Homeಅಂಕಣಗಳುನಿಮಗಿನ್ನೂ ಏನಾಗಬೇಕು ಸಾರ್

ನಿಮಗಿನ್ನೂ ಏನಾಗಬೇಕು ಸಾರ್

- Advertisement -
- Advertisement -

| ಯಾಹೂ |

ಅಂತೂ ಎಲ್ಲರೂ ಅವರವರ ಗೋಳನ್ನು ವಿಂಗಡಿಸಿಕೊಂಡು “ನಮಗ್ಯಾರಿದ್ದರೇನು ಸುಖವಿಲ್ಲ ಪ್ರಭುವೇ” ಎಂಬ ತತ್ವಪದ ಗುನುಗುತ್ತ ಒಳಗೊಳಗೇ ಅಳುತ್ತಿದ್ದಾರಂತಲ್ಲಾ. ಮೊದಲನೆಯದಾಗಿ ಅತಿವೃಷ್ಟಿಯಿಂದ ಕೊಚ್ಚಿಹೋದ ಬದುಕನ್ನು ಯಾರೂ ಸರಿಮಾಡಲಾರರೆಂಬ ತೀರ್ಮಾನಕ್ಕೆ ಬಂದಿರುವ ಪ್ರವಾಹ ಸಂತ್ರಸ್ತರು, ಮನೆಮಠ ನೆನೆಸಿಕೊಂಡು ಒಳಗೊಳಗೇ ಅಳುತ್ತಿದ್ದಾರೆ. ಎಡೂರಪ್ಪ ಅನರ್ಹ ಶಾಸಕರುಗಳ ಸ್ಥಿತಿ ನೋಡಿ ಗೊಳೋ ಎಂದು ಅಳುತ್ತಿರಬೇಕಾದರೆ, ಸಮ್ಮಿಶ್ರ ಸರಕಾರದಲ್ಲಿ ಮಂತ್ರಿಗಳಾಗಿ ಮೆರೆಯುತ್ತಿದ್ದ ಮೈತ್ರಿ ಸರಕಾರದ ಮಂತ್ರಿಗಳು ಕಣ್ಣಂಚಿನಲ್ಲಿ ನೀರು ತಂದುಕೊಂಡು ಬರೀ ಶಾಸಕರಾಗಿ ಬಾಳುವೆ ಮಾಡುವುದನ್ನು ನೆನಸಿಕೊಂಡು ಮುಮ್ಮಲ ಮರಗುತ್ತಿವೆಯಂತಲ್ಲಾ. ಇನ್ನ ಮಗನನ್ನು ಮುಖ್ಯಮಂತ್ರಿ ಮಾಡಿ ಬದುಕಿನ ಸಾರ್ಥಕತೆ ಕಂಡುಕೊಂಡು ಒಳಗೊಳಗೇ ಯಾವ ಪ್ರತಿರೋಧವೂ ಮಗನ ಬಳಿ ಸುಳಿಯದಂತೆ ಬೆಂಗಾವಲಾಗಿದ್ದ ದೇವೇಗೌಡರು ಹೇಳಿಕೊಳ್ಳಲಾಗದ ವೇದನೆಯಿಂದ ಅಳುತ್ತಿದ್ದಾರಂತಲ್ಲಾ, ಥೂತ್ತೇರಿ..

ಮಗನ ಮುಖ್ಯಮಂತ್ರಿಗಿರಿ ಹೋಯಿತು; ರೇವಣ್ಣ ಗಡಿಗೆ ತೆಗೆದುಕೊಂಡು ಕೆ.ಎಂ.ಎಫ್ ಡೈರಿ ಹತ್ತಿರ ಹೋದರೆ, ಜಾರಕಿ ಎಂಬ ಹಸು ಜಾಡಿಸಿ ಒದ್ದ ಪರಿಣಾಮ ಈಗ ಅವರೂ ನಿರುದ್ಯೋಗಿ. ಇದ್ದುದರಲ್ಲಿ ಅನಿತಾ, ಕುಮಾರ, ರೇವಣ್ಣ ಬರೀ ಶಾಸಕರು ಮಾತ್ರ. ಸ್ವತಃ ತಾವೂ ಕೂಡ ಜನಾಂಗದಿಂದ ತಿರಸ್ಕರಿಸಲ್ಪಟ್ಟಿರುವ ಸಮಯ ನೆನೆಸಿಕೊಂಡು ಮುಂದೇನು ಎಂದು ಹಲುಬುತ್ತಿರುವ ದೇವೇಗೌಡರನ್ನ ಮಾತನಾಡಿಸಿ, ಸಾಂತ್ವನ ಹೇಳುವುದು ನಮ್ಮ ಕರ್ತವ್ಯವಲ್ಲವೇ ಎಂದು ಚಿಂತಿಸಿ ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್‍ಟೋನ್: “ಏನಿದೀ ಗ್ರಹಚಾರವೋ ಏನಿದೀ ವನವಾಸವೊ……….”
“ಹಲೋ ಯಾರು?”
“ನಾನು ಪತ್ರಕರ್ತ. ಗೌಡ್ರು ಜೊತೆ ಮಾತಾಡಬೇಕು.”
“ಹಲೋ”
“ನಾನು ಸಾರ್ ಯಾಹು”
“ಏನು ಗುರುವೇ”
“ಸುಮ್ಮನೆ ಮಾತಾಡಸನ ಅಂತ ಫೋನು ಮಾಡಿದೆ ಸಾರ್”
“ಏನು ಮಾತಾಡದು ಯಲ್ಲ ಮುಗಿತಲ್ಲ”
“ಮುಗದಿಲ್ಲ ಸಾರ್, ಯಲ್ಲ ಈಗ ಶುರುವಾಗ್ಯದೆ”
“ಅಯ್ಯೋ ರಾಮ ಏನು ಶುರುವಾಗಿದೆ”
“ನಿಮ್ಮ ಕುಟುಂಬದಿಂದ ಒಳ್ಳೆ ರಾಜಕಾರಣಿ ಬಂದ ಸಾರ್. ಪ್ರಜ್ವಲ ನಿಮ್ಮ ಹೆಸರುಳುಸ್ತನೆ. ಇನ್ನ ನಿಖಿಲ್ ನಿಮ್ಮ ಸಂಸ್ಕøತಿ ಉಳುಸ್ತನೆ. ರೇವಣ್ಣ ಕುಮಾರಣ್ಣನ ಕತೆ ಮುಗಿತಿದ್ದಂಗೆ ಇಬ್ಬರು ಎದ್ದರಲ್ಲ ಸಾರ್”
“ಎಲ್ಲಾ ಜನತೆ ಆಶೀರ್ವಾದ”
“ಆದ್ರೆ ಜನತೆ ಆಶೀರ್ವಾದ ನಿಮಗೆ ಸಿಗಲಿಲಲ್ಲವಲ್ಲ ಸಾರ್”
“ಸಿಗತಿತ್ತು, ಹಿತಶತ್ರುಗಳಿಂದ ಹಾಗಾಯ್ತು”
“ಹಿತ ಶತ್ರು ಏನು ಅಂತ ಗೊತ್ತಿದ್ರು ಯಾಕ್ ಸಾರ್ ಅವರ ಜೊತೆ ಇದ್ರಿ”
“ಅನಿವಾರ್ಯವಾಗಿ ಇರಬೇಕಾಯ್ತು”
“ನಿಮ್ಮಿಬ್ಬರ ನಡುವೆ ಅಷ್ಟೊಂದು ದ್ವೇಷ ಇದ್ದು ಅದ್ಯಂಗೆ ಹದುನಾಕು ತಿಂಗಳು ಜೊತೆಲಿದ್ರಿ ಸಾರ್”
“ದುರ್ಯೋದನನ ಜೊತೆ ಶಕುನಿ ಸ್ನೇಹದಿಂದ್ಲೇ ಇರಲಿಲ್ವೆ”
“ಅದೇನೊ ನಿಜ ಸಾರ್, ಆದ್ರು ಸಭೆ ಸಮಾರಂಭದಲ್ಲಿ ನೀವೆ ನಿಮ್ಮ ವೈರಿ ಕೈಮುಟ್ಟಿ ಮಾತನಾಡುಸ್ತಿದ್ರಿ. ಪ್ರೀತಿ ತೋರಿಸಿದ್ರಿ. ಮುದಿ ಪ್ರೇಮಿತರ ತುಂಟನಗೆ ಬೀರಿದ್ರಿ”
“ಅದು ಚುನಾವಣಾ ಸಂದರ್ಭ. ಮಾನ್ಯ ರಾಮಕೃಷ್ಣ ಹೆಗಡೆಯವರು ನಾನು ಎಷ್ಟೇ ಜಗಳ ಆಡಿದ್ರೂ ಸಾರ್ವಜನಿಕ ವೇದಿಕೇಲಿ ಒಂದಾಗಿರಲಿಲ್ವೇ”
“ನಿಜ ಸಾರ್ ನಿಮ್ಮಗಳ ಅಭಿನಯಕ್ಕೆ ಆಸ್ಕರ್ ಸಿಗಬೇಕಿತ್ತು ಸಾರ್”
“ಅದು ಅಭಿನಯ ಅಲ್ಲ. ಈ ನಾಡಿನ ಹಿತಕ್ಕಾಗಿ ನಾವೂ ಹೊಂದಾಣಿಕೆ ಮಾಡಿಕೊಬೇಕಾಗತ್ತೆ. ಅದನ್ನ ನಿಮ್ಮಂತವರು ಅಭಿನಯ ಅಂತಿರಾ”
“ಅಲ್ಲ ಸಾರ್, ನಿಮ್ಮಪ್ಪನಾಣೆ ಮುಖ್ಯಮಂತ್ರಿಯಾಗಲ್ಲ ಅಂದೊರು ಕುಮಾರಸ್ವಾಮಿ ಸರಕಾರ ಇರದಿಕ್ಕೆ ಬಿಡ್ತರಾ ಅಂದಿದ್ದಿರಿ. ಚುನಾವಣೆಗೂ ಮೊದಲಿನ ಈ ಹೇಳಿಕೆ ನಿಮಗೆ ಸಿಟ್ಟು ತರಿಸಿದೆ. ಆದ್ರೂ ಅವುರ ಜೊತೆ ನಗನಗತ ಇದ್ರಲ್ಲ”
“ಕರ್ನಾಟಕದಲ್ಲಿ ಮಕ್ಕಳ ರಾಜ್ಯ ಸ್ಥಾಪನೆ ಮಾಡಕ್ಕೆ ತಯಾರಾದ್ರು ಆದ್ರಿಂದ ನಾವು ಗೌಡರನ್ನ ವಿರೋಧಿಸೋದು ಅನಿವಾರ್ಯ ಆಯ್ತು ಅಂತರಲ್ಲ ಸಾರ್.”
“ಆ ರೀತಿ ಹೇಳೊ ಮಹಾನಾಯಕರು ಈ ದೇವೇಗೌಡ ಗುರುತಿಸಿ ಹಣಕಾಸಿನ ಸಚಿವನನ್ನಾಗಿ ಮಾಡೋವರಿಗೂ ಎಲ್ಲಿದ್ರೂ. ಉಪಮುಖ್ಯಮಂತ್ರಿ ಮಾಡಿದ್ಯಾರು ಅದು ಸಾಲದು ಅಂತ ಮುಖ್ಯಮಂತ್ರಿ ಆಗೋದಿಕ್ಕೆ ಹೋದಾಗ ಜೆ.ಎಚ್.ಪಟೇಲರು ಮೆಟ್ಟಿನಲ್ಲಿ ಹೊಡಿಯಕ್ಕೆ ಹೋದದ್ದು ತಡೆದೊರ್ಯಾರು. ಅವುರು ಇತಿಹಾಸ ಮಾತಾಡೋದಾದ್ರೆ ನಾವು ಮಾತನಾಡ್ತೀವಿ”
“ಸದ್ಯದಲ್ಲಿ ನಿಮ್ಮ ವೈರಿಗಳು ಬಿಜೆಪಿಗಳಲ್ಲವ ಸಾರ್.”
“ಯಾರೂ ವೈರಿಗಳಲ್ಲ. ಹತ್ತೊಂಬತ್ತು ನೂರಾ ಎಪ್ಪತ್ತೊಂಬತ್ತನೇ ಇಸವಿಲಿ ನಾನು ದೇವರಾಜ ಅರಸುರನ್ನ ಟೀಕೆ ಮಾಡ್ತ ಭ್ರಷ್ಟತೆಯ ಮಹಾಜನಕ ಅರಸು ಅಂತ ಭಾಷಣ ಮಾಡಿದೆ. ಅದೇ ದಿನ ರಾತ್ರಿ ಮುರಾರ್ಜಿ ದೇಸಾಯಿಯವರಿಂದ ಫೋನ್ ಬಂತು. ನೀವು ಅರಸುರವರನ್ನ ಭೇಟಿ ಮಾಡಿ ಕರ್ನಾಟಕದ ಎಂ.ಪಿಗಳು ಮುರಾರ್ಜಿ ಸರಕಾರಕ್ಕೆ ಬೆಂಬಲ ಕೊಡಬೇಕು ಅಂತ ವಿನಂತಿ ಮಾಡಿ ಅಂತಹೇಳಿ. ನನ್ನ ಪರಿಸ್ಥಿತಿ ಏನಾಗಿರಬೇಕು? ಅವತ್ತಿನಿಂದ ನಾನು ಯಾರನ್ನು ವೈರಿಗಳು ಅಂತ ಪರಿಗಣಿಸಿ ಹೋರಾಟ ಮಾಡಲ್ಲ. ಭವಿಷ್ಯದಲ್ಲಿ ಏನಾಗಬಹುದೊ ಅಂತ ತಿಳಕೊಂಡು ಮಾತನಾಡ್ತಿನಿ. ಆದ್ರೆ ಮಹಾ ನಾಯಕರಲ್ಲಿ ಅದಿಲ್ಲ.”
“ನನಿಗನ್ನಿಸಿದಂಗೆ ನಿಮಗೂ ಅವರಿಗೂ ದಾಯಾದಿ ಕಲಹ ಅನ್ನಿಸುತ್ತೆ ಸಾರ್”
“ಅದು ಹೇಗೇಳ್ತಿರೀ”
“ನೋಡಿ ಸಾರ್, ಹೊಳೆನರಸೀಪುರದಲ್ಲಿ ನಿಮ್ಮ ಮನೆ ಹತ್ರನೇ ಅವುರ ಜನಾಂಗದ ಮನೆಗಳೂ ಇದ್ದವಂತೆ. ಬಹಳ ಹೊಂದಿಕೊಂಡಿದ್ದವಂತೆ. ನೀವು ರಾಜಕೀಯವಾಗಿ ಬೆಳದಂಗೂ ಜಗಳ ಜಾಸ್ತಿಯಾಯ್ತಂತೆ. ಸಾಮಾನ್ಯವಾಗಿ ಹುಟ್ಟುತಾ ಅಣ್ಣತಮ್ಮದೀರು ಬೆಳಿತ ದಾಯಾದಿಗಳು ಅಂತ ಗಾದೆನೆ ಇದೆ. ಹಂಗಾಗಿ ನಿಮಗೂ ಅವುರ ಕಡೆಯವರಿಗೂ ಜಗಳ ಶುರುವಾಯ್ತಂತೆ. ಇದು ರಾಜಕೀಯವಾಗಿ ಇಡೀ ರಾಜ್ಯವೆ ಆವರಿಸಿಗಂಡದೆ. ಯಂಗೇ ಅಂದ್ರೇ, ಊರ ಜಮೀನು ವಿಷ್ಯ ರಾಜ್ಯದವರೆಗೂ ಹಬ್ಬಿ ಈಗ ನೀವು ಅವುರ ಎದುರಾಬದುರಾ ಹೋರಾಡ್ತ ಇದ್ದಿರಿ ಸರಿನ ಸಾರ್”
“ಹಾಗೇನು ಇಲ್ಲ”
“ಇಲ್ಲ ಅಂದ್ರೆ ಇದನ್ನೆಲ್ಲಾ ನಿಲ್ಲಿಸಿ ಸಾರ್. ಈಗ ಅಂಥಾ ನೀವು ಪ್ರಧಾನಿಯಾಗಿದ್ರಿ. ರೇಣುಕಾಚಾರಿ ತರದ ಕುಮಾರಣ್ಣ ಒಂದು ಸತಿಯಲ್ಲ ಯರಡಸತಿ ಮುಖ್ಯಮಂತ್ರಿಯಾದ್ರು. ಇನ್ನ ಇಲಾತಿ ಹಸಕಟ್ಟಿ ಸಾವುರಾರು ಲೀಟ್ರು ಹಾಲುಮಾರೊ ಹೈನೋದ್ಯಮ ತರದ ರೇವಣ್ಣ ಯರಡು ಮೂರು ಸತಿ ಯರಡು ಮೂರು ಪ್ರಬಲ ಖಾತೆನೆ ನಿಭಾಯಿಸಿದ್ರು. ಅಕ್ಕಪಕ್ಕದ ಮನೆಗೋಗಿ ಕಷ್ಟಸುಖ ಹೇಳಿಕಳೊತರ ಇದ್ದ ಅನಿತಕ್ಕ ಯರಡು ಬಾರಿ ಶಾಸಕಿಯಾದ್ರು. ಇನ್ನ ಭವಾನಕ್ಕ ಏನೇನಾಯ್ತರೊ ಏನೊ. ಪ್ರಜ್ವಲ ಜನಪ್ರಿಯ ಎಂ.ಪಿ. ಚಿಲ್ಡ್‍ಬೀರ್ ನಿಖಿಲಣ್ಣನ ಭವಿಷ್ಯ ದೊಡ್ಡದಾಗೆ ಉದ್ಘಾಟನೆ ಆಗಿದೆ. ಇನ್ನ ಬೀಗರು ಬಿಜ್ಜರು ನಂಟರು ಇಷ್ಟರು ಅಕ್ರಮಿಸಿರೊ ಸ್ಥಾನಮಾನದ ಪಟ್ಟಿ ದೊಡ್ಡದಿದೆ ಹಿಂಗಿರುವಾಗ ಇನ್ನು ಏನಾಗಬೇಕಿದೆ ಸಾರ್”
“ಇನ್ನ ಆಗಬೇಕಾದ್ದೇನಿಲ್ಲ ಕಡೆಯವರಿಗೂ ಹೋರಾಡ್ತಿನಿ ಈ ದೇವೇಗೌಡ ಹೋರಾಟದಿಂದ ಬಂದೊನು”
“ಹೋರಾಟ ಕುಟುಂಬದ ಉನ್ನತಿಗಾಗಿ ಅಂತ ಜನಾಂಗ ತಿಳಕಂಡು ತಿರಸ್ಕರುಸ್ತಾ ಅವುರಲ್ಲ ಸಾರ್”
“ಯಾರ ತಿರಸ್ಕಾರಕ್ಕೂ ಈ ದೇವೇಗೌಡ ಹೆದರಲ್ಲ”
“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...