Homeಮುಖಪುಟಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

ಉದ್ಯಮಿ ದರ್ಶನ್ ಹಿರಾನಂದಾನಿಯ ಅಫಿಡವಿಟ್‌ಗೆ ಮಹುವಾ ಮೊಯಿತ್ರಾ ಕಿಡಿ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಗುರುವಾರ ರಾತ್ರಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಸಹಿ ಮಾಡಿದ ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ವಿವರವಾದ ಹೇಳಿಕೆಯನ್ನು ನೀಡಿದ್ದಾರೆ.

ಈ ಕುರಿತಂತೆ ಮಹುವಾ ಮೊಯಿತ್ರಾ ಅವರು, ಎರಡು ಪುಟಗಳ ಹೇಳಿಕೆ ಹಾಗೂ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ”ಪ್ರಧಾನಿ ಕಾರ್ಯಾಲಯವು ಬೆದರಿಕೆ ತಂತ್ರಗಳ ಮೂಲಕ ಶ್ವೇತಪತ್ರಕ್ಕೆ ಸಹಿಹಾಕಿಸಿದೆ ಹಾಗೂ ನಂತರ ಅದನ್ನು ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ದರ್ಶನ್‌ ಹಿರಾನಂದಾನಿ ಅವರಿಗೆ ಸಿಬಿಐ ಅಥವಾ ನೈತಿಕತೆ ಸಮಿತಿ ಸಮನ್ಸ್‌ ಕಳುಹಿಸಿಲ್ಲ, ಅಥವಾ ಯಾವುದೇ ತನಿಖಾ ಏಜನ್ಸಿ ಇಂತಹ ಕ್ರಮಕೈಗೊಂಡಿಲ್ಲ. ಹಾಗಿದ್ದರೆ ಅವರು ಅಫಿಡವಿಟ್‌ ನೀಡಿದ್ದಾದರೂ ಯಾರಿಗೆ?” ಎಂದು ಮಹುವಾ ಅವರು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

”ಈ ಅಫಿಡವಿಟ್‌ ಅಧಿಕೃತ ಲೆಟರ್‌ಹೆಡ್‌ನಲ್ಲಿಲ್ಲ ಅಥವಾ ನೋಟರಿ ಸಹಿಯಿಲ್ಲ, ಅದನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿಲ್ಲ ಬದಲು ಆಯ್ದ ಮಾಧ್ಯಮಕ್ಕೆ ಸೋರಿಕೆ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ಧಾರೆ.

”ಅದಾನಿಯನ್ನು ಪ್ರಶ್ನಿಸುವ ಧೈರ್ಯ ತೋರುವ ಪ್ರತಿ ರಾಜಕೀಯ ನಾಯಕರ ವಿರುದ್ಧ ದ್ವೇಷ ಸಾಧಿಸುವ ರೀತಿಯಿದು” ಎಂದು ಅವರು ಹೇಳಿದ್ದಾರೆ.

ಅಫಿಡವಿಟ್‌ಗೆ ಪ್ರತಿಕ್ರಿಯೆಯಾಗಿ ಮೊಯಿತ್ರಾ ಹೇಳಿದ್ದು ಇಲ್ಲಿದೆ:

”ಮೂರು ದಿನಗಳ ಹಿಂದೆ (16.10.2023), ಹಿರಾನಂದಾನಿ ಗ್ರೂಪ್ ತಮ್ಮ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳು ಆಧಾರರಹಿತ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ನೀಡಿತು. ಇಂದು (19.10.2023) “ಅನುಮೋದಕ ಅಫಿಡವಿಟ್” ಪತ್ರಿಕೆಗಳಿಗೆ ಸೋರಿಕೆಯಾಗಿದೆ. ಈ “ಅಫಿಡವಿಟ್” ಲೆಟರ್‌ಹೆಡ್‌ ಇಲ್ಲದ ಬಿಳಿ ಕಾಗದದ ಮೇಲೆ ಮತ್ತು ಪತ್ರಿಕಾ ಸೋರಿಕೆಯ ಹೊರತಾಗಿ ಯಾವುದೇ ಅಧಿಕೃತ ಮೂಲವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ಪ್ರಶ್ನೆಗಳನ್ನು ತುರ್ತಾಗಿ ಕೇಳಬೇಕಾಗಿದೆ: 1. ದರ್ಶನ್ ಹಿರಾನಂದನಿಗೆ ಸಿಬಿಐ ಅಥವಾ ನೈತಿಕ ಸಮಿತಿ ಅಥವಾ ಯಾವುದೇ ತನಿಖಾ ಸಂಸ್ಥೆಯು ಇನ್ನೂ ಸಮನ್ಸ್ ನೀಡಿಲ್ಲ. ಹಾಗಾದರೆ ಅವರು ಈ ಅಫಿಡವಿಟ್ ಅನ್ನು ಯಾರಿಗೆ ನೀಡಿದ್ದಾರೆ?

2. ಅಫಿಡವಿಟ್ ಬಿಳಿ ಕಾಗದದಲ್ಲಿದೆ ಮತ್ತು ಅಧಿಕೃತ ಲೆಟರ್‌ಹೆಡ್ ಅಥವಾ ನೋಟರೈಸ್ ಮಾಡಿಲ್ಲ. ಭಾರತದ ಅತ್ಯಂತ ಗೌರವಾನ್ವಿತ/ಶಿಕ್ಷಿತ ಉದ್ಯಮಿಯೊಬ್ಬರು ಈ ರೀತಿಯ ಪತ್ರಕ್ಕೆ ಬಿಳಿ ಕಾಗದದ ಮೇಲೆ ಏಕೆ ಸಹಿ ಹಾಕುತ್ತಾರೆ? ಈ ರೀತಿ ಮಾಡಲು ಅವರ ತಲೆಗೆ ಬಂದೂಕು ಇರಿಸಿದ್ದರೇ?

ಅಫಿಡವಿಟ್‌ನಲ್ಲಿ ಏನಿದೆ?

ಮಹುವಾ ಅವರು ಪ್ರಧಾನಿ ಮೋದಿಯವರನ್ನು ಗುರಿ ಮಾಡಲು ಹಾಗೂ ಅವರ ಮಾನಹಾನಿಗೈಯ್ಯಲು ಅದಾನಿ ಸಮೂಹದ ವಿಚಾರ ಬಳಸಲು ತಮ್ಮ ಸಹಾಯ ಕೇಳಿದ್ದರು ಎಂದು ಹಿರಾನಂದಾನಿ ಅವರ ಅಫಿಡವಿಟ್‌ ಹೇಳಿದೆ.

ಗೌತಮ್‌ ಅದಾನಿ ವಿರುದ್ಧ ದಾಳಿ ನಡೆಸುವ ಮೂಲಕ ಪ್ರಧಾನಿ ಮೋದಿ ವಿರುದ್ಧ ದಾಳಿ ನಡೆಸಲು ಇರುವ ಏಕೈಕ ಮಾರ್ಗ ಎಂದು ಮಹುವಾ ನಂಬಿದ್ದರು ಮತ್ತು ಅದಕ್ಕೆ ಬೆಂಬಲ ನಿರೀಕ್ಷಿಸಿದ್ದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಇದಕ್ಕಾಗಿ ತಾನು ಪ್ರಶ್ನೆ ರಚಿಸುವಂತಾಗಲು ಮಹುವಾ ತಮ್ಮ ಪಾರ್ಲಿಮೆಂಟ್‌ ಲಾಗಿನ್‌ ಐಡಿ ತಮಗೆ ನೀಡಿದ್ದರು ಎಂದೂ ಹಿರಾನಂದಾನಿ ಹೇಳಿಕೊಂಡಿದ್ದಾರೆ.

ಮಹುವಾ ಅವರು ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ, ಅವರನ್ನು ತಕ್ಷಣ  ಅಮಾನತುಗೊಳಿಸಬೇಕೆಂದು ಕೋರಿ ಕಳೆದ ವಾರ ಬಿಜೆಪಿ ಸಂಸದ ನಿಷಿಕಾಂತ್‌ ದುಬೆ ಅವರು ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...