Homeಮುಖಪುಟಹಿಂದುತ್ವ ಗುಂಪಿನಿಂದ ವಿರೋಧ: ಕಾಶ್ಮೀರಿ ಪತ್ರಕರ್ತೆ ಸಫೀನಾಗೆ ನೀಡಬೇಕಿದ್ದ ಪ್ರಶಸ್ತಿ ರದ್ದುಗೊಳಿಸಿದ ಪುಣೆ ವಿವಿ

ಹಿಂದುತ್ವ ಗುಂಪಿನಿಂದ ವಿರೋಧ: ಕಾಶ್ಮೀರಿ ಪತ್ರಕರ್ತೆ ಸಫೀನಾಗೆ ನೀಡಬೇಕಿದ್ದ ಪ್ರಶಸ್ತಿ ರದ್ದುಗೊಳಿಸಿದ ಪುಣೆ ವಿವಿ

- Advertisement -
- Advertisement -

ಪುಣೆಯ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ವರ್ಲ್ಡ್ ಪೀಸ್ ಯೂನಿವರ್ಸಿಟಿಯಲ್ಲಿ (MIT-WPU) ಪತ್ರಿಕೋದ್ಯಮ ವಿಭಾಗದ ಮಾಧ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕಾಶ್ಮೀರಿ ಪತ್ರಕರ್ತೆ ಸಫೀನಾ ನಬಿ ಅವರಿಗೆ ನೀಡಬೇಕಿದ್ದ ಪ್ರಶಸ್ತಿಯನ್ನು ಹಿಂದುತ್ವ ಗುಂಪುಗಳ ಒತ್ತಡಕ್ಕೆ ಮಣಿದು ಕೊನೇ ಗಳಿಗೆಯಲ್ಲಿ ವಿವಿ ರದ್ದುಪಡಿಸಿದೆ.

ಹಿಂದುತ್ವ ಗುಂಪುಗಳ ಒತ್ತಡಕ್ಕೆ ಮಣಿದು ವಿಶ್ವವಿದ್ಯಾಲಯದ ಆಡಳಿತಾಧಿಕಾರಿಗಳು ಪ್ರಶಸ್ತಿಯನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಘಟನೆಯ ಬಗ್ಗೆ ಸಂಸ್ಥೆಯ ಅಧಿಕಾರಿಗಳು ಮೌನವಾಗಿದ್ದಾರೆ.

ಸ್ಕ್ರಾಲ್‌ನಲ್ಲಿ ಪ್ರಕಟವಾಗಿರುವ  ‘ದಿ ಹಾಫ್ ವಿಡೋಸ್ ಆಫ್ ಕಾಶ್ಮೀರ್’ ಎಂಬ ಶೀರ್ಷಿಕೆಯ ನಬಿ ಅವರ ಲೇಖನವು ದಶಕಗಳಿಂದ ತಮ್ಮ ಆಸ್ತಿ ಹಕ್ಕುಗಳಿಂದ ವಂಚಿತರಾಗಿರುವ ಕಾಶ್ಮೀರದ ‘ಅರೆ ವಿಧವೆಯರು’ ಎದುರಿಸುತ್ತಿರುವ ನಿರಂತರ ಹೋರಾಟಗಳ ಮೇಲೆ ಬೆಳಕು ಚೆಲ್ಲಿತ್ತು.

ಅ.11 ರಂದು ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ವರ್ಲ್ಡ್ ಪೀಸ್ ಯೂನಿವರ್ಸಿಟಿಯ ಮಾದ್ಯಮ ಮತ್ತು ಸಂವಹನ ವಿಭಾಗದ ನಿರ್ದೇಶಕರಾದ ಧೀರಜ್ ಸಿಂಗ್ ಅವರು ಫೋನ್ ಕರೆ ಮತ್ತು ಇಮೇಲ್ ಮೂಲಕ ನಬಿ ಅವರಿಗೆ ಪ್ರಶಸ್ತಿ ಸಿಕ್ಕಿರುವ ಬಗ್ಗೆ ಹೇಳಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಂಸ್ಥೆಯು ಪ್ರಯಾಣದ ವ್ಯವಸ್ಥೆಯನ್ನು ಕೂಡ ಮಾಡಿದೆ ಎಂದು ನಬಿ ದಿ ವೈರ್ ಸುದ್ದಿ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಅ.17 ರಂದು ಪುಣೆಗೆ ತೆರಳಲು ನಿರ್ಧರಿಸಲಾಗಿತ್ತು. ಆದರೆ ಅ.16 ರ ಮಧ್ಯಾಹ್ನ ಅಧ್ಯಾಪಕರೋರ್ವರು ಅವರನ್ನು ಸಂಪರ್ಕಿಸಿ  ಪ್ರಶಸ್ತಿ ರದ್ದತಿ ಬಗ್ಗೆ ತಿಳಿಸಿದ್ದಾರೆ ಮತ್ತು ಪುಣೆಗೆ ತೆರಳಬೇಕಿದ್ದ ಪ್ರಯಾಣವನ್ನು ರದ್ದುಪಡಿಸುವಂತೆ ಸೂಚಿಸಿದ್ದಾರೆ.

ನಬಿ ನಂತರ ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಜೀಶ್ ಕುಮಾರ್ ಅವರನ್ನು ಸಂಪರ್ಕಿಸಿ, ಈ ಬಗ್ಗೆ ಮಾಹಿತಿ ಕೇಳಿದ್ದಾರೆ. ಈ ವೇಳೆ ಪ್ರಶಸ್ತಿಯನ್ನು ರದ್ದುಗೊಳಿಸಿರುವ ಬಗ್ಗೆ ಅವರು  ಖಚಿತಪಡಿಸಿದ್ದಾರೆ ಮತ್ತು ಕ್ಷಮೆ ಕೇಳಿದ್ದಾರೆ. ಪ್ರಶಸ್ತಿ ರದ್ಧತಿ ಬಗ್ಗೆ ನಬಿ ಅವರು ಕಾರಣವನ್ನು ಕೇಳಿದ್ದಾರೆ. ಇ-ಮೇಲ್‌ ಮೂಲಕ ಕಾರಣ ತಿಳಿಸುವಂತೆ ಆಗ್ರಹಿಸಿದ್ದಾರೆ. ಆದರೆ ಪ್ರಾಧ್ಯಾಪಕರ ಅದಕ್ಕೆ ನಿರಾಕರಿಸಿದ್ದಾರೆ. ಕೊನೆಗೆ  ವಿಶ್ವವಿದ್ಯಾನಿಲಯದಲ್ಲಿ ನನಗೆ ಸನ್ಮಾನಿಸದಂತೆ ಸಾಕಷ್ಟು ರಾಜಕೀಯ ಒತ್ತಡವಿದೆ ಎಂಬ ಕಾರಣವನ್ನು ನೀಡಿದ್ದಾರೆ ಎಂದು ಸಫೀನಾ ನಬಿ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಈ ಬೆಳವಣಿಗೆಯು ಪ್ರಶಸ್ತಿ ವಿಜೇತರನ್ನು ಆಯ್ಕೆಮಾಡಿದ್ದ ತೀರ್ಪುಗಾರರಿಗೂ ಅಚ್ಚರಿಯನ್ನು ಮೂಡಿಸಿದೆ.

ಇದನ್ನು ಓದಿ: ಮಣಿಪುರ ಹಿಂಸಾಚಾರ: ಕೇಂದ್ರ, ಮಣಿಪುರ ಸರ್ಕಾರಕ್ಕೆ ವಿವರಣೆ ಕೇಳಿ NHRC ನೊಟೀಸ್

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...