Homeಕರ್ನಾಟಕಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ

- Advertisement -
- Advertisement -

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ಎಸ್ ಸಸಿಕಾಂತ್ ಸೆಂಥಿಲ್ ರವರು ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ತಾವು ರಾಜಿನಾಮೆ ನೀಡುವುದಕ್ಕೆ ಕಾರಣಗಳನ್ನು ನೀಡಿ ಪತ್ರ ಬರೆದಿದ್ದಾರೆ. ಅದರ ಕನ್ನಡ ಅನುವಾದ ಇಲ್ಲಿದೆ ನೋಡಿ.

ಆತ್ಮೀಯ ಗೆಳೆಯರೆ,

“ಇಂದು ಭಾರತೀಯ ಆಡಳಿತ ಸೇವೆಗೆ ನಾನು ರಾಜೀನಾಮೆಯನ್ನು ನೀಡುತ್ತಿದ್ದೇನೆ. ಈ ಸಮಯದಲ್ಲಿ, ಈ ನಿರ್ಧಾರವು ಕೇವಲ ವೈಯಕ್ತಿಕ ನಿರ್ಧಾರ ಎಂದು ಸ್ಪಷ್ಟಪಡಿಸುವುದು ನನಗೆ ಮುಖ್ಯವಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ನನ್ನ ಪ್ರಸ್ತುತ ಪ್ರೊಫೈಲ್‌ನಲ್ಲಿ ಯಾರೊಂದಿಗೂ ಅಥವಾ ಯಾವುದೇ ಘಟನೆಯೊಂದಿಗೆ ಸಂಪರ್ಕ ಹೊಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಮತ್ತು ಜನ ಪ್ರತಿನಿಧಿಗಳ ನನಗೆ ಅತ್ಯುತ್ತಮ ಸಹಕಾರ ನೀಡಿದ್ದಾರೆ ಅವರಿಗೆ ಧನ್ಯವಾದಗಳು ಮತ್ತು ಮಧ್ಯೆಯೇ ನಾನು ಕೆಲಸವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಕ್ಷಮೆಯಾಚಿಸುತ್ತೇನೆ.”

“ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ. ಬಹುತ್ವದ ಬೇರುಗಳಿಗೆ ಭವಿಷ್ಯದಲ್ಲಿ ಭಾರೀ ಅಪಾಯ ಕಾದಿದೆ. ಮುಂಬರುವ ದಿನಗಳು ನಮ್ಮ ರಾಷ್ಟ್ರಕ್ಕೆ ಅತ್ಯಂತ ಕಷ್ಟಕರವಾದ ಸವಾಲುಗಳನ್ನು ಇರುವುದರಿಂದ ನಾನ ಹೊರಗಿನಿಂದ ನಿಂತು ಜನರಿಗಾಗಿ ದುಡಿಯುವುದೇ ಲೇಸು ಎಂದು ನನಗನ್ನಿಸುತ್ತಿದೆ. ಕೇವಲ ವ್ಯಾವಹಾರಿಕ ಮಾತ್ರವಲ್ಲದೇ ನನ್ನೊಂದಿಗೆ ಕೆಲಸ ಮಾಡಿದ, ನನ್ನ ಹಾದಿಯಲ್ಲಿ ಜೊತೆಗೂಡಿದ ಎಲ್ಲಾ ಸ್ನೇಹಿತರಿಗೂ, ಅವರ ಕುಟುಂಬ ವರ್ಗಕ್ಕೂ ಪ್ರೀತಿ ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ.”

2009ರ ಐ.ಎ.ಎಸ್ ಕೇಡರ್ ಆದ ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ರಾಜಿನಾಮೆ ನೀಡುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಜನ ನಿರಾಸೆ ವ್ಯಕ್ತಪಡಿಸಿದ್ದಾರೆ. ಇನ್ನಷ್ಟು ದಿನ ಅವರು ಸೇವೆಯಲ್ಲಿರಬೇಕಿತ್ತು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಲು ಸಾಲಾಗಿ ಐ.ಎ.ಎಸ್ ಅಧಿಕಾರಿಗಳು ರಾಜಿನಾಮೆ ನೀಡುತ್ತಿರುವುದಕ್ಕೆ ಇಂದಿನ ಭಾರತದ ಸ್ಥಿತಿಯೇ ಕಾರಣವೇ ಎಂಬ ಅಸಮಾಧಾನ ಕೂಡ ಬರುತ್ತಿದೆ. ಕಳೆದ 10 ದಿನಗಳ ಹಿಂದಷ್ಟೇ ಕಣ್ಣನ್ ಗೋಪಿನಾಥ್ ಎಂಬ ಐ.ಎ.ಎಸ್ ಅಧಿಕಾರಿ ಕೂಡ ರಾಜಿನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಾರತದ ಮೂಲಭೂತ ಗುಣಗಳಾದ ಬಹುತ್ವ ಮತ್ತು ಪ್ರಜಾಪ್ರಭುತ್ವಕ್ಕೆ ಹಿಂದೆಂದೂ ಕಾಣದ ರೀತಿಯಲ್ಲಿ ಧಕ್ಕೆಯಾಗುತ್ತಿರುವಾಗ ನಾಗರಿಕ ಸೇವೆಯಲ್ಲಿ ( IAS) ಮುಂದುವರಿಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ ದಕ ಜಿಲ್ಲೆಯ ಅತ್ಯಂತ ದಕ್ಷ ಜಿಲ್ಲಾಧಿಕಾರಿ ಶ್ರೀ ಸೆಂಥಿಲ್ ಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

    ದೇಶದ ಅರ್ಥ ವ್ಯವಸ್ಥೆ ವೇಗವಾಗಿ ಕುಸಿಯುತ್ತಿದೆ. ಲಕ್ಷಾಂತರ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ. ಕಾಶ್ಮೀರವನ್ನು ಸೈನಿಕರು ಆಳುತ್ತಿದ್ದಾರೆ. ಉತ್ತರಪೂರ್ವದ ಸುಮಾರು ೭೦ ಲಕ್ಷ ಜನ ಭಯಭೀತರಾಗಿದ್ದಾರೆ. ವಿಜ್ಞಾನಿಗಳು ಒಳ್ಳೆ ಮಕ್ಕಳು ಹುಟ್ಟಲು ಗರ್ಭಿಣಿಯರಿಗೆ ಸೆಗಣಿ ತಿನ್ನಲು ಹೇಳುತ್ತಿದ್ದಾರೆ. ರಾಜಕಾರಣಿಗಳು ಬೆಂಕಿಹಚ್ಚುವ ಮಾತಾಡುತ್ತಿದ್ದಾರೆ.

    ಯಾರಿಗಾಗಿ? ಯಾರು? ಯಾವ ಬಗೆಯ ನಾಡನ್ನು ಕಟ್ಟುತ್ತಿದ್ದಾರೋ ತಿಳಿದವರು ಹೇಳಬೇಕು.

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....