Homeಕರ್ನಾಟಕಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

ಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

- Advertisement -
- Advertisement -

ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸಿರುವ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದೆ.

ಈ ಮಂಗಳಾದೇವಿ ದೇವಸ್ಥಾನವು ಮುಜುರಾಯಿ ಇಲಾಖೆ ವ್ಯಾಪ್ತಿಗೆ ಬರುತ್ತದೆ. ದೇವಸ್ಥಾನದ ನವರಾತ್ರಿ ಉತ್ಸವವು ಅಕ್ಟೋಬರ್ 15 ರಿಂದ 24 ರ ವರೆಗೆ ನಡೆಯಲಿದೆ. ಆದರೆ, ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ ಹಾಗಾಗಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನಿರಾಕರಿಸಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯುವ ಹೇಳಿದೆ ಎನ್ನಲಾಗಿದೆ.

ಪ್ರತಿವರ್ಷದಂತೆ ಈ ವರ್ಷವು ನವರಾತ್ರಿ ಸಿದ್ಧತೆ ಹಿನ್ನೆಲೆಯಲ್ಲಿ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತಿದೆ. ಇದು ಮಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸರ್ಕಾರಿ ರಸ್ತೆಯಾಗಿದೆ.

ಹಲವು ವರ್ಷಗಳಿಂದ ಈ ರಸ್ತೆಯ ಬದಿಗಳಲ್ಲಿ ನವರಾತ್ರಿ ಜಾತ್ರಾ ವ್ಯಾಪಾರ ನಡೆಯುತ್ತಾ ಬಂದಿದೆ. ಪಾಲಿಕೆ ರಸ್ತೆಯಾಗಿದ್ದರೂ ಹಲವು ವರ್ಷಗಳಿಂದ ದೇವಸ್ಥಾನದ ಆಡಳಿತದಿಂದಲೇ ವ್ಯಾಪಾರದ ಜಾಗ ಹರಾಜು ಮಾಡಲಾಗುತ್ತಿದೆ. ಆದರೆ ಈ ಬಾರಿ ಮಾತ್ರ ದೇವಸ್ಥಾನದ ಆಡಳಿತ ಮಂಡಳಿಯು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರಿಗೆ ಅವಕಾಶ ನೀಡಿಲ್ಲ. ಇದು ಮುಸ್ಲಿಂ ಸಮುದಾಯದ ವ್ಯಾಪಾರಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂಬಂಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರು, ”ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ಮಂಗಳೂರಿನ ಹಲವು ದೇವಸ್ಥಾನಗಳ ಮುಂದೆ ಬ್ಯಾನರ್ ಹಾಕಲಾಗುತ್ತಿತ್ತು. ಆದರೆ ಮಂಗಳಾದೇವಿ ದೇವಸ್ಥಾನದಲ್ಲಿ ಈವರೆಗೂ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಹೇರಿರಲಿಲ್ಲ. ಆದರೆ ಈ ಬಾರಿ ಇಲ್ಲಿಯೂ ಅದೇ ಬೆಳವಣಿಗೆ ನಡೆದಿದೆ” ಎಂದು ತಿಳಿಸಿದರು.

”ಕಾನೂನಿನ ಪ್ರಕಾರ ದೇವಸ್ಥಾನದ ಪ್ರಣಾಂಗದಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ, ಆದರೆ ಈವರೆಗೂ ಮುಸ್ಲಿಂ ವ್ಯಾಪಾರಸ್ಥರು ದೇವಸ್ಥಾನದ ಒಳಾಂಗಣದಲ್ಲಿ ವ್ಯಾಪಾರ ಮಾಡಿಲ್ಲ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತದೆ. ಈ ಬಾರಿಯೂ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲಿ 95 ಅಂಗಡಿಗಳಿದ್ದು ಪ್ರತಿವರ್ಷದಂತೆ ಈ ವರ್ಷವು ಅಂಗಡಿ ಟೆಂಡರ್ ಪಡೆಯಲು ಹೋದರೆ ಅವಕಾಶ ನೀಡದೆ, ನಾಳೆ ಬನ್ನಿ ಎಂದು ಎಲ್ಲ ಮುಸ್ಲಿಂ ವ್ಯಾಪಾರಸ್ಥರನ್ನು ಮರಳಿ ಕಳುಹಿಸಿದ್ದಾರೆ. ಇದೀಗ ಎಲ್ಲ ಅಂಗಡಿಗಳನ್ನು ಹಿಂದೂ ವ್ಯಾಪಾರಸ್ಥರಿಗೆ ನೀಡಲಾಗಿದೆ. ಭಾನುವಾರವೇ ಜಾತ್ರೆ ಇರುವುದರಿಂದ ಮುಸ್ಲಿ ವ್ಯಾಪಾರಸ್ಥರಿಗೆ ಅವಕಾಶ ಇಲ್ಲದಂತಾಗಿದೆ” ಎಂದು ಹೇಳಿದರು.

”ಈ ಬಗ್ಗೆ ನಾವು ದೇವಸ್ಥಾನದ ಆಡಳಿತ ಮಂಡಳಿಯವರನ್ನು ಪ್ರಶ್ನೆ ಮಾಡಿದಾಗ ಅವರಿಗೆ ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ. ಹಾಗಾಗಿ ನಾವು ಈ ರೀತಿ ಮಾಡಬೇಕಾಯಿತು. ಒಂದು ವೇಳೆ ಅದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಗಲಾಟೆಗಳಾಗಿ ವ್ಯಾಪಾರಸ್ಥರಿಗೆ ತೊಂದರೆ ಆಗಬಾರದು ಎಂದು ನಾವು ಅನ್ಯಧರ್ಮಿಯರಿಗೆ ಅವಕಾಶ ನೀಡಲಿಲ್ಲ ಎಂದು ಹೇಳಿದರು. ಆ ಪತ್ರ ಬರೆದವರು ಯಾರು? ಆತ ಸರ್ಕಾರದ ಪ್ರತಿನಿಧಿಯೇ? ಇದು ಮುಜರಾಯಿ ಇಲಾಖೆಯ ದೇವಸ್ಥಾನವಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು” ಎಂದು ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

”ಈ ಬಗ್ಗೆ ನಾವು ಈಗಾಗಲೇ ಮಹಾನಗರ ಪಾಲಿಕೆ. ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಹಾಗೂ ದೂರು ಕೊಟ್ಟಿದ್ದೇವೆ. ಆದರೆ, ಅವರುಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ನಾವು ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ. ಕಳೆದ 5 ವರ್ಷಗಳ ಹರಾಜು ಪಟ್ಟಿಯನ್ನು ನೋಡಿಕೊಂಡು ಅಲ್ಲಿ ಈ ಹಿಂದೆ ವ್ಯಾಪಾರ ಮಾಡಿದ್ದ ಮುಸ್ಲಿಂ ವ್ಯಾಪಾರಸ್ಥರಿಗೆ ಈ ಬಾರಿಯೂ ಅವಕಾಶ ನೀಡಬೇಕು. ಇಲ್ಲದಿದ್ದರೇ ನಾವು ಮತ್ತಷ್ಟು ಹೋರಾಟಗಳನ್ನು ಮಾಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

NOTE:

ಈ ಹಿಂದೆ ನಾವು ವರದಿಯಲ್ಲಿ ”ಸನಾತನ ಸಂಸ್ಥೆಯ ಪತ್ರಕ್ಕೆ ಹೆದರಿ, ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿದ ದೇವಸ್ಥಾನದ ಆಡಳಿತ ಮಂಡಳಿ” ಎಂದು ತಲೆಬಹರ ನೀಡಿದ್ದೇವು.. ಆದರೆ ಇದೀಗ ಸನಾತನ ಸಂಸ್ಥೆಯು ತಾವು ಯಾವುದೇ ಪತ್ರ ಬರೆದಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

”ಮಂಗಳಾದೇವಿ ದೇವಸ್ಥಾನ ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ, ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ತರ ಸಂಘ(ರಿ) ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರವನ್ನು ಮಾಡಲು ಹಿಂದೂ ವ್ಯಾಪಾರಸ್ಥರಿಗೆ ಪ್ರಥಮ ಪ್ರಾಧಾನ್ಯತೆಯನ್ನು ನೀಡಬೇಕು ಎಂದು ದೇವಸ್ಥಾನ ಸಮಿತಿಗೆ ಮನವಿ ನೀಡಲಾಗಿತ್ತು. ಈ ವಿಷಯದಲ್ಲಿ ಸನಾತನ ಸಂಸ್ಥೆ ಯಾವುದೇ ಮನವಿಯನ್ನು ದೇವಸ್ಥಾನ ಸಮಿತಿಗೆ ನೀಡಿಲ್ಲ. ಈ ವಿಷಯದಲ್ಲಿ ತಪ್ಪಾಗಿ ಸನಾತನ ಸಂಸ್ಥೆಯ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಘಟನೆಗೂ ಸನಾತನ ಸಂಸ್ಥೆಗೂ ಯಾವುದೇ ಸಂಬಂಧ ಇರುವುದಿಲ್ಲ” ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಅವರಿಗೆ ಖುದ್ದಾಗಿ ಆಡಳಿತ ಮಂಡಳಿಯವರೇ ಸನಾತನ ಸಂಸ್ಥೆಯಿಂದ ಪತ್ರ ಬಂದಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ”ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ” ಎಂದವರು ಈಗ “ತಿಂದಿದ್ದು ಹೇಳಿದವರನ್ನು ಬಿಡುವುದಿಲ್ಲ” ಎಂದು ಬದಲಿಸಿದ್ದಾರೆಯೇ?: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. If such behaviours continue there will not be any difference between rowdies and commitee members. These things expected under BJP rules. But our state governed by Congress.

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...