Homeಕರ್ನಾಟಕಮಹಿಷ ದಸರಾ ಆಚರಣೆ ವಿರುದ್ಧ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಮಹಿಷ ದಸರಾ ಆಚರಣೆ ವಿರುದ್ಧ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

- Advertisement -
- Advertisement -

ಮಹಿಷ ದಸರಾ ಆಚರಣೆ ಸಮಿತಿಯ ಅಧ್ಯಕ್ಷರ ವಿರುದ್ಧ ಸಾಮಾಜಿಕ ಕಾರ್ಯಕರ್ತನೆನ್ನಲಾದ ಸ್ನೇಹಮಯಿ ಕೃಷ್ಣ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಸಮಿತಿ ಅಧ್ಯಕ್ಷರಿಗೆ ಈ ಬಗ್ಗೆ ಕೋರ್ಟ್ ತುರ್ತು ನೊಟೀಸ್ ನೀಡಿ ಅ.11ಕ್ಕೆ ವಿಚಾರಣೆ ಮುಂದೂಡಿದೆ.

ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಪುರಾಣದಲ್ಲಿ ರಾಕ್ಷಸನೆಂದು ಗುರುತಿಸಲ್ಪಟ್ಟ ಮಹಿಷಾಸುರನನ್ನು ವೈಭವೀಕರಿಸಿ ಮಹಿಷಾ ದಸರಾ ಆಚರಿಸಲಾಗುತ್ತಿದೆ. ಈ ಬಗ್ಗೆ ಮಾದ್ಯಮಗಳಲ್ಲಿ ಮಾತನಾಡುವಾಗ ಚಾಮುಂಡೇಶ್ವರಿ ದೇವಿಯ ಬಗ್ಗೆ ಆಧಾರ ಇಲ್ಲದೆ ಅಪಪ್ರಚಾರ ಮಾಡುತ್ತಿದ್ದಾರೆ. ಇದರಿಂದ ಕೋಟ್ಯಾಂತರ ಭಕ್ತರ ಭಾವನೆಗಳಿಗೆ ಧಕ್ಕೆ ಯಾಗಿದೆ ಎಂದು ಉಲ್ಲೇಖಿಸಲಾಗಿದೆ.

ಇನ್ನು ಮಹಿಷಾ ದಸರಾದ ಬಗ್ಗೆಅವಹೇಳನಾಕಾರಿಯಾಗಿ ಹೇಳಿಕೆ ನೀಡುತ್ತಿರುವ ಸಂಸದ ಪ್ರತಾಪ್‌ ಸಿಂಹ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘರ್ಷ ಸಮಿತಿಯ ಮೈಸೂರು ಜಿಲ್ಲಾ ಸಮಿತಿ ಆಗ್ರಹಿಸಿದೆ.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಾರದ ಬೆಟ್ಟಯ್ಯ ಕೋಟೆ, ಆಲಗೂಡ್‌ ಶಿವಕುಮಾರ್‌ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗ ಸ್ವಾಮಿ ಅವರು ಈ ಕುರಿತು ಜಂಟಿ ಪತ್ರಿಕಾ ಹೇಳಿಕೆಯನ್ನು ನೀಡಿದ್ದು, ಮಹಿಷ ದಸರಾ ಬಗ್ಗೆ ಅವಹೇಳನ ಮಾಡುವ ಪ್ರತಾಪ್‌ ಸಿಂಹ ಅವರಿಗೆ ಇತಿಹಾಸ ಮತ್ತು ಸಂವಿಧಾನದ ಪಾಠ ಮಾಡಬೇಕಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಅನೇಕ ಹಳ್ಳಿಗಳಲ್ಲಿ ರಾವಣನ ದೇವಸ್ಥಾನಗಳಿವೆ. ಮಾತ್ರವಲ್ಲದೆ ಹಿರಣ್ಯ ಕಶ್ಯಪುವಿನ ದೇವಸ್ಥಾನಗಳಿವೆ. ಅಲ್ಲಲ್ಲಿ ಪೂಜೆ ನಡೆಯುತ್ತಿದೆ. ಹಬ್ಬಗಳನ್ನು ಆಚರಿಸಲಾಗುತ್ತಿದೆ. ಇಂತಹ ಬಹುತ್ವದ ದೇಶ ನಮ್ಮದು. ಮೈಸೂರು ಮೂಲತಃ ಮಹಿಷನ ನಾಡು. ಓಣಂ, ಬಲಿ ಚಕ್ರವರ್ತಿ ಹಬ್ಬದಂತೆ ದಸರಾ ವೇಳೆ ಪಿತೃಪಕ್ಷ ಆಚರಣೆಯಾಗಿ ಮಹಿಷನ ದಿನಾಚರಣೆಯನ್ನು ಮೂಲನಿವಾಸಿಗಳು ಆಚರಿಸುತ್ತಾರೆ. ಸಂಸದ ಪ್ರತಾಪ್‌ ಸಿಂಹ ಈ ನೆಲದ ಮೂಲ ನಿವಾಸಿಗಳ ಭಾವನೆಗಳನ್ನು ಘಾಸಿಗೊಳಿಸಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.

ವಿಧತೆಯಲ್ಲಿ ಏಕತೆ ಹೇಳುವ ಸಂವಿಧಾನದಲ್ಲಿ ಎಲ್ಲಾ ಆಚರಣೆಗೆ ಅವಕಾಶ ಇರುವಾಗ ಮಹಿಷ ದಸರಾ ಬೇಡ ಎನ್ನುವುದಕ್ಕೆ ಪ್ರತಾಪ್‌ ಸಿಂಹಗೆ ಯೋಗ್ಯತೆ ಏನಿದೆ ಎಂದು ದಸಂಸ ಪ್ರಶ್ನಿಸಿದೆ.

ಇನ್ನು ಮೈಸೂರಿನಲ್ಲಿ ಮಹಿಷ ದಸರಾಗೆ ಸರ್ಕಾರ ಅನುಮತಿ ಕೊಟ್ಟಾಗಿನಿಂದ ವಿರೋಧ ವ್ಯಕ್ತಪಡಿಸುತ್ತಿರುವ ಸಂಸದ ಪ್ರತಾಪ್ ಸಿಂಹ ಅ.13 ರಂದು ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮ ನಡೆಸುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನು ಓದಿ: ಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...