Homeಕರ್ನಾಟಕಮಹಿಷ ದಸರಾ: ಸಂಘರ್ಷ, ಹೊಡೆದಾಟಕ್ಕೆ ಕರೆ ಕೊಟ್ಟ ಪ್ರತಾಪ್ ಸಿಂಹ್‌ನನ್ನು ಬಂಧಿಸಿ- ಎಂ.ಲಕ್ಷ್ಮಣ್

ಮಹಿಷ ದಸರಾ: ಸಂಘರ್ಷ, ಹೊಡೆದಾಟಕ್ಕೆ ಕರೆ ಕೊಟ್ಟ ಪ್ರತಾಪ್ ಸಿಂಹ್‌ನನ್ನು ಬಂಧಿಸಿ- ಎಂ.ಲಕ್ಷ್ಮಣ್

- Advertisement -
- Advertisement -

”ಮಹಿಷ ದಸರಾ ವಿಷಯವಾಗಿ ಸಂಘರ್ಷ, ಹೊಡೆದಾಟಕ್ಕೆ ಸಿದ್ಧ ಎಂದು ಹೇಳಿಕೆ ನೀಡಿರುವ ಸಂಸದ ಪ್ರತಾಪ್ ಸಿಂಹ್ ಅವರನ್ನು ಬಂಧಿಸಬೇಕು” ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದ್ದಾರೆ.

ಮೈಸೂರಿನ ಕಾಂಗ್ರೆಸ್‌‍ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಜನರ ದಿಕ್ಕು ತಪ್ಪಿಸುತ್ತಿರುವ ಸಂಸದ ಪ್ರತಾಪಸಿಂಹ ದಲಿತ ವಿರೋಧಿಯಾಗಿದ್ದಾರೆ. ಈತ ಸಂಘರ್ಷ, ಹೊಡೆದಾಟಕ್ಕೆ ಸಿದ್ಧ ಎಂದು ಹೇಳಿದ್ದಾರೆ. ಆದರೂ ಪೊಲೀಸರು ಈತನನ್ನು ಏಕೆ ಬಂಧಿಸಿಲ್ಲ? ಪೊಲೀಸರು ಬಿಜೆಪಿ ಮನಸ್ಥಿತಿ ಬಿಟ್ಟು ಕೂಡಲೇ ಬಂಧಿಸಬೇಕು” ಎಂದು ಹೇಳಿದ್ದಾರೆ.

”ದಸರಾಗೆ ಅಡ್ಡಪಡಿಸಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಚಲೋ ಮಾಡುತ್ತಿದ್ದಾರೆ. ಮಹಿಷ ಪೂಜೆ ಮಾಡಬೇಡ ಎನ್ನಲು ಪ್ರತಾಪಸಿಂಹ ಯಾರು?” ಎಂದು ಪ್ರಶ್ನೆ ಮಾಡಿದ್ದಾರೆ.

”ಯಾರು ಯಾರಬೇಕಾದವರನ್ನ ಪೂಜಿಸಲು ಸಂವಿಧಾನ ಅವಕಾಶ ಕೊಟ್ಟಿದೆ. ಮಹಿಷಾಸುರ ಸರಿ ಇಲ್ಲದಿದ್ದರೆ ನಿಮ್ಮದೇ ಸರ್ಕಾರ ಇದ್ದಾಗ, ಪ್ರತಿಮೆ ತೆಗೆಸಬೇಕಿತ್ತು. ಮಹಿಷಾಸುರ ಭಯೋತ್ಪಾದಕನೇ?” ಎಂದು ಪ್ರಶ್ನಿಸಿದ್ದಾರೆ.

”ಚಾಮುಂಡಿ ಚಲೋದಲ್ಲಿ ಭಾಗವಹಿಸಲು ವಿವಿಧ ರಾಜ್ಯಗಳಿಂದ 400 ಆರ್‌ಎಸ್‌ಎಸ್ ಕಾರ್ಯಕರ್ತರು ಮೈಸೂರಿಗೆ ಬಂದಿದ್ದಾರೆ. ಕಲ್ಲು ಹೊಡೆಸುವುದು, ಹೆಣ ಉರುಳಿಸಿ ಕೆಟ್ಟ ಹೆಸರು ತರಲು ಮುಂದಾಗಿದ್ದಾರೆ. ಏನಾದರೂ ಸಮಸ್ಯೆಯಾದರೆ ಜಿಲ್ಲಾಡಳಿತ, ಪೊಲೀಸರು ಹೊಣೆ‌” ಎಂದು ಎಚ್ಚರಿಸಿದರು.

”ಚಾಮುಂಡಿ ಬೆಟ್ಟ ಚಲೋದಲ್ಲಿ ಬಿಜೆಪಿ ಮುಖಂಡರು ಭಾಗವಹಿಸದಂತೆ ಮನವಿ ಮಾಡಿದ ಲಕ್ಷ್ಮಣ್‌ ಅವರು, ಪೋಷಕರು ತಮ್ಮ ಮಕ್ಕಳನ್ನು ಚಲೋಗೆ ಕಳಹಿಸಬೇಡಿ ಎಂದು ಕೇಳಿದರು. ಸಂಘರ್ಷಕ್ಕೆ ಕರೆ ಕೊಟ್ಟಿರುವ ಪ್ರತಾಪಸಿಂಹ ದಲಿತ ವಿರೋಧಿ” ಎಂದು ಲಕ್ಷ್ಮಣ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಪ್ರಶ್ನೆಗೆ, ಸತ್ಯಕ್ಕೆ ಹೆದರಿದ ಭ್ರಷ್ಟ: ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...