Homeಕರ್ನಾಟಕಮೈಸೂರು: ಪೊಲೀಸ್ ಭದ್ರತೆ ನಡುವೆ 'ಮಹಿಷ ದಸರಾ ಉತ್ಸವ'ಕ್ಕೆ ವಿಜೃಂಭಣೆಯ ಚಾಲನೆ

ಮೈಸೂರು: ಪೊಲೀಸ್ ಭದ್ರತೆ ನಡುವೆ ‘ಮಹಿಷ ದಸರಾ ಉತ್ಸವ’ಕ್ಕೆ ವಿಜೃಂಭಣೆಯ ಚಾಲನೆ

- Advertisement -
- Advertisement -

ಮೈಸೂರಿನ ಪುರಭವನದ ಆವರಣದಲ್ಲಿ ಇಂದು (ಶುಕ್ರವಾರ) ‘ಮಹಿಷ ದಸರಾ ಉತ್ಸವ’ಕ್ಕೆ ವಿಜೃಂಭಣೆಯ ಚಾಲನೆ ದೊರೆಯಿತು.

ಅಡೆತಡೆಗಳ ನಡುವೆಯೂ ಪಟ್ಟು ಬಿಡದ ಮೂಲನಿವಾಸಿಗಳು ಮಹಿಷ ದಸರಾ ಉತ್ಸವವನ್ನು ಸಡಗರ ಸಂಭ್ರಮಗಳ ನಡುವೆ ಅಚರಿಸಿ ಮಹಿಷ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ನಮಿಸಿದರು.

ವೇದಿಕೆ ಮುಂಭಾಗ ಮಹಿಷನ ದೊಡ್ಡ ಭಾವಚಿತ್ರ ಇರಿಸಿ ಅದರ ಮುಂದುಗಡೆ ಅಂಬೇಡ್ಕರ್, ಬುದ್ಧ ಮತ್ತು ಮಹಿಷನ ಕಂಚಿನ ಮೂರ್ತಿಗಳಿಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ಇದೇ ವೇಳೆ ಮಹಿಷನ ರೂಪ ಧರಿಸಿದ ವ್ಯಕ್ತಿ ವೇದಿಕೆ ಮೇಲೆ ಆಗಮಿಸಿದ್ದು ವಿಶೇಷ ಎನಿಸಿತು.

ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಬೆಂಗಳೂರು ಜಿಲ್ಲೆಗಳಿಂದ ಬೈಕ್, ಕಾರು ಸೇರಿದಂತೆ ವಿವಿಧ ವಾಹನಗಳಲ್ಲಿ ತಂಡೋಪ ತಂಡವಾಗಿ ಮೈಸೂರು ನಗರಕ್ಕೆ ಆಗಮಿಸಿದರು. ಮೈಸೂರಿನ ಅಶೋಕಪುರಂನಿಂದ ನೂರಾರು ಯುವಕರು ನೀಲಿ ಬಾವುಟ ಹಿಡಿದು ಬೈಕ್ ಗಳ ಮೂಲಕ ಪುರಭವನಕ್ಕೆ ಆಗಮಿಸಿದರು.

ಮಹಿಷ ದಸರಾ ಆಚರಣೆ, ಚಾಮುಂಡಿ ಚಲೋ ವಿವಾದದ ಹಿನ್ನೆಲೆಯಲ್ಲಿ ಪೊಲೀಸರು ಪುರಭವನದ ಒಳಗೆ ಮಾತ್ರ ಮಹಿಷ ದಸರಾ ಉತ್ಸವಕ್ಕೆ ಅನುಮತಿ ನೀಡಲಾಗಿದೆ. ಮಹಿಷ ಆಯೋಜಕರ ಬಯಕೆಯಂತೆ ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಮೂರ್ತಿಗೆ ಪುಷ್ಪಾರ್ಜನೆ ಮಾಡಲು ಅವಕಾಶ ನಿರಾಕರಿಸಲಾಗಿತ್ತು. ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಾದ್ಯಂತ 144ನೇ ಸೆಕ್ಷನ್ ಜಾರಿ ಮಾಡಿ ನಿಷೇಧ ಹೇರಲಾಗಿದೆ.

ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ. ನಂತರ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಪ್ರತಿಯೊಬ್ಬರು ನೀಲಿ ಬಾವುಟ, ಮಹಿಷನ ಭಾವಚಿತ್ರ ಹಿಡಿದು ಪ್ರದರ್ಶನ ಮಾಡಿ ಜಯಘೋಷಗಳನ್ನು ಕೂಗಿದರು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ಖ್ಯಾತ ಗಾಯಕ ಅಮ್ಮಾ ರಾಮಚಂದ್ರ ಮತ್ತು ತಂಡದವರು ನಾಡ ನಡುವಿನಿಂದ ಬಂದ ನೋವಿನ ಕೂಗೆ, ಮಹಿಷನಿಗೆ ಕೋಟಿ ನಮನ, ಕರುಳಿನ ಕಥನ ಕೇಳುವ ನಾಯಕ ಎಲ್ಲಿಗೆ ಹೋದೆ, ಓ ಭೀಮರಾಯ ಇದೊ ನಿನಗೆ ವಂದನೆ ಎಂಬ ಭೀಮ ಮತ್ತು ಕ್ರಾಂತಿ ಗೀತೆಗಳನ್ನು ಹಾಡಿದರು.

ಮಹಿಷ ದಸರಾ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರಿಂದಾಗಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪುರಭವನದ ಆವರಣದಲ್ಲಿ ಮಾತ್ರ ಕಾರ್ಯಕ್ರಮಕ್ಕೆ ಪೊಲೀಸರು ಅವಕಾಶ ನೀಡಿದ್ದಾರೆ. ಚಾಮುಂಡಿಬೆಟ್ಟದಲ್ಲಿರುವ ಮಹಿಷ ಪ್ರತಿಮೆಗೆ ಮಾಲಾರ್ಪಣೆ ಮಾಡಲು, ಮೆರವಣಿಗೆ ನಡೆಸಲು ಅವಕಾಶವನ್ನು ನೀಡಿಲ್ಲ. ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: ಮಹಿಷ ದಸರಾ ನಿಲ್ಲಿಸಬೇಕು ಎನ್ನಲು ಪ್ರತಾಪ್ ಸಿಂಹ ಯಾರು?: ಬಿಜೆಪಿ ಮುಖಂಡರಿಂದ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...