Homeಮುಖಪುಟಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

ಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

- Advertisement -
- Advertisement -

|ಜಯಪ್ರಕಾಶ್ ಶೆಟ್ಟಿ. ಹೆಚ್ |
ಸಹಪ್ರಾಧ್ಯಾಪಕರು, ತೆಂಕನಿಡಿಯೂರು.ಉಡುಪಿ.

2008ರ ನವೆಂಬರ್‍ನಲ್ಲಿ ನಾನು ನಿರೀಕ್ಷೆಯೇ ಮಾಡಿರದ ರಾಜಕೀಯ ಪ್ರೇರಿತವಾದ ಅಕಸ್ಮಾತ್ ವರ್ಗಾವಣೆಯೊಂದು ನನಗೆ ನಾನು ಈ ಹಿಂದೆ ಕಂಡಿರದ ಹಾವೇರಿಯ ಹಿರೇಕೆರೂರಿನ ದುರ್ಗಮ್ಮನ ಕೆರೆಯನ್ನು ಕಾಣಿಸುವ ಜೊತೆಗೆ ನೇರನಡೆನುಡಿಯ ಗೆಳೆಯನೊಬ್ಬನನ್ನೂ ಕಾಣಿಸಿತ್ತು. ನೀರಿರದ ಊರಿಗೆ ನನ್ನನ್ನು ಎತ್ತಿ ಎಸೆಯುವ ಕೇಡಿಗರ ಧಾವಂತದಲ್ಲಿ ತುಂಬಿದ ಕೆರೆಯಿರುವ ಊರಿಗೆ ಹೋಗಿ ಬಿದ್ದ ನನಗೆ ಅರಿಯದ ಊರಿನ ಅನಾಥನೆಂಬ ಆತಂಕವೇ ಬಾಧಿಸದಂತೆ ಮನುಷ್ಯಪ್ರೀತಿಯ ನೆರಳೂ ಸಿಕ್ಕಿತ್ತು. ಸಂಸಾರದಿಂದ ದೂರವಿದ್ದ ಸಂಕಟ ಇದ್ದುದು ನಿಜವಿದ್ದರೂ ನಾನಾಗ ಜೀವಪರ ಚಿಂತನೆಯ ಆಲೋಚನೆಗಳನ್ನು ನಿರ್ಭೀತವಾಗಿ ಹಂಚಿಕೊಳ್ಳುತ್ತಿದ್ದ ಸಮಾನಮನಸ್ಕನೊಬ್ಬನ ಗೆಳೆತನದ ಮೂಲಕ ಬರಡು ನೆಲದಿಂದ ಕಿಂಚಿತ್ತಾದರೂ ಪಾರಾದ ಸುಖವನ್ನೂ ಅನುಭವಿಸಿದ್ದೆ. ಅದಕ್ಕಿಂತಲೂ ಹೆಚ್ಚಾಗಿ ಶೇರು, ಬಡ್ಡಿ, ಚೀಟಿ, ಹೊಲ ಮನಿ, ಸೈಟು ಇವ್ಯಾವುದರ ಗೋಜಿಗೆ ಬೀಳದೆ ವೃತ್ತಿ ಮತ್ತು ವಿದ್ಯಾರ್ಥಿಗಳ ಜೊತೆಗೆ ಅಪಾರವಾಗಿ ಬದುಕನ್ನು ಪ್ರೀತಿಸುತ್ತಿದ್ದ ಅಸಲಿ ಮೇಷ್ಟರೊಬ್ಬರ ಗೆಳೆತನ ಉಂಡಿದ್ದೆ. ಹೀಗೆ ಅಂದು ಬೆಸೆದುಕೊಂಡ ಗೆಳೆಯ ಜೋಗುರನೆಂಬ ಆ ಪ್ರೀತಿಯ ಕೊಂಡಿ ಮತ್ತೆಂದೂ ಕಳಚಿಕೊಂಡಿರಲಿಲ್ಲ.

ಜೋಗುರರು ನನ್ನಂತಹ ಕೆಲವೇ ಮಂದಿ ಸ್ನೇಹಿತರಿಗಷ್ಟೇ ಪರಿಚಿತರಲ್ಲ. ಸಮಾಜಶಾಸ್ತ್ರದ ಉಪನ್ಯಾಸಕನಾಗಿ, ಹವ್ಯಾಸಿ ಪತ್ರಕರ್ತ, ಕತೆಗಾರ, ಸಮೂಹಪರ ಚಿಂತನೆಯ ಬರಹಗಾರ, ಅತ್ಯುತ್ತಮ ವಾಗ್ಮಿಯಾಗಿ ತನ್ನನ್ನು ಗುರುತಿಸಿಕೊಂಡ ಜೋಗುರ ಕನ್ನಡದ ಓದುಗರಿಗೆ ಚಿರಪರಿಚಿತರು. ಸಾವಿಗೆ ಸಮೀಪದಲ್ಲಿದ್ದಾಗಲೂ ಅಕ್ಷರ ಮತ್ತು ಬದುಕುಗಳೆರಡರ ಅಪಾರಪ್ರೀತಿಯಲ್ಲಿ ಜೀವಂತವಾಗಿ ಉಳಿದವರು. ಈ ಲೋಕದ ಸಾಮಾಜಿಕ ಆಗುಹೋಗುಗಳು ಮತ್ತು ರಾಜಕೀಯದ ಸೂಕ್ಷ್ಮಗಳ ಕುರಿತಂತೆ ಅನೇಕ ಜನಪರ ಚಳುವಳಿಗಳಲ್ಲಿ ಸಮಾನಮನಸ್ಕರೊಂದಿಗೆ ಪ್ರಗತಿಪರ ವಿವೇಕದೊಂದಿಗೆ ಬೆರೆಯುತ್ತಿದ್ದವರು. ಸಂವೇದನೆಗಳು ಸತ್ತು ಮತಿಹೀನ ಉದ್ರೇಕಗಳೇ ಮಿಂಚುತ್ತ್ತಿರುವ ಜಗತ್ತಿನಲ್ಲಿ ಒಬ್ಬ ಬರಹಗಾರನಿಗೆ ಇರುವ ಹೊಣೆಗಾರಿಕೆಯ ಮಹತ್ವವನ್ನು ಅರಿತವರು.

ಮನುಷ್ಯನಾಗಿ ಸ್ವಯಂ ಕಷ್ಟದ ಬದುಕನ್ನು ಬದುಕಿದ ಅನುಭವದ ಹಿನ್ನೆಲೆಯುಳ್ಳ ಜೋಗುರರು ಬಡತನದ ಬಗೆಗೆ ಎಂದೂ ಅವಹೇಳನ ಮಾಡಿದವರಲ್ಲ. ಈ ನೆಲದ ಜಾತಿಜಾಡ್ಯದ ಪರ ವಹಿಸಿದ ಸಣ್ಣತನದವರೂ ಅಲ್ಲ. ಜಾತಿಯನ್ನು ವಿರೋಧಿಸಿದ ಜೋಗುರರು ಸ್ವಯಂ ಅಂತಹ ಉದಾಹರಣೆಯಾಗಿ ಬದುಕಿದವರು. ಮಾತನ್ನು ಕೃತಿಯಾಗಿಸುವ ಬಸವಪರಂಪರೆಯ ನಿಜ ವಾರಸುದಾರನಂತೆ ಜಾತಿಯ ಕಕ್ಷೆಯನ್ನು ಮೀರಿ ವಿವಾಹ ಸಂಬಂಧವನ್ನು ಹೊಂದಿದ್ದಷ್ಟೇ ಅಲ್ಲ, ಅದನ್ನು ಅತ್ಯಂತ ಪ್ರೀತಿಯಿಂದ ಬದುಕಿದವರು. ಆದರೆ ಜೋಗುರರ ಬರಹಗಳನ್ನು ಗಮನಿಸುವುದಾದರೆ ಆ ಬರಹಗಳಲ್ಲಿ ಇರುವ ವ್ಯವಸ್ಥೆಯನ್ನು ನಿರಾಕರಿಸಲೇಬೇಕೆಂಬ ಹಟವೇನೂ ಇಲ್ಲ. ಮುಖ್ಯವಾಗಿ ಅವು ಸಾಮಾಜಿಕ ಸ್ವಾಸ್ಥ್ಯದ ಕಡೆಗೆ ಹೆಚ್ಚು ಒಲಿದವುಗಳು. ಅವರ ಅನೇಕ ಬರಹಗಳು ಕೆಲವೊಂದು ಸಾಮಾಜಿಕಸಂಸ್ಥೆಗಳನ್ನು ಅವುಗಳ ಆರೋಗ್ಯಕರ ಸ್ವರೂಪದಲ್ಲಿ ಹಾಗೆಯೇ ಮುಂದುವರೆಯಬೇಕೆಂದು ತಣ್ಣಗೆ ಆಶಿಸುವಂತೆಯೂ ಕಂಡುಬರುತ್ತವೆ. ಕುಟುಂಬ ಸಂಬಂಧ, ಮನುಷ್ಯ ಸಂಬಂಧಗಳ ಆರೋಗ್ಯಕರ ಇರುವಿಕೆಯ ನಿರೀಕ್ಷೆಯಲ್ಲಿ ಸಾಂಸ್ಥಿಕಸ್ವರೂಪಗಳನ್ನು ಒಂದು ಹಂತಗಳಲ್ಲಿ ಅವರ ಬರಹಗಳು ಬೆಂಬಲಿಸುತ್ತವೆ ಕೂಡಾ. ಅದು ಅವರ ಬದುಕಿನ ತರ್ಕವೂ ಆಗಿರುವಂತಿದೆ.

ಕೆಲವೇ ಸಮಯ ಒಟ್ಟಿಗೆ ಕೆಲಸ ಮಾಡಿದ ನಾವಿಬ್ಬರೂ ಒಟ್ಟಿಗೇ ವರ್ಗಾವಣೆ ಪಡೆದು ಹಿರೇಕೆರೂರನ್ನು ಬಿಟ್ಟು ನಾನು ಉಡುಪಿಗೆ ಬಂದೆ ಅವರು ಧಾರವಾಡಕ್ಕೆ ಹೋದರು. ಆದರೆ ನಮ್ಮ ಗೆಳೆತನ ಹಾಗೆಯೇ ಉಳಿದಿತ್ತು. ಅವರ ಹಟಕ್ಕೆ ಕಟ್ಟುಬಿದ್ದು ಕಾರವಾರದ ‘ಕರಾವಳಿ ಮುಂಜಾವು’ ದಿನಪತ್ರಿಕೆಯಲ್ಲಿ ನಾನು ಒಂದು ವರ್ಷದ ತನಕ ಅಂಕಣವನ್ನೂ ಬರೆದೆ. ಹೀಗೆ ಸಲುಗೆಯಲ್ಲಿ ಒತ್ತಾಯಿಸಬಲ್ಲ, ಅಷ್ಟೇ ಸಲೀಸಾಗಿ ತಾನು ಕಂಡ ಮಿತಿಯನ್ನು ಹೇಳಬಲ್ಲ ಪ್ರೀತಿಯ ಜೋಗುರ ಇನ್ನಿಲ್ಲವಾದರು ಎಂಬುದು ನನ್ನನ್ನೂ ಒಳಗೊಂಡಂತೆ ಅನೇಕ ಗೆಳೆಯರಿಗೆ ಮರೆಯಲಾರದ ನೋವು. ಆದರೆ ಅಗಲಿ ಹೋದ ಈ ಪ್ರೀತಿಯ ಕರುಳು ನಮ್ಮೊಳಗೆ ಉಳಿಸಿ ಹೋದ ಗೆಳೆತನದ ತೇವ ಮತ್ತು ಅಗಲಿಕೆಯ ನೋವುಗಳಲ್ಲಿ ಆ ಜೀವದ ನೆನಪು ನಮ್ಮೊಳಗೆ ಹಸಿರಾಗಿರಲಿ ಎಂಬುದಷ್ಟೇ ಕರಗಿ ಹೋದ ಗೆಳೆಯನಿಗೆ ನಮ್ಮೆಲ್ಲರ ಹರಕೆ ಎಂದುಕೊಳ್ಳುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...