Homeಮುಖಪುಟಟಾಟಾ ಕನ್ಸಲ್ಟೆನ್ಸಿ ನೇಮಕಾತಿ ಹಗರಣ: 16 ಉದ್ಯೋಗಿಗಳ ವಜಾ

ಟಾಟಾ ಕನ್ಸಲ್ಟೆನ್ಸಿ ನೇಮಕಾತಿ ಹಗರಣ: 16 ಉದ್ಯೋಗಿಗಳ ವಜಾ

- Advertisement -
- Advertisement -

ಭಾರತದ ಅತಿದೊಡ್ಡ ಐಟಿ ಸಂಸ್ಥೆಗಳಲ್ಲಿ ಒಂದಾಗಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ನ ನೇಮಕಾತಿ ಹಗರಣದ ವಿವರವಾದ ತನಿಖೆಯ ನಂತರ ಕಂಪೆನಿಯು 16 ಉದ್ಯೋಗಿಗಳನ್ನು ವಜಾ ಮಾಡಿದೆ ಮತ್ತು ಮೂವರನ್ನು  ಸಂಪನ್ಮೂಲ ನಿರ್ವಹಣೆ ಕಾರ್ಯಗಳಿಂದ ವಿಮುಕ್ತಿಗೊಳಿಸಲಾಗಿದೆ. ಜೊತೆಗೆ ಆರು ಮಾರಾಟಗಾರರನ್ನು ಕಂಪನಿಯೊಂದಿಗೆ ಯಾವುದೇ ಹೆಚ್ಚಿನ ವ್ಯವಹಾರವನ್ನು ನಡೆಸದಂತೆ ನಿರ್ಬಂಧ ವಿಧಿಸಿದೆ.

ನಮ್ಮ ತನಿಖೆಯ ವೇಳೆ ಅಕ್ರಮದಲ್ಲಿ 19 ಉದ್ಯೋಗಿಗಳು ಭಾಗಿಯಾಗಿರುವುದು ಕಂಡುಬಂದಿದೆ ಮತ್ತು ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ನೀತಿ ಸಂಹಿತೆ ಉಲ್ಲಂಘನೆಗಾಗಿ 16 ಉದ್ಯೋಗಿಗಳನ್ನು ಕಂಪನಿಯಿಂದ ತೆಗೆದುಹಾಕಲಾಗಿದೆ ಮತ್ತು ಮೂವರು ಉದ್ಯೋಗಿಗಳನ್ನು ಸಂಪನ್ಮೂಲ ನಿರ್ವಹಣೆ ಕಾರ್ಯದಿಂದ ವಿಮುಕ್ತಿಗೊಳಿಸಲಾಗಿದೆ ಎಂದು ಟಿಸಿಎಸ್ ತಿಳಿಸಿದೆ.

ಇದಲ್ಲದೆ 6 ಮಾರಾಟ ಘಟಕಗಳು, ಅವುಗಳ ಮಾಲೀಕರು ಮತ್ತು ಅಂಗಸಂಸ್ಥೆಗಳು TCS ನೊಂದಿಗೆ ಯಾವುದೇ ವ್ಯವಹಾರವನ್ನು ಮಾಡದಂತೆ ನಿರ್ಬಂಧಿಸಿದೆ ಎಂದು ಹೇಳಿಕೆಯಲ್ಲಿ ಟಿಸಿಎಸ್ ತಿಳಿಸಿದೆ.

ಕೆಲವು ಹಿರಿಯ ಸಿಬ್ಬಂದಿಗಳು, ಉದ್ಯೋಗ ನೀಡಲು ಸಿಬ್ಬಂದಿ ನೇಮಕಾತಿ ಸಂಸ್ಥೆಗಳಿಂದ ಲಂಚವನ್ನು ಸ್ವೀಕರಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ನಂತರ ಕಂಪನಿಯು ಆರೋಪಗಳ ಕುರಿತು ತನಿಖೆ ನಡೆಸಲು ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ ಅಜಿತ್ ಮೆನನ್ ಅವರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು.

ಟಿಸಿಎಸ್‌ ಚೀಫ್‌ ಎಕ್ಸಿಕ್ಯೂಟಿವ್‌ ಕೆ.ಕೃತಿವಾಸನ್‌ ಈ ಕುರಿತು ಮಾತನಾಡಿದ್ದು, ಉದ್ಯೋಗಿಗಳ ವಿರುದ್ಧ ಕೈಗೊಂಡ ತನಿಖೆಯು ಮುಗಿದಿದೆ. ಸಮಗ್ರ ತನಿಖೆಯ ಬಳಿಕ ಉದ್ಯೋಗಿಗಳು ಹಗರಣದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಕಂಪನಿಯ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಕೆಲ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ. ಇಲ್ಲಿಗೆ ಪ್ರಕರಣ ಅಂತ್ಯವಾಗಿದೆ ಎಂದು ಹೇಳಿದ್ದಾರೆ.

ಟಿಸಿಎಸ್‌ನಂತಹ ಐಟಿ ಕಂಪನಿಗಳು ಸಾಮಾನ್ಯವಾಗಿ ಸಿಬ್ಬಂದಿಯನ್ನು ಉದ್ಯೋಗಿಗಳ ರೆಫರಲ್‌ ಪ್ರೋಗ್ರಾಂ ಹಾಗೂ ಸಿಬ್ಬಂದಿ ಸಂಸ್ಥೆಗಳ ಮೂಲಕ ನೇಮಕ ಮಾಡಿಕೊಳ್ಳುತ್ತವೆ. ಈ ಸಂಸ್ಥೆಗಳು ಕಂಪನಿಗಳಿಗೆ ಅಭ್ಯರ್ಥಿಗಳ ಪಟ್ಟಿಗಳನ್ನು ಒದಗಿಸುತ್ತವೆ. ಇದಾದ ನಂತರ ಕಂಪನಿಗಳು ಪರೀಕ್ಷೆಗಳು ಅಥವಾ ಸಂದರ್ಶನಗಳನ್ನು ನಡೆಸಿ ನಂತರ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುತ್ತವೆ.

ಇದನ್ನು ಓದಿ: UAPAಯಡಿ ಬಂಧನ ಪ್ರಶ್ನಿಸಿ ನ್ಯೂಸ್‌ ಕ್ಲಿಕ್ ಸಂಸ್ಥಾಪಕ ಸುಪ್ರೀಂ ಮೊರೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...