Homeಮುಖಪುಟಇಸ್ರೇಲ್-ಹಮಾಸ್ ಸಂಘರ್ಷದ ಪರಿಣಾಮ ಮುಸ್ಲಿಂ ಬಾಲಕನಿಗೆ ಚಾಕುವಿನಿಂದ ಇರಿದು ಕೊಲೆಗೈದ ಅಮೆರಿಕ ವ್ಯಕ್ತಿ

ಇಸ್ರೇಲ್-ಹಮಾಸ್ ಸಂಘರ್ಷದ ಪರಿಣಾಮ ಮುಸ್ಲಿಂ ಬಾಲಕನಿಗೆ ಚಾಕುವಿನಿಂದ ಇರಿದು ಕೊಲೆಗೈದ ಅಮೆರಿಕ ವ್ಯಕ್ತಿ

- Advertisement -
- Advertisement -

ಇಸ್ರೇಲ್ ಹಾಗೂ ಹಮಾಸ್​ ನಡುವಿನ ಸಂಘರ್ಷದ ಪರಿಣಾಮ ವ್ಯಕ್ತಿಯೊಬ್ಬರು ಮುಸ್ಲಿಂ ಬಾಲಕನನ್ನು 26 ಬಾರಿ ತಿವಿದು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

6 ವರ್ಷದ ಬಾಲಕನಿಗೆ 26 ಬಾರಿ ಇರಿತಕ್ಕೊಳಗಾದ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ, ಆತನ ತಾಯಿ (32) ಮೇಲೂ ಕೂಡ ಹಲ್ಲೆ ನಡೆಸಲಾಗಿದೆ, ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿಯ ಹೇಳಿಕೆ ತಿಳಿಸಿದೆ.

71 ವರ್ಷದ ಇಲಿನಾಯ್ಸ್ ನಗರದ ವ್ಯಕ್ತಿಯ ಮೇಲೆ ಭಾನುವಾರ ದ್ವೇಷದ ಅಪರಾಧದ ಆರೋಪ ಹೊರಿಸಲಾಯಿತು. ಇಸ್ಲಾಮಿಕ್ ನಂಬಿಕೆ ಮತ್ತು ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧಕ್ಕೆ ಪ್ರತಿಕ್ರಿಯೆಯಾಗಿ ಈ ಘಟನೆ ನಡೆದಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಬಾಲಕನ ಮನೆಯಲ್ಲೇ ಈ ದಾಳಿ ನಡೆದಿದ್ದು, ಎದೆ, ತಲೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿಯಲಾಗಿತ್ತು. ಶವ ಪರೀಕ್ಷೆಯ ಸಮಯದಲ್ಲಿ ಬಾಲಕನ ಹೊಟ್ಟೆಯಿಂದ 7 ಇಂಚಿನ ಬ್ಲೇಡ್ ಮಾದರಿಯ ಚಾಕುವನ್ನು ಹೊರ ತೆಗೆಯಲಾಗಿದೆ.

ಪೊಲೀಸರು ಆಗಮಿಸಿದಾಗ ಮಹಿಳೆಯ ಹಣೆಗೆ ಗಂಭೀರವಾಗಿ ಗಾಯವಾಗಿತ್ತು, ಪ್ರಕರಣ ದಾಖಲಿಸುವ ಮೊದಲು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇಸ್ರೇಲ್​ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕೂಡ ಬೆಂಬಲ ಸೂಚಿಸಿದ್ದಾರೆ. ಗಾಜಾದ ಪರಿಸ್ಥಿತಿ ತೀರಾ ಹದಗೆಟ್ಟಿದೆ, ಹಮಾಸ್​ನ ಇಸ್ರೇಲ್​ ಮೇಲಿನ ದಾಳಿಯ ಪ್ರತಿಯಾಗಿ ಇಸ್ರೇಲ್ ಗಾಜಾ ಮೇಲೆ ದಾಳಿ ನಡೆಸುತ್ತಿದೆ. ಗಾಜಾದಲ್ಲಿರುವ ಜನರಿಗೆ ದಕ್ಷಿಣ ಭಾಗಕ್ಕೆ ತೆರಳುವಂತೆ 3 ಗಂಟೆಗಳ ಗಡುವು ನೀಡಿತ್ತು. ಗಡುವು ಮುಕ್ತಾಯವಾಗುತ್ತಿದ್ದಂತೆ 1 ಮಿಲಿಯನ್ ಮಂದಿ ಗಾಜಾದಿಂದ ಪಲಾಯನ ಮಾಡಿದ್ದಾರೆ.

ತಾವು ವಾಯು, ಸಮುದ್ರ, ಭೂಮಿ ಮೂಲಕ ದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಕೆಯನ್ನು ನೀಡಿತ್ತು. ಈ ಕಾರಿಡಾರ್​ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಾವುದೇ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿತ್ತು.

ಗಾಜಾ ನಗರ ಹಾಗೂ ಉತ್ತರ ಗಾಜಾದ ಜನರಿಗೆ ದಕ್ಷಿಣ ಭಾಗಕ್ಕೆ ತೆರಳಲು ಮುಂಚೆಯೇ ಎಚ್ಚರಿಕೆ ನೀಡಲಾಗಿದೆ ಎಂದು ಸೇನೆ ಹೇಳಿದೆ. ಗಾಜಾದಲ್ಲಿ 2.3 ಮಿಲಿಯನ್ ನಾಗರಿಕರು ಆಹಾರ, ನೀರು, ಭದ್ರತೆ ವಿಚಾರದಲ್ಲಿ ಹೋರಾಟವನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ಪ್ರಧಾನಿ ಮೋದಿ ನಿಲ್ಲಬೇಕು: ಒವೈಸಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....