Homeಅಂತರಾಷ್ಟ್ರೀಯಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

- Advertisement -
- Advertisement -

ಪ್ಯಾಲೆಸ್ತೀನ್ ನಿರಾಶ್ರಿತರ ರಕ್ಷಣೆಗೆ ಕಾರ್ಯಚರಿಸುತ್ತಿರುವ UNRWA ಸಿಬ್ಬಂದಿಗಳು, ಇಸ್ರೇಲ್ ದಾಳಿಯ ಮಧ್ಯೆ ಗಾಝಾದಲ್ಲಿ ಸೃಷ್ಟಿಯಾದ ವಿಪತ್ತಿನ ಪರಿಸ್ಥಿತಿಯಿಂದ ಜನರನ್ನು ರಕ್ಷಿಸಿ ಎಂದು ಮನವಿ ಮಾಡಿದ್ದು, UNRWA ಆಶ್ರಯದಲ್ಲಿರುವ ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರಿಗೆ ಆಹಾರ, ನೀರು ಮತ್ತು ಔಷಧಿಗಳನ್ನು ತಕ್ಷಣದಲ್ಲಿ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಯುಎನ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಪ್ಯೂಜೀಸ್ ನಿಯರ್ ಈಸ್ಟ್ (ಯುಎನ್‌ಆರ್‌ಡಬ್ಲ್ಯುಎ) ಗಾಝಾದಲ್ಲಿನ ಪ್ಯಾಲೆಸ್ತೀನ್ ನಿರಾಶ್ರಿತರನ್ನು ರಕ್ಷಿಸಲು ತುರ್ತು ಮನವಿಯನ್ನು ಮಾಡಿದೆ. ಗಾಝಾ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರು ಹಿಂಸಾಚಾರದ ತೀವ್ರತೆಯ ಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದೆ.

ದಯವಿಟ್ಟು ಗಾಝಾವನ್ನು ಉಳಿಸಿ, ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಗಾಝಾವನ್ನು ಉಳಿಸಿ. ಅದು ನಾಶವಾಗುತ್ತಿದೆ ಎಂದು ಯುಎನ್‌ಆರ್‌ಡಬ್ಲ್ಯುಎ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ವಿಡಿಯೋದಲ್ಲಿ ಯುಎನ್‌ಆರ್‌ಡಬ್ಲ್ಯುಎ ಆಶ್ರಯ ತಾಣಗಳ ಮುಖ್ಯಸ್ಥ ಹೇಳುತ್ತಿರುವುದು ಕಂಡು ಬಂದಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ, ಇಸ್ರೇಲಿ ಮಿಲಿಟರಿ ಉತ್ತರ ಗಾಜಾದಲ್ಲಿ ವಾಸಿಸುವ 1.1 ಮಿಲಿಯನ್ ಪ್ಯಾಲೆಸ್ತೀನಿಯನ್ನರನ್ನು ದಕ್ಷಿಣಕ್ಕೆ ಸ್ಥಳಾಂತರಕ್ಕೆ ಸೂಚಿಸಿತ್ತು. ಇದರ ಬಳಿಕ ಸಾವಿರಾರು ಕುಟುಂಬಗಳು ವಾಹನಗಳಲ್ಲಿ ಮತ್ತು ಕಾಲ್ನಡಿಗೆಯಲ್ಲಿ ಮನೆಬಿಟ್ಟು ತೆರಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ UNRWA ಆಶ್ರಯ ತಾಣಗಳ ಮುಖ್ಯಸ್ಥರು, ಮಕ್ಕಳು, ವೃದ್ಧರು ಮತ್ತು ವಯಸ್ಕರಿಗೆ ನಾವು ಎಲ್ಲವನ್ನೂ ಒದಗಿಸಲು ಸಾಧ್ಯವಾಗುತ್ತಿಲ್ಲ. ನಾನು UNRWA ಆಶ್ರಯದ ಮುಖ್ಯಸ್ಥನಾಗಿದ್ದೇನೆ ಆಹಾರ, ನೀರನ್ನು ಕೂಡ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ವೀಡಿಯೊವೊಂದರಲ್ಲಿ UNRWA ಆಶ್ರಯ ತಾಣದ ಹಲಾಸ್ ಸಹಾಯಕ್ಕಾಗಿ ಭಾವನಾತ್ಮಕ ಮನವಿಯನ್ನು ಮಾಡಿದ್ದಾರೆ. ನನ್ನ ಆಶ್ರಯದಲ್ಲಿರುವ ನಿರಾಶ್ರಿತರಿಗೆ ಅಗತ್ಯ ಔಷಧಗಳು ಮತ್ತು ಆಹಾರವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಅವರ ಧ್ವನಿಯಲ್ಲಿ ಹತಾಶೆ ಮತ್ತು ದುಃಖ ವ್ಯಕ್ತವಾಗಿತ್ತು.

ನಾವು ಈಗ ಇರುವ ಪರಿಸ್ಥಿತಿಯನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ ಎಂದು ಹಲಾಸ್ ವೀಡಿಯೊದಲ್ಲಿ ಹೇಳಿದ್ದು, 15,000 ಪ್ಯಾಲೇಸ್ತೀನ್‌ ನಿರಾಶ್ರಿತರು ಆಶ್ರಯದಲ್ಲಿದ್ದಾರೆ ಎಂದು ಹೇಳಿದರು. ಅವರು ಆಹಾರ, ನೀರಿಲ್ಲದೆ ತಮ್ಮ ಮನೆಗಳನ್ನು ತೊರೆದರು. ನಿರಾಶ್ರಿತರಲ್ಲಿ ಸಕ್ಕರೆ ಕಾಯಿಲೆ ಇರುವವರು, ಅಂಗವಿಕಲ ಶಿಶುಗಳು ಹಾಗೂ ಈಗ ಸಿಡುಬು ರೋಗಕ್ಕೆ ತುತ್ತಾಗಿರುವ ಮಕ್ಕಳು ಇದ್ದಾರೆ ಎಂದು ಹೇಳಿದ್ದಾರೆ

ಆಹಾರ, ಸ್ನಾನಗೃಹಗಳು, ನೀರು, ವಿದ್ಯುಚ್ಛಕ್ತಿಯ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತಿಲ್ಲ. ಸದ್ಯದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ. ಅವರ ಅಗತ್ಯಗಳನ್ನು ಹೇಗೆ ಪೂರೈಸುವುದು ಎಂದು ನಮಗೆ ತಿಳಿದಿಲ್ಲ. ಇಲ್ಲಿ ಏನೂ ಇಲ್ಲ ಎಂದು ಹಲಾಸ್ ಹೇಳಿದ್ದಾರೆ.

ನಾವು ಅವರಿಗೆ ಆಹಾರ ಮತ್ತು ನೀರು ನೀಡುವಂತೆ ಸಹಾಯ ಹುಡುಕುತ್ತಿದ್ದೇವೆ. ಅವರು ಏನೂ ಇಲ್ಲದೆ ಬಂದಿದ್ದಾರೆ. ಆದರೆ ಅವರು ಭಿಕ್ಷುಕರಲ್ಲ. ಅವರಲ್ಲಿ ಹಣ ಇದೆ. ಆದರೆ ನಾವು ಬೇಕಿದ್ದ ನೀರು ಆಹಾರ ಎಲ್ಲಿ ಖರೀದಿಸಬಹುದು? ನಮಗೆ ಇನ್ಸುಲಿನ್ ಬೇಕು, ಜನರು ಸಾಯುತ್ತಿದ್ದಾರೆ. ನಾವು ಅವರಿಗೆ ಏನನ್ನೂ ನೀಡಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿಯು ದುರಂತ ಪರಿಸ್ಥಿತಿಯಾಗಿದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿನ ಮತ್ತೊಂದು ಪೋಸ್ಟ್‌ನಲ್ಲಿ UNRWA ಸಿಬ್ಬಂದಿ ಅಜ್ಜಮ್ ಅವರು ಈ ದಿನಗಳಲ್ಲಿ ಗಾಜಾದಲ್ಲಿ  ಬದುಕುವುದು ಮಾತ್ರವಲ್ಲ, ಸ್ನಾನಕ್ಕೆ ಸ್ವಲ್ಪ ನೀರು ಹೊಂದುವುದು ಪಂಚತಾರಾ ಹೋಟೆಲ್‌ನಲ್ಲಿ ಇದ್ದಂತೆ ಮತ್ತು ಫೋನ್‌ನ್ನು ಸಂಪೂರ್ಣವಾಗಿ ಚಾರ್ಜ್ ಮಾಡುವುದು ಒಂದು ಕನಸಾಗಿದೆ ಎಂದು ಹೇಳಿದ್ದಾರೆ.

ಕಳೆದ ಶನಿವಾರ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭಯಾನಕ ದಾಳಿಯಲ್ಲಿ 1,200 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 2,300 ಜನರು ಮೃತಪಟ್ಟಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ.

ಅ.7 ರಿಂದ 4,23,000ಕ್ಕೂ ಹೆಚ್ಚು ಜನರು ಈಗಾಗಲೇ ಸ್ಥಳಾಂತರಗೊಂಡಿದ್ದಾರೆ ಎಂದು UNRWA ಹೇಳಿದೆ. ಅವರಲ್ಲಿ 2,70,000ಕ್ಕೂ ಹೆಚ್ಚು ಜನರು UNRWA ಆಶ್ರಯದಲ್ಲಿ ಆಶ್ರಯ ಪಡೆದಿದ್ದಾರೆ. ಅವರಲ್ಲಿ 50,000 ಗರ್ಭಿಣಿಯರಿದ್ದಾರೆ. ಈ ಪೈಕಿ ಸುಮಾರು 5,500 ಮಹಿಳೆಯರು ತುಂಬು ಗರ್ಭಿಣಿಯರಾಗಿದ್ದಾರೆ ಎಂದು ಹೇಳಿದೆ.

ಇಲ್ಲಿ ಇಂಟರ್‌ನೆಟ್‌ ಲಭ್ಯತೆ ಕನಸಾಗಿದೆ. ಇವು ಅಕ್ಷರಶಃ ನಿದ್ದೆಯಿಲ್ಲದ ರಾತ್ರಿಗಳು, ಸೂರ್ಯೋದಯಕ್ಕೆ ಮೊದಲೇ ಬೃಹತ್ ಬಾಂಬ್ ಸ್ಫೋಟವು ಪ್ರಾರಂಭವಾಗುತ್ತದೆ. ಪ್ರತಿ 10 ಅಥವಾ 15 ನಿಮಿಷಗಳಿಗೊಮ್ಮೆ ಶಬ್ಧಗಳು ಕೇಳಿಸುತ್ತಿದೆ. ಹಗಲು ಹೊತ್ತಿನಲ್ಲಿ ಬಾಂಬ್ ಸ್ಫೋಟವು ನಿಲ್ಲುವುದಿಲ್ಲ ಆದರೆ ಅದು ಕಡಿಮೆ ಪ್ರಮಾಣದ್ದಾಗಿದೆ ಆದರೆ ಕತ್ತಲೆಯ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಬಾಂಬ್‌ ದಾಳಿ ಶಬ್ಧಗಳು ಕೇಳುತ್ತಿದೆ ಎಂದು ಅಜ್ಜಮ್ ಹೇಳಿದ್ದಾರೆ.

ಯುಎನ್ ಎಮರ್ಜೆನ್ಸಿ ರಿಲೀಫ್ ಕೋ ಆರ್ಡಿನೇಟರ್ ಮಾರ್ಟಿನ್ ಗ್ರಿಫಿತ್ಸ್ ಕೂಡ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಭೀಕರತೆಯ ಎಚ್ಚರಿಕೆ ನೀಡಿದ್ದಾರೆ. ನೀರು, ವಿದ್ಯುತ್, ಆಹಾರ ಮತ್ತು ಔಷಧವಿಲ್ಲದೆ ಸಾವಿರಾರು ಮಂದಿ ಸಾಯುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಾಟಾ ಕನ್ಸಲ್ಟೆನ್ಸಿ ನೇಮಕಾತಿ ಹಗರಣ: 16 ಉದ್ಯೋಗಿಗಳ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...