Homeಮುಖಪುಟ'ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ': ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

‘ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ’: ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

- Advertisement -
- Advertisement -

”ನಮ್ಮನ್ನು ಹೆದರಿಸುವ ಪ್ರಯತ್ನ ಮಾಡಬೇಡಿ, ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ” ಎಂದು ಹಮಾಸ್ ಸಶಸ್ತ್ರ ಸಂಘಟನೆ ಹೇಳಿದೆ.​ ದಿಗ್ಬಂಧನಕ್ಕೊಳಗಾದ ಗಾಜಾ ಪಟ್ಟಿಯ ಮೇಲೆ ವಾಯು, ಸಮುದ್ರ ಹಾಗೂ ನೆಲದ ಮೂಲಕ ಮೂರು ಮಾರ್ಗದಲ್ಲಿ ಇಸ್ರೇಲ್ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಹಮಾಸ್​ನ ಮಿಲಿಟರಿ ವಕ್ತಾರ ಅಬು ಒಬೇಡೆ ನಾವು ಯಾವುದಕ್ಕೂ ಹೆದರುವುದಿಲ್ಲ, ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ನ​ ಸಶಸ್ತ್ರ ಸಂಘಟನೆ ಹಮಾಸ್ ನಡುವೆ ಆರಂಭವಾದ ಸಂಘರ್ಷ ಮುಂದುವರೆದಿದೆ. ಎರಡೂ ಕಡೆಯಿಂದ ಸುಮಾರು ನಾಲ್ಕು ಸಾವಿರ ಜನರು ಸಾವನ್ನಪ್ಪಿದ್ದಾರೆ. ಈ ಮಧ್ಯೆ ಇರಾನ್ ವಿದೇಶಾಂಗ ಸಚಿವಾಲಯವು ಇಸ್ರೇಲ್​ನ ಗಾಜಾ ಪಟ್ಟಿಯ ಮೇಲಿನ ವಾಯುದಾಳಿಯನ್ನು ನಿಲ್ಲಿಸಿದರೆ, ಒತ್ತೆಯಾಳಾಗಿದ್ದ ಸುಮಾರು 200 ಜನರನ್ನು ಬಿಡುಗಡೆ ಮಾಡಲು ಹಮಾಸ್ ಸಿದ್ಧವಾಗಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯ ಹೇಳಿದೆ. ಆದರೆ ಇರಾನ್​ನ ಈ ಹೇಳಿಕೆಗೆ ಹಮಾಸ್​ ಯಾವುದೇ ಪ್ರತಕ್ರಿಯೆಯನ್ನು ನೀಡಿಲ್ಲ.

ಅದೇ ಸಮಯದಲ್ಲಿ,ಇರಾನ್​ನ ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಹಮಾಸ್‌ನ್ನು ಉಲ್ಲೇಖಿಸಿ ಮಾತನಾಡಿ, ”ಈ ಯುದ್ಧವನ್ನು ಮುಂದುವರೆಸಲು ನಮಗೆ ಯಾವುದೇ ಸಮಸ್ಯೆಯಿಲ್ಲ. ಇಸ್ರೇಲ್‌ನ್ನು ಎದುರಿಸಲು ಸಾಕಷ್ಟು ಮಿಲಿಟರಿ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಗಾಜಾದಲ್ಲಿ ಇಂತಹ ಹಿಂಸಾತ್ಮಕ ಪ್ರವೃತ್ತಿ ಮುಂದುವರೆದರೆ ಇರಾನ್ ಕೂಡ ಯುದ್ಧಕ್ಕೆ ಧುಮುಕುತ್ತದೆ ಎಂದು ಇರಾನ್ ಇಸ್ರೇಲ್​ಗೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್​ ಮೇಲೆ ದಾಳಿ ನಡೆಸಿತ್ತು, ಎರಡೂ ಕಡೆಗಳು ಸೇರಿ 4 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಯುದ್ಧ ಆರಂಭಕ್ಕೂ ಒಂದು ವಾರದ ಮುಂಚೆ ಅಬು ಒಬೇಡೆಹ್ ಅವರು, ”ನಮ್ಮ ಜನರ ವಿರುದ್ಧ ನೆಲದ ಆಕ್ರಮಣವನ್ನು ಪ್ರಾರಂಭಿಸುವ ಆಕ್ರಮಣದ (ಇಸ್ರೇಲ್) ಬೆದರಿಕೆಯು ನಮ್ಮನ್ನು ಹೆದರಿಸುವುದಿಲ್ಲ ಮತ್ತು ನಾವು ಅದಕ್ಕೆ ಸಿದ್ಧರಿದ್ದೇವೆ” ಎಂದು ಹೇಳಿದ್ದರು.

ಇಸ್ರೇಲಿ ಅಧಿಕಾರಿಗಳ ಪ್ರಕಾರ ಮುಂಜಾನೆ ಹಮಾಸ್ ದಾಳಿಯೊಂದಿಗೆ ಪ್ರಾರಂಭವಾದ ಹಿಂಸಾಚಾರದಲ್ಲಿ ಇಸ್ರೇಲ್‌ನಲ್ಲಿ 1,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಸೇನೆಯ ವಕ್ತಾರ ಡೇನಿಯಲ್ ಹಗಾರಿ ಸೋಮವಾರ ಮುಂಜಾನೆ ಇಸ್ರೇಲ್ ಗಾಜಾದಲ್ಲಿ ಬಂಧಿಯಾಗಿರುವ 199 ಜನರ ಸಂಬಂಧಿಕರನ್ನು ಖಚಿತಪಡಿಸಲು ಮತ್ತು ತಿಳಿಸಲು ಸಾಧ್ಯವಾಯಿತು ಎಂದು ಹೇಳಿದರು.

”ಪರಿಸ್ಥಿತಿಗಳು ಪಕ್ವವಾದಾಗ ನಾವು ವಿದೇಶಿ ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ” ಎಂದು ಅಬು ಒಬೇಡೆ ಹೇಳಿದ್ದಾರೆ.

ಗಾಜಾದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ರೇಲ್‌ನಿಂದ ತೆಗೆದುಕೊಳ್ಳಲಾದ ಕನಿಷ್ಠ 22 ಒತ್ತೆಯಾಳುಗಳನ್ನು ಕೊಲ್ಲಲಾಗಿದೆ ಎಂದು ಅವರು ಹೇಳಿದರು.

ಹಮಾಸ್ ಅಧಿಕಾರಿಗಳ ಪ್ರಕಾರ, ಒಟ್ಟಾರೆಯಾಗಿ, ಅಕ್ಟೋಬರ್ 7 ರಿಂದ ಕಿರಿದಾದ ಪ್ಯಾಲೆಸ್ತೀನ್ ಎನ್‌ಕ್ಲೇವ್‌ನಲ್ಲಿ ಇಸ್ರೇಲಿ ದಾಳಿಗಳಲ್ಲಿ 2,750 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...