Homeಮುಖಪುಟಮಾಜಿ IPS ಬೋರ್ವಾಂಕರ್ ಆತ್ಮಚರಿತ್ರೆಯಲ್ಲಿ ಬರೆದ ಅಂಶ ಸೃಷ್ಟಿಸಿದ ವಿವಾದ

ಮಾಜಿ IPS ಬೋರ್ವಾಂಕರ್ ಆತ್ಮಚರಿತ್ರೆಯಲ್ಲಿ ಬರೆದ ಅಂಶ ಸೃಷ್ಟಿಸಿದ ವಿವಾದ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಐಪಿಎಸ್‌ ಅಧಿಕಾರಿ ಮೀರಾನ್ ಬೋರ್ವಾಂಕರ್, ಪೊಲೀಸ್ ಇಲಾಖೆಗೆ ಸಂಬಂಧಿಸಿದ ಜಮೀನು ಹರಾಜು ಕುರಿತು ತಮ್ಮ ಪುಸ್ತಕದಲ್ಲಿ ಬರೆದುಕೊಂಡಿದ್ದು, ಪುಣೆಯ ಜಿಲ್ಲಾಉಸ್ತುವಾರಿ ಸಚಿವರು ‘ದಾದಾ’ ಹರಾಜು ಪ್ರಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಬರೆದಿದ್ದರು. ಇದೀಗ ಪ್ರತಿಪಕ್ಷಗಳು ಈ ಕುರಿತು ತನಿಖೆಗೆ ಆಗ್ರಹಿಸಿದೆ.

ಸಚಿವರ ವಿರುದ್ಧ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪದ ಬಗ್ಗೆ ಸರಕಾರ ತನಿಖೆ ನಡೆಸಬೇಕು ಎಂದು ಮಹರಾಷ್ಟ್ರದ ಪ್ರತಿಪಕ್ಷದ ನಾಯಕ ವಿಜಯ ವಾಡೆತ್ತಿವಾರ್‌ ಆಗ್ರಹಿಸಿದ್ದಾರೆ.

‘ಮೇಡಂ ಕಮಿಷನರ್’ ಎಂಬ ಆತ್ಮಚರಿತ್ರೆಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಮೀರಾನ್ ಬೋರ್ವಾಂಕರ್ ಅವರು ಸಚಿವರ ವಿರುದ್ಧ ಆರೋಪ ಮಾಡಿದ್ದಾರೆ. ಆರೋಪಗಳು ಭೂಪರಿವರ್ತನೆಗೆ ಸಂಬಂಧಿಸಿದೆ. ಈ ಬಗ್ಗೆ ತನಿಖೆಗಾಗಿ ಸರ್ಕಾರವು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ವಿಜಯ ವಾಡೆತ್ತಿವಾರ್‌ ಹೇಳಿದ್ದಾರೆ.

ಬೋರ್ವಾಂಕರ್ ಯಾವುದೇ ಹೆಸರನ್ನು ಪುಸ್ತಕದಲ್ಲಿ ಹೆಸರಿಸಿಲ್ಲ. ಆದರೆ ಅವರು ಪುಸ್ತಕದಲ್ಲಿ ಜಿಲ್ಲಾ ಮಂತ್ರಿ ‘ದಾದಾ’ ಎಂದು ಉಲ್ಲೇಖಿಸಿದ್ದಾರೆ. ಇದು ಪ್ರಸ್ತುತ ಸರ್ಕಾರದ ಭಾಗವಾಗಿರುವ ಸಚಿವರನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ವಾಡೆತ್ತಿವಾರ್‌ ಹೇಳಿದ್ದಾರೆ. ಇದಲ್ಲದೆ ಅಜಿತ್ ಪವಾರ್ ಅವರನ್ನು ಜಿಲ್ಲಾ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪುಸ್ತಕದಲ್ಲಿ ದಾಖಲಾಗಿರುವ ಪ್ರಕಾರ, 2010ರಲ್ಲಿ ನಗರದ ಯರವಾಡ ಪ್ರದೇಶದಲ್ಲಿ ಹರಾಜಾದ 3 ಎಕರೆ ಪೊಲೀಸ್ ಭೂಮಿಯನ್ನು ಟಾಪ್ ಬಿಡ್ಡರ್‌ಗೆ ಹಸ್ತಾಂತರಿಸುವುದನ್ನು ಪೂರ್ಣಗೊಳಿಸಬೇಕೆಂದು ಸಚಿವರು ಒತ್ತಾಯಿಸಿದ್ದಾರೆ. ಆದರೆ ಯರವಾಡ ಕೇಂದ್ರ ಸ್ಥಳವಾಗಿದ್ದು, ಪೊಲೀಸರಿಗೆ ಮತ್ತೆ ಅಂತಹ ಸ್ಥಳ ಸಿಗುವುದಿಲ್ಲ. ಅದಲ್ಲದೆ ಕಚೇರಿ, ಪೊಲೀಸ್ ಕಾಲೋನಿಗೆ ಈ ಸ್ಥಳ ಬೇಕಾಗುತ್ತದೆ ಎಂದು ನಾನು ಹೇಳಿದ್ದೆ ಎಂದು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

ಸುಮಾರು ಮೂರು ಎಕರೆ ವಿಸ್ತೀರ್ಣದ ಭೂಮಿಯನ್ನು ಹರಾಜು ಮಾಡಲಾಗಿದೆ ಎಂದು ನಾನು ತಿಳಿದುಕೊಂಡೆ ಮತ್ತು ನಾವು ಅದನ್ನು ಅತಿ ಹೆಚ್ಚು ಬಿಡ್ ಮಾಡಿದವರಿಗೆ ಹಸ್ತಾಂತರಿಸಬೇಕಾಗಿತ್ತು. ಹರಾಜು ಪ್ರಕ್ರಿಯೆಯು ವಿಭಾಗೀಯ ಆಯುಕ್ತರ ನೇತೃತ್ವದ ಮೇಲ್ವಿಚಾರಣೆಯಲ್ಲಿತ್ತು ಎಂದು ಬೋರ್ವಾಂಕರ್ ಬರೆದಿದ್ದಾರೆ. ಭೂಮಿಯು ಪೋಲೀಸ್ ಇಲಾಖೆಗೆ ಸೇರಿದ್ದರಿಂದ ಈ ಬೆಳವಣಿಗೆ ತುಂಬಾ ಆಶ್ಚರ್ಯಕರವಾಗಿದೆ ಎಂದು ಅವರು ಬರೆದಿದ್ದಾರೆ.

2010ರಲ್ಲಿ ಪುಣೆ ಪೊಲೀಸರಿಗೆ ಸೇರಿದ ಪುಣೆಯ ಯರವಾಡದಲ್ಲಿನ ಸುಮಾರು ಮೂರು ಎಕರೆ ಭೂಮಿಯನ್ನು ಆಗಿನ ಜಿಲ್ಲಾ ಸಚಿವರ ಆದೇಶದ ಮೇರೆಗೆ ಹರಾಜು ಮಾಡಲಾಯಿತು. ಭೂಮಿಯನ್ನು ಹಸ್ತಾಂತರಿಸಲು ಸಚಿವರು ಆಗ್ರಹಿಸಿದಾಗ ಪುಣೆಯ ಅಂದಿನ ಪೊಲೀಸ್ ಕಮಿಷನರ್ ಅವರು ಅದನ್ನು ಬಿಟ್ಟುಕೊಡಲು ನಿರಾಕರಿಸಿದ್ದರು. ಆದರೆ ಆ ಬಳಿಕ ಅವರಿಗೆ ಭಾರೀ ಒತ್ತಡ ಮಾಡಲಾಗಿತ್ತು ಎಂದು ಪುಸ್ತಕದಲ್ಲಿ ಉಲ್ಲೇಖವಿದೆ.

ಆದರೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೀರಾ ಬೋರವಾಂಕರ್ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸರ್ಕಾರಿ ಭೂಮಿಯನ್ನು ಹರಾಜು ಹಾಕುವ ಹಕ್ಕು ಸಚಿವರಿಗೆ ಇಲ್ಲ, ಸಚಿವ ಸಂಪುಟದ ಒಪ್ಪಿಗೆ ನಂತರವೆ ಭೂಮಿ ಹರಾಜು ನಡೆಯುತ್ತದೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.  ನಾನು ಕೂಡ ಈ ಹರಾಜಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದೆ. ಜಿಲ್ಲಾ ಸಚಿವರಿಗೆ ಜಮೀನು ಹರಾಜು ಹಾಕುವ ಹಕ್ಕು ಇಲ್ಲ. ಯಾವುದೇ ಭೂಮಿಯನ್ನು ಹರಾಜು ಮಾಡಲು ಕಂದಾಯ ಇಲಾಖೆ ಮೂಲಕ ಪ್ರಸ್ತಾವನೆ ಬಂದ ನಂತರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅಜಿತ್ ಪವಾರ್ ಅವರು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ; ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...