Homeಮುಖಪುಟಮೋದಿ ಆಡಳಿತದಲ್ಲಿ ಆರ್‌ಟಿಐ ವೇಗವಾಗಿ ದುರ್ಬಲಗೊಳ್ಳುತ್ತಿದೆ: ಕಾಂಗ್ರೆಸ್‌

ಮೋದಿ ಆಡಳಿತದಲ್ಲಿ ಆರ್‌ಟಿಐ ವೇಗವಾಗಿ ದುರ್ಬಲಗೊಳ್ಳುತ್ತಿದೆ: ಕಾಂಗ್ರೆಸ್‌

- Advertisement -
- Advertisement -

ಮಾಹಿತಿ ಹಕ್ಕು ಕಾಯಿದೆ(ಆರ್‌ಟಿಐ) ಜಾರಿಗೆ ಬಂದ 18ನೇ ವರ್ಷಾಚರಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಕೇಂದ್ರ ಸರಕಾರವನ್ನು ಟೀಕಿಸಿದ್ದು, ಮೋದಿ ಸರ್ಕಾರವು ಈ ಕಾನೂನನ್ನು ದುರ್ಬಲಗೊಳಿಸಲು ಪ್ರಯತ್ನಿಸಿದೆ ಎಂದು ಆರೋಪಿಸಿದೆ.

ಮಾಹಿತಿ ಹಕ್ಕು ಕಾಯಿದೆಯ ನಿಬಂಧನೆಗಳನ್ನು ದುರ್ಬಲಗೊಳಿಸುವ, ಪ್ರಧಾನಿಗಳ ಆಜ್ಞೆಯನ್ನು ಪಾಲಿಸುವವರನ್ನು ಕಮಿಷನ್‌ಗೆ ನೇಮಿಸುವ, ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ನಿರಂತರವಾಗಿ ಕಾಯ್ದೆಯನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆದಿದೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ.

ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರತಿಕ್ರಿಯಿಸಿದ್ದು, RTI ಕಾಯಿದೆಯು ಕನಿಷ್ಠ 2014ರವರೆಗೆ ಪ್ರಬಲವಾಗಿತ್ತು. ಅದರ ನಂತರ ಮೋದಿ ಸರ್ಕಾರವು ಕಾನೂನನ್ನು ದುರ್ಬಲಗೊಳಿಸಲು, ಅದರ ನಿಬಂಧನೆಗಳನ್ನು ದುರ್ಬಲಗೊಳಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ರಮೇಶ್ ಆರೋಪಿಸಿದ್ದಾರೆ.

ಆರ್‌ಟಿಐಯಿಂದ ಬಹಿರಂಗವಾಗುತ್ತಿದ್ದ ವಿಚಾರಗಳು ಪ್ರಧಾನಿಯವರಿಗೆ ಅತ್ಯಂತ ಮುಜುಗರವನ್ನುಂಟುಮಾಡಿತ್ತು, ಅದು ತಿದ್ದುಪಡಿಗೆ ಪ್ರಮುಖ ಕಾರಣವಾಗಿದೆ. ಈ ಕೆಲವು ತಿದ್ದುಪಡಿಗಳನ್ನು ನಾನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದೇನೆ ಮತ್ತು ಆರ್‌ಟಿಐ ವೇಗವಾಗಿ ಆರ್‌ಐಪಿ/ಓಂ ಶಾಂತಿ ಸ್ಥಾನಮಾನಕ್ಕೆ ಸಾಗುತ್ತಿರುವ ಕಾರಣ ಅರ್ಜಿಯನ್ನು ಶೀಘ್ರದಲ್ಲೇ ವಿಚಾರಣೆ ಮಾಡಲಾಗುತ್ತದೆ ಎಂದು ನಾನು ಇನ್ನೂ ಆಶಿಸುತ್ತಿದ್ದೇನೆ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

2019ರ ಜುಲೈನಲ್ಲಿ ನಡೆದ ಆರ್‌ಟಿಐ ಕಾಯ್ದೆಯ ತಿದ್ದುಪಡಿ ಕುರಿತ ತಮ್ಮ ಆಕ್ಷೇಪವನ್ನು ಉಲ್ಲೇಖಿಸಿದ ವಿಡಿಯೋವನ್ನು ಕೂಡ ಜೈರಾಮ್‌ ರಮೇಶ್‌ ಅವರು ಹಂಚಿಕೊಂಡಿದ್ದಾರೆ. ಆರ್‌ಟಿಐ ಕಾಯ್ದೆ 2005ರ ಅ.12ರಂದು ಕಾರ್ಯ ರೂಪಕ್ಕೆ ಬಂದಿತ್ತು.

ಇದನ್ನು ಓದಿ: ತೀರ್ಪಿನ ಶೀರ್ಷಿಕೆಯಲ್ಲಿ ಆರೋಪಿಯ ಜಾತಿ ನಮೂದಿಗೆ ಆಕ್ಷೇಪಿಸಿದ ಸುಪ್ರೀಂಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...