HomeUncategorizedಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ: ಪೃಷ್ಠದ ಮೇಲೆ ಬಡಿಯುವುದು ಕಸ್ಟಡಿ ಚಿತ್ರಹಿಂಸೆಗೆ ಸಮವಲ್ಲ ಎಂದ ಆರೋಪಿತ...

ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ: ಪೃಷ್ಠದ ಮೇಲೆ ಬಡಿಯುವುದು ಕಸ್ಟಡಿ ಚಿತ್ರಹಿಂಸೆಗೆ ಸಮವಲ್ಲ ಎಂದ ಆರೋಪಿತ ಪೊಲೀಸರು

- Advertisement -
- Advertisement -

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ಕೊಟ್ಟು ಬಂಧನದ ಸಂದರ್ಭ ಅನುಸರಿಸಬೇಕಾದ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪ ನಾಲ್ವರು ಪೊಲೀಸರ ಮೇಲಿದೆ. ಈ ಬಗ್ಗೆ ಆರೋಪಿತ ನಾಲ್ವರು ಪೊಲೀಸರು, ಆರೋಪಿಗಳ ಪೃಷ್ಠದ ಮೇಲೆ 3ರಿಂದ 6ಬಾರಿ ಬಡಿಗೆಯಿಂದ ಹೊಡೆಯುವುದು ಸ್ವೀಕಾರಾರ್ಹವಲ್ಲ, ಆದರೂ ಕಸ್ಟಡಿ ಚಿತ್ರಹಿಂಸೆಗೆ ಸಮನಾಗುವುದಿಲ್ಲ, ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗುವುದಿಲ್ಲ, ಪ್ರಕರಣದಲ್ಲಿ ಶಿಕ್ಷೆಯನ್ನು ನೀಡುವ ಬದಲು ಪರಿಹಾರವನ್ನು ಪಾವತಿಸಲು ನಿರ್ದೇಶಿಸಬೇಕು, ಶಿಕ್ಷೆಯು ವೃತ್ತಿಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂದು  ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ಖೇಡಾ ಜಿಲ್ಲೆಯ ಉಂಧೇಲಾ ಗ್ರಾಮದಲ್ಲಿ ನವರಾತ್ರಿ ಉತ್ಸವದ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ ಮಾಡಿದ್ದಾರೆಂದು ಅ.4 ರಂದು ಪೊಲೀಸರು ಮೂವರು ಮುಸ್ಲಿಂ ಯುವಕರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ಕುರಿತು ಪೋಟೋ ಕೂಡ ವೈರಲ್‌ ಆಗಿತ್ತು. ಪ್ರಕರಣದ ವಿರುದ್ಧ ಸಂತ್ರಸ್ತ ಯುವಕರು ಕೋರ್ಟ್ ಮೊರೆ ಹೋಗಿದ್ದರು.

ಹಿಂದೂಸ್ತಾನ್ ಟೈಮ್ಸ್ ಪ್ರಕಾರ, ಅರ್ಜಿದಾರರ ಪೃಷ್ಠದ ಮೇಲೆ ಮೂರರಿಂದ ಆರು ಬಾರಿ ಕೋಲುಗಳ ಮೂಲಕ ಹೊಡೆಯುವುದ ಕಸ್ಟಡಿ ಹಿಂಸೆಗೆ ಸಮವಲ್ಲ, ಅದು ನ್ಯಾಯಾಂಗ ನಿಂದನೆಯಾಗುವುದಿಲ್ಲ ಎಂದು  ನ್ಯಾಯಾಲಯಕ್ಕೆ ಆರೋಪಿತ ಪೊಲೀಸರು ಹೇಳಿದ್ದಾರೆ.

ಇನ್ಸ್ ಪೆಕ್ಟರ್ ಆಗಿರುವ ಪರ್ಮಾರ್ ಜೊತೆಗೆ ಸಬ್‌ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಅವರು ತಮ್ಮ ವಿರುದ್ಧ ಹೊರಿಸಲಾದ ಆರೋಪಗಳಿಗೆ ಶಿಕ್ಷೆಗೆ ಬದಲಾಗಿ ಸಂತ್ರಸ್ತರಿಗೆ ಪರಿಹಾರವನ್ನು ನೀಡಲು ಅನುಮತಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಆರೋಪಿಗಳಿಗೆ ತಪ್ಪಿತಸ್ಥರೆಂದು ಘೋಷಿಸಿ ಶಿಕ್ಷೆ ವಿಧಿಸುವುದು ಅವರ ವೃತ್ತಿ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಪೊಲೀಸರ ಪರ ವಕೀಲ ಪ್ರಕಾಶ್ ಜಾನಿ ನ್ಯಾಯಾಲಯಕ್ಕೆ ತಿಳಿಸಿದರು.

ಪೊಲೀಸರ ಅಹವಾಲುಗಳನ್ನು ಆಲಿಸಿದ ನ್ಯಾಯಾಲಯವು ಈ ವಿಷಯದ ಬಗ್ಗೆ ಅರ್ಜಿದಾರರ ಪ್ರತಿಕ್ರಿಯೆ ಕೇಳಿದ್ದು, ಪ್ರಕರಣದ ಮುಂದಿನ ವಿಚಾರಣೆ ಅ.16 ರಂದು ನಡೆಯಲಿದೆ.

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ನಾಲ್ವರು ಯುವಕರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡಿದ ಪ್ರಕರಣದಲ್ಲಿ ನ್ಯಾಯಾಲಯ ನಿಂದನೆಯ ಆರೋಪ ಎದುರಿಸುತ್ತಿರುವ ನಾಲ್ವರು ಪೊಲೀಸರ ವಿರುದ್ಧ ಗುಜರಾತ್ ಹೈಕೋರ್ಟ್ ಕಳೆದ ವಾರ ದೋಷಾರೋಪ ದಾಖಲಿಸಿತ್ತು.

ನ್ಯಾಯಮೂರ್ತಿಗಳಾದ ಎ ಎಸ್ ಸುಪೇಹಿಯಾ ಮತ್ತು ಎಂ ಆರ್ ಮೆಂಗ್ಡೆ ಅವರ ವಿಭಾಗೀಯ ಪೀಠವು, ನಾಡಿಯಾಡ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ತನಿಖಾ ವರದಿಯನ್ನು ಆಧರಿಸಿ ನ್ಯಾಯಾಂಗ ಉಲ್ಲಂಘನೆ ಗಮನಿಸಿದ್ದಾರೆ. ಡಿ ಕೆ ಬಸು  ಮತ್ತು ಪಶ್ಚಿಮ ಬಂಗಾಳ ರಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ನಾಲ್ವರು ಆರೋಪಿಗಳು ಉಲ್ಲಂಘಿಸಿದ್ದಾರೆ ಎಂದು ಕೋರ್ಟ್‌ ಹೇಳಿತ್ತು.

2022ರ ಆಕ್ಟೋಬರ್‌ನಲ್ಲಿ ಕಲ್ಲೆಸೆತಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಿಗೆ ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ, ಸಾರ್ವಜನಿಕವಾಗಿ ಥಳಿಸುವ ಕೃತ್ಯದಲ್ಲಿ ಪೊಲೀಸ್‌ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂಬುವುದನ್ನು ನ್ಯಾಯಾಲಯವು ಕಂಡುಕೊಂಡಿದೆ.

ಆರೋಪಿ ಪೊಲೀಸರಲ್ಲಿ ಒಬ್ಬಾತ ಈ ಕಾನೂನು ಬಾಹಿರ ಹಾಗೂ ಅಪಮಾನಕಾರಿ ಕೃತ್ಯವನ್ನು ನಡಸುವುದಕ್ಕೆ ವೌನಸಮ್ಮತಿಯನ್ನು ನೀಡಿದ್ದಾನೆ. ಹಾಗಾಗಿ ಆತನ ವಿರುದ್ಧ ದೋಷಾರೋಪ ದಾಖಲಿಸುವಲ್ಲಿ ಯಾವುದೇ ರಿಯಾಯಿತಿ ನೀಡಬಾರದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬಂಧಿತರಿಗೆ ಸಾರ್ವಜನಿಕವಾಗಿ ಛಡಿಯೇಟು ನೀಡುವ ಮೂಲಕ ಆರೋಪಿ ಪೊಲೀಸರು ಸುಪ್ರೀಂಕೋರ್ಟ್ ಮಾರ್ಗದರ್ಶಿಸೂತ್ರಗಳನ್ನು ಉಲ್ಲಂಘಿಸಿದ್ದಾರೆಂದು ನ್ಯಾಯಾಲಯ ಹೇಳಿತ್ತು.

2022ರ ಆಕ್ಟೋಬರ್ 4ರಂದು ಉಂಧೆಲಾ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಓರ್ವ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೇಬಲ್ ಗಳನ್ನು ನ್ಯಾಯಾಲಯ ಆರೋಪಿಗಳು ಎಂದು ಗಮನಿಸಿತ್ತು.

ಕಳೆದ ವರ್ಷ ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ಕನಿಷ್ಠ ನಾಲ್ವರು ಮುಸ್ಲಿಂ ಯುವಕರನ್ನು ಕಾನೂನುಬಾಹಿರವಾಗಿ ಬಂಧಿಸಲಾಯಿತು ಮತ್ತು ಬಂಧಿತ ಯುವಕರಿಗೆ ಪೊಲೀಸರು ಖೇಡಾದಲ್ಲಿ ಸಾರ್ವಜನಿಕವಾಗಿ ಥಳಿಸಿದ್ದರು.

ಸಂತ್ರಸ್ತರಾದ ಜಹಿರ್ಮಿಯಾ ಮಾಲೆಕ್ (62), ಮಕ್ಸುದಾಬಾನು ಮಾಲೆಕ್ (45), ಸಹದ್ಮಿಯಾ ಮಾಲೆಕ್ (23), ಸಕಿಲ್ಮಿಯಾ ಮಾಲೆಕ್ (24) ಮತ್ತು ಶಾಹಿದ್ರಾಜ ಮಾಲೆಕ್ (25) ಅವರು 13 ಖೇಡಾ ಪೊಲೀಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಇದಲ್ಲದೆ ಸಂತ್ರಸ್ತರು ಪರಿಹಾರ ಕೋರಿದ್ದರು, ಅರ್ಜಿದಾರರು ಅಹಮದಾಬಾದ್ ರೇಂಜ್ ಐಜಿ ಮತ್ತು ಖೇಡಾ ಎಸ್ಪಿ ಸೇರಿದಂತೆ 15 ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಡಿ ಕೆ ಬಸು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿದ್ದರು.

ಇನ್‌ಸ್ಪೆಕ್ಟರ್ ಎ ವಿ ಪರ್ಮಾರ್, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್, ಕಾನ್‌ಸ್ಟೆಬಲ್ ರಾಜುಭಾಯ್ ರಮೇಶಭಾಯಿ ದಾಭಿ ಮತ್ತು ಹೆಡ್ ಕಾನ್‌ಸ್ಟೆಬಲ್ ಕನಕ್‌ಸಿನ್ಹ್ ಲಕ್ಷ್ಮಣಸಿನ್ಹ್ ಎಂಬ ನಾಲ್ವರು ಪೊಲೀಸ್ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಇನ್‌ಸ್ಪೆಕ್ಟರ್ ಪರ್ಮಾರ್, ಸಂತ್ರಸ್ತರಾದ ಸಹದ್ಮಿಯಾ, ಸಕಿಲ್ಮಿಯಾ ಮತ್ತು ಶಾಹಿದ್ರಾಜಾ ಅವರ ಮೇಲೆ ಕೋಲಿನಿಂದ ಹಲ್ಲೆ ನಡೆಸುವುದು, ಸಬ್ ಇನ್ಸ್‌ಪೆಕ್ಟರ್ ಡಿ ಬಿ ಕುಮಾವತ್ ಅಲ್ಲಿ ನಿಂತಿರುವುದು, ಕನಕಸಿಂಹ ಅವರು ಬಿಳಿ ಪೈಪ್ ಹಿಡಿದು ಅರ್ಜಿದಾರರನ್ನು ವ್ಯಾನ್‌ನ ಕಡೆಗೆ ತಳ್ಳುತ್ತಿರುವುದು ಮತ್ತು  ಇನ್ಸ್‌ಪೆಕ್ಟರ್ ಪರ್ಮಾರ್  ಯುವಕರಿಗೆ ಹೊಡೆಯುವಾಗ ಪೇದೆ ರಾಜುಭಾಯ್ ಮೂವರು ಯುವಕರ ಕೈಗಳನ್ನು ಕಂಬಕ್ಕೆ ಗಟ್ಟಿಯಾಗಿ ಹಿಡಿದಿರುವುದು ವೈರಲ್ ವಿಡಿಯೋದಲ್ಲಿ ಕಂಡು ಬಂದಿತ್ತು.

ಇದನ್ನು ಓದಿ: ಉತ್ತರಪ್ರದೇಶ; ಆಸ್ಪತ್ರೆ ಒಳಗೆ ರೋಗಿಗಿಟ್ಟ ಆಹಾರ ತಿನ್ನುತ್ತಿರುವ ನಾಯಿ: ಜಿಲ್ಲಾಸ್ಪತ್ರೆಯ ದುಸ್ಥಿತಿಯ ವಿಡಿಯೋ ವೈರಲ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...