Homeಕರ್ನಾಟಕಪಂಚರಾಜ್ಯ ಚುನಾವಣೆಯ ಸೋಲಿನ ಭಯದಿಂದ ಮೋದಿ ಸರ್ಕಾರ ಐಟಿ ದಾಳಿ ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

ಪಂಚರಾಜ್ಯ ಚುನಾವಣೆಯ ಸೋಲಿನ ಭಯದಿಂದ ಮೋದಿ ಸರ್ಕಾರ ಐಟಿ ದಾಳಿ ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯ ಮತ್ತು ಶ್ರೀಮಂತ ಉದ್ಯಮಿ – ಗುತ್ತಿಗೆದಾರರನ್ನು ಬ್ಲಾಕ್ ಮೇಲ್ ಮಾಡುವ ದುರುದ್ದೇಶದ ಕಾರಣಕ್ಕಾಗಿಯೇ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಐಟಿ- ಇಡಿ ದಾಳಿಗಳನ್ನು ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ”ತಮ್ಮ ದುರುದ್ದೇಶ ಮತ್ತು ಭ್ರಷ್ಟತೆಯನ್ನು ಮುಚ್ಚಿಕೊಳ್ಳುವುದಕ್ಕಾಗಿಯೇ ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿಗಳು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ, ಈ ಬಗ್ಗೆ ಯಾವುದಾದರೂ ಪುರಾವೆಗಳಿದ್ದರೆ ಕಾನೂನು ಪ್ರಕಾರ ಕ್ರಮಕೈಗೊಳ್ಳಲು ಅವರು ಸ್ವತಂತ್ರರಿದ್ದಾರೆ. ತೆರಿಗೆ ವಂಚಕರ ವಿರುದ್ಧದ ಕ್ರಮಗಳನ್ನು ನಾವು ಸ್ವಾಗತಿಸುತ್ತೇವೆ” ಎಂದಿದ್ದಾರೆ.

ಗುತ್ತಿಗೆದಾರರು ಖೊಟ್ಟಿ ಖರೀದಿ ರಸೀದಿಗಳು ಮತ್ತು ಉಪಗುತ್ತಿಗೆದಾರರಿಂದ ಅಪ್ರಾಮಾಣಿಕವಾದ ಖರ್ಚುವೆಚ್ಚದ ದಾಖಲೆಗಳ ಮೂಲಕ ಅದಾಯವನ್ನು ಕಡಿಮೆಗೊಳಿಸಿ ತೆರಿಗೆ ವಂಚನೆ ಮಾಡಿರುವುದು ದಾಳಿಯಲ್ಲಿ ಪತ್ತೆಯಾಗಿದೆ ಎಂದು ಐಟಿ ಇಲಾಖೆಯೇ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಯಾವುದೇ ರಾಜಕೀಯ ಪಕ್ಷದ ಜೊತೆಗಿನ ವ್ಯವಹಾರದ ಬಗ್ಗೆ ಉಲ್ಲೇಖವನ್ನು ಇಲಾಖೆಯೇ ಮಾಡದೆ ಇರುವಾಗ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎದೆ ಬಡಿದುಕೊಂಡು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವುದು ಯಾಕೆ? ಇವರದ್ದೇ ಸರ್ಕಾರದ ವರಮಾನ ತೆರಿಗೆ ಇಲಾಖೆಯ ಮೇಲೆಯೂ ಇವರಿಗೆ ನಂಬಿಕೆ ಇಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಪಂಚರಾಜ್ಯಗಳಲ್ಲಿ ಮಾತ್ರವಲ್ಲ ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯ ಸೋಲು ಬಹುತೇಕ ಖಾತರಿಯಾಗಿರುವ ಕಾರಣ ಬಿಜೆಪಿಗೆ ಹಿಂದಿನಂತೆ ಹಣ ಸಂಗ್ರಹವಾಗುತ್ತಿಲ್ಲ, ಕರ್ನಾಟಕದಲ್ಲಿ 40% ಕಮಿಷನ್ ನ ಬಹುದೊಡ್ಡ ಮೂಲ ಕೂಡಾ ನಿಂತುಹೋಗಿದೆ. ಇದಕ್ಕಾಗಿ ಶ್ರೀಮಂತ ಉದ್ಯಮಿಗಳು ಮತ್ತು ಗುತ್ತಿಗದಾರರನ್ನು ಬ್ಲಾಕ್ ಮೇಲ್ ಮಾಡಿ ಬೆದರಿಸಿ ಹಣ ವಸೂಲಿ ಮಾಡಲು ಐಡಿ-ಇಡಿ ದಾಳಿ ನಡೆಸಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಶತಸಿದ್ದ. ತನ್ನ ಸೋಲಿಗೆ ಕಾರಣ ಹೇಳಲು ಬಿಜೆಪಿ ಈಗಲೇ ಕುಂಟುನೆಪಗಳನ್ನು ಹುಡುಕುತ್ತಿದೆ. ಕಾಂಗ್ರೆಸ್ ಪಕ್ಷದ ದುಡ್ಡಿನಬಲದಿಂದಾಗಿ ನಾವು ಸೋತುಹೋದೆವು ಎಂದು ಚುನಾವಣೆಯ ಮರುದಿನ ಬಿಜೆಪಿಯಿಂದ ಹೇಳಿಕೆ ಬಂದರೆ ಯಾರೂ ಆಶ್ಚರ್ಯಪಡಬೇಕಾಗಿಲ್ಲ” ಎಂದಿದ್ದಾರೆ.

ತಮ್ಮ ಚುನಾವಣಾ ರಾಜಕೀಯಕ್ಕಾಗಿ ಯಾವ ಪಕ್ಷ ಹಣ ದೋಚುವುದರಲ್ಲಿ ತೊಡಗಿದೆ ಎನ್ನುವುದು ಚುನಾವಣಾ ಬಾಂಡ್ ಗಳ ಮೂಲಕ ಕೇಂದ್ರ ಬಿಜೆಪಿ ಸಂಗ್ರಹಿಸಿದ ಹಣದ ವಿವರವೇ ಸಾಕ್ಷಿಯಾಗಿದೆ. ಮಾರ್ಚ್‌ 2018ರಿಂದ ಜನವರಿ 2023ರ ವರೆಗಿನ ಅವಧಿಯಲ್ಲಿ 12,008 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಗಳು ಮಾರಾಟವಾಗಿದ್ದು ಅದರಲ್ಲಿ ಬಿಜೆಪಿಗೆ ಸೇರಿರುವ ಬಾಂಡ್ ಗಳ ಒಟ್ಟು ಮೌಲ್ಯ 5272 ಕೋಟಿ ರೂಪಾಯಿ. ಈ ಹಣವನ್ನು ಉದ್ಯಮಿಗಳು ಸ್ವಯಿಚ್ಚೆಯಿಂದ ನೀಡಿದರೇ? ಇಲ್ಲವೇ ಬ್ಲಾಕ್ ಮೇಲ್ ನಡೆಸಲಾಗಿತ್ತೇ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹೆಚ್‌ಡಿಕೆ, ನಿಖಿಲ್‌ರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಉಚ್ಚಾಟಿಸಿದ್ದಾರೆ ಎಂಬುದು ಸುಳ್ಳು

ಕೋಟ್ಯಂತರ ರೂಪಾಯಿ ಲಂಚ ಹೊಡೆಯುತ್ತಿದ್ದಾಗಲೆ ಸಿಕ್ಕಿಬಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಜಾಮೀನು ಮೇಲೆ ಜೈಲಿನಿಂದ ಬಿಡುಗಡೆಯಾದಾಗ ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ನಡೆಸಿದ್ದ ರಾಜ್ಯ ಬಿಜೆಪಿ ನಾಯಕರು ಈಗ ಯಾವುದೋ ಖಾಸಗಿ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಈ ನೈತಿಕತೆ ಬಿಜೆಪಿಗೆ ಇದೆಯೇ?” ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿನ ಭ್ರಷ್ಟಾಚಾರದ ಇತಿಹಾಸವನ್ನು ತಿರುವಿಹಾಕಿದರೆ ಪುಟಪುಟಗಳಲ್ಲಿಯೂ ಬಿಜೆಪಿ ನಾಯಕರ ಮುಖಾರವಿಂದಗಳನ್ನು ಕಾಣಬಹುದಾಗಿದೆ. ಮಾಜಿ ಮುಖ್ಯಮಂತ್ರಿಗಳಾಧ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಮಾಜಿ ಶಾಸಕ ಸಂಪಂಗಿಯಿಂದ ಹಿಡಿದು ಇತ್ತೀಚಿನ ಮಾಡಾಳು ವಿರೂಪಾಕ್ಷಪ್ಪನವರ ವರೆಗೆ ರಾಜ್ಯ ಬಿಜೆಪಿ ನಾಯಕರೆಲ್ಲರೂ ಭ‍್ರಷ್ಟಾಚಾರದ ಆರೋಪದಲ್ಲಿ ಜೈಲು ಸೇರಿದವರಾಗಿದ್ದಾರೆ. ಇವರು ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ, ನಗೆಪಾಟಲಿಗೀಡಾಗಿದ್ದಾರೆ” ಎಂದು ಕಿಚಾಯಿಸಿದ್ದಾರೆ.

”ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮುನಿರತ್ನ, ಡಾ.ಸುಧಾಕರ್ ಮತ್ತು ಬಿ.ಸಿ.ಪಾಟೀಲ್ ಮೇಲೆ 40% ಕಮಿಷನ್ ಆರೋಪ ಇದೆ. ಬಿಟ್ ಕಾಯಿನ್ ಹಗರಣದದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಕೇಳಿಬಂದಿದೆ. ಪಿಎಸ್ ಐ ನೇಮಕಾತಿ ಹಗರಣದಲ್ಲಿ ಡಾ.ಅಶ್ವತನಾರಾಯಣ, ಬಿ.ವೈ.ವಿಜಯೇಂದ್ರ ಮತ್ತು ಆರಗ ಜ್ಞಾನೇಂದ್ರ ಷಾಮೀಲಾಗಿರುವ ಆರೋಪ ಎದುರಿಸುತ್ತಿದ್ದಾರೆ. ಚುನಾವಣಾ ಟಿಕೆಟ್ ವಂಚನೆ ಪ್ರಕರಣದಲ್ಲಿ ಬಿ.ಎಲ್.ಸಂತೋಷ್, ಸುನೀಲ್ ಕುಮಾರ್ ಕಾರ್ಕಳ ಮತ್ತು ಸಿ.ಟಿ.ರವಿ ಅವರ ಹೆಸರುಗಳನ್ನು ಆರೋಪಿಗಳೇ ಉಲ್ಲೇಖಿಸಿದ್ದಾರೆ. ಇವರೆಲ್ಲರೂ ಸೇರಿ ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ” ಎಂದಿದ್ದಾರೆ.

”ಗುತ್ತಿಗೆದಾರರೊಬ್ಬರನ್ನು ಹಣಕ್ಕಾಗಿ ಪೀಡಿಸಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಮತ್ತು ಭ್ರಷ್ಟಾಚಾರದ ಆರೋಪದ ಮೇಲೆಯೇ ಜೈಲಿಗೆ ಹೋಗಿ ಬಂದಿರುವ ಬಿ.ಎಸ್.ಯಡಿಯೂರಪ್ಪನವರು ಮತ್ತು ಅವರ ಮಗ ಕೂಡಾ ಸತ್ಯಹರಿಶ್ಚಂದ್ರನಂತೆ ಮಾತನಾಡುತ್ತಿರುವುದು ತಮಾಷೆಯಾಗಿ ಕಾಣುತ್ತಿದೆ” ಎಂದು ಟೀಕೆ ಮಾಡಿದ್ದಾರೆ.

”ಕಾರ್ಪೊರೆಟ್‌ ಭ್ರಷ್ಟಾಚಾರದ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಲೂಟಿ ಹೊಡೆದು ದೇಶವನ್ನೇ ಅದಾನಿ ಕೈಗೆ ಒತ್ತೆಯಿಟ್ಟಿರುವ ಈ ಬಿಜೆಪಿಗರು ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದೊಡ್ಡ ಕುಚೋದ್ಯ! ಅದಾನಿ ಎನ್ನುವ ಉದ್ಯಮಿಯ ಒಂದೊಂದು ಹಗರಣಗಳು ಲಕ್ಷ ಕೋಟಿಗಳನ್ನು ದಾಟುತ್ತಿವೆ! ಸಾವಿರ ಕೋಟಿಗಳ ಅವ್ಯವಹಾರಕ್ಕೆ ಲೆಕ್ಕವೇ ಇಲ್ಲವಾಗಿದೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ಕೇಳಿರುವ ನೂರು ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಹೇಳಲು ಬಿಜೆಪಿಯ ನಾಯಕರಿಗೆ, ವಿಶೇಷವಾಗಿ ಮೋದಿಯವರಿಗೆ ಈವರೆಗೆ ಸಾಧ್ಯವಾಗಿಲ್ಲ” ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...