Homeಕರ್ನಾಟಕಮಂಗಳೂರು: ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ; ಶರಣ್ ಪಂಪ್‌ವೆಲ್ ಕರೆ

ಮಂಗಳೂರು: ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ; ಶರಣ್ ಪಂಪ್‌ವೆಲ್ ಕರೆ

- Advertisement -
- Advertisement -

ಮಂಗಳೂರಿನ ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನ ಸೇರಿದಂತೆ ಜಿಲ್ಲೆಯ ಎಲ್ಲಾ ದೇವಸ್ಥಾನಗಳು ದತ್ತಿ ಇಲಾಖೆಯ ಕಾನೂನಿಗೆ ಒಳಪಡುತ್ತಿದ್ದು, ಜಾತ್ರಾ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ ದತ್ತನಗರ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾಡಳಿತ ಮಂಗಳಾದೇವಿ ದೇವಸ್ಥಾನದಲ್ಲಿ 2ನೇ ಬಾರಿ ಏಲಂ ಕರೆದು ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದ್ದು ಸರಿಯಲ್ಲ. ದತ್ತಿ ಇಲಾಖೆಯ ಕಾನೂನಿನ ಪ್ರಕಾರ ದೇವಸ್ಥಾನಗಳ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಬಡ ಹಿಂದೂ ವ್ಯಾಪಾರಸ್ಥರು ಈ ಜಾತ್ರೆ ವ್ಯಾಪಾರ ನಂಬಿ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡುವಂತೆ ಮಂಗಳಾದೇವಿ ದೇವಸ್ಥಾನಕ್ಕೆ ಬರುವ ಭಕ್ತರಲ್ಲಿ ವಿನಂತಿಸುವುದಾಗಿ ಅವರು ಹೇಳಿದ್ದಾರೆ.

ಬಡ ಮುಸ್ಲಿಂ ವ್ಯಾಪಾರಿಗಳಿಗೆ ನಮ್ಮ ವಿರೋಧವಿಲ್ಲ. ಕಾರ್ಮಿಕ ಕ್ಷೇತ್ರ ನಮ್ಮ ಹಕ್ಕು. ದತ್ತಿ ಇಲಾಖೆ ಕಾನೂನು ಅನ್ವಯ ರಥಬೀದಿಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ರಥಬೀದಿ ಬಿಟ್ಟು ಬೇರೆ ಕಡೆ ವ್ಯಾಪಾರ ಮಾಡಿದರೆ ಅಭ್ಯಂತರ ಇಲ್ಲ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಕಾರ್ಯಕರ್ತರು, ಸೋಮವಾರ ಮಧ್ಯಾಹ್ನ ಹಿಂದು ವ್ಯಾಪಾರಸ್ಥರು ನಡೆಸುವ ಅಂಗಡಿಗಳಿಗೆ ಕೇಸರಿ ಪತಾಕೆಯನ್ನು ಕಟ್ಟಿದ್ದಾರೆ.

ಇದೇ ವೇಳೆ ಮಾತನಾಡಿದ ಶರಣ್ ಪಂಪ್‌ವೆಲ್, ”ಇವತ್ತು ಎಲ್ಲಾ ಅಂಗಡಿಗಳಿಗೆ ಕೇಸರಿ ಭಗವಾಧ್ವಜ ಹಾಕಿದ್ದೇವೆ. ಹಿಂದೂಗಳ ಅಂಗಡಿಯೆಂದು ಭಕ್ತರಿಗೆ ಗೊತ್ತಾಗಬೇಕು ಎಂದು ಭಗವಧ್ವಜ ಕಟ್ಟುತ್ತಿದ್ದೇವೆ. ಹಿಂದುಗಳು, ಹಿಂದೂಗಳ ಅಂಗಡಿಯಲ್ಲೇ ವ್ಯಾಪಾರ ಮಾಡಬೇಕು, ಹಿಂದೂಗಳ ದೇವಸ್ಥಾನದಲ್ಲಿ ಹಿಂದುಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು” ಎಂದು ಹೇಳಿದರು.

”ಮಂಗಳಾದೇವಿ ದೇವಸ್ಥಾನದ ದಸರಾ ಸಂದರ್ಭದಲ್ಲಿ ಹಿಂದುಗಳಿಗೆ ಮುತ್ರ ವ್ಯಾಪಾರಕ್ಕೆ ಅವಕಾಶ ಕೊಡಬೇಕು ಎಂಬ ಬೇಡಿಕೆಯನ್ನು ಸನಾತನ ಹಿಂದು ವ್ಯಾಪಾರಸ್ಥರ ಸಂಘದವರು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು. ನಮ್ಮ ಈ ರೀತಿಯ ಬೇಡಿಕೆ `ಕಳೆದ ಎರಡು ಮೂರು ವರ್ಷಗಳಿಂದ ಇದೆ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ಪ್ರಕಾರ ದೇವಸ್ಥಾನ, ಜಾತ್ರೆಯ ಸಂತೆ ವ್ಯಾಪಾರ ಹಿಂದೂಗಳಿಗೆ ಕೊಡಬೇಕು. ಎಂಬ ನಿಯಮ ಇದೆ. ಇದನ್ನೀಗ ಮಂಗಳಾದೇವಿ ದೇವಸ್ಥಾನದಲ್ಲಿ ಮಾಡಿದ್ದೇವೆ. ಮುಂದೆ ಎಲ್ಲಾ ದೇವಸ್ಥಾನಗಳಲ್ಲಿ ಇದೇ ನೀತಿ ಮಾಡಬೇಕು” ಎಂದು ಹೇಳಿದರು.

”ಕಮ್ಯುನಿಸ್ಟ್ ನವರು ಮುಸಲ್ಮಾನ ಬಡ ವ್ಯಾಪಾರಿಗಳಿಗೆ ಅವಕಾಶ ನೀಡಬೇಕು ಎನ್ನುತ್ತಾರೆ, ನಾವು ಮುಸಲ್ಮಾನ, ವ್ಯಾಪಾರಿಗಳ ವಿರೋಧಿಗಳಲ್ಲ. ನಮ್ಮ ದೇವಸ್ಥಾನದ ಸುತ್ತ ಮುತ್ತ ಹಿಂದುಗಳಿಗೆ ಅವಕಾಶ ಕೊಡಿ ಎಂದು ಕೇಳುತ್ತಿದ್ದೇವೆ. ಆಸುಪಾಸಿನ ರಸ್ತೆಯ ಎಲ್ಲಿ ಬೇಕಾದರೂ ಅನ್ಯಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಕೂಡಿ, ನಮ್ಮ ಅಭ್ಯಂತರ ಇಲ್ಲ. ಎಲ್ಲಿ ದೇವಸ್ಥಾನಕ್ಕೆ ಜನ ಬರುತ್ತಾರೆ, ಎಲ್ಲಿ ದೇವಸ್ಥಾನದ ರಥ ಹೋಗುತ್ತೆ ಅಲ್ಲಿ ಹಿಂದುಗಳಿಗೆ ಅವಕಾಶ ಕೊಡಬೇಕು” ಎಂಬುದು ನಮ್ಮ ನಿಲುವು” ಎಂದರು.

”ಒಮ್ಮೆ ಹರಾಜು ಪ್ರಕ್ರಿಯೆ ಆದ ಬಳಿಕ ಮಹಾನಗರ ಪಾಲಿಕೆ ಮತ್ತೆ ಹರಾಜು ಪ್ರಕ್ರಿಯೆ ನಡೆಸಿದೆ ಒಂದು ಬಾರಿ ಹರಾಜು ಆದ ಬಳಿಕ ಎರಡನೇ ಹರಾಜಿಗೆ ಅವಕಾಶ ಇರುವುದಿಲ್ಲ. ಇದು ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನ, ಕಾನೂನು ಪ್ರಕಾರ ಹಿಂದುಯೇತರರಿಗೆ ಅವಕಾಶ ಇಲ್ಲ. ಯಾವ ರೀತಿಯಲ್ಲಿ ಎರಡನೇ ಸಲ ಹರಾಜು ನಡೆಸಿ ಅನ್ಯರಿಗೆ ಅವಕಾಶ ಕೊಟ್ಟರು ಅಂತ ಗೊತ್ತಿಲ್ಲ ನಾವು ಇದನ್ನ ವಿರೋಧ ಮಾಡ್ತೀವಿ” ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು: ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...