದೇಶ ವಿಧಾನಸಭೆ ಅವಧಿ ಜನವರಿ 8, ರಾಜಸ್ಥಾನ ವಿಧಾನಸಭೆ ಅವಧಿ ಜನವರಿ 14 ಮತ್ತು ತೆಲಂಗಾಣ  ವಿಧಾನಸಭೆ ಅವಧಿಯು ಜನವರಿ 18ಕ್ಕೆ ಕೊನೆಗೊಳ್ಳಲಿದೆ.

ನವೆಂಬರ್‌ 7 ರಿಂದ 30ರವರೆಗೆ ಚುನಾವಣೆ!
ಮಧ್ಯಪ್ರದೇಶ, ಮಿಜೋರಾಂ, ತೆಲಂಗಾಣ, ರಾಜಸ್ಥಾನ ಹಾಗೂ ಛತ್ತೀಸ್‌ಘಡದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ನವೆಂಬರ್‌ 7 ರಿಂದ 30ರವರೆಗೆ ಮತದಾನ ನಡೆಯಲಿದೆ. ಛತ್ತೀಸ್‌ಘಡದಲ್ಲಿ ಮಾತ್ರ ಎರಡು ಹಂತದ ಮತದಾನ ಇದ್ದು, ಉಳಿದ ರಾಜ್ಯಗಳಲ್ಲಿ ಒಂದು ಹಂತದಲ್ಲಿಯೇ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮುಂದಿನ ಲೋಕಸಭಾ ಚುನಾವಣೆಯ ಸೆಮಿಫೈನಲ್‌ ಎಂದೇ ಈ ಚುನಾವಣೆಯನ್ನು ಕರೆಯಲಾಗುತ್ತಿದ್ದು, ರಾಜಕೀಯ ಪಕ್ಷಗಳು ಎಲೆಕ್ಷನ್‌ಗೆ ಭರ್ಜರಿ ತಯಾರಿ ನಡೆಸಿವೆ.

ಮಿಜೋರಾಂನಲ್ಲಿ ನವೆಂಬರ್‌ 7ಕ್ಕೆ ಮತದಾನ ನಡೆದರೆ, ಮಧ್ಯಪ್ರದೇಶದಲ್ಲಿ ನವೆಂಬರ್‌ 17ರಂದು ಮತದಾನ ನಡೆಯಲಿದೆ. ರಾಜಸ್ಥಾನದಲ್ಲಿ ನವೆಂಬರ್‌ 23ಕ್ಕೆ ಮತದಾನ ನಡೆಯುತ್ತಿದ್ದು, ತೆಲಂಗಾಣದಲ್ಲಿ ನವೆಂಬರ್‌ 30ರಂದು ವೋಟಿಂಗ್‌ ನಡೆಯಲಿದೆ. ಛತ್ತೀಸ್‌ಘಡದಲ್ಲಿ ನವೆಂಬರ್‌ 7 ಮತ್ತು 17ರಂದು ಎರಡು ಹಂತಗಳಲ್ಲಿ ಜನರು ಮತ ಚಲಾಯಿಸಲಿದ್ದಾರೆ.

”ಮಧ್ಯಪ್ರದೇಶದ ಒಟ್ಟು 230 ಸ್ಥಾನಗಳು, ಛತ್ತೀಸ್‌ಗಢದ- 90 ಸ್ಥಾನಗಳು, ರಾಜಸ್ಥಾನದ 200 ಸ್ಥಾನಗಳು, ತೆಲಂಗಾಣದ 119 ಸ್ಥಾನಗಳು ಮತ್ತು ಮಿಜೋರಾಂನ 90 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮತದಾರರು ಅಕ್ಟೋಬರ್ 17 ರಿಂದ ನವೆಂಬರ್ 30 ರವರೆಗೆ ಮತದಾರರ ಪಟ್ಟಿಯಲ್ಲಿ ವಿವರಗಳನ್ನು ನವೀಕರಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ಅಂತೆಯೇ 5 ರಾಜ್ಯಗಳಲ್ಲಿ 1.77 ಲಕ್ಷ ಮತಗಟ್ಟೆಗಳು ಮತ್ತು 1.01 ಲಕ್ಷ ಮತಗಟ್ಟೆಗಳು ವೆಬ್ ಕಾಸ್ಟಿಂಗ್ ಸೌಲಭ್ಯವನ್ನು ಹೊಂದಿವೆ” ಎಂದು ಅವರು ಮಾಹಿತಿ ನೀಡಿದರು.

ಚುನಾವಣೆ ನಡೆಯುವ ಈ ಐದು ರಾಜ್ಯಗಳಲ್ಲಿ 940 ಕ್ಕೂ ಹೆಚ್ಚು ಅಂತರ-ರಾಜ್ಯ ಗಡಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಆ ಮೂಲಕ ನಾವು ಯಾವುದೇ ಅಕ್ರಮ ನಗದು, ಮದ್ಯ, ಉಚಿತ ವಸ್ತುಗಳು ಮತ್ತು ಮಾದಕ ವಸ್ತುಗಳ ಗಡಿಯಾಚೆಗಿನ ಚಲನೆಯನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...