Homeಮುಖಪುಟಒಡಿಶಾ ರೈಲು ದುರಂತ: ವಾರೀಸುದಾರರಿಲ್ಲದ 28 ಮೃತದೇಹಕ್ಕೆ ಅಂತ್ಯಸಂಸ್ಕಾರ

ಒಡಿಶಾ ರೈಲು ದುರಂತ: ವಾರೀಸುದಾರರಿಲ್ಲದ 28 ಮೃತದೇಹಕ್ಕೆ ಅಂತ್ಯಸಂಸ್ಕಾರ

- Advertisement -
- Advertisement -

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ್ದ ರೈಲು ಅಪಘಾತದಲ್ಲಿ ಮೃತ 28 ಮಂದಿ ಅಪರಿಚಿತರ ಮೃತದೇಹವನ್ನು ಕೊನೆಗೂ ವಾರೀಸುದಾರರು ಇಲ್ಲದ ಕಾರಣ ಅಂತ್ಯಸಂಸ್ಕಾರ ಮಾಡಲಾಗಿದೆ.

ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್(BMC) ಮಂಗಳವಾರ ಬಹನಾಗಾ ರೈಲು ದುರಂತದಲ್ಲಿ ಸಾವನ್ನಪ್ಪಿದ ಅಪರಿಚಿತ ಪ್ರಯಾಣಿಕರ ಅಂತ್ಯಸಂಸ್ಕಾರವನ್ನು ಗೌರವದಿಂದ ಮಾಡಿದೆ.

ವಾರಸುದಾರರಿಲ್ಲದ 28 ಮೃತದೇಹವನ್ನು ಕಳೆದ 4 ತಿಂಗಳಿನಿಂದ ಭುವನೇಶ್ವರದ ಏಮ್ಸ್‌ನಲ್ಲಿ ಕಂಟೈನರ್‌ನಲ್ಲಿ ಸಂಗ್ರಹಿಸಿಡಲಾಗಿತ್ತು. ಇದೀಗ ಯಾರೂ ವಾರೀಸುದಾರರು ಬರದ ಕಾರಣ ಮೃತದೇಹಗಳನ್ನು ಭರತ್‌ಪುರ ಸ್ಮಶಾನದಲ್ಲಿ ಸಾಂಪ್ರದಾಯಿಕ ವಿಧಿ ವಿಧಾನಗಳ ಪ್ರಕಾರ ದಹಿಸಲಾಗಿದೆ.

ಹಿರಿಯ ಬಿಎಂಸಿ ಅಧಿಕಾರಿಯೊಬ್ಬರ ಮೇಲ್ವಿಚಾರಣೆಯಲ್ಲಿ ಶವಸಂಸ್ಕಾರ ನಡೆದಿದೆ. ಪರ್ದೀಪ್ ಸೇವಾ ಟ್ರಸ್ಟ್‌ನ 12 ಸದಸ್ಯರ ತಂಡವು ನಿಯಮಗಳ ಪ್ರಕಾರ ಮೃತದೇಹಗಳನ್ನು ಅಂತ್ಯಸಂಸ್ಕಾರ ಮಾಡಿದೆ.

ಪ್ರತಿಯೊಂದು ಮೃತದೇಹದ ಅಂತ್ಯಕ್ರಿಯೆಗೆ ಕನಿಷ್ಠ ನಾಲ್ಕು ಗಂಟೆಗಳನ್ನು ತೆಗೆದುಕೊಂಡಿದೆ. ದೇಹಗಳನ್ನು ಮೈನಸ್ ತಾಪಮಾನದಲ್ಲಿ ಸಂಗ್ರಹಿಸಿದ್ದರಿಂದ ಶವಗಳು ಮಂಜುಗಡ್ಡೆಯಿಂದ ಗಟ್ಟಿಯಾಗಿದ್ದವು. ಮೃತದೇಹಗಳನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಗುಣಮಟ್ಟದ ಮರ ಮತ್ತು ತುಪ್ಪದ ವ್ಯವಸ್ಥೆ ಮಾಡಲಾಗಿದೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಂದು ತಿಂಗಳಿನಿಂದ ಉಳಿದ 28 ಶವಗಳನ್ನು ಪಡೆಯಲು ಯಾರೂ ಬರದ ಕಾರಣ, ರೈಲು ಅಪಘಾತದ ತನಿಖೆ ನಡೆಸುತ್ತಿರುವ ಸಿಬಿಐ ಅಪರಿಚಿತ ಬಲಿಪಶುಗಳನ್ನು ವಿಲೇವಾರಿ ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಇದರಂತೆ  ಕಾನೂನು ತೊಡಕುಗಳನ್ನು ಗಮನದಲ್ಲಿಟ್ಟುಕೊಂಡು ಮೃತರ ಡಿಎನ್‌ಎಯನ್ನು ಸಂರಕ್ಷಿಸಿಟ್ಟು ಅಂತ್ಯಸಂಸ್ಕಾರವನ್ನು ನಡೆಸಲಾಗಿದೆ. ಡಿಎನ್‌ಎ ಸಂಗ್ರಹಿಸಿಟ್ಟಿರುವ ಬಗ್ಗೆ ಸ್ವತಃ ಏಮ್ಸ್‌ನ ಅಂಗರಚನಾಶಾಸ್ತ್ರದ ವಿಭಾಗದ ಮುಖ್ಯಸ್ಥ ಪ್ರೊ.ಪ್ರವಾಸ್ ತ್ರಿಪಾಠಿ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬಹನಗಾ ಬಜಾರ್ ರೈಲು ನಿಲ್ದಾಣದ ಬಳಿ ನಡೆದ ಈ ಭೀಕರ ಅಪಘಾತದಲ್ಲಿ ಒಟ್ಟು 296 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ 162 ಮೃತದೇಹಗಳನ್ನು ಏಮ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಆದರಲ್ಲಿ 81 ಜನರ ಮೃತದೇಹಗಳನ್ನು ಅವರ ಸಂಬಂಧಿಕರು ತೆಗೆದುಕೊಂಡು ಹೋಗಿದ್ದಾರೆ. ಉಳಿದ 81 ಮೃತದೇಹಗಳ ಡಿಎನ್‌ಎ ಪರೀಕ್ಷೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅದರಲ್ಲಿ 53 ಮೃತದೇಹಗಳ ಗುರುತು ಪತ್ತೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಇನ್ನೂ 28 ಮೃತದೇಹಗಳನ್ನು ಭುವನೇಶ್ವರ ಏಮ್ಸ್‌ನಲ್ಲಿರುವ ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ಈ ಶವಗಳು ವಲಸೆ ಕಾರ್ಮಿಕರದ್ದಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಆದರೆ ಯಾರೂ ಕೂಡ ಸಂಬಂಧಿಕರು ಮೃತದೇಹವನ್ನು ಪಡೆಯಲು ಬಂದಿಲ್ಲ.

ಆದರೆ ನಿಯಮಗಳ ಪ್ರಕಾರ 30 ದಿನಗಳ ನಂತರ ಅನಾಥ ಶವಗಳಿಗೆ ಅಂತ್ಯಕ್ರಿಯೆ ನಡೆಸಬೇಕು. ಆದ್ದರಿಂದ ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ ನೇತೃತೃತ್ವದಲ್ಲಿ ಅಂತ್ಯಸಂಸ್ಕಾರ ನಡೆದಿದೆ.

ಇದನ್ನು ಓದಿ: ನಿಷೇಧಿತ ಪಿಎಫ್‌ಐ ಪರ ಚಟುವಟಿಕೆ ಶಂಕೆ: ವಿವಿಧ ಸ್ಥಳಗಳಲ್ಲಿ ಎನ್‌ಐಎ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...