Homeಕರ್ನಾಟಕಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

ಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

- Advertisement -
- Advertisement -

ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸಿರುವ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದೆ.

ಈ ಮಂಗಳಾದೇವಿ ದೇವಸ್ಥಾನವು ಮುಜುರಾಯಿ ಇಲಾಖೆ ವ್ಯಾಪ್ತಿಗೆ ಬರುತ್ತದೆ. ದೇವಸ್ಥಾನದ ನವರಾತ್ರಿ ಉತ್ಸವವು ಅಕ್ಟೋಬರ್ 15 ರಿಂದ 24 ರ ವರೆಗೆ ನಡೆಯಲಿದೆ. ಆದರೆ, ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ ಹಾಗಾಗಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನಿರಾಕರಿಸಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯುವ ಹೇಳಿದೆ ಎನ್ನಲಾಗಿದೆ.

ಪ್ರತಿವರ್ಷದಂತೆ ಈ ವರ್ಷವು ನವರಾತ್ರಿ ಸಿದ್ಧತೆ ಹಿನ್ನೆಲೆಯಲ್ಲಿ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತಿದೆ. ಇದು ಮಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸರ್ಕಾರಿ ರಸ್ತೆಯಾಗಿದೆ.

ಹಲವು ವರ್ಷಗಳಿಂದ ಈ ರಸ್ತೆಯ ಬದಿಗಳಲ್ಲಿ ನವರಾತ್ರಿ ಜಾತ್ರಾ ವ್ಯಾಪಾರ ನಡೆಯುತ್ತಾ ಬಂದಿದೆ. ಪಾಲಿಕೆ ರಸ್ತೆಯಾಗಿದ್ದರೂ ಹಲವು ವರ್ಷಗಳಿಂದ ದೇವಸ್ಥಾನದ ಆಡಳಿತದಿಂದಲೇ ವ್ಯಾಪಾರದ ಜಾಗ ಹರಾಜು ಮಾಡಲಾಗುತ್ತಿದೆ. ಆದರೆ ಈ ಬಾರಿ ಮಾತ್ರ ದೇವಸ್ಥಾನದ ಆಡಳಿತ ಮಂಡಳಿಯು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರಿಗೆ ಅವಕಾಶ ನೀಡಿಲ್ಲ. ಇದು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂಬಂಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರು, ”ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ಮಂಗಳೂರಿನ ಹಲವು ದೇವಸ್ಥಾನಗಳ ಮುಂದೆ ಬ್ಯಾನರ್ ಹಾಕಲಾಗುತ್ತಿತ್ತು. ಆದರೆ ಮಂಗಳಾದೇವಿ ದೇವಸ್ಥಾನದಲ್ಲಿ ಈವರೆಗೂ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಹೇರಿರಲಿಲ್ಲ. ಆದರೆ ಈ ಬಾರಿ ಇಲ್ಲಿಯೂ ಅದೇ ಬೆಳವಣಿಗೆ ನಡೆದಿದೆ” ಎಂದು ತಿಳಿಸಿದರು.

”ಕಾನೂನಿನ ಪ್ರಕಾರ ದೇವಸ್ಥಾನದ ಪ್ರಣಾಂಗದಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ, ಆದರೆ ಈವರೆಗೂ ಮುಸ್ಲಿಂ ವ್ಯಾಪಾರಸ್ಥರು ದೇವಸ್ಥಾನದ ಒಳಾಂಗಣದಲ್ಲಿ ವ್ಯಾಪಾರ ಮಾಡಿಲ್ಲ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತದೆ. ಈ ಬಾರಿಯೂ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲಿ 95 ಅಂಗಡಿಗಳಿದ್ದು ಪ್ರತಿವರ್ಷದಂತೆ ಈ ವರ್ಷವು ಅಂಗಡಿ ಟೆಂಡರ್ ಪಡೆಯಲು ಹೋದರೆ ಅವಕಾಶ ನೀಡದೆ, ನಾಳೆ ಬನ್ನಿ ಎಂದು ಎಲ್ಲ ಮುಸ್ಲಿಂ ವ್ಯಾಪಾರಸ್ಥರನ್ನು ಮರಳಿ ಕಳುಹಿಸಿದ್ದಾರೆ. ಇದೀಗ ಎಲ್ಲ ಅಂಗಡಿಗಳನ್ನು ಹಿಂದೂ ವ್ಯಾಪಾರಸ್ಥರಿಗೆ ನೀಡಲಾಗಿದೆ. ಭಾನುವಾರವೇ ಜಾತ್ರೆ ಇರುವುದರಿಂದ ಮುಸ್ಲಿ ವ್ಯಾಪಾರಸ್ಥರಿಗೆ ಅವಕಾಶ ಇಲ್ಲದಂತಾಗಿದೆ” ಎಂದು ಹೇಳಿದರು.

”ಈ ಬಗ್ಗೆ ನಾವು ದೇವಸ್ಥಾನದ ಆಡಳಿತ ಮಂಡಳಿಯವರನ್ನು ಪ್ರಶ್ನೆ ಮಾಡಿದಾಗ ಅವರಿಗೆ ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ. ಹಾಗಾಗಿ ನಾವು ಈ ರೀತಿ ಮಾಡಬೇಕಾಯಿತು. ಒಂದು ವೇಳೆ ಅದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಗಲಾಟೆಗಳಾಗಿ ವ್ಯಾಪಾರಸ್ಥರಿಗೆ ತೊಂದರೆ ಆಗಬಾರದು ಎಂದು ನಾವು ಅನ್ಯಧರ್ಮಿಯರಿಗೆ ಅವಕಾಶ ನೀಡಲಿಲ್ಲ ಎಂದು ಹೇಳಿದರು. ಆ ಪತ್ರ ಬರೆದವರು ಯಾರು? ಆತ ಸರ್ಕಾರದ ಪ್ರತಿನಿಧಿಯೇ? ಇದು ಮುಜರಾಯಿ ಇಲಾಖೆಯ ದೇವಸ್ಥಾನವಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು” ಎಂದು ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

”ಈ ಬಗ್ಗೆ ನಾವು ಈಗಾಗಲೇ ಮಹಾನಗರ ಪಾಲಿಕೆ. ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಹಾಗೂ ದೂರು ಕೊಟ್ಟಿದ್ದೇವೆ. ಆದರೆ, ಅವರುಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ನಾವು ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ. ಕಳೆದ 5 ವರ್ಷಗಳ ಹರಾಜು ಪಟ್ಟಿಯನ್ನು ನೋಡಿಕೊಂಡು ಅಲ್ಲಿ ಈ ಹಿಂದೆ ವ್ಯಾಪಾರ ಮಾಡಿದ್ದ ಮುಸ್ಲಿಂ ವ್ಯಾಪಾರಸ್ಥರಿಗೆ ಈ ಬಾರಿಯೂ ಅವಕಾಶ ನೀಡಬೇಕು. ಇಲ್ಲದಿದ್ದರೇ ನಾವು ಮತ್ತಷ್ಟು ಹೋರಾಟಗಳನ್ನು ಮಾಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

NOTE:

ಈ ಹಿಂದೆ ನಾವು ವರದಿಯಲ್ಲಿ ”ಸನಾತನ ಸಂಸ್ಥೆಯ ಪತ್ರಕ್ಕೆ ಹೆದರಿ, ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿದ ದೇವಸ್ಥಾನದ ಆಡಳಿತ ಮಂಡಳಿ” ಎಂದು ತಲೆಬಹರ ನೀಡಿದ್ದೇವು.. ಆದರೆ ಇದೀಗ ಸನಾತನ ಸಂಸ್ಥೆಯು ತಾವು ಯಾವುದೇ ಪತ್ರ ಬರೆದಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

”ಮಂಗಳಾದೇವಿ ದೇವಸ್ಥಾನ ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ, ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ತರ ಸಂಘ(ರಿ) ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರವನ್ನು ಮಾಡಲು ಹಿಂದೂ ವ್ಯಾಪಾರಸ್ಥರಿಗೆ ಪ್ರಥಮ ಪ್ರಾಧಾನ್ಯತೆಯನ್ನು ನೀಡಬೇಕು ಎಂದು ದೇವಸ್ಥಾನ ಸಮಿತಿಗೆ ಮನವಿ ನೀಡಲಾಗಿತ್ತು. ಈ ವಿಷಯದಲ್ಲಿ ಸನಾತನ ಸಂಸ್ಥೆ ಯಾವುದೇ ಮನವಿಯನ್ನು ದೇವಸ್ಥಾನ ಸಮಿತಿಗೆ ನೀಡಿಲ್ಲ. ಈ ವಿಷಯದಲ್ಲಿ ತಪ್ಪಾಗಿ ಸನಾತನ ಸಂಸ್ಥೆಯ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಘಟನೆಗೂ ಸನಾತನ ಸಂಸ್ಥೆಗೂ ಯಾವುದೇ ಸಂಬಂಧ ಇರುವುದಿಲ್ಲ” ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರಿಗೆ ಖುದ್ದಾಗಿ ಆಡಳಿತ ಮಂಡಳಿಯವರೇ ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ”ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ” ಎಂದವರು ಈಗ “ತಿಂದಿದ್ದು ಹೇಳಿದವರನ್ನು ಬಿಡುವುದಿಲ್ಲ” ಎಂದು ಬದಲಿಸಿದ್ದಾರೆಯೇ?: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. If such behaviours continue there will not be any difference between rowdies and commitee members. These things expected under BJP rules. But our state governed by Congress.

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...