Homeಅಂತರಾಷ್ಟ್ರೀಯಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

- Advertisement -
- Advertisement -

ಪ್ಯಾಲೆಸ್ತೀನ್ ನಿರಾಶ್ರಿತರ ರಕ್ಷಣೆಗೆ ಕಾರ್ಯಚರಿಸುತ್ತಿರುವ UNRWA ಸಿಬ್ಬಂದಿಗಳು, ಇಸ್ರೇಲ್ ದಾಳಿಯ ಮಧ್ಯೆ ಗಾಝಾದಲ್ಲಿ ಸೃಷ್ಟಿಯಾದ ವಿಪತ್ತಿನ ಪರಿಸ್ಥಿತಿಯಿಂದ ಜನರನ್ನು ರಕ್ಷಿಸಿ ಎಂದು ಮನವಿ ಮಾಡಿದ್ದು, UNRWA ಆಶ್ರಯದಲ್ಲಿರುವ ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರಿಗೆ ಆಹಾರ, ನೀರು ಮತ್ತು ಔಷಧಿಗಳನ್ನು ತಕ್ಷಣದಲ್ಲಿ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಯುಎನ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಪ್ಯೂಜೀಸ್ ನಿಯರ್ ಈಸ್ಟ್ (ಯುಎನ್‌ಆರ್‌ಡಬ್ಲ್ಯುಎ) ಗಾಝಾದಲ್ಲಿನ ಪ್ಯಾಲೆಸ್ತೀನ್ ನಿರಾಶ್ರಿತರನ್ನು ರಕ್ಷಿಸಲು ತುರ್ತು ಮನವಿಯನ್ನು ಮಾಡಿದೆ. ಗಾಝಾ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರು ಹಿಂಸಾಚಾರದ ತೀವ್ರತೆಯ ಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದೆ.

ದಯವಿಟ್ಟು ಗಾಝಾವನ್ನು ಉಳಿಸಿ, ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಗಾಝಾವನ್ನು ಉಳಿಸಿ. ಅದು ನಾಶವಾಗುತ್ತಿದೆ ಎಂದು ಯುಎನ್‌ಆರ್‌ಡಬ್ಲ್ಯುಎ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ವಿಡಿಯೋದಲ್ಲಿ ಯುಎನ್‌ಆರ್‌ಡಬ್ಲ್ಯುಎ ಆಶ್ರಯ ತಾಣಗಳ ಮುಖ್ಯಸ್ಥ ಹೇಳುತ್ತಿರುವುದು ಕಂಡು ಬಂದಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ, ಇಸ್ರೇಲಿ ಮಿಲಿಟರಿ ಉತ್ತರ ಗಾಜಾದಲ್ಲಿ ವಾಸಿಸುವ 1.1 ಮಿಲಿಯನ್ ಪ್ಯಾಲೆಸ್ತೀನಿಯನ್ನರನ್ನು ದಕ್ಷಿಣಕ್ಕೆ ಸ್ಥಳಾಂತರಕ್ಕೆ ಸೂಚಿಸಿತ್ತು. ಇದರ ಬಳಿಕ ಸಾವಿರಾರು ಕುಟುಂಬಗಳು ವಾಹನಗಳಲ್ಲಿ ಮತ್ತು ಕಾಲ್ನಡಿಗೆಯಲ್ಲಿ ಮನೆಬಿಟ್ಟು ತೆರಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ UNRWA ಆಶ್ರಯ ತಾಣಗಳ ಮುಖ್ಯಸ್ಥರು, ಮಕ್ಕಳು, ವೃದ್ಧರು ಮತ್ತು ವಯಸ್ಕರಿಗೆ ನಾವು ಎಲ್ಲವನ್ನೂ ಒದಗಿಸಲು ಸಾಧ್ಯವಾಗುತ್ತಿಲ್ಲ. ನಾನು UNRWA ಆಶ್ರಯದ ಮುಖ್ಯಸ್ಥನಾಗಿದ್ದೇನೆ ಆಹಾರ, ನೀರನ್ನು ಕೂಡ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ವೀಡಿಯೊವೊಂದರಲ್ಲಿ UNRWA ಆಶ್ರಯ ತಾಣದ ಹಲಾಸ್ ಸಹಾಯಕ್ಕಾಗಿ ಭಾವನಾತ್ಮಕ ಮನವಿಯನ್ನು ಮಾಡಿದ್ದಾರೆ. ನನ್ನ ಆಶ್ರಯದಲ್ಲಿರುವ ನಿರಾಶ್ರಿತರಿಗೆ ಅಗತ್ಯ ಔಷಧಗಳು ಮತ್ತು ಆಹಾರವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಅವರ ಧ್ವನಿಯಲ್ಲಿ ಹತಾಶೆ ಮತ್ತು ದುಃಖ ವ್ಯಕ್ತವಾಗಿತ್ತು.

ನಾವು ಈಗ ಇರುವ ಪರಿಸ್ಥಿತಿಯನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ ಎಂದು ಹಲಾಸ್ ವೀಡಿಯೊದಲ್ಲಿ ಹೇಳಿದ್ದು, 15,000 ಪ್ಯಾಲೇಸ್ತೀನ್‌ ನಿರಾಶ್ರಿತರು ಆಶ್ರಯದಲ್ಲಿದ್ದಾರೆ ಎಂದು ಹೇಳಿದರು. ಅವರು ಆಹಾರ, ನೀರಿಲ್ಲದೆ ತಮ್ಮ ಮನೆಗಳನ್ನು ತೊರೆದರು. ನಿರಾಶ್ರಿತರಲ್ಲಿ ಸಕ್ಕರೆ ಕಾಯಿಲೆ ಇರುವವರು, ಅಂಗವಿಕಲ ಶಿಶುಗಳು ಹಾಗೂ ಈಗ ಸಿಡುಬು ರೋಗಕ್ಕೆ ತುತ್ತಾಗಿರುವ ಮಕ್ಕಳು ಇದ್ದಾರೆ ಎಂದು ಹೇಳಿದ್ದಾರೆ

ಆಹಾರ, ಸ್ನಾನಗೃಹಗಳು, ನೀರು, ವಿದ್ಯುಚ್ಛಕ್ತಿಯ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತಿಲ್ಲ. ಸದ್ಯದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ. ಅವರ ಅಗತ್ಯಗಳನ್ನು ಹೇಗೆ ಪೂರೈಸುವುದು ಎಂದು ನಮಗೆ ತಿಳಿದಿಲ್ಲ. ಇಲ್ಲಿ ಏನೂ ಇಲ್ಲ ಎಂದು ಹಲಾಸ್ ಹೇಳಿದ್ದಾರೆ.

ನಾವು ಅವರಿಗೆ ಆಹಾರ ಮತ್ತು ನೀರು ನೀಡುವಂತೆ ಸಹಾಯ ಹುಡುಕುತ್ತಿದ್ದೇವೆ. ಅವರು ಏನೂ ಇಲ್ಲದೆ ಬಂದಿದ್ದಾರೆ. ಆದರೆ ಅವರು ಭಿಕ್ಷುಕರಲ್ಲ. ಅವರಲ್ಲಿ ಹಣ ಇದೆ. ಆದರೆ ನಾವು ಬೇಕಿದ್ದ ನೀರು ಆಹಾರ ಎಲ್ಲಿ ಖರೀದಿಸಬಹುದು? ನಮಗೆ ಇನ್ಸುಲಿನ್ ಬೇಕು, ಜನರು ಸಾಯುತ್ತಿದ್ದಾರೆ. ನಾವು ಅವರಿಗೆ ಏನನ್ನೂ ನೀಡಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿಯು ದುರಂತ ಪರಿಸ್ಥಿತಿಯಾಗಿದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿನ ಮತ್ತೊಂದು ಪೋಸ್ಟ್‌ನಲ್ಲಿ UNRWA ಸಿಬ್ಬಂದಿ ಅಜ್ಜಮ್ ಅವರು ಈ ದಿನಗಳಲ್ಲಿ ಗಾಜಾದಲ್ಲಿ  ಬದುಕುವುದು ಮಾತ್ರವಲ್ಲ, ಸ್ನಾನಕ್ಕೆ ಸ್ವಲ್ಪ ನೀರು ಹೊಂದುವುದು ಪಂಚತಾರಾ ಹೋಟೆಲ್‌ನಲ್ಲಿ ಇದ್ದಂತೆ ಮತ್ತು ಫೋನ್‌ನ್ನು ಸಂಪೂರ್ಣವಾಗಿ ಚಾರ್ಜ್ ಮಾಡುವುದು ಒಂದು ಕನಸಾಗಿದೆ ಎಂದು ಹೇಳಿದ್ದಾರೆ.

ಕಳೆದ ಶನಿವಾರ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭಯಾನಕ ದಾಳಿಯಲ್ಲಿ 1,200 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 2,300 ಜನರು ಮೃತಪಟ್ಟಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ.

ಅ.7 ರಿಂದ 4,23,000ಕ್ಕೂ ಹೆಚ್ಚು ಜನರು ಈಗಾಗಲೇ ಸ್ಥಳಾಂತರಗೊಂಡಿದ್ದಾರೆ ಎಂದು UNRWA ಹೇಳಿದೆ. ಅವರಲ್ಲಿ 2,70,000ಕ್ಕೂ ಹೆಚ್ಚು ಜನರು UNRWA ಆಶ್ರಯದಲ್ಲಿ ಆಶ್ರಯ ಪಡೆದಿದ್ದಾರೆ. ಅವರಲ್ಲಿ 50,000 ಗರ್ಭಿಣಿಯರಿದ್ದಾರೆ. ಈ ಪೈಕಿ ಸುಮಾರು 5,500 ಮಹಿಳೆಯರು ತುಂಬು ಗರ್ಭಿಣಿಯರಾಗಿದ್ದಾರೆ ಎಂದು ಹೇಳಿದೆ.

ಇಲ್ಲಿ ಇಂಟರ್‌ನೆಟ್‌ ಲಭ್ಯತೆ ಕನಸಾಗಿದೆ. ಇವು ಅಕ್ಷರಶಃ ನಿದ್ದೆಯಿಲ್ಲದ ರಾತ್ರಿಗಳು, ಸೂರ್ಯೋದಯಕ್ಕೆ ಮೊದಲೇ ಬೃಹತ್ ಬಾಂಬ್ ಸ್ಫೋಟವು ಪ್ರಾರಂಭವಾಗುತ್ತದೆ. ಪ್ರತಿ 10 ಅಥವಾ 15 ನಿಮಿಷಗಳಿಗೊಮ್ಮೆ ಶಬ್ಧಗಳು ಕೇಳಿಸುತ್ತಿದೆ. ಹಗಲು ಹೊತ್ತಿನಲ್ಲಿ ಬಾಂಬ್ ಸ್ಫೋಟವು ನಿಲ್ಲುವುದಿಲ್ಲ ಆದರೆ ಅದು ಕಡಿಮೆ ಪ್ರಮಾಣದ್ದಾಗಿದೆ ಆದರೆ ಕತ್ತಲೆಯ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಬಾಂಬ್‌ ದಾಳಿ ಶಬ್ಧಗಳು ಕೇಳುತ್ತಿದೆ ಎಂದು ಅಜ್ಜಮ್ ಹೇಳಿದ್ದಾರೆ.

ಯುಎನ್ ಎಮರ್ಜೆನ್ಸಿ ರಿಲೀಫ್ ಕೋ ಆರ್ಡಿನೇಟರ್ ಮಾರ್ಟಿನ್ ಗ್ರಿಫಿತ್ಸ್ ಕೂಡ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಭೀಕರತೆಯ ಎಚ್ಚರಿಕೆ ನೀಡಿದ್ದಾರೆ. ನೀರು, ವಿದ್ಯುತ್, ಆಹಾರ ಮತ್ತು ಔಷಧವಿಲ್ಲದೆ ಸಾವಿರಾರು ಮಂದಿ ಸಾಯುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಾಟಾ ಕನ್ಸಲ್ಟೆನ್ಸಿ ನೇಮಕಾತಿ ಹಗರಣ: 16 ಉದ್ಯೋಗಿಗಳ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...