Homeಮುಖಪುಟಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

ಅಫಿಡವಿಟ್‌ ಸೋರಿಕೆ ವಿಚಾರ: ಕೇಂದ್ರ ಸರ್ಕಾರಕ್ಕೆ ಮಹುವಾ ಮೊಯಿತ್ರಾ ತರಾಟೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಅಫಿಡವಿಟ್‌ ಸೋರಿಕೆ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಎಕ್ಸಾನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ”ನೈತಿಕ ಸಮಿತಿಯ ಅಧ್ಯಕ್ಷರು ಮಾಧ್ಯಮಗಳೊಂದಿಗೆ ಬಹಿರಂಗವಾಗಿ ಮಾತನಾಡುತ್ತಾರೆ. ದಯವಿಟ್ಟು ಕೆಳಗಿನ ಲೋಕಸಭೆಯ ನಿಯಮಗಳನ್ನು ನೋಡಿ. “ಅಫಿಡವಿಟ್” ಮಾಧ್ಯಮಗಳಿಗೆ ಹೇಗೆ ಸಿಗುತ್ತದೆ? ಇದು ಹೇಗೆ ಸೋರಿಕೆಯಾಗಿದೆ ಎಂಬ ಬಗ್ಗೆ ಅಧ್ಯಕ್ಷರು ಮೊದಲು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

”ಬಿಜೆಪಿ ಏಕೈಕ ಅಜೆಂಡಾ ಎಂದರೆ, ಅದಾನಿಯ ವಿಚಾರದಲ್ಲಿ ನನ್ನ ಬಾಯಿ ಮುಚ್ಚಿಸಲು ನನ್ನನ್ನು ಲೋಕಸಭೆಯಿಂದಲೇ ಹೊರಹಾಕುವುದಾಗಿದೆ” ಎಂದು ಕಿಡಿಕಾರಿದ್ದಾರೆ.

”ಸಿಬಿಐ ಮತ್ತು ನೈತಿಕ ಸಮಿತಿ (ಇದು ಬಿಜೆಪಿ ಸದಸ್ಯರ ಸಂಪೂರ್ಣ ಬಹುಮತವನ್ನು ಹೊಂದಿರುವ ಸಮಿತಿ)  ನನ್ನನ್ನು ಕರೆದರೆ ಮತ್ತು ನನ್ನನ್ನು ಪ್ರಶ್ನಿಸಿದರೆ ನಾನು ಸ್ವಾಗತಿಸುತ್ತೇನೆ. ಅದಾನಿ ನಿರ್ದೇಶನದ ಮಾಧ್ಯಮ ಸರ್ಕಸ್ ವಿಚಾರಣೆಗೆ ಅಥವಾ ಬಿಜೆಪಿ ಟ್ರೋಲ್‌ಗಳಿಗೆ ಉತ್ತರಿಸಲು ನನಗೆ ಸಮಯ ಅಥವಾ ಆಸಕ್ತಿ ಇಲ್ಲ.
ನಾನು ನಾಡಿಯಾದಲ್ಲಿ ದುರ್ಗಾ ಪೂಜೆಯನ್ನು ಆನಂದಿಸುತ್ತಿದ್ದೇನೆ. ಶುಭೋ ಷಷ್ಠಿ” ಎಂದಿದ್ದಾರೆ.

ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಅಫಿಡವಿಟ್‌ ಸೋರಿಕೆ ವಿಚಾರವಾಗಿ ಬಿಜೆಪಿ ಸಂಸದ ವಿರುದ್ಧ ಹರಿಹಾಯ್ದ ಮಹುವಾ ಮೊಯಿತ್ರಾ ಅವರು, ”ತಮ್ಮ PA ಗಳು ಮತ್ತು ಸಂಶೋಧಕರು/ಇಂಟರ್ನ್‌ಗಳು/ಸಿಬ್ಬಂದಿಗಳ ID ಗಳನ್ನು ಪರಿಕ್ಷಿಸಿದರೆ ಅವರು ಯಾವ ಸ್ಥಳದಲ್ಲಿ ಇದ್ದಾರೆ ಎಂಬುದನ್ನು ತೋರಿಸಬಹುದು. ದಯವಿಟ್ಟು ಸಾರ್ವಜನಿಕವಾಗಿ ಸಂಸದರ ಎಲ್ಲಾ ವಿವರಗಳನ್ನು ಬಿಡುಗಡೆ ಮಾಡಲು NICಗೆ ವಿನಂತಿಸುತ್ತೇನೆ. ಸೋರಿಕೆಗಾಗಿ ನಕಲಿ ಪದವಿ ವಾಲಾವನ್ನು ಬಳಸಬೇಡಿ, ಇದೀಗ ಇದನ್ನು ಸಾರ್ವಜನಿಕಗೊಳಿಸಿ” ಎಂದು ಹೇಳಿದ್ದಾರೆ.

ಹೆಸರಿಸದ ವಿದೇಶಿ ಬಂಡವಾಳ ಹೂಡಿಕೆಯನ್ನು ಅದಾನಿ ಷೇರುಗಳಲ್ಲಿದೆ, ಅದರ ಮೂಲವನ್ನು ಸೆಬಿಯು ಕಂಡುಹಿಡಿಯಲಿಲ್ಲ ಮತ್ತು ಮುಂಬೈ ವಿಮಾನ ನಿಲ್ದಾಣವನ್ನು ಖರೀದಿಸಲು ಅದಾನಿ ಗೃಹ ವ್ಯವಹಾರಗಳ ಸಚಿವಾಲಯd ಅನುಮತಿಯನ್ನು ಪಡೆಯುತ್ತಾರೆ.

”ಕ್ಷಮಿಸಿ ಮಿಸ್ಟರ್ ಅದಾನಿ, ಪ್ರತಿಯಾಗಿ ನಾನು ಸುಮ್ಮನಿರಲು ಆರು ತಿಂಗಳವರೆಗೆ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿಲ್ಲ. ಹೌದು, ನಾನು ಎರಡನೇ ಒಪ್ಪಂದವನ್ನು ತೆಗೆದುಕೊಳ್ಳುತ್ತಿಲ್ಲ, ಏಕೆಂದರೆ ನನಗೆ ನಿಮ್ಮ ಮೇಲೆ ದಾಳಿ ಮಾಡಲು ಈಗ ಅವಕಾಶವಿದೆ, ಆದರೆ PMಗೆ ಆ ಅವಕಾಶ ಇಲ್ಲ” ಎಂದು ಕುಟುಕಿದ್ದಾರೆ.

”ಅದಾನಿ ಪ್ರಶ್ನೆ ಮಾಡದಿರಲು ಹಣ ನೀಡುತ್ತಿದ್ದರು, ಈಗ ಅವರು ಪ್ರಶ್ನೆಗಳಿಗೆ ನಕಲಿ ನಗದು ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

”ಸಿಬಿಐ ದಾಳಿ ನಡೆಯಲಿರುವ ಬಗ್ಗೆ ಕೂಡ ಸಂದೇಶ ಬಂದಿದೆ. ನಾನು ದುರ್ಗಾ ಪೂಜೆಯಲ್ಲಿ ನಿರತನಾಗಿದ್ದೇನೆ. ಮನೆಗೆ ಬಂದು ನನ್ನ ಜೋಡಿ ಶೂಗಳನ್ನು ಎಣಿಸಲು ನಾನು ಸಿಬಿಐ ಅನ್ನು ಆಹ್ವಾನಿಸುತ್ತೇನೆ. ಆದರೆ ಮೊದಲು ದಯವಿಟ್ಟು ಅದಾನಿ ಭಾರತೀಯರಿಂದ ಕದ್ದ ₹13,000 ಕೋಟಿ ಕಲ್ಲಿದ್ದಲು ಹಣಕ್ಕೆ ಎಫ್‌ಐಆರ್ ದಾಖಲಿಸಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...