Homeಅಂತರಾಷ್ಟ್ರೀಯಹಮಾಸ್‌ನ ವಿತ್ತ ಸಚಿವರನ್ನು ಹತ್ಯೆ ಮಾಡಿದ್ದೇವೆ: ಇಸ್ರೇಲ್ ಹೇಳಿಕೆ

ಹಮಾಸ್‌ನ ವಿತ್ತ ಸಚಿವರನ್ನು ಹತ್ಯೆ ಮಾಡಿದ್ದೇವೆ: ಇಸ್ರೇಲ್ ಹೇಳಿಕೆ

- Advertisement -
- Advertisement -

ಕಳೆದ ರಾತ್ರಿ ಗಾಜಾ ಪಟ್ಟಿಯ ಮೇಲೆ ಇಸ್ರೇಲ್‌ ನಡೆಸಿದ ಡ್ರೋನ್ ದಾಳಿಯಲ್ಲಿ ಹಮಾಸ್‌ನ ವಿತ್ತ ಸಚಿವ ಮತ್ತು ಹಮಾಸ್‌ನ ಪಾಲಿಟ್‌ಬ್ಯುರೊದ ಹಿರಿಯ ಅಧಿಕಾರಿ ಮೃತಪಟ್ಟಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಹೇಳಿವೆ.

ಹಮಾಸ್‌ ವಿತ್ತ ಸಚಿವ ಜವಾದ್ ಅಬು ಶಮಲಾ ಮತ್ತು ಜಕರಿಯಾ ಅಬು ಮೊಅಮ್ಮರ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ ಹೇಳಿದೆ.

ಜವಾದ್ ಅಬು ಶಮಲಾ ಅವರು ಹಮಾಸ್‌ಗೆ ನಿಧಿಯನ್ನು ನೀಡುತ್ತಿದ್ದರು ಮತ್ತು ಗಾಜಾ ಪಟ್ಟಿಯ ಒಳಗೆ ಮತ್ತು ಹೊರಗೆ ಇಸ್ರೇಲ್ ವಿರುದ್ಧದ ಕೃತ್ಯಕ್ಕೆ ಹಣಕಾಸು ನೀಡುತ್ತಿದ್ದರು ಎಂದು ಇಸ್ರೇಲ್ ಮಿಲಿಟರಿ ಹೇಳಿದೆ.

ಹತ್ಯೆಯಾದ ಜಕರಿಯಾ ಅಬು ಮೊಅಮ್ಮರ್, ಹಮಾಸ್‌ ಸಶಸ್ತ್ರ ಗುಂಪಿನ ಆಂತರಿಕ ವ್ಯವಹಾರಗಳ ಮುಖ್ಯಸ್ಥನಾಗಿದ್ದರು. ಹಿರಿಯ ಹಮಾಸ್ ನಾಯಕರು ಮತ್ತು ಗಾಜಾ ಪಟ್ಟಿಯಲ್ಲಿರುವ ಸಶಸ್ತ್ರ ಗುಂಪಿನ ನಡುವೆ ಸಂಯೋಜಕರಾಗಿದ್ದರು ಎಂದು IDF ಹೇಳಿದೆ.

ಆದರೆ ಈ ಇಬ್ಬರು ಹಮಾಸ್‌ನ ನಾಯಕರ ಹತ್ಯೆಯ ಬಗ್ಗೆ ಹಮಾಸ್‌ ಸಶಸ್ತ್ರ ಗುಂಪು ಯಾವುದೇ ಹೇಳಿಕೆಯನ್ನು ನೀಡಿಲ್ಲ.

ಇಸ್ರೇಲ್ ವಿರುದ್ಧ ಹಮಾಸ್‌ ಸಶಸ್ತ್ರ ಗುಂಪು ಶನಿವಾರ 5000ಕ್ಕೂ ಅಧಿಕ ರಾಕೆಟ್‌ ದಾಳಿಯನ್ನು ನಡೆಸಿದ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿತ್ತು. ಆ ಬಳಿಕ ಎರಡು ದೇಶಗಳಲ್ಲಿ ಅಪಾರ ಸಾವು-ನೋವುಗಳು ಸಂಭವಿಸಿದೆ. ಇತ್ತೀಚಿನ ವರದಿ ಪ್ರಕಾರ ಇಸ್ರೇಲ್‌- ಪ್ಯಾಲೆಸ್ತೀನ್‌ ಕದನದಲ್ಲಿ ಮೃತರ ಸಂಖ್ಯೆ 1900ಕ್ಕೆ ಏರಿಕೆಯಾಗಿದೆ.

ಆದರೆ ಸುಮಾರು 1500 ಹಮಾಸ್‌ ಹೋರಾಟಗಾರರ ಮೃತದೇಹಗಳು ಇಸ್ರೇಲ್‌ನಲ್ಲಿ ಗಾಝಾ ಪಟ್ಟಿಯ ಸುತ್ತಲಿನ ಪ್ರದೇಶದಲ್ಲಿ ಪತ್ತೆಯಾಗಿವೆ ಎಂದು ಇಸ್ರೇಲ್‌ ಸೇನೆ ನಿನ್ನೆ ಹೇಳಿತ್ತು. ಇದಲ್ಲದೆ ಗಾಝಾ ಜೊತೆಗಿನ ಗಡಿ ಪ್ರದೇಶದಲ್ಲಿ ಇಸ್ರೇಲ್‌ ಬಹುಪಾಲು ನಿಯಂತ್ರಣ ಮರುಸ್ಥಾಪಿಸಿದೆ ಎಂದು ಇಸ್ರೇಲ್‌ನ ಮಿಲಿಟರಿ ವಕ್ತಾರ ರಿಚರ್ಡ್‌ ಹೆಚ್ಟ್‌ ಹೇಳಿದ್ದರು.

ಹಮಾಸ್ ಇಸ್ರೇಲ್ ಮೇಲೆ ಸರಣಿ ರಾಕೆಟ್‌ ದಾಳಿಯನ್ನು ಭೂ, ವಾಯು, ನೌಕಾ ಮಾರ್ಗದಲ್ಲಿ ನಡೆಸಿತ್ತು. ಇಸ್ರೇಲ್‌ನ ವಿವಿಧ ಪ್ರಾಂತ್ಯಗಳಲ್ಲಿ ನುಗ್ಗಿ ಜನರನ್ನು ಒತ್ತೆಯಾಳಾಗಿಟ್ಟಿತ್ತು.

ಇದನ್ನು ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಲ್ಲಿ ಮೃತರ ಸಂಖ್ಯೆ ಗಣನೀಯ ಹೆಚ್ಚಳ: ಇಸ್ರೇಲ್‌ಗೆ ಯುದ್ಧ ನೌಕೆ ಕಳುಹಿಸಿದ ಅಮೆರಿಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...