Homeಮುಖಪುಟ'ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ': ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

‘ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ’: ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

- Advertisement -
- Advertisement -

”ನಮ್ಮನ್ನು ಹೆದರಿಸುವ ಪ್ರಯತ್ನ ಮಾಡಬೇಡಿ, ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ” ಎಂದು ಹಮಾಸ್ ಸಶಸ್ತ್ರ ಸಂಘಟನೆ ಹೇಳಿದೆ.​ ದಿಗ್ಬಂಧನಕ್ಕೊಳಗಾದ ಗಾಜಾ ಪಟ್ಟಿಯ ಮೇಲೆ ವಾಯು, ಸಮುದ್ರ ಹಾಗೂ ನೆಲದ ಮೂಲಕ ಮೂರು ಮಾರ್ಗದಲ್ಲಿ ಇಸ್ರೇಲ್ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಹಮಾಸ್​ನ ಮಿಲಿಟರಿ ವಕ್ತಾರ ಅಬು ಒಬೇಡೆ ನಾವು ಯಾವುದಕ್ಕೂ ಹೆದರುವುದಿಲ್ಲ, ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ನ​ ಸಶಸ್ತ್ರ ಸಂಘಟನೆ ಹಮಾಸ್ ನಡುವೆ ಆರಂಭವಾದ ಸಂಘರ್ಷ ಮುಂದುವರೆದಿದೆ. ಎರಡೂ ಕಡೆಯಿಂದ ಸುಮಾರು ನಾಲ್ಕು ಸಾವಿರ ಜನರು ಸಾವನ್ನಪ್ಪಿದ್ದಾರೆ. ಈ ಮಧ್ಯೆ ಇರಾನ್ ವಿದೇಶಾಂಗ ಸಚಿವಾಲಯವು ಇಸ್ರೇಲ್​ನ ಗಾಜಾ ಪಟ್ಟಿಯ ಮೇಲಿನ ವಾಯುದಾಳಿಯನ್ನು ನಿಲ್ಲಿಸಿದರೆ, ಒತ್ತೆಯಾಳಾಗಿದ್ದ ಸುಮಾರು 200 ಜನರನ್ನು ಬಿಡುಗಡೆ ಮಾಡಲು ಹಮಾಸ್ ಸಿದ್ಧವಾಗಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯ ಹೇಳಿದೆ. ಆದರೆ ಇರಾನ್​ನ ಈ ಹೇಳಿಕೆಗೆ ಹಮಾಸ್​ ಯಾವುದೇ ಪ್ರತಕ್ರಿಯೆಯನ್ನು ನೀಡಿಲ್ಲ.

ಅದೇ ಸಮಯದಲ್ಲಿ,ಇರಾನ್​ನ ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಹಮಾಸ್‌ನ್ನು ಉಲ್ಲೇಖಿಸಿ ಮಾತನಾಡಿ, ”ಈ ಯುದ್ಧವನ್ನು ಮುಂದುವರೆಸಲು ನಮಗೆ ಯಾವುದೇ ಸಮಸ್ಯೆಯಿಲ್ಲ. ಇಸ್ರೇಲ್‌ನ್ನು ಎದುರಿಸಲು ಸಾಕಷ್ಟು ಮಿಲಿಟರಿ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಗಾಜಾದಲ್ಲಿ ಇಂತಹ ಹಿಂಸಾತ್ಮಕ ಪ್ರವೃತ್ತಿ ಮುಂದುವರೆದರೆ ಇರಾನ್ ಕೂಡ ಯುದ್ಧಕ್ಕೆ ಧುಮುಕುತ್ತದೆ ಎಂದು ಇರಾನ್ ಇಸ್ರೇಲ್​ಗೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್​ ಮೇಲೆ ದಾಳಿ ನಡೆಸಿತ್ತು, ಎರಡೂ ಕಡೆಗಳು ಸೇರಿ 4 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಯುದ್ಧ ಆರಂಭಕ್ಕೂ ಒಂದು ವಾರದ ಮುಂಚೆ ಅಬು ಒಬೇಡೆಹ್ ಅವರು, ”ನಮ್ಮ ಜನರ ವಿರುದ್ಧ ನೆಲದ ಆಕ್ರಮಣವನ್ನು ಪ್ರಾರಂಭಿಸುವ ಆಕ್ರಮಣದ (ಇಸ್ರೇಲ್) ಬೆದರಿಕೆಯು ನಮ್ಮನ್ನು ಹೆದರಿಸುವುದಿಲ್ಲ ಮತ್ತು ನಾವು ಅದಕ್ಕೆ ಸಿದ್ಧರಿದ್ದೇವೆ” ಎಂದು ಹೇಳಿದ್ದರು.

ಇಸ್ರೇಲಿ ಅಧಿಕಾರಿಗಳ ಪ್ರಕಾರ ಮುಂಜಾನೆ ಹಮಾಸ್ ದಾಳಿಯೊಂದಿಗೆ ಪ್ರಾರಂಭವಾದ ಹಿಂಸಾಚಾರದಲ್ಲಿ ಇಸ್ರೇಲ್‌ನಲ್ಲಿ 1,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಸೇನೆಯ ವಕ್ತಾರ ಡೇನಿಯಲ್ ಹಗಾರಿ ಸೋಮವಾರ ಮುಂಜಾನೆ ಇಸ್ರೇಲ್ ಗಾಜಾದಲ್ಲಿ ಬಂಧಿಯಾಗಿರುವ 199 ಜನರ ಸಂಬಂಧಿಕರನ್ನು ಖಚಿತಪಡಿಸಲು ಮತ್ತು ತಿಳಿಸಲು ಸಾಧ್ಯವಾಯಿತು ಎಂದು ಹೇಳಿದರು.

”ಪರಿಸ್ಥಿತಿಗಳು ಪಕ್ವವಾದಾಗ ನಾವು ವಿದೇಶಿ ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ” ಎಂದು ಅಬು ಒಬೇಡೆ ಹೇಳಿದ್ದಾರೆ.

ಗಾಜಾದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ರೇಲ್‌ನಿಂದ ತೆಗೆದುಕೊಳ್ಳಲಾದ ಕನಿಷ್ಠ 22 ಒತ್ತೆಯಾಳುಗಳನ್ನು ಕೊಲ್ಲಲಾಗಿದೆ ಎಂದು ಅವರು ಹೇಳಿದರು.

ಹಮಾಸ್ ಅಧಿಕಾರಿಗಳ ಪ್ರಕಾರ, ಒಟ್ಟಾರೆಯಾಗಿ, ಅಕ್ಟೋಬರ್ 7 ರಿಂದ ಕಿರಿದಾದ ಪ್ಯಾಲೆಸ್ತೀನ್ ಎನ್‌ಕ್ಲೇವ್‌ನಲ್ಲಿ ಇಸ್ರೇಲಿ ದಾಳಿಗಳಲ್ಲಿ 2,750 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...