Homeಮುಖಪುಟಒಡಿಶಾ ರೈಲು ದುರಂತ: ವಾರೀಸುದಾರರಿಲ್ಲದ 28 ಮೃತದೇಹಕ್ಕೆ ಅಂತ್ಯಸಂಸ್ಕಾರ

ಒಡಿಶಾ ರೈಲು ದುರಂತ: ವಾರೀಸುದಾರರಿಲ್ಲದ 28 ಮೃತದೇಹಕ್ಕೆ ಅಂತ್ಯಸಂಸ್ಕಾರ

- Advertisement -
- Advertisement -

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ್ದ ರೈಲು ಅಪಘಾತದಲ್ಲಿ ಮೃತ 28 ಮಂದಿ ಅಪರಿಚಿತರ ಮೃತದೇಹವನ್ನು ಕೊನೆಗೂ ವಾರೀಸುದಾರರು ಇಲ್ಲದ ಕಾರಣ ಅಂತ್ಯಸಂಸ್ಕಾರ ಮಾಡಲಾಗಿದೆ.

ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್(BMC) ಮಂಗಳವಾರ ಬಹನಾಗಾ ರೈಲು ದುರಂತದಲ್ಲಿ ಸಾವನ್ನಪ್ಪಿದ ಅಪರಿಚಿತ ಪ್ರಯಾಣಿಕರ ಅಂತ್ಯಸಂಸ್ಕಾರವನ್ನು ಗೌರವದಿಂದ ಮಾಡಿದೆ.

ವಾರಸುದಾರರಿಲ್ಲದ 28 ಮೃತದೇಹವನ್ನು ಕಳೆದ 4 ತಿಂಗಳಿನಿಂದ ಭುವನೇಶ್ವರದ ಏಮ್ಸ್‌ನಲ್ಲಿ ಕಂಟೈನರ್‌ನಲ್ಲಿ ಸಂಗ್ರಹಿಸಿಡಲಾಗಿತ್ತು. ಇದೀಗ ಯಾರೂ ವಾರೀಸುದಾರರು ಬರದ ಕಾರಣ ಮೃತದೇಹಗಳನ್ನು ಭರತ್‌ಪುರ ಸ್ಮಶಾನದಲ್ಲಿ ಸಾಂಪ್ರದಾಯಿಕ ವಿಧಿ ವಿಧಾನಗಳ ಪ್ರಕಾರ ದಹಿಸಲಾಗಿದೆ.

ಹಿರಿಯ ಬಿಎಂಸಿ ಅಧಿಕಾರಿಯೊಬ್ಬರ ಮೇಲ್ವಿಚಾರಣೆಯಲ್ಲಿ ಶವಸಂಸ್ಕಾರ ನಡೆದಿದೆ. ಪರ್ದೀಪ್ ಸೇವಾ ಟ್ರಸ್ಟ್‌ನ 12 ಸದಸ್ಯರ ತಂಡವು ನಿಯಮಗಳ ಪ್ರಕಾರ ಮೃತದೇಹಗಳನ್ನು ಅಂತ್ಯಸಂಸ್ಕಾರ ಮಾಡಿದೆ.

ಪ್ರತಿಯೊಂದು ಮೃತದೇಹದ ಅಂತ್ಯಕ್ರಿಯೆಗೆ ಕನಿಷ್ಠ ನಾಲ್ಕು ಗಂಟೆಗಳನ್ನು ತೆಗೆದುಕೊಂಡಿದೆ. ದೇಹಗಳನ್ನು ಮೈನಸ್ ತಾಪಮಾನದಲ್ಲಿ ಸಂಗ್ರಹಿಸಿದ್ದರಿಂದ ಶವಗಳು ಮಂಜುಗಡ್ಡೆಯಿಂದ ಗಟ್ಟಿಯಾಗಿದ್ದವು. ಮೃತದೇಹಗಳನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಗುಣಮಟ್ಟದ ಮರ ಮತ್ತು ತುಪ್ಪದ ವ್ಯವಸ್ಥೆ ಮಾಡಲಾಗಿದೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಂದು ತಿಂಗಳಿನಿಂದ ಉಳಿದ 28 ಶವಗಳನ್ನು ಪಡೆಯಲು ಯಾರೂ ಬರದ ಕಾರಣ, ರೈಲು ಅಪಘಾತದ ತನಿಖೆ ನಡೆಸುತ್ತಿರುವ ಸಿಬಿಐ ಅಪರಿಚಿತ ಬಲಿಪಶುಗಳನ್ನು ವಿಲೇವಾರಿ ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಇದರಂತೆ  ಕಾನೂನು ತೊಡಕುಗಳನ್ನು ಗಮನದಲ್ಲಿಟ್ಟುಕೊಂಡು ಮೃತರ ಡಿಎನ್‌ಎಯನ್ನು ಸಂರಕ್ಷಿಸಿಟ್ಟು ಅಂತ್ಯಸಂಸ್ಕಾರವನ್ನು ನಡೆಸಲಾಗಿದೆ. ಡಿಎನ್‌ಎ ಸಂಗ್ರಹಿಸಿಟ್ಟಿರುವ ಬಗ್ಗೆ ಸ್ವತಃ ಏಮ್ಸ್‌ನ ಅಂಗರಚನಾಶಾಸ್ತ್ರದ ವಿಭಾಗದ ಮುಖ್ಯಸ್ಥ ಪ್ರೊ.ಪ್ರವಾಸ್ ತ್ರಿಪಾಠಿ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬಹನಗಾ ಬಜಾರ್ ರೈಲು ನಿಲ್ದಾಣದ ಬಳಿ ನಡೆದ ಈ ಭೀಕರ ಅಪಘಾತದಲ್ಲಿ ಒಟ್ಟು 296 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ 162 ಮೃತದೇಹಗಳನ್ನು ಏಮ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಆದರಲ್ಲಿ 81 ಜನರ ಮೃತದೇಹಗಳನ್ನು ಅವರ ಸಂಬಂಧಿಕರು ತೆಗೆದುಕೊಂಡು ಹೋಗಿದ್ದಾರೆ. ಉಳಿದ 81 ಮೃತದೇಹಗಳ ಡಿಎನ್‌ಎ ಪರೀಕ್ಷೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅದರಲ್ಲಿ 53 ಮೃತದೇಹಗಳ ಗುರುತು ಪತ್ತೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಇನ್ನೂ 28 ಮೃತದೇಹಗಳನ್ನು ಭುವನೇಶ್ವರ ಏಮ್ಸ್‌ನಲ್ಲಿರುವ ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ಈ ಶವಗಳು ವಲಸೆ ಕಾರ್ಮಿಕರದ್ದಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಆದರೆ ಯಾರೂ ಕೂಡ ಸಂಬಂಧಿಕರು ಮೃತದೇಹವನ್ನು ಪಡೆಯಲು ಬಂದಿಲ್ಲ.

ಆದರೆ ನಿಯಮಗಳ ಪ್ರಕಾರ 30 ದಿನಗಳ ನಂತರ ಅನಾಥ ಶವಗಳಿಗೆ ಅಂತ್ಯಕ್ರಿಯೆ ನಡೆಸಬೇಕು. ಆದ್ದರಿಂದ ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ ನೇತೃತೃತ್ವದಲ್ಲಿ ಅಂತ್ಯಸಂಸ್ಕಾರ ನಡೆದಿದೆ.

ಇದನ್ನು ಓದಿ: ನಿಷೇಧಿತ ಪಿಎಫ್‌ಐ ಪರ ಚಟುವಟಿಕೆ ಶಂಕೆ: ವಿವಿಧ ಸ್ಥಳಗಳಲ್ಲಿ ಎನ್‌ಐಎ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...