Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವಿನ ಯುದ್ಧದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ತಪ್ಪು ಮಾಹಿತಿ, ಸುಳ್ಳು ಸುದ್ದಿಗಳು, ಪ್ಯಾಲೇಸ್ತೀನಿಯನ್ ವಿರೋಧಿ ಮತ್ತು ಇಸ್ಲಾಮೋಫೋಬಿಕ್‌ ತಪ್ಪು ಮಾಹಿತಿಯು ವೈರಲ್‌ ಆಗುತ್ತಿರುತ್ತದೆ. ಇದರಲ್ಲಿ ಹೆಚ್ಚಿನವು ಬಲಪಂಥೀಯ ಖಾತೆಗಳಿಂದ ಹಂಚಿಕೆಯಾಗಿದೆ ಎಂಬುವುದು ವಿಶ್ಲೇಷಣೆಯಲ್ಲಿ ಬಯಲಾಗಿದೆ.

ದಕ್ಷಿಣ ಇಸ್ರೇಲ್‌ನ ಮೇಲೆ ಹಮಾಸ್‌ನ ಅ.7ರಂದು ದಾಳಿ ಮಾಡಿದ ಬಳಿಕ ಸಾಮಾಜಿಕ ಮಾದ್ಯಮಗಳಲ್ಲಿ ತುಂಬಿರುವ ತಪ್ಪು ಮಾಹಿತಿಯಲ್ಲಿ ಬಹಳಷ್ಟು ಭಾರತದಿಂದ ಹೊರಗಿರುವ ಬಲಪಂಥೀಯರ ಖಾತೆಗಳಿಂದ ಉತ್ಪಾದಿಸಲ್ಪಟ್ಟಿದೆ ಮತ್ತು ವೈರಲ್‌ ಆಗಿದೆ.

ಕೆಲವು ಹಮಾಸ್ ಸಶಸ್ತ್ರದಾರಿಗಳ ಗುಂಪು ಯಹೂದಿ ಮಗುವನ್ನು ಅಪಹರಿಸುವುದು ಮತ್ತು ಟ್ರಕ್‌ನ ಹಿಂಭಾಗದಲ್ಲಿ ಚಿಕ್ಕ ಬಾಲಕನ ಶಿರಚ್ಛೇದವನ್ನು ಮಾಡುವುದು ವೈರಲ್‌ ಆಗಿತ್ತು. ಇದನ್ನು ಸಾವಿರಾರು ಮಂದಿ ಟ್ವೀಟ್‌ ಮಾಡಿದ್ದರು. ಆದರೆ ಇದು ಸುಳ್ಳು ಎನ್ನುವುದು ಫ್ಯಾಕ್ಟ್‌ ಚೆಕ್‌ ವೇಳೆ ಬಯಲಾಗಿತ್ತು.

BOOM ಭಾರತದ ಅತ್ಯಂತ ಹೆಸರುವಾಸಿ ಫ್ಯಾಕ್ಟ್‌ ಸಂಸ್ಥೆಯಾಗಿದೆ. ಇದು ಭಾರತದ ಎಕ್ಸ್‌ ಬಳಕೆದಾರರ ಹೆಚ್ಚಿನ ಸುಳ್ಳು ಮಾಹಿತಿ ಹಂಚಿಕೆಯನ್ನು ಬಯಲು ಮಾಡಿದೆ.

BOOM ಪ್ರಕಾರ, ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರಭಾವಿಗಳು ಹೆಚ್ಚಾಗಿ ಪ್ಯಾಲೆಸ್ತೀನ್‌ ಬಗ್ಗೆ ನೆಗೆಟಿವ್‌ ಮಾಹಿತಿ ವೈರಲ್‌ ಮಾಡುತ್ತಿದ್ದು, ಇಸ್ರೇಲ್‌ನ್ನು ಬೆಂಬಲಿಸುತ್ತಿದ್ದಾರೆ. ಅವರು ಪ್ಯಾಲೆಸ್ತೀನಿಯನ್ನರನ್ನು ಕ್ರೂರವಾಗಿ ಪ್ರದರ್ಶಿಸಲು ಪ್ರಯತ್ನಿಸಿದ್ದಾರೆ.

ಉದಾಹರಣೆಗೆ, ಖಾತೆಯೊಂದು ವಿಡಿಯೋವನ್ನು ಹಂಚಿಕೊಂಡಿತ್ತು. ಅದು ಪ್ಯಾಲೆಸ್ತೀನಿ ಹೋರಾಟಗಾರರು  ಲೈಂಗಿಕ ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆಂದು ಡಜನ್‌ಗಟ್ಟಲೆ ಯುವತಿಯರನ್ನು ತೋರಿಸುತ್ತದೆ. ಆದರೆ ವಿಡಿಯೋ ಜೆರುಸಲೆಮ್‌ನ ಶಾಲೆಯ ಪ್ರವಾಸದ ವಿಡಿಯೋವಾಗಿತ್ತು. ವಿಡಿಯೋದಲ್ಲಿ ಯುವತಿಯರು ಮೊಬೈಲ್‌ ಬಳಸುವುದು ಕೂಡ ಕಂಡು ಬಂದಿತ್ತು. ವೀಡಿಯೊವನ್ನು ಸಾವಿರಾರು ಮಂದಿ ರೀಟ್ವೀಟ್‌ ಮಾಡಿದ್ದಾರೆ. ವಿಡಿಯೋ ಕನಿಷ್ಠ 6 ಮಿಲಿಯನ್ ಇಂಪ್ರೆಶನ್‌ಗಳನ್ನು ಗಳಿಸಿತ್ತು. ವಿಡಿಯೋವನ್ನು ಹಂಚಿಕೊಳ್ಳುವ ಖಾತೆಗಳಲ್ಲಿ ಹೆಚ್ಚಿನವು ಭಾರತದ್ದಾಗಿತ್ತು.

ಮತ್ತೊಂದು ಉದಾಹರಣೆಯಲ್ಲಿ, ಹಮಾಸ್ ಸಶಸ್ತ್ರ ಗುಂಪು ಯಹೂದಿ ಮಗುವನ್ನು ಅಪಹರಿಸುತ್ತಿದ್ದಾರೆ ಎಂದು ತಪ್ಪಾಗಿ ತೋರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊ ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ತಪ್ಪುದಾರಿಗೆಳೆಯುವ ವಿಡಿಯೋವನ್ನು ಅತಿಹೆಚ್ಚು ಭಾರತೀಯ ಖಾತೆಗಳಿಂದ ಹಂಚಿಕೊಳ್ಳಲಾಗಿದೆ. ಈ ಕುರಿತ ಟ್ವೀಟ್‌ಗಳು 3 ಮಿಲಿಯನ್‌ಗಿಂತಲೂ ಹೆಚ್ಚು ಇಂಪ್ರೆಶನ್‌ಗಳನ್ನು ಪಡೆದಿವೆ. ಆದರೆ ವೀಡಿಯೊ ಸೆಪ್ಟೆಂಬರ್‌ನದ್ದಾಗಿದೆ ಮತ್ತು ವಿಡಿಯೋಗೆ ಮತ್ತು ಗಾಜಾಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಲಾಗಿದೆ.

ಈ ಸುಳ್ಳು ವಿಡಿಯೋಗಳನ್ನು ಹಂಚಿಕೊಳ್ಳುವ ಅನೇಕ ಖಾತೆಗಳು ಎಕ್ಸ್‌ನಲ್ಲಿ ಮುಸ್ಲಿಂ ವಿರೋಧಿ ಕಾಮೆಂಟ್‌ಗಳನ್ನು ಹೆಚ್ಚಾಗಿ ಪೋಸ್ಟ್ ಮಾಡಿದೆ. ಹಮಾಸ್‌ನಿಂದ ಬಾಲಕನ ಶಿರಚ್ಛೇದನದ ಸುಳ್ಳು ವೀಡಿಯೊವನ್ನು ಹಂಚಿಕೊಂಡಿರುವ ಶ್ರೀ ಸಿನ್ಹಾಎಂಬ ಖಾತೆಯು ಅದೇ ಪೋಸ್ಟ್‌ನಲ್ಲಿ #IslamIsTheProblem ಎಂಬ ಹ್ಯಾಶ್‌ಟ್ಯಾಗ್‌ನ್ನು ಸೇರಿಸಿದೆ.

ಫೆಲೆಸ್ತೀನಿಯರು ಲೈಂಗಿಕ ಗುಲಾಮರನ್ನಾಗಿಸಲು ಯುವತಿಯರ ಅಪಹರಣ ಎಂಬ ಸುಳ್ಳು ಟ್ವೀಟ್ ಹಂಚಿಕೊಂಡ ಮತ್ತೊಂದು ಖಾತೆಯು ಈ ಹಿಂದೆ ‘ಒಂದೇ ವ್ಯತ್ಯಾಸವೆಂದರೆ ಮುಸ್ಲಿಂ ಹುಡುಗಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡಾಗ ಅವರು ಎಂದೆಂದಿಗೂ ಸಂತೋಷದಿಂದ ಬದುಕುತ್ತಾರೆ. ಆದರೆ ಹಿಂದೂ ಹುಡುಗಿಯರು ಇಸ್ಲಾಂಗೆ ಮತಾಂತರಗೊಂಡಾಗ ಅವರು ಸೂಟ್‌ಕೇಸ್‌ ಅಥವಾ ಫ್ರಿಡ್ಜ್‌ನಲ್ಲಿ ಕೊನೆಗೊಳ್ಳುತ್ತಾರೆ ಎಂದು ಬರೆದಿತ್ತು.

ನಿವೃತ್ತ ಭಾರತೀಯ ಸೈನಿಕನಿಗೆ ಸೇರಿದ್ದೆಂದು ಹೇಳಲಾದ ಒಂದು ಭಾರತೀಯ ಖಾತೆಯು, ಇಸ್ರೇಲ್ ಪ್ಯಾಲೆಸ್ತೀನನ್ನು ಗ್ರಹದಿಂದಲೇ ಕೊನೆಗೊಳಿಸಬೇಕು ಎಂದು ಹೇಳಿದೆ.

ಭಾರತವು ಇಸ್ಲಾಮೋಫೋಬಿಯಾ ಸಮಸ್ಯೆಯನ್ನು ಹೊಂದಿದೆ ಎಂಬುದು ರಹಸ್ಯವಲ್ಲ, ಇದು ಪ್ರಧಾನಿ ನರೇಂದ್ರ ಮೋದಿ ಆಳ್ವಿಕೆ ಬಳಿಕ  ಹೆಚ್ಚಾಗಿದೆ. ಆಸ್ಟ್ರೇಲಿಯಾ ಮೂಲದ ಇಸ್ಲಾಮಿಕ್ ಕೌನ್ಸಿಲ್ ಆಫ್ ವಿಕ್ಟೋರಿಯಾದ ವರದಿಯ ಪ್ರಕಾರ, ಎಲ್ಲಾ ಇಸ್ಲಾಮೋಫೋಬಿಕ್ ಟ್ವೀಟ್‌ಗಳಲ್ಲಿ ಹೆಚ್ಚಿನದನ್ನು ಭಾರತದಲ್ಲಿ ಕಾಣಬಹುದು ಎಂದು ಹೇಳಿದೆ.

ಸತ್ಯ-ಪರಿಶೀಲನಾ ವೆಬ್‌ಸೈಟ್ ಆಲ್ಟ್‌ನ್ಯೂಸ್‌ನ ಸಹ-ಸಂಸ್ಥಾಪಕ ಮತ್ತು ಸಂಪಾದಕ ಪ್ರತೀಕ್ ಸಿನ್ಹಾ ಈ ಕುರಿತು ಟ್ವೀಟ್ ಮಾಡಿದ್ದು, ಭಾರತೀಯ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಮತ್ತು ಸಾಮಾಜಿಕ ಮಾದ್ಯಮಗಳಲ್ಲಿ ಇಸ್ರೇಲ್‌ಗೆ ಬೆಂಬಲವಾಗಿ ತನ್ನ ತಪ್ಪು ಮಾಹಿತಿ ರಫ್ತು ಮಾಡಲಾಗುತ್ತಿದೆ. ಜಗತ್ತು ಈಗ ಭಾರತೀಯ ಬಲಪಂಥೀಯರು ಭಾರತವನ್ನು ಹೇಗೆ ವಿಶ್ವದ ತಪ್ಪು ಮಾಹಿತಿಯ ರಾಜಧಾನಿಯನ್ನಾಗಿ ಮಾಡಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವಾರ ಇಸ್ರೇಲ್ ಮೇಲೆ ಹಮಾಸ್ ದಾಳಿಯ ನಂತರ ಎಕ್ಸ್‌ನಲ್ಲಿ ತಪ್ಪು ಮಾಹಿತಿಯ ಪ್ರವಾಹ ಹರಿದಿದೆ. ಈ ಬಗ್ಗೆ ಯುರೋಪಿಯನ್ ಒಕ್ಕೂಟವು ಟ್ವಿಟ್ಟರ್‌ನ ಎಲೆನ್‌ ಮಸ್ಕ್‌ಗೆ ಎಚ್ಚರಿಕೆಯನ್ನು ಕೂಡ ಕಳುಹಿಸಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...