Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ಗೆ ಬೆಂಬಲ ಘೋಷಿಸಿದ ಸೌದಿ ಅರೇಬಿಯಾ

ಪ್ಯಾಲೆಸ್ತೀನ್‌ಗೆ ಬೆಂಬಲ ಘೋಷಿಸಿದ ಸೌದಿ ಅರೇಬಿಯಾ

- Advertisement -
- Advertisement -

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಯುದ್ಧದ ಹಿನ್ನೆಲೆ ಸೌದಿ ಅರೇಬಿಯಾವು ಪ್ಯಾಲೆಸ್ತೀನಿ ಜನರ ಜೊತೆ ಅಚಲವಾಗಿ ನಿಲ್ಲಲಿದೆ ಎಂದು ಸೌದಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಹೇಳಿದ್ದಾರೆ.

ಹಮಾಸ್‌ ಇಸ್ರೇಲ್‌ ವಿರುದ್ಧ ನಡೆಸಿದ ರಾಕೆಟ್‌ ದಾಳಿ ಬಳಿಕ ನಿರ್ಮಾಣವಾದ ಪರಿಸ್ಥಿತಿಯ ಮತ್ತಷ್ಟು ಉಲ್ಭಣವನ್ನು ತಡೆಯಲು ಕಾರ್ಯಪ್ರವೃತ್ತರಾಗಿರುವುದಾಗಿ  ಮೊಹಮ್ಮದ್ ಬಿನ್ ಸಲ್ಮಾನ್ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಅವರಿಗೆ ಹೇಳಿದ್ದಾರೆ.

ಮಂಗಳವಾರ ಮುಂಜಾನೆ ಸೌದಿ ಸರ್ಕಾರಿ ಮಾಧ್ಯಮಗಳ ಮೂಲಕ ಪ್ಯಾಲೆಸ್ತೀನಿ ಜನರ ಜೊತೆ ಅಚಲವಾಗಿ ನಿಲ್ಲುವ ಬಗ್ಗೆ ಘೋಷಣೆಯನ್ನು ಮಾಡಲಾಗಿದೆ.

ಪ್ಯಾಲೆಸ್ತೀನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಅವರ ಜೊತೆ ಮಾತನಾಡಿದ ಮೊಹಮ್ಮದ್ ಬಿನ್ ಸಲ್ಮಾನ್, ಸೌದಿಅರೇಬಿಯಾವು ಪ್ಯಾಲೆಸ್ತೀನ್ ಜನರ ಕಾನೂನುಬದ್ಧ ಹಕ್ಕುಗಳಿಗಾಗಿ, ಅವರ ಭರವಸೆ ಮತ್ತು ಆಕಾಂಕ್ಷೆಗಳ ಈಡೇರಿಕೆಗೆ,  ನ್ಯಾಯ ಮತ್ತು ಶಾಶ್ವತವಾದ ಶಾಂತಿಗಾಗಿ ಅವರ ಪರವಾಗಿ ಸೌದಿ ಅರೇಬಿಯಾ ನಿಲ್ಲಲಿದೆ ಎಂದು ಹೇಳಿದ್ದಾರೆ.

ಹಮಾಸ್‌ ನಡೆಸಿದ ನೆಲ, ವಾಯು ಮತ್ತು ಸಮುದ್ರ ದಾಳಿ ಮತ್ತು ಇಸ್ರೇಲ್‌ ನಡೆಸಿದ  ಪ್ರತಿ ದಾಳಿಯಿಂದ ಎರಡೂ ಕಡೆಗಳಲ್ಲಿ ಸಾವುನೋವುಗಳು ಸಂಭವಿಸಿದೆ. ಇಸ್ರೇಲ್‌ನಲ್ಲಿ 800ಮಂದಿ ಮೃತಪಟ್ಟಿದ್ದಾರೆ  ಮತ್ತು ಗಾಜಾದಲ್ಲಿ ಮೃತರ ಸಂಖ್ಯೆ 687ಕ್ಕೆ ಏರಿಕೆಯಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿದೆ.

ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟಿನ ಮಧ್ಯೆ, ಸೌದಿ ಅರೇಬಿಯಾ ಇಸ್ರೇಲ್‌ನೊಂದಿಗೆ ಬೆಂಬಲಕ್ಕೆ ನಿಂತಿದೆ ಎಂಬ ಊಹಾಪೋಹ ಹೊರಹೊಮ್ಮಿತ್ತು. ಆದರೆ  ಸೌದಿ ರಾಜಕುಮಾರ ಮೊಹಮ್ಮದ್ ಇತ್ತೀಚೆಗೆ ಫಾಕ್ಸ್ ನ್ಯೂಸ್‌ನೊಂದಿಗೆ ಮಾತನಾಡುತ್ತಾ, ಸೌದಿ ಅರೇಬಿಯಾಕ್ಕೆ ಪ್ಯಾಲೆಸ್ತೀನ್ ಸಮಸ್ಯೆಯ ಮಹತ್ವವನ್ನು ಒತ್ತಿಹೇಳಿದ್ದು, ಸೌದಿಗೆ ಪ್ಯಾಲೆಸ್ತೀನ್‌ ಬುಹುಮುಖ್ಯವಾದುದು ಎಂದು ಹೇಳಿದ್ದಾರೆ. ನಾವು ಅವರ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. ನಾವು ಪ್ಯಾಲೇಸ್ತೀನಿ ಜನರ  ಜೀವನವನ್ನು ಸುಗಮಗೊಳಿಸಬೇಕಿದೆ ಎಂದು ಹೇಳಿದ್ದಾರೆ.

ಸೌದಿ ರಾಜಕುಮಾರ ಮೊಹಮ್ಮದ್ ಬಿನ್‌ ಸಲ್ಮಾನ್‌ ಇತರ ಪ್ರಾದೇಶಿಕ ನಾಯಕರೊಂದಿಗೆ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಿದ್ದಾರೆ. ಅವರು ಈಜಿಪ್ಟ್ ಅಧ್ಯಕ್ಷ ಅಬ್ದುಲ್‌ ಫತ್ತಾಹ್ ಅಲ್-ಸಿಸಿ ಮತ್ತು ಜೋರ್ಡಾನ್ ರಾಜ ಅಬ್ದುಲ್ಲಾ II ಅವರೊಂದಿಗೆ ದೂರವಾಣಿ ಮೂಲಕ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ್ದಾರೆ ಎಂದು SPA ವರದಿ ಮಾಡಿದೆ.

ಇನ್ನು ಈ ಬಿಕ್ಕಟ್ಟಿನ ನಡುವೆ ಇಸ್ರೇಲ್‌ಗೆ ಅಮೆರಿಕ, ಫ್ರಾನ್ಸ್, ಜರ್ಮನಿ, ಇಟೆಲಿ ಮತ್ತು ಬ್ರಿಟನ್‌ ಬೆಂಬಲ ನೀಡುವುದಾಗಿ ಜಂಟಿ ಹೇಳಿಕೆ ನೀಡಿದೆ.

ಇದನ್ನು ಓದಿ: ಹಮಾಸ್ ಎಂದರೆ ಯಾರು? ಪ್ಯಾಲೆಸ್ತೀನ್‌ನ ಸಶಸ್ತ್ರ ಗುಂಪಿನ ಬಗ್ಗೆ ಇಲ್ಲಿದೆ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...