Homeಮುಖಪುಟಟಾಟಾ ಕನ್ಸಲ್ಟೆನ್ಸಿ ನೇಮಕಾತಿ ಹಗರಣ: 16 ಉದ್ಯೋಗಿಗಳ ವಜಾ

ಟಾಟಾ ಕನ್ಸಲ್ಟೆನ್ಸಿ ನೇಮಕಾತಿ ಹಗರಣ: 16 ಉದ್ಯೋಗಿಗಳ ವಜಾ

- Advertisement -
- Advertisement -

ಭಾರತದ ಅತಿದೊಡ್ಡ ಐಟಿ ಸಂಸ್ಥೆಗಳಲ್ಲಿ ಒಂದಾಗಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ನ ನೇಮಕಾತಿ ಹಗರಣದ ವಿವರವಾದ ತನಿಖೆಯ ನಂತರ ಕಂಪೆನಿಯು 16 ಉದ್ಯೋಗಿಗಳನ್ನು ವಜಾ ಮಾಡಿದೆ ಮತ್ತು ಮೂವರನ್ನು  ಸಂಪನ್ಮೂಲ ನಿರ್ವಹಣೆ ಕಾರ್ಯಗಳಿಂದ ವಿಮುಕ್ತಿಗೊಳಿಸಲಾಗಿದೆ. ಜೊತೆಗೆ ಆರು ಮಾರಾಟಗಾರರನ್ನು ಕಂಪನಿಯೊಂದಿಗೆ ಯಾವುದೇ ಹೆಚ್ಚಿನ ವ್ಯವಹಾರವನ್ನು ನಡೆಸದಂತೆ ನಿರ್ಬಂಧ ವಿಧಿಸಿದೆ.

ನಮ್ಮ ತನಿಖೆಯ ವೇಳೆ ಅಕ್ರಮದಲ್ಲಿ 19 ಉದ್ಯೋಗಿಗಳು ಭಾಗಿಯಾಗಿರುವುದು ಕಂಡುಬಂದಿದೆ ಮತ್ತು ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ನೀತಿ ಸಂಹಿತೆ ಉಲ್ಲಂಘನೆಗಾಗಿ 16 ಉದ್ಯೋಗಿಗಳನ್ನು ಕಂಪನಿಯಿಂದ ತೆಗೆದುಹಾಕಲಾಗಿದೆ ಮತ್ತು ಮೂವರು ಉದ್ಯೋಗಿಗಳನ್ನು ಸಂಪನ್ಮೂಲ ನಿರ್ವಹಣೆ ಕಾರ್ಯದಿಂದ ವಿಮುಕ್ತಿಗೊಳಿಸಲಾಗಿದೆ ಎಂದು ಟಿಸಿಎಸ್ ತಿಳಿಸಿದೆ.

ಇದಲ್ಲದೆ 6 ಮಾರಾಟ ಘಟಕಗಳು, ಅವುಗಳ ಮಾಲೀಕರು ಮತ್ತು ಅಂಗಸಂಸ್ಥೆಗಳು TCS ನೊಂದಿಗೆ ಯಾವುದೇ ವ್ಯವಹಾರವನ್ನು ಮಾಡದಂತೆ ನಿರ್ಬಂಧಿಸಿದೆ ಎಂದು ಹೇಳಿಕೆಯಲ್ಲಿ ಟಿಸಿಎಸ್ ತಿಳಿಸಿದೆ.

ಕೆಲವು ಹಿರಿಯ ಸಿಬ್ಬಂದಿಗಳು, ಉದ್ಯೋಗ ನೀಡಲು ಸಿಬ್ಬಂದಿ ನೇಮಕಾತಿ ಸಂಸ್ಥೆಗಳಿಂದ ಲಂಚವನ್ನು ಸ್ವೀಕರಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ನಂತರ ಕಂಪನಿಯು ಆರೋಪಗಳ ಕುರಿತು ತನಿಖೆ ನಡೆಸಲು ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ ಅಜಿತ್ ಮೆನನ್ ಅವರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು.

ಟಿಸಿಎಸ್‌ ಚೀಫ್‌ ಎಕ್ಸಿಕ್ಯೂಟಿವ್‌ ಕೆ.ಕೃತಿವಾಸನ್‌ ಈ ಕುರಿತು ಮಾತನಾಡಿದ್ದು, ಉದ್ಯೋಗಿಗಳ ವಿರುದ್ಧ ಕೈಗೊಂಡ ತನಿಖೆಯು ಮುಗಿದಿದೆ. ಸಮಗ್ರ ತನಿಖೆಯ ಬಳಿಕ ಉದ್ಯೋಗಿಗಳು ಹಗರಣದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಕಂಪನಿಯ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಕೆಲ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ. ಇಲ್ಲಿಗೆ ಪ್ರಕರಣ ಅಂತ್ಯವಾಗಿದೆ ಎಂದು ಹೇಳಿದ್ದಾರೆ.

ಟಿಸಿಎಸ್‌ನಂತಹ ಐಟಿ ಕಂಪನಿಗಳು ಸಾಮಾನ್ಯವಾಗಿ ಸಿಬ್ಬಂದಿಯನ್ನು ಉದ್ಯೋಗಿಗಳ ರೆಫರಲ್‌ ಪ್ರೋಗ್ರಾಂ ಹಾಗೂ ಸಿಬ್ಬಂದಿ ಸಂಸ್ಥೆಗಳ ಮೂಲಕ ನೇಮಕ ಮಾಡಿಕೊಳ್ಳುತ್ತವೆ. ಈ ಸಂಸ್ಥೆಗಳು ಕಂಪನಿಗಳಿಗೆ ಅಭ್ಯರ್ಥಿಗಳ ಪಟ್ಟಿಗಳನ್ನು ಒದಗಿಸುತ್ತವೆ. ಇದಾದ ನಂತರ ಕಂಪನಿಗಳು ಪರೀಕ್ಷೆಗಳು ಅಥವಾ ಸಂದರ್ಶನಗಳನ್ನು ನಡೆಸಿ ನಂತರ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುತ್ತವೆ.

ಇದನ್ನು ಓದಿ: UAPAಯಡಿ ಬಂಧನ ಪ್ರಶ್ನಿಸಿ ನ್ಯೂಸ್‌ ಕ್ಲಿಕ್ ಸಂಸ್ಥಾಪಕ ಸುಪ್ರೀಂ ಮೊರೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...