Homeಕರ್ನಾಟಕಜಾತ್ಯತೀತತೆ ನಾಟ್ಯಕ್ಕೆ ತೆನೆ ಹೊತ್ತ ಮಹಿಳೆಯೇ "ಕೋಮು-ಕುಂಡ"ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ: ಕಾಂಗ್ರೆಸ್ ವಾಗ್ದಾಳಿ

ಜಾತ್ಯತೀತತೆ ನಾಟ್ಯಕ್ಕೆ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ: ಕಾಂಗ್ರೆಸ್ ವಾಗ್ದಾಳಿ

- Advertisement -
- Advertisement -

”ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ” ಎಂದು ಜೆಡಿಎಸ್‌ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆದಿದೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ”ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ!” ಎಂದು ಕುಟುಕಿದೆ.

”ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಗಾ ಹೊಡೆದಿದೆ!” ಎಂದು ಟೀಕಿಸಿದೆ.

”ಕುಮಾರಸ್ವಾಮಿಯವರೇ, ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. “ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ” ಎಂದು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು” ಎಂದು ಮೈತ್ರಿ ಸರ್ಕಾರದ ದಿನಗಳನ್ನು ಕಾಂಗ್ರೆಸ್ ನೆನಪಿಸಿದೆ.

”ಕಾಂಗ್ರೆಸ್ ದಯಾಭಿಕ್ಷೆಯಿಂದ ಎರಡನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ!” ಕಿಡಿಕಾರಿದೆ.

”ಕುಮಾರಸ್ವಾಮಿಯವರೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿ ಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ… ನಿಮಗೇನಾದರೂ ಆತ್ಮಗೌರವ ಇದೆಯೇ?” ಎಂದು ವಾಗ್ದಾಳಿ ನಡೆಸಿದೆ.

”ಇಡೀ ರಾಜ್ಯದ ಜನಕ್ಕೆ ಅರ್ಥವಾಗಿದೆ. ಅಧಿಕಾರದ ಕನಸು ನುಚ್ಚುನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿಭ್ರಂಶರಾಗಿದ್ದೀರಿ ಎಂದು ನೀವಾಡುವ ಒಂದೊಂದು ನುಡಿಯಲ್ಲೂ ಅದರದೇ ಪ್ರತಿಫಲನ. ಪಾಪ, ನಿಮ್ಮ ಸ್ಥಿತಿ ಕಂಡು ಅಯ್ಯೋ ಅನ್ನಿಸುತ್ತದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ” ಎಂದು ಹೇಳಿದೆ.

”ಅದು ಒತ್ತಟ್ಟಿಗಿರಲಿ, ನಿಮ್ಮನ್ನು, ನಿಮ್ಮ ಕುಟುಂಬದವರನ್ನು ದಶಕಗಳ ಕಾಲ ಪೊರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದಿರೇ ಹೊರತು ನಿಮ್ಮಿಂದ ಸಮುದಾಯವೇನೂ ಉದ್ಧಾರ ಆಗಿಲ್ಲ. ಎಷ್ಟೇ ಆಗಲಿ, ಒಕ್ಕಲಿಗರ ಆತ್ಮಗೌರವದ ಸಂಕೇತವಾದ ಆದಿ ಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳಿಗೇ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರಲ್ಲವೇ ನೀವು..?!” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

”ಇನ್ನೊಂದೆಡೆ ಅಲ್ಪಸಂಖ್ಯಾತರ ಅಗತ್ಯವಿಲ್ಲ, ಅವರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಅನ್ನುತ್ತೀರಿ. ಹಾಗಾದರೆ ನಿಮಗೆ ನೀವೇ ಮತ ಹಾಕಿಕೊಂಡು ಗೆದ್ದಿರಾ ಕುಮಾರಣ್ಣ..?!” ಎಂದು ಪ್ರಶ್ನೆ ಮಾಡಿದೆ.

”ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು? ಮಸೀದಿ ಹೊಕ್ಕಿದ್ದೇನು? ಆಹಾ..! ಅದೇನು ನಾಟಕ, ಅದೇನು ಪಂಚರಂಗಿ ಆಟ? ಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!” ಎಂದು ಕಾಂಗ್ರೆಸ್ ಕಿಡಿಕಾರಿದೆ.

”ಐಟಿ, ಇಡಿ ಕಿಂದರ ಜೋಗಿ ಅಮಿತ್ ಶಾ ಕಾಲಿಗೆ ಬಿದ್ದು ರಾಜಕೀಯ ವಿರೋಧಿಗಳಿಗೆ ಗುಂಡಿ ತೋಡುವುದರಲ್ಲಿ ಮಗ್ನರಾಗಿರುವ ಕುಮಾರಣ್ಣ ಒಂದು ವಿಷಯ ತಿಳಿದುಕೊಳ್ಳಿ. ನೀವೇ ನಿಮ್ಮ ಪಾಲಿನ ಭಸ್ಮಾಸುರ! ಸ್ವಲ್ಪ ಕಾಲ ತಡೆದು ನೋಡಿ, ನಿಮ್ಮ ಗುಂಡಿಯಲ್ಲಿ ಬಿದ್ದು ನೀವೇ ಹೆಂಗೆ ಒದ್ದಾಡುತ್ತೀರಿ ಅಂತಾ!” ಎಚ್ಚರಿಸಿದೆ.

”ಕೈಲಾಗದವರು ಮೈ ಪರಚಿಕೊಂಡರೆ ಆಗೋದು ಗಾಯ, ರಣ ಗಾಯ! ಕೈ ನಾಯಕರ ಮೇಲೆ ಬಿದ್ದರೇ ಕೈಲಾಸ ಪ್ರಾಪ್ತಿ ಆಗದು ಕುಮಾರಣ್ಣ. ನಿಮ್ಮ ಮಾತೇ ನಿಮ್ಮ ಪಾಲಿನ ಶತ್ರು! ಮಾತಾಡಿ, ಮಾತಾಡಿ ಮಂಡ್ಯ ಚುನಾವಣೆಯಲ್ಲಿ ನಿಮ್ಮ ಮಗನನ್ನು ಬಲಿ ಕೊಟ್ಟಿರಿ. ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷವನ್ನೇ ಅಡ್ಡಡ್ಡ ಉದ್ದುದ್ದ ಮಲಗಿಸಿದಿರಿ. ಈಗ ನಿಮ್ಮನ್ನು ನೀವೇ ಹಾಳು ಮಾಡಿಕೊಳ್ಳುತಿದ್ದೀರಿ..!” ಎಂದು ಹೇಳಿದೆ.

”ನಿಯತ್ತು ಮತ್ತು ಕುಮಾರಸ್ವಾಮಿ ಎರಡೂ ವಿರುದ್ಧ ಪದಗಳು ಎಂಬುದು ಜಗಜ್ಜಾಹಿರು! ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನು “ಕೈ ಹಿಡಿದ” ಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ? ಅದೂ ಇಲ್ಲ. ಹತಾಶೆ ಆತ್ಮಸಾಕ್ಷಿಯನ್ನೇ ಕೊಂದಿದೆ!” ಎಂದಿದೆ.

”ಹೀಗಾಗಿ ನಿಮ್ಮಂತವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ, ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತಾಡುತ್ತಾ ಹೋಗಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ, ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ನೀವು ಮಾತಾಡಿ, ಮಾತಾಡುತ್ತಾ ಹೋಗಿ… ಅಲ್ ದ ಬೆಸ್ಟ್!” ಎಂದು ಕಾಂಗ್ರೆಸ್ ಪೋಸ್ಟ್ ಮಾಡಿದೆ.

ಇದನ್ನೂ ಓದಿ: ಜೆಡಿಎಸ್‌ನ ‘ಅಡಹಾಕ್ ಅಧ್ಯಕ್ಷ’ರಾಗಿ ಹೆಚ್‌ಡಿಕೆ ನೇಮಕ: ಸಿಎಂ ಇಬ್ರಾಹಿಂಗೆ ಕೊಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...