Homeಅಂತರಾಷ್ಟ್ರೀಯಯುದ್ಧದ ವಿರುದ್ಧ ಪ್ರತಿಭಟಿಸಿದರೆ ಬಸ್‌ಗಳಲ್ಲಿ ತುಂಬಿ ಗಾಝಾಕ್ಕೆ ಕಳುಹಿಸುತ್ತೇವೆ: ಇಸ್ರೇಲ್ ಪ್ರಜೆಗಳಿಗೆ ವಾರ್ನಿಂಗ್‌

ಯುದ್ಧದ ವಿರುದ್ಧ ಪ್ರತಿಭಟಿಸಿದರೆ ಬಸ್‌ಗಳಲ್ಲಿ ತುಂಬಿ ಗಾಝಾಕ್ಕೆ ಕಳುಹಿಸುತ್ತೇವೆ: ಇಸ್ರೇಲ್ ಪ್ರಜೆಗಳಿಗೆ ವಾರ್ನಿಂಗ್‌

- Advertisement -
- Advertisement -

ಇಸ್ರೇಲ್‌ನಲ್ಲಿ ಗಾಜಾವನ್ನು ಬೆಂಬಲಿಸಿ ನಡೆಸುವ ಪ್ರತಿಭಟನೆಯನ್ನು ಸಹಿಸಲು ಸಾಧ್ಯವಿಲ್ಲ. ಯುದ್ಧವನ್ನು ವಿರೋಧಿಸಿ ಪ್ರತಿಭಟನೆ ಮಾಡುವವರನ್ನು ಇಸ್ರೇಲ್‌ ಪ್ರತಿದಿನ ಬಾಂಬ್‌ ದಾಳಿ ನಡೆಸುತ್ತಿರುವ ಗಾಝಾ ಪಟ್ಟಿಗೆ ಕಳುಹಿಸುವುದಾಗಿ ಇಸ್ರೇಲ್‌ ಪೊಲೀಸ್ ಮುಖ್ಯಸ್ಥ ಕೋಬಿ ಶಬ್ಟೈ ಹೇಳಿದ್ದಾರೆ.

ಮಂಗಳವಾರ ಇಸ್ರೇಲ್‌ ಪೊಲೀಸರು ಟಿಕ್‌ಟಾಕ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಶಬ್ತಾಯ್ ಅವರು ಈ ಹೇಳಿಕೆ ನೀಡಿದ್ದಾರೆ.  ಗಾಝಾವನ್ನು ಬೆಂಬಲಿಸಿ ಹೈಫಾದಲ್ಲಿ ರ್ಯಾಲಿಯನ್ನು ನಡೆಸಲಾಗಿತ್ತು.  ಪೊಲೀಸರು ಪ್ರತಿಭಟನೆ ಬಳಿಕ 6 ಜನರನ್ನು ಬಂಧಿಸಿದ್ದಾರೆ. ಯಾರು ಇಸ್ರೇಲ್‌ ಪ್ರಜೆಯಾಗಲು ಬಯಸುತ್ತಾರೆ ಸ್ವಾಗತ. ಗಾಝಾದೊಂದಿಗೆ ಗುರುತಿಸಲು ಬಯಸುವವರನ್ನು ಕೂಡ ಸ್ವಾಗತಿಸುತ್ತೇವೆ. ನಾನು ಅವರನ್ನು ಈಗ ಅಲ್ಲಿಗೆ ಹೋಗುವ ಬಸ್‌ಗಳಲ್ಲಿ ಹಾಕಿ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ.

ಕಿರು ವೀಡಿಯೊದಲ್ಲಿ ಶಬ್ತಾಯ್, ಯಾವುದೇ ಪ್ರಚೋದನೆಯನ್ನು ಸಹಿಸಲು ಸಾಧ್ಯವಿಲ್ಲ. ಪ್ರತಿಭಟನೆಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಇಸ್ರೇಲ್ ಯುದ್ಧದ ಸ್ಥಿತಿಯಲ್ಲಿದೆ. ಎಲ್ಲಾ ರೀತಿಯ ಜನರು ಬಂದು ನಮ್ಮನ್ನು ಪರೀಕ್ಷಿಸಲು ನಾವು ಅನುಮತಿಸುವ ಪರಿಸ್ಥಿತಿಯಲ್ಲಿ ನಾವು ಇಲ್ಲ ಎಂದು ಅವರು ಹೇಳಿದರು.

ಅ.7 ರಂದು ಗಾಝಾ ಜೊತೆಗಿನ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್‌ನಲ್ಲಿ 63 ಜನರನ್ನು ಭಯೋತ್ಪಾದನೆ ಬೆಂಬಲಿಸುವ ಅಥವಾ ಪ್ರಚೋದಿಸಿದ ಶಂಕೆಯ ಮೇಲೆ ಬಂಧಿಸಲಾಗಿದೆ ಎಂದು ಇಸ್ರೇಲ್ ಪೊಲೀಸ್ ವಕ್ತಾರ ಎಲಿ ಲೆವಿ ಬುಧವಾರ ಆರ್ಮಿ ರೇಡಿಯೊಗೆ ತಿಳಿಸಿದ್ದಾರೆ.

ಗಾಝಾ ಪಟ್ಟಿಯನ್ನು ಮುನ್ನಡೆಸುತ್ತಿರುವ ಹಮಾಸ್‌ಗೆ ಬೆಂಬಲ ವ್ಯಕ್ತಪಡಿಸುತ್ತಿರುವ ಇಸ್ರೇಲ್‌ನಲ್ಲಿನ ಪ್ಯಾಲೆಸ್ತೀನಿಯನ್ನರನ್ನು ಕೂಡ ಪತ್ತೆ ಹಚ್ಚಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಅ.7ರಂದು ಹಮಾಸ್ ಸಶಸ್ತ್ರ ಗುಂಪು, ದಕ್ಷಿಣ ಇಸ್ರೇಲ್‌ ಮೇಲೆ ದಾಳಿಯನ್ನು ನಡೆಸಿದ ನಂತರ ಗಾಝಾ ಪಟ್ಟಿಯ 2.3 ಮಿಲಿಯನ್ ನಿವಾಸಿಗಳಿಗೆ ಆಹಾರ, ನೀರು, ವಿದ್ಯುತ್ ಮತ್ತು ಇಂಧನವನ್ನು ಇಸ್ರೇಲ್‌  ಕಡಿತಗೊಳಿಸಿದೆ. ಇಸ್ರೇಲ್‌ ಅಧಿಕಾರಿಗಳ ಪ್ರಕಾರ ಕನಿಷ್ಠ 1,400 ಜನರು ಸಾವನ್ನಪ್ಪಿದ್ದಾರೆ. 4,400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 199 ಜನರನ್ನು ಹಮಾಸ್ ಒತ್ತೆಯಾಳಾಗಿಸಿದೆ.

ಇಸ್ರೇಲ್ ಯುದ್ಧ ಘೊಷಣೆ ಬಳಿಕ ನಡೆಸಿದ ದಾಳಿಯಲ್ಲಿ 3,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 12,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಯುದ್ಧವು ಭುಗಿಲೆದ್ದ ನಂತರ ಇಸ್ರೇಲ್ ವಿರೋಧಿ ಹೇಳಿಕೆಯನ್ನು ನೀಡಿರುವ ಆರೋಪದಲ್ಲಿ ಇಸ್ರೇಲ್‌ ಸಂಸತ್ತಿನ ಸಮಿತಿಯು ಎಡಪಂಥೀಯ ಸದಸ್ಯ ಓಫರ್ ಕ್ಯಾಸಿಫ್ ಅವರನ್ನು ಅಮಾನತುಗೊಳಿಸಿದೆ. ಅವರು ಹಮಾಸ್ ದಾಳಿಯನ್ನು ಉಲ್ಲೇಖಿಸಿ ಇಸ್ರೇಲ್ ಈ ಹಿಂಸಾಚಾರವನ್ನು ಬಯಸಿದೆ ಎಂದು ಅವರು ವಿದೇಶಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದರು. ಜೆರುಸಲೆಮ್ ಪೋಸ್ಟ್ ಪ್ರಕಾರ ಕ್ಯಾಸಿಫ್ ಅವರನ್ನು 45 ದಿನಗಳವರೆಗೆ ಅಮಾನತುಗೊಳಿಸಲಾಗಿದೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...