Homeಕರ್ನಾಟಕಉ.ಕನ್ನಡ ಜಿ.ಪಂ ಅಧ್ಯಕ್ಷೆ ಜಯಶ್ರೀ ಜಾತಿ ಸರ್ಟಿಫಿಕೇಟ್ ರಾದ್ಧಾಂತ ಮೊಗೇರರ `ಎಸ್‍ಸಿ' ಸವಲತ್ತಿಗೆ ಬಿತ್ತು ಕತ್ತರಿ

ಉ.ಕನ್ನಡ ಜಿ.ಪಂ ಅಧ್ಯಕ್ಷೆ ಜಯಶ್ರೀ ಜಾತಿ ಸರ್ಟಿಫಿಕೇಟ್ ರಾದ್ಧಾಂತ ಮೊಗೇರರ `ಎಸ್‍ಸಿ’ ಸವಲತ್ತಿಗೆ ಬಿತ್ತು ಕತ್ತರಿ

- Advertisement -
- Advertisement -

| ಶುದ್ಧೋಧನ |

ಮೀನು ಬೇಟೆಯಾಡುವ ಮೊಗೇರ ಮತ್ತು ಮೊಲ ಬೇಟೆಯಾಡುವ ಮುಗೇರಾ ಒಂದೇ ಸಮುದಾಯವಾ? ಅಸಲಿ ಪರಿಶಿಷ್ಟರಾದ ದಕ್ಷಿಣ ಕನ್ನಡದ ಸುಳ್ಯ ಹಾಗೂ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ಮುಗೇರ ಜಾತಿಯ ಹಕ್ಕು-ಸವಲತ್ತಿಗೆ ಉತ್ತರ ಕನ್ನಡದ ಮೀನುಗಾರ ಸಂಕುಲದ ಮೊಗೇರರು ಅರ್ಹರಾ? ಇಂಗ್ಲಿಷ್ ಕಾಗುಣಿತದ ಸಣ್ಣದೊಂದು ಸಾಮ್ಯತೆ ಎರಡೂ ಸಮುದಾಯದ ಹೆಸರಲ್ಲಿರುವುದರಿಂದ ಮೊಗೇರರು ಪರಿಶಿಷ್ಟರಾಗಲು ಸಾಧ್ಯವಾ? ಪ್ರವರ್ಗ-1ರಲ್ಲಿರುವ ಮೊಗೇರರು ಕಳೆದೆರಡು ದಶಕದಿಂದ ಪರಿಶಿಷ್ಟ ಜಾತಿ ಸೌಲಭ್ಯ ದಕ್ಕಿಸಿಕೊಳ್ಳುತ್ತಿರುವುದರ ಹಿಂದಿನ ರಾಜಕೀಯ ಹಿಕಮತ್ತೇನಿರಬಹುದು? ಎಂಬಿತ್ಯಾದಿ ಕಾನೂನು ಮತ್ತು ಸಾಮಾಜಿಕ ಜಿಜ್ಞಾಸೆ ಶುರುವಾಗಿ ಒಂದು ದಶಕವೇ ಕಳೆದು ಹೋಗಿದೆ. ಆದರೆ ಕಳೆದ ವಾರ ಇದ್ದಕ್ಕಿದ್ದಂತೆಯೇ ಈ ವ್ಯಾಜ್ಯ ತಾರ್ಕಿಕ ಅಂತ್ಯಕ್ಕೆ ಬಂದುನಿಂತಿದೆ!!

ನಾಲ್ಕು ಬಾರಿ ಎಸ್‍ಸಿ ಮೀಸಲು ಕ್ಷೇತ್ರದಲ್ಲಿ ಗೆದ್ದು ಜಿಲ್ಲಾ ಪಂಚಾಯ್ತಿ ಸದಸ್ಯೆಯಾಗಿದ್ದ ಭಟ್ಕಳದ ಜಯಶ್ರೀ ಗುರುವಾಸ ಮೊಗೇರ ಎಪ್ರಿಲ್ 2016ರಲ್ಲಿ ಜಿಪಂ ಅಧ್ಯಕ್ಷ ಪಟ್ಟವೇರಿದ ಮರುಗಳಿಗೆಯೇ ಆಕೆ ಅಸಲಿ ಪರಿಶಿಷ್ಟಳಲ್ಲವೆಂಬ ಕೂಗೆದ್ದಿತ್ತು. ದಲಿತರು ಆಕೆಯ ಎಸ್‍ಸಿ ಸರ್ಟಿಫಿಕೇಟ್‍ಗೆ ಆಕ್ಷೇಪವೆತ್ತಿ ಹೈಕೋರ್ಟ್ ಕಟ್ಟೆಯೇರಿದ್ದರು. ಹೈಕೋರ್ಟ್ ಪೀಠ ಈ ಪ್ರಕರಣದ ತನಿಖೆ ನಡೆಸುವಂತೆ ಭಟ್ಕಳದ ಉಪವಿಭಾಗಾಧಿಕಾರಿಗೆ ಸೂಚಿಸಿತ್ತು. ಹಿಂದಿನ ಭಟ್ಕಳದ ಶಾಸಕ ಮಂಕಾಳು ವೈದ್ಯನ ಜಾತಿ ಪ್ರೀತಿಯಿಂದ ಜಯಶ್ರೀ ಕೇಸು ಎಸಿ ಕೋರ್ಟ್‍ನ ಶೈತ್ಯಾಗಾರ ಸೇರಿತ್ತು. ಇದೇ ಸಂದರ್ಭದಲ್ಲಿ ಮೊಗೇರ ಸಮುದಾಯದ ಹಲವರು ಪಡೆದಿದ್ದ ಎಸ್‍ಸಿ ಸರ್ಟಿಫಿಕೇಟ್‍ನ್ನು ಅಂದಿನ ಡಿಸಿ ನಕುಲ್ ರದ್ದು ಮಾಡಿದ್ದರು. ಆದರೆ ಜಯಶ್ರೀ ಪರಿಶಿಷ್ಟತೆಯ ಅಸಲಿಯತ್ತು ಮಾತ್ರ ಹೊರಗೆ ಬಂದಿರಲಿಲ್ಲ. ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಣಾಯಕರಾಗಿರುವ ಮೊಗೇರ ಸಮುದಾಯವನ್ನು ಎದುರು ಹಾಕಿಕೊಳ್ಳುವ ಧೈರ್ಯವಿಲ್ಲದ ಹಾಲಿ ಶಾಸಕ “ಮೆಟ್ರಿಕ್” ಸುನಿಲ್ ನಾಯ್ಕ್ ಡಬ್ಬಲ್ ಗೇಮ್ ಆಡುತ್ತ ಚಂದ ನೋಡುತ್ತಲೇ ಇದ್ದ.

ಮಂಕಾಳು ಎದುರಾಳಿ ಆಗಿರುವ ತನಕ ಆತನ ಜಾತಿ ಬಂಧುಗಳಾದ ಮೊಗೇರರು ತನಗೆ ಮಗ್ಗಲು ಮುಳ್ಳೆಂಬ ಲೆಕ್ಕಾಚಾರ ಸುನೀಲ್ ನಾಯ್ಕನದು. ಹಾಗಾಗಿ ಆತ ರಾತ್ರಿ ಸಣ್ಣ ಸಮುದಾಯದ ದಲಿತರೊಂದಿಗೆ ಕಾಣಿಸಿಕೊಂಡರೆ ಹಗಲು ಮೊಗೇರರ ಸಂಗಡ ಚಕ್ಕಂದ ನಡೆಸುತ್ತಿದ್ದ. ಯಾವಾಗ ಸುನೀಲ್‍ನ ಬಿಜೆಪಿಯ ಯಡ್ಡಿ ಅಕ್ರಮವಾಗಿ ಸಿಎಂ ಆದರೋ ಆಗ ಹಠಾತ್ ಜೀವ ಬಂದುಬಿಟ್ಟಿತು. ಎಸಿ ಕೋರ್ಟ್‍ನಲ್ಲಿದ್ದ ಜಯಶ್ರೀ ಜಾತಿ ಪ್ರಮಾಣ ಪತ್ರ ಪ್ರಕರಣಕ್ಕೆ ಕಳೆದ ವಾರ ಭಟ್ಕಳದ ಎಸಿ ಸಾಜಿದ್ ಮುಲ್ಲಾ ಬರೋಬ್ಬರಿ ಏಳು ಪುಟದ ತೀರ್ಪು ಬರೆದು ಜಯಶ್ರೀ ಪರಿಶಿಷ್ಟಳಾಗಲು ಸಾಧ್ಯವಿಲ್ಲ. ಹಾಗಾಗಿ ಆಕೆಗೆ ಕೊಟ್ಟ ಎಸ್‍ಸಿ ಸರ್ಟಿಫಿಕೇಟ್ ರದ್ದು ಮಾಡೆಂದು ತಹಶೀಲ್ದಾರ್‍ಗೆ ಆದೇಶ ಮಾಡಿದ್ದಾರೆ. ಅಲ್ಲಿಗೆ ಉತ್ತರ ಕನ್ನಡದ ಮೊಗೇರರು ಪರಿಶಿಷ್ಟ ಜಾತಿಯವರಲ್ಲ ಎಂಬುದು ನಿಸ್ಸಂಶಯವಾಗಿ ಸಾಬೀತಾದಂತಾಗಿದೆ! ದಲಿತರ ನಿರಂತರ ಹೋರಾಟಕ್ಕೆ ಒಂದು ಹಂತದ ನ್ಯಾಯವೂ ಸಿಕ್ಕಂತಾಗಿದೆ.

ಪ್ರವರ್ಗ-1ರಲ್ಲಿದ್ದ ಉತ್ತರ ಕನ್ನಡದ ಮೊಗೇರರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಕೊಡುವ ಅವಾಂತರ-ಅಕ್ರಮ-ಅನ್ಯಾಯ ಆರಂಭವಾಗಿದ್ದು ಎಸ್.ಎಂ.ಯಾಹ್ಯಾ ಭಟ್ಕಳದ ಶಾಸಕನಾಗಿದ್ದ ಕಾಲದಲ್ಲಿ. ದೇವರಾಜ್ ಅರಸುಗೆ ನಿಕಟವಾಗಿದ್ದ ಯಾಹ್ಯಾ ಸಾಹೇಬರು ಶಿಥಿಲವಾಗುತ್ತಿದ್ದ ತಮ್ಮ ರಾಜಕೀಯ ಅಸ್ತಿತ್ವ ಭಟ್ಕಳದಲ್ಲಿ ಗಟ್ಟಿಮಾಡಿಕೊಳ್ಳಲು ಬಹುಸಂಖ್ಯಾತ ಮೊಗೇರರಿಗೆ ಎಸ್‍ಸಿ ದೀಕ್ಷೆ ಕೊಡುವ ಕರಾಮತ್ತು ಮಾಡಿದ್ದರು. ಮಜಾ ಎಂದರೆ 1983ರ ಇಲೆಕ್ಷನ್ ಹೊತ್ತಿಗೆ ಮೊಗೇರರು ಧರ್ಮಕಾರಣಕ್ಕೆ ಯಾಹ್ಯಾರಿಗೆ ಕೈಕೊಟ್ಟು ಸೋಲಿಸಿದ್ದರು. ಯಾಹ್ಯಾರ ಕಿತಾಪತಿಯಿಂದ ಎಸ್‍ಸಿ ಸೌಲಭ್ಯ ಸಲೀಸಾಗಿ ಸ್ಪøಶ್ಯ ಮೊಗೇರರು ಪಡೆದುಕೊಳ್ಳತೊಡಗಿದಾಗ ಆ ಸಮುದಾಯದ ಭಾಗ್ಯದ ಬಾಗಿಲೇ ತೆರೆದಂತಾಗಿತ್ತು; ಅಸಲಿ ದಲಿತರಿಗೆ ದೊಡ್ಡ ದೋಖಾ ಕೂಡ ಆಗಲಾರಂಭಿಸಿತ್ತು. ಆದರೆ 1990ರ ದಶಕಾರಂಭದವರೆಗೂ ಮೊಗೇರರಿಗೆ ಎಸ್‍ಸಿ ಸರ್ಟಿಫಿಕೇಟ್ ಕೊಡುತ್ತಿರುವುದನ್ನು ಯಾರೂ ಗಂಭೀರವಾಗಿ ಪ್ರಶ್ನಿಸಿರಲೇ ಇಲ್ಲ.

ಹೊನ್ನಾವರದ ಕಾಸರಗೋಡು ಎಂಬಲ್ಲಿ ಐಓಸಿ ಎಸ್‍ಸಿ ಕೋಟಾದಲ್ಲಿ ಪೆಟ್ರೋಲ್ ಬಂಕ್ ತೆರೆಯಲು ಅರ್ಜಿ ಆಹ್ವಾನಿಸಿದಾಗ ಈ ಅಸಲಿ-ನಕಲಿ ಸಮರ ಶುರುವಾಯ್ತು. ಪಕ್ಕಾ ಪರಿಶಿಷ್ಟ ಜಾತಿಯ ಪಾವಸ್ಕರ್ ಎಂಬ ತರುಣ ತನಗೆ ಪೆಟ್ರೋಲ್ ಪಂಪ್ ಮಂಜೂರಿ ಮಾಡದೆ ನಕಲಿ ದಲಿತ ಕೆ.ಎಂ.ಕರ್ಕಿ ಎಂಬ ಮಾಜಿ ಜಿಪಂ ಸದಸ್ಯನಿಗೆ ಕೊಟ್ಟಿದ್ದಕ್ಕೆ ಉರಿದುಬಿದ್ದಿದ್ದ. ಆತ ದಲಿತ ನಾಯಕರನ್ನೆಲ್ಲ ಸಂಧಿಸಿ ಮೊಗೇರರು ಅಡ್ಡದಾರಿಯಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿ ಲಾಭ ಹೊಡೆಯುತ್ತಿದ್ದಾರೆಂದು ಸಾಕ್ಷಾಧಾರ ಸಮೇತ ಬೊಬ್ಬೆ ಹೊಡೆದನಷ್ಟೇ ಅಲ್ಲ, ಕಾನೂನು ಹೋರಾಟಕ್ಕೆ ಇಳಿದುಬಿಟ್ಟ. ಈ ಖೋಟಾ ಸರ್ಟಿಫಿಕೇಟ್ ಪ್ರಕರಣ ಸುಪ್ರೀಂ ಕೋರ್ಟ್‍ವರೆಗೆ ಹೋಗುವ ಬದ್ಧತೆ, ಪ್ರಾಮಾಣಿಕತೆಯ ಪ್ರಯತ್ನ ನಡೆಸಿದ್ದು ಭಟ್ಕಳದ ದಲಿತ ಮುಖಂಡ ನಾರಾಯಣ ಶಿರೂರು. ಈಗ ಮೊಗೇರರಿಗೆ ಎಸ್‍ಸಿ ಸರ್ಟಿಫಿಕೇಟ್ ಕೊಡುವುದನ್ನು ಸರ್ಕಾರ ನಿಲ್ಲಿಸಿದೆ. ಈ ಕೀರ್ತಿ ಏನಿದ್ದರೂ ನಾರಾಯಣ ಶಿರೂರುಗೆ ಸಲ್ಲಬೇಕು.

ಬಾಂಬೆ ಪ್ರಾಂತ್ಯಕ್ಕೆ ಸೇರಿದ ಉತ್ತರ ಕನ್ನಡದ “ಮೊಗೇರ” ಮತ್ತು ಮದ್ರಾಸ್ ಪ್ರಾಂತ್ಯದಲ್ಲಿದ್ದ ದಕ್ಷಿಣ ಕನ್ನಡ ಹಾಗೂ ಕೊಳ್ಳೆಗಾಲದ “ಮುಗೇರ” ಸಮುದಾಯದ ಜೀವನ ಶೈಲಿ, ಸಂಪ್ರದಾಯ, ಸಂಸ್ಕøತಿ, ಉಡುಗೆ, ತೊಡುಗೆ ಗಮನಿಸಿದರೆ ಈ ಎರಡೂ ಜನಜಾತಿ ವಿಭಿನ್ನ ಎಂಬುದು ಎಂಥ ಗಾಂಪನಿಗೂ ಗೊತ್ತಾಗುತ್ತದೆ. ಮದ್ರಾಸ್ ಪ್ರಾಂತ್ಯದ ಮೊಗೇರರು ನಿಜಕ್ಕೂ ಎಸ್‍ಸಿ ಸೌಲಭ್ಯಕ್ಕೆ ಅರ್ಹರಾದ ಅಸ್ಪøಶ್ಯರು. ಉತ್ತರ ಕನ್ನಡದ ಮೊಗೇರರು ಸ್ಪøಶ್ಯರು. ಕೇಂದ್ರ ಸರ್ಕಾರವು 1950ರಲ್ಲಿ ಪ್ರಕಟಿಸಿದ್ದ ವಿಶೇಷ ರಾಜ್ಯಪತ್ರದ ಭಾಗ-2, ಉಪಭಾಗ-3ರಲ್ಲಿ ಸಂವಿಧಾನದ ಕಲಂ 341 ಮತ್ತು 342ರ ಪ್ರಕಾರ ತಯಾರಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪಟ್ಟಿ ಉತ್ತರ ಕನ್ನಡದ ಮೊಗೇರರು ಪರಿಶಿಷ್ಟ ಜಾತಿಯವರಲ್ಲ ಎಂಬುದನ್ನು ಖಾತ್ರಿಪಡಿಸುತ್ತದೆ. ಈ ಯಾದಿಯಲ್ಲಿ ಮದ್ರಾಸ್ ಪ್ರಾಂತ್ಯದಲ್ಲಿ ವಾಸಿಸುವ ಮೊಲ ಬೇಟೆಯಾಡುವ ಉಪಕಸುಬಿನ ಅಸ್ಪøಶ್ಯ ಮೊಗೇರರು ಸೇರಿಸಲ್ಪಟ್ಟಿದ್ದಾರೆ.

1956ರಲ್ಲಿ ಭಾಷಾವಾರು ರಾಜ್ಯ ವಿಂಗಡಣೆಯಾದಾಗ ಉತ್ತರ ಕನ್ನಡ ಬಾಂಬೇ ಪ್ರಾಂತ್ಯಕ್ಕೆ ಸೇರಿತ್ತು; ದಕ್ಷಿಣ ಕನ್ನಡ ಮದ್ರಾಸ್ ಪ್ರಾಂತ್ಯದ ಮೈಸೂರು ರಾಜ್ಯಕ್ಕೆ ಹೋಯಿತು. ಆಗ ಸಹಜವಾಗೇ ಮೈಸೂರು ರಾಜ್ಯದ ಮೊಗೇರ ಸಮುದಾಯ ಪರಿಶಿಷ್ಟ ಜಾತಿಯಾಯಿತು. ಆದರೆ ಇಲ್ಲೊಂದು ತೊಡಕಿತ್ತು. ನೈಜ ಪರಿಶಿಷ್ಟರ ಸವಲತ್ತು ಅನರ್ಹರ ಪಾಲಾಗುವ ಸಾಧ್ಯತೆಯಿತ್ತು. ಹಾಗಾಗಿ ಮೊಗೇರ ಜಾತಿಗೆ ಪ್ರಾದೇಶಿಕ ನಿರ್ಬಂಧದಿಂದಾಗಿ ಅವಕಾಶ ಆಗುತ್ತಿರಲಿಲ್ಲ. 1977ರಲ್ಲಿ ಕರ್ನಾಟಕ ಸರ್ಕಾರ “ಮೊಗೇರ” ಎಂಬ ಸಮಾನ ಜಾತಿ ಹೆಸರಿರುವ ಪರಿಶಿಷ್ಟರಲ್ಲದವರು ಸುಳ್ಳು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯುವ ಅವಕಾಶ ಆಗಬಾರದೆಂಬ ಎಚ್ಚರಿಕೆಯಿಂದ ಕಟ್ಟುನಿಟ್ಟಿನ ಆದೇಶ(ಎಸ್‍ಡಬ್ಲ್ಯೂಎಲ್ 86 ಎಸ್‍ಎಡಿ 77 ಬೆಂಗಳೂರು ತಾ: 02-7-1977) ಹೊರಡಿಸಿದೆ. ಈ ಆದೇಶದ ಪ್ರಕಾರ “ಮೊಗೇರರು” ಹಿಂದುಳಿದ ವರ್ಗದವರು.

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಪೊಲೀಸ್ ಇಲಾಖೆಯ ನಾಗರಿಕ ಹಕ್ಕು ನಿರ್ದೇಶನಾಲಯದ ಅಡಿಶನಲ್ ಡೈರೆಕ್ಟರ್ ಕೂಡ ಉತ್ತರ ಕನ್ನಡದ ಮೀನುಗಾರ ಮೊಗೇರರು ಖೋಟಾ ಎಸ್‍ಸಿ ಸರ್ಟಿಫಿಕೇಟ್ ಪಡೆಯುತ್ತಿರುವ ಅಕ್ರಮದ ಬಗ್ಗೆ ವಿಸ್ತøತ ವಿಚಾರಣೆ ನಡೆಸಿದ್ದರು. ದಕ್ಷಿಣ ಕನ್ನಡ ಮತ್ತು ಕೊಳ್ಳೆಗಾಲದ ಮೊಗೇರರು ಮಾತ್ರ ಪರಿಶಿಷ್ಟರೇ ಹೊರತು ಉತ್ತರ ಕನ್ನಡದ ಮೊಗೇರರಲ್ಲ ಎಂದು ಹಲವು ಅಧ್ಯಯನ ವರದಿ ಪ್ರಕಾರ ಎರಡೂ ಸಮುದಾಯದ ನಡುವಿನ ವ್ಯತ್ಯಾಸದ ಕೋಷ್ಟಕ ತಯಾರಿಸಿ ದೃಢಪಡಿಸಿದ್ದರು. 1977ರಲ್ಲಿ ಭಾರತ ಸರ್ಕಾರ ಪರಿಶಿಷ್ಟ ಜಾತಿ ಮೊಗೇರರ ಪ್ರಾದೇಶಿಕ ನಿರ್ಬಂಧ ತೆಗೆದುಹಾಕಿತ್ತು. ಆ ಪರಿಶಿಷ್ಟ ಮೊಗೇರರಿಗೆ ದೇಶದ ಎಲ್ಲ ಕಡೆಯಲ್ಲೂ ಶಿಕ್ಷಣ, ಉದ್ಯೋಗ, ಇನ್ನಿತರ ಪರಿಶಿಷ್ಟ ವಲಯಗಳಲ್ಲಿ ಮೀಸಲಾತಿ ಪಡೆಯಲು ತೊಂದರೆ ಆಗಬಾರದೆಂಬ ಕಾರಣಕ್ಕೆ ನಿರ್ಬಂಧ ತೆರವು ಮಾಡಲಾಗಿತ್ತು. ಈ ರಿಯಾಯತಿಯೇ ಯಾಹ್ಯಾ ಸಾಹೇಬರ ಪಂಡಿತ ಪಟಾಲಮ್‍ಗೆ ಉತ್ತರ ಕನ್ನಡದ ಪರಿಶಿಷ್ಟರಲ್ಲದ ಬೆಸ್ತ ಕುಲದ ಮೊಗೇರರಿಗೆ ಎಸ್‍ಸಿ ಸವಲತ್ತು ಅಡ್ಡದಾರಿಯಲ್ಲಿ ದಯಪಾಲಿಸಲು ನೆಪವಾಯಿತು!!

ಯಾವಾಗ ನೈಜ ದಲಿತರು ತಮಗಾಗುತ್ತಿರುವ ಅನ್ಯಾಯ, ವಂಚನೆ ವಿರುದ್ಧ ಧ್ವನಿ ಎತ್ತಿದರೋ ಆಗ ನ್ಯಾಯಾಲಯ, ಸರ್ಕಾರದ ಹಂತದಲ್ಲಿ ವಿಚಾರಣೆ, ತನಿಖೆ, ಅಧ್ಯಯನಗಳು ನಡೆದವು. ಅಂತಿಮವಾಗಿ ಸರ್ಕಾರ ಮೀನುಗಾರ ಮೊಗೇರರಿಗೆ ಎಸ್‍ಸಿ ಪ್ರಮಾಣ ಪತ್ರ ನಿಡುವುದು ನಿಲ್ಲಿಸಬೇಕಾಗಿಬಂತು. ಈ ಸರ್ಕಾರಿ ಆದೇಶದ ವಿರುದ್ಧ ಮೊಗೇರ ಮುಖಂಡರು ಉಚ್ಛನ್ಯಾಯಾಲಯದಲ್ಲಿ ದಾವೆ ಹೂಡಿದರು. ಈ ನಡುವೆ ಮಾಧುರಿ ವರ್ಸಸ್ ಸ್ಟೇಟ್ ಆಫ್ ಮಹಾರಾಷ್ಟ್ರ ಕೇಸ್‍ನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುವ ಜಿಲ್ಲಾ ಜಾತಿ ಪ್ರಮಾಣ ಪತ್ರ ಪರಿಶೀಲನಾ ಸಮಿತಿಯೇ ಪರಮೋಚ್ಛ; ಅದು ತಹಶೀಲ್ದಾರ್ ನೀಡಿದ ಜಾತಿ ಪ್ರಮಾಣ ಪತ್ರ ಪರಿಶೀಲಿಸುವ ಅಧಿಕಾರ ಹೊಂದಿದೆ ಎಂಬ ತೀರ್ಪು ಬಂದಿತ್ತು. ಈ ಆಧಾರದಲ್ಲಿ ಜಿಲ್ಲಾಧಿಕಾರಿ ಭಟ್ಕಳದ ಮೊಗೇರ ವ್ಯಕ್ತಿಯೊಬ್ಬ ಪಡೆದುಕೊಂಡಿದ್ದ ಎಸ್‍ಸಿ ಸರ್ಟಿಫಿಕೇಟ್ ರದ್ದು ಮಾಡುವಂತೆ ತಹಶೀಲ್ದಾರ್‍ಗೆ ಆದೇಶಿಸಿದ್ದರು. ಈ ಆದೇಶ ಪ್ರಶ್ನಿಸಿ ಉಚ್ಛನ್ಯಾಯಾಲಯದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಜಾ ಮಾಡಿದ್ದ ಉಚ್ಛನ್ಯಾಯಲಯ ಉತ್ತರ ಕನ್ನಡದ ಮೊಗೇರರು ಎಸ್‍ಸಿ ಸರ್ಟಿಫಿಕೇಟ್‍ಗೆ ಅರ್ಹರಲ್ಲ ಎಂದಿತ್ತು!!

ಆನಂತರ ಹಲವು ಮೊಗೇರ ಜಾತಿಯ ಮೀನುಗಾರರ ಎಸ್‍ಸಿ ಪ್ರಮಾಣ ಪತ್ರ ಜಿಲ್ಲಾ ಜಾತಿ ಪ್ರಮಾಣ ಪತ್ರ ಪರಿಶೀಲನಾ ಸಮಿತಿ ರದ್ದುಪಡಿಸಿದೆ. ತಡವಾಗಿ ಜಿಪಂ ಅಧ್ಯಕ್ಷೆಯ ಸರದಿ ಬಂದಿದೆ. ಅಸಲಿ ಪರಿಶಿಷ್ಟರ ನ್ಯಾಯದ ಹೋರಾಟ ಸಾರ್ಥಕವಾಗಿದೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...