Homeಕರ್ನಾಟಕಪ್ರಶ್ನೆಗೆ, ಸತ್ಯಕ್ಕೆ ಹೆದರಿದ ಭ್ರಷ್ಟ: ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ

ಪ್ರಶ್ನೆಗೆ, ಸತ್ಯಕ್ಕೆ ಹೆದರಿದ ಭ್ರಷ್ಟ: ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ

- Advertisement -
- Advertisement -

ಕೇಂದ್ರ ಸರ್ಕಾರ ಹಾಗೂ ವ್ಯವಸ್ಥೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಧ್ವನಿ ಎತ್ತುವ ಖ್ಯಾತ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ಇದೀಗ ನ್ಯೂಸ್‌ಕ್ಲಿಕ್ ವೆಬ್ಸೈಟ್ ಮೇಲೆ ದೆಹಲಿ ಪೊಲೀಸರು ನಡೆಸಿದ ದಾಳಿಯ ಕುರಿತು ಪರೋಕ್ಷವಾಗಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಕಿಶೋರ್, ”ಪ್ರಶ್ನೆಗೆ, ಸತ್ಯಕ್ಕೆ ಹೆದರಿದ ಭ್ರಷ್ಟ, ಹೇಡಿ ರಾಜನ ಈಡಿ, ಬೇಡಿಯ ತಲೆಬುಡವಿಲ್ಲದ ಆರೋಪಗಳ ಮುಚ್ಚುಮರೆಯ ಹೊಲಸು, ನಾಚಿಕೆಗೆಟ್ಟ ಗೂಂಡಾಗಿರಿ ರಾಜಕೀಯ.. ವಿಶೇಷಣಗಳು ಸಾಲುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

”ಚೀನಾ ಅತಿಕ್ರಮಣವನ್ನು ಮುಚ್ಚಿಹಾಕಿದಾಗ, ಚೀನಾ ಕಂಪೆನಿಗಳು ಸಾವಿರಾರು ಕೋಟಿ, ಗೆಳೆಯ ಅದಾನಿಗೆ ಕಾನೂನು ಬಾಹಿರವಾಗಿಯೂ ಕೊಡುತ್ತಲೇ ಇರುವಾಗ, ಲೆಕ್ಕಪುಸ್ತಕವಿಲ್ಲದ ಪಿಎಮ್ ಕೇರ್ಸ್‌ಗೆ, ಗೋದೀ ಚಾನೆಲ್‌ಗಳಿಗೆ, ಐಪಿಎಲ್‌ಗೆ ಕಾನೂನು ಪ್ರಕಾರವೇ ಕೊಟ್ಟಾಗಲೆಲ್ಲ ಕಾಣದ ದೇಶದ್ರೋಹ, ಅದೇ ಚೀನೀ ಕಂಪನಿಗಳು ಹಣ ಕೊಟ್ಟದ್ದಕ್ಕೆ ಪ್ರಾಮಾಣಿಕವಾಗಿ ಜನಪರವಾಗಿ ಕೆಲಸ ಮಾಡುವ ಪತ್ರಕರ್ತರ ಕೆಲಸದಲ್ಲಿ ಕಂಡುಬಿಟ್ಟಿತಲ್ಲ. ಹಾಗಾದರೆ ವಿವೊ, ಶಾಒಮಿ ಫೋನು ಬಳಸುವ ನಾವು ನೀವೆಲ್ಲರೂ ಇವರ ಪ್ರಕಾರ ದೇಶದ್ರೋಹಿಗಳೇ? ಎಂದು ಪ್ರಶ್ನೆ ಮಾಡಿದ್ದಾರೆ.

”ಚೀನಾದ ಜೊತೆ ಸಾವಿರಾರು ಕೋಟಿ ವ್ಯಾಪಾರ ನಡೆಸುತ್ತಿರುವ ಭಾರತ ಸರ್ಕಾರ?? ಇವರ ತಲೆಬುಡವಿಲ್ಲದ ಆರೋಪಗಳಿಗೆ ಆಧಾರವೇನು? ಆ ಕಂಪನಿಗಳನ್ನು ಮುಚ್ಚಿಸುತ್ತಾರೆಯೇ?” ಎಂದು ಸರಣಿ ಪ್ರಶ್ನೆ ಮಾಡಿದ್ದಾರೆ.

”ಸುಮ್ಮನೇ ಏನು ಭಾರತದ ಪತ್ರಿಕಾ ಸ್ವಾತಂತ್ರ್ಯ ಜಗತ್ತಿನಲ್ಲಿ 161ನೇ ಸ್ಥಾನಕ್ಕೆ ಹೋಗಿಲ್ಲ.. ಹೀಗೇ ಬಾಯಿಮುಚ್ಚಿಸುವುದು ಮುಂದುವರೆದರೆ, ಪ್ರಾಮಾಣಿಕ ಪತ್ರಕರ್ತರನ್ನು, ಸಂಜೀವ್ ಭಟ್, ಶ್ರೀಕುಮಾರರಂಥ ಪ್ರಾಮಾಣಿಕ ಪೋಲೀಸರನ್ನು, ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ವಿರೋಧಪಕ್ಷದ ಜನಪ್ರತಿನಿಧಿಗಳನ್ನು ಒಟ್ಟಿನಲ್ಲಿ ದೇಶದ ಜನಪರ ಪ್ರಾಮಾಣಿಕರೆಲ್ಲರನ್ನೂ ಫೋಟೋದಲ್ಲಿ, ಜೈಲಿನಲ್ಲಿ ಇಲ್ಲಾ ಸಿನಿಮಾದಲ್ಲಿ ಮಾತ್ರ ನೋಡಬೇಕಷ್ಟೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ನಮಗಾಗಿ ಹೋರಾಡಿದ ಜನ ಜೈಲಿಗೆ ಹೋಗುವಾಗ ಬಾಯಿಮುಚ್ಚಿ ಕುಳಿತ ನಾವು ಯೋಚಿಸಬೇಡವೇ?
ನಮ್ಮ ಮುಂದಿನ ಪೀಳಿಗೆಯ ಗತಿಯೇನೆಂದು?? ನಮ್ಮ ಮಕ್ಕಳು ಭ್ರಷ್ಟರಾಗಬೇಕು ಇಲ್ಲಾ ಜೈಲು ಸೇರಬೇಕು ಅಲ್ಲವೇ??” ಎಂದು ನಟ ಕಿಶೋರ್ ಕುಮಾರ್ ಜನರು ಮುಂದೆ ಪ್ರಶ್ನೆಗಳನ್ನು ಇಟ್ಟಿದ್ದಾರೆ.

ಇದನ್ನೂ ಓದಿ: ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Don’t be in partial??? Criticize your congress and other currupted people. Why you only blame Modi. And why you silent in your brother devil terrorist.? Only critise, blame hindus…. Very sad.

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...