Homeಮುಖಪುಟಇಸ್ರೇಲ್-ಹಮಾಸ್ ಸಂಘರ್ಷದ ಪರಿಣಾಮ ಮುಸ್ಲಿಂ ಬಾಲಕನಿಗೆ ಚಾಕುವಿನಿಂದ ಇರಿದು ಕೊಲೆಗೈದ ಅಮೆರಿಕ ವ್ಯಕ್ತಿ

ಇಸ್ರೇಲ್-ಹಮಾಸ್ ಸಂಘರ್ಷದ ಪರಿಣಾಮ ಮುಸ್ಲಿಂ ಬಾಲಕನಿಗೆ ಚಾಕುವಿನಿಂದ ಇರಿದು ಕೊಲೆಗೈದ ಅಮೆರಿಕ ವ್ಯಕ್ತಿ

- Advertisement -
- Advertisement -

ಇಸ್ರೇಲ್ ಹಾಗೂ ಹಮಾಸ್​ ನಡುವಿನ ಸಂಘರ್ಷದ ಪರಿಣಾಮ ವ್ಯಕ್ತಿಯೊಬ್ಬರು ಮುಸ್ಲಿಂ ಬಾಲಕನನ್ನು 26 ಬಾರಿ ತಿವಿದು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

6 ವರ್ಷದ ಬಾಲಕನಿಗೆ 26 ಬಾರಿ ಇರಿತಕ್ಕೊಳಗಾದ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ, ಆತನ ತಾಯಿ (32) ಮೇಲೂ ಕೂಡ ಹಲ್ಲೆ ನಡೆಸಲಾಗಿದೆ, ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿಯ ಹೇಳಿಕೆ ತಿಳಿಸಿದೆ.

71 ವರ್ಷದ ಇಲಿನಾಯ್ಸ್ ನಗರದ ವ್ಯಕ್ತಿಯ ಮೇಲೆ ಭಾನುವಾರ ದ್ವೇಷದ ಅಪರಾಧದ ಆರೋಪ ಹೊರಿಸಲಾಯಿತು. ಇಸ್ಲಾಮಿಕ್ ನಂಬಿಕೆ ಮತ್ತು ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧಕ್ಕೆ ಪ್ರತಿಕ್ರಿಯೆಯಾಗಿ ಈ ಘಟನೆ ನಡೆದಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಬಾಲಕನ ಮನೆಯಲ್ಲೇ ಈ ದಾಳಿ ನಡೆದಿದ್ದು, ಎದೆ, ತಲೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿಯಲಾಗಿತ್ತು. ಶವ ಪರೀಕ್ಷೆಯ ಸಮಯದಲ್ಲಿ ಬಾಲಕನ ಹೊಟ್ಟೆಯಿಂದ 7 ಇಂಚಿನ ಬ್ಲೇಡ್ ಮಾದರಿಯ ಚಾಕುವನ್ನು ಹೊರ ತೆಗೆಯಲಾಗಿದೆ.

ಪೊಲೀಸರು ಆಗಮಿಸಿದಾಗ ಮಹಿಳೆಯ ಹಣೆಗೆ ಗಂಭೀರವಾಗಿ ಗಾಯವಾಗಿತ್ತು, ಪ್ರಕರಣ ದಾಖಲಿಸುವ ಮೊದಲು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇಸ್ರೇಲ್​ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕೂಡ ಬೆಂಬಲ ಸೂಚಿಸಿದ್ದಾರೆ. ಗಾಜಾದ ಪರಿಸ್ಥಿತಿ ತೀರಾ ಹದಗೆಟ್ಟಿದೆ, ಹಮಾಸ್​ನ ಇಸ್ರೇಲ್​ ಮೇಲಿನ ದಾಳಿಯ ಪ್ರತಿಯಾಗಿ ಇಸ್ರೇಲ್ ಗಾಜಾ ಮೇಲೆ ದಾಳಿ ನಡೆಸುತ್ತಿದೆ. ಗಾಜಾದಲ್ಲಿರುವ ಜನರಿಗೆ ದಕ್ಷಿಣ ಭಾಗಕ್ಕೆ ತೆರಳುವಂತೆ 3 ಗಂಟೆಗಳ ಗಡುವು ನೀಡಿತ್ತು. ಗಡುವು ಮುಕ್ತಾಯವಾಗುತ್ತಿದ್ದಂತೆ 1 ಮಿಲಿಯನ್ ಮಂದಿ ಗಾಜಾದಿಂದ ಪಲಾಯನ ಮಾಡಿದ್ದಾರೆ.

ತಾವು ವಾಯು, ಸಮುದ್ರ, ಭೂಮಿ ಮೂಲಕ ದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಕೆಯನ್ನು ನೀಡಿತ್ತು. ಈ ಕಾರಿಡಾರ್​ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಾವುದೇ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿತ್ತು.

ಗಾಜಾ ನಗರ ಹಾಗೂ ಉತ್ತರ ಗಾಜಾದ ಜನರಿಗೆ ದಕ್ಷಿಣ ಭಾಗಕ್ಕೆ ತೆರಳಲು ಮುಂಚೆಯೇ ಎಚ್ಚರಿಕೆ ನೀಡಲಾಗಿದೆ ಎಂದು ಸೇನೆ ಹೇಳಿದೆ. ಗಾಜಾದಲ್ಲಿ 2.3 ಮಿಲಿಯನ್ ನಾಗರಿಕರು ಆಹಾರ, ನೀರು, ಭದ್ರತೆ ವಿಚಾರದಲ್ಲಿ ಹೋರಾಟವನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ಪ್ರಧಾನಿ ಮೋದಿ ನಿಲ್ಲಬೇಕು: ಒವೈಸಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...