Homeಮುಖಪುಟಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

ಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

- Advertisement -
- Advertisement -

ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆ ಹಿನ್ನೆಲೆಯಲ್ಲಿ ಭಾರತ ಹಾಗೂ ಕೆನಡಾ ನಡುವೆ ಉದ್ಭವಿಸಿರುವ ರಾಜತಾಂತ್ರಿಕ ಸಂಘರ್ಷ ಪರಿಸ್ಥಿತಿಯ ಹಿನ್ನೆಲೆಯಲ್ಲಿ 41 ಕೆನಡಿಯನ್ ರಾಜತಾಂತ್ರಿಕರನ್ನು ಭಾರತದಿಂದ ವಾಪಾಸು ಕರೆಸಿಕೊಳ್ಳಲಾಗಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಮೆಲೈನ್ ಜೋಲಿ ಗುರುವಾರ ಪ್ರಕಟಿಸಿದ್ದಾರೆ.

ಶುಕ್ರವಾರದ ರಾಜತಾಂತ್ರಿಕರ ಅಧಿಕೃತ ಸ್ಥಾನಮಾಣವನ್ನು ರದ್ದುಪಡಿಸಿರುವ ಭಾರತದ ಕ್ರಮ ಅತಾರ್ಕಿಕ ಹಾಗೂ ಹಿಂದೆಂದೂ ಕಂಡರಿಯದ ಕ್ರಮ ಎಂದು ಅವರು ಹೇಳಿದ್ದಾರೆ. ಜತೆಗೆ ಇದು ರಾಜತಾಂತ್ರಿಕ ಸಂಬಂಧಗಳ ಕುರಿತ ವಿಯೆನ್ನಾ ಒಪ್ಪಂದದ ಸ್ಪಷ್ಟ ಉಲ್ಲಂಘನೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಭಾರತದ ಈ ಕ್ರಮ ನಮ್ಮ ರಾಜತಾಂತ್ರಿಕ ಸಿಬ್ಬಂದಿಯ ಸುರಕ್ಷತೆಯ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ಅವರು ಭಾರತದಿಂದ ಸುರಕ್ಷಿತವಾಗಿ ವಾಪಸ್ಸಾಗಲು ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದೇವೆ” ಎಂದು ಅವರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

“ರಾಜತಾಂತ್ರಿಕ ವಿಶೇಷ ಹಕ್ಕುಗಳ ರೂಢಿ ತಪ್ಪಲು ನಾವು ಅವಕಾಶ ಮಾಡಿಕೊಟ್ಟರೆ, ಭೂಮಂಡಲದ ಯಾವ ರಾಜತಾಂತ್ರಿಕರೂ ಸುರಕ್ಷಿತವಲ್ಲ. ಈ ಕಾರಣದಿಂದ ನಾವು ಪ್ರತಿಯಾಗಿ ಕ್ಮ ಕೈಗೊಂಡಿಲ್ಲ. 41 ಮಂದಿ ರಾಜತಾಂತ್ರಿಕರು 42 ಅವಲಂಬಿತರನ್ನು ಹೊಂದಿದ್ದರು ಎಂದು ವಿವರಿಸಿದ್ದರೆ.

”ಭಾರತದಿಂದ ಅವರ ಸುರಕ್ಷಿತ ನಿರ್ಗಮನವನ್ನು ನಾವು ಸುಗಮಗೊಳಿಸಿದ್ದೇವೆ. ಇದರರ್ಥ ನಮ್ಮ ರಾಜತಾಂತ್ರಿಕರು ಮತ್ತು ಅವರ ಕುಟುಂಬಗಳು ಈಗ ತೊರೆದಿದ್ದಾರೆ” ಎಂದು ಜೋಲಿ ಹೇಳಿದರು.

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆ ಹಿಂದೆ ಭಾರತೀಯ ಏಜೆಂಟ್‌ಗಳ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜೆಸ್ಟಿನ್ ಟ್ರುದೇವ್ ಆಪಾಧಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕಳೆದ ತಿಂಗಳ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಭಾರತದಲ್ಲಿರುವ ಕೆನಡಾ ರಾಜತಾಂತ್ರಿಕ ಸಿಬ್ಬಂದಿಯನ್ನು ಕಡಿತಗೊಳಿಸುವಂತೆ ಸೂಚನೆ ನೀಡಿತ್ತು.

ಭಾರತದಿಂದ ಪ್ರತ್ಯೇಕಿಸಲ್ಪಟ್ಟ ಪ್ರತ್ಯೇಕ ಸಿಖ್ ರಾಜ್ಯಕ್ಕಾಗಿ ಪ್ರತಿಪಾದಿಸಿದ ನಿಜ್ಜರ್, ಭಯೋತ್ಪಾದನೆ ಮತ್ತು ಕೊಲೆಗೆ ಸಂಚು ರೂಪಿಸಿದ ಆರೋಪದಲ್ಲಿ ಭಾರತೀಯ ಅಧಿಕಾರಿಗಳಿಗೆ ಬೇಕಾಗಿದ್ದರು.

”ಕೆನಡಾ ಅಂತಾರಾಷ್ಟ್ರೀಯ ಕಾನೂನನ್ನು ರಕ್ಷಿಸುವುದನ್ನು ಮುಂದುವರಿಸುತ್ತದೆ, ಇದು ಎಲ್ಲಾ ರಾಷ್ಟ್ರಗಳಿಗೆ ಅನ್ವಯಿಸುತ್ತದೆ ಮತ್ತು ಭಾರತದೊಂದಿಗೆ ತೊಡಗಿಸಿಕೊಳ್ಳುವುದನ್ನು ಮುಂದುವರಿಸುತ್ತದೆ” ಎಂದು ಅವರು ಹೇಳಿದರು.

”ಈಗ ನಮಗೆ ನೆಲದ ಮೇಲೆ ರಾಜತಾಂತ್ರಿಕರ ಅಗತ್ಯವಿದೆ ಮತ್ತು ನಾವು ಪರಸ್ಪರ ಮಾತನಾಡಬೇಕಾಗಿದೆ” ಎಂದು ಜೋಲಿ ಹೇಳಿದರು.

ಇದನ್ನೂ ಓದಿ: ಭಾರತದಿಂದ ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಾಸ್ಸು ಕರೆಸಿಕೊಂಡ ಕೆನಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...