Homeಮುಖಪುಟಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

ಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

- Advertisement -
- Advertisement -

ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆ ಹಿನ್ನೆಲೆಯಲ್ಲಿ ಭಾರತ ಹಾಗೂ ಕೆನಡಾ ನಡುವೆ ಉದ್ಭವಿಸಿರುವ ರಾಜತಾಂತ್ರಿಕ ಸಂಘರ್ಷ ಪರಿಸ್ಥಿತಿಯ ಹಿನ್ನೆಲೆಯಲ್ಲಿ 41 ಕೆನಡಿಯನ್ ರಾಜತಾಂತ್ರಿಕರನ್ನು ಭಾರತದಿಂದ ವಾಪಾಸು ಕರೆಸಿಕೊಳ್ಳಲಾಗಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಮೆಲೈನ್ ಜೋಲಿ ಗುರುವಾರ ಪ್ರಕಟಿಸಿದ್ದಾರೆ.

ಶುಕ್ರವಾರದ ರಾಜತಾಂತ್ರಿಕರ ಅಧಿಕೃತ ಸ್ಥಾನಮಾಣವನ್ನು ರದ್ದುಪಡಿಸಿರುವ ಭಾರತದ ಕ್ರಮ ಅತಾರ್ಕಿಕ ಹಾಗೂ ಹಿಂದೆಂದೂ ಕಂಡರಿಯದ ಕ್ರಮ ಎಂದು ಅವರು ಹೇಳಿದ್ದಾರೆ. ಜತೆಗೆ ಇದು ರಾಜತಾಂತ್ರಿಕ ಸಂಬಂಧಗಳ ಕುರಿತ ವಿಯೆನ್ನಾ ಒಪ್ಪಂದದ ಸ್ಪಷ್ಟ ಉಲ್ಲಂಘನೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಭಾರತದ ಈ ಕ್ರಮ ನಮ್ಮ ರಾಜತಾಂತ್ರಿಕ ಸಿಬ್ಬಂದಿಯ ಸುರಕ್ಷತೆಯ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ಅವರು ಭಾರತದಿಂದ ಸುರಕ್ಷಿತವಾಗಿ ವಾಪಸ್ಸಾಗಲು ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದೇವೆ” ಎಂದು ಅವರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

“ರಾಜತಾಂತ್ರಿಕ ವಿಶೇಷ ಹಕ್ಕುಗಳ ರೂಢಿ ತಪ್ಪಲು ನಾವು ಅವಕಾಶ ಮಾಡಿಕೊಟ್ಟರೆ, ಭೂಮಂಡಲದ ಯಾವ ರಾಜತಾಂತ್ರಿಕರೂ ಸುರಕ್ಷಿತವಲ್ಲ. ಈ ಕಾರಣದಿಂದ ನಾವು ಪ್ರತಿಯಾಗಿ ಕ್ಮ ಕೈಗೊಂಡಿಲ್ಲ. 41 ಮಂದಿ ರಾಜತಾಂತ್ರಿಕರು 42 ಅವಲಂಬಿತರನ್ನು ಹೊಂದಿದ್ದರು ಎಂದು ವಿವರಿಸಿದ್ದರೆ.

”ಭಾರತದಿಂದ ಅವರ ಸುರಕ್ಷಿತ ನಿರ್ಗಮನವನ್ನು ನಾವು ಸುಗಮಗೊಳಿಸಿದ್ದೇವೆ. ಇದರರ್ಥ ನಮ್ಮ ರಾಜತಾಂತ್ರಿಕರು ಮತ್ತು ಅವರ ಕುಟುಂಬಗಳು ಈಗ ತೊರೆದಿದ್ದಾರೆ” ಎಂದು ಜೋಲಿ ಹೇಳಿದರು.

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆ ಹಿಂದೆ ಭಾರತೀಯ ಏಜೆಂಟ್‌ಗಳ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜೆಸ್ಟಿನ್ ಟ್ರುದೇವ್ ಆಪಾಧಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕಳೆದ ತಿಂಗಳ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಭಾರತದಲ್ಲಿರುವ ಕೆನಡಾ ರಾಜತಾಂತ್ರಿಕ ಸಿಬ್ಬಂದಿಯನ್ನು ಕಡಿತಗೊಳಿಸುವಂತೆ ಸೂಚನೆ ನೀಡಿತ್ತು.

ಭಾರತದಿಂದ ಪ್ರತ್ಯೇಕಿಸಲ್ಪಟ್ಟ ಪ್ರತ್ಯೇಕ ಸಿಖ್ ರಾಜ್ಯಕ್ಕಾಗಿ ಪ್ರತಿಪಾದಿಸಿದ ನಿಜ್ಜರ್, ಭಯೋತ್ಪಾದನೆ ಮತ್ತು ಕೊಲೆಗೆ ಸಂಚು ರೂಪಿಸಿದ ಆರೋಪದಲ್ಲಿ ಭಾರತೀಯ ಅಧಿಕಾರಿಗಳಿಗೆ ಬೇಕಾಗಿದ್ದರು.

”ಕೆನಡಾ ಅಂತಾರಾಷ್ಟ್ರೀಯ ಕಾನೂನನ್ನು ರಕ್ಷಿಸುವುದನ್ನು ಮುಂದುವರಿಸುತ್ತದೆ, ಇದು ಎಲ್ಲಾ ರಾಷ್ಟ್ರಗಳಿಗೆ ಅನ್ವಯಿಸುತ್ತದೆ ಮತ್ತು ಭಾರತದೊಂದಿಗೆ ತೊಡಗಿಸಿಕೊಳ್ಳುವುದನ್ನು ಮುಂದುವರಿಸುತ್ತದೆ” ಎಂದು ಅವರು ಹೇಳಿದರು.

”ಈಗ ನಮಗೆ ನೆಲದ ಮೇಲೆ ರಾಜತಾಂತ್ರಿಕರ ಅಗತ್ಯವಿದೆ ಮತ್ತು ನಾವು ಪರಸ್ಪರ ಮಾತನಾಡಬೇಕಾಗಿದೆ” ಎಂದು ಜೋಲಿ ಹೇಳಿದರು.

ಇದನ್ನೂ ಓದಿ: ಭಾರತದಿಂದ ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಾಸ್ಸು ಕರೆಸಿಕೊಂಡ ಕೆನಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...