Homeಕರ್ನಾಟಕBJP ಟಿಕೆಟ್ ಕೊಡಿಸುವುದಾಗಿ ವಂಚನೆ, ಕಟೀಲ್ ಶಾಮೀಲು: ಆರೋಪ

BJP ಟಿಕೆಟ್ ಕೊಡಿಸುವುದಾಗಿ ವಂಚನೆ, ಕಟೀಲ್ ಶಾಮೀಲು: ಆರೋಪ

- Advertisement -
- Advertisement -

ಚೈತ್ರಾ ವಂಚನೆ ಪ್ರಕರಣದ ಮಾದರಿಯಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿರುವ ಕುರಿತು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರದ ಟಿಕೆಟ್ ಕೋಡಿಸುವುದಾಗಿ ಕೊಟ್ಟೂರು ತಾಲೂಕಿನ ಬೆನಕನಹಳ್ಳಿಯ ರೇವಣಸಿದ್ದಪ್ಪ ಮತ್ತು ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್ ಪಿ ಎಂಬವರು ಒಟ್ಟು 2.03 ಕೋಟಿ ರೂ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ನಿವೃತ್ತ ಎಂಜಿನಿಯರ್ ಸಿ ಶಿವಮೂರ್ತಿ ಅವರು ದೂರು ದಾಖಲಿಸಿದ್ದಾರೆ.

”ಈ ವಂಚನೆ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರೂ ಶಾಮೀಲಾಗಿದ್ದಾರೆ. ಹಣವನ್ನು ವಾಪಾಸ್ ಕೊಡುವಂತೆ ಒತ್ತಾಯಿಸಿದರೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಲೋಕೋಪಯೋಗಿ (ಪಿಡಬ್ಲ್ಯುಡಿ) ಇಲಾಖೆಯ ನಿವೃತ್ತ ಸಹಾಯಕ ಅಭಿಯಂತರ ಶಿವಮೂರ್ತಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ರವಿವಾರ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಮೂರ್ತಿ ಅವರು, ”ಕೊಟ್ಟೂರಿನ ರೇವಣ ಸಿದ್ದಪ್ಪ ನನ್ನ ನಿವೃತ್ತಿ ಕಾರ್ಯಕ್ರಮದಲ್ಲಿ ಪರಿಚಯವಾಗಿ 2023ರ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ನನ್ನನ್ನು ಪದೇ ಪದೇ ಭೇಟಿ ಮಾಡಿ ಬಿಜೆಪಿಯ ಟಿಕೆಟನ್ನು ನಿಮಗೆ ಕೊಡಿಸುವೆ, ನೀವು ಟಿಕೆಟ್ ಪಡೆಯಲು ಯೋಗ್ಯರು.. ಎಂದು ಪುಸಲಾಯಿಸುವ ಮಾತುಗಳನ್ನು ಹೇಳಿ ನನಗೆ ಟಿಕೆಟ್ ಮೇಲೆ ಶ್ರದ್ಧೆ ಬರುವ ರೀತಿಯಲ್ಲಿ ನಡೆದುಕೊಂಡಿದ್ದರು. 2022ರ ಅ.23ರಂದು ರೇವಣಸಿದ್ದಪ್ಪ ನನ್ನನ್ನು ಬೆಂಗಳೂರಿಗೆ ಕರೆತಂದು ಒಂದು ಹೋಟೆಲ್‌ನಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ. ಎಂಬವರನ್ನು ಪರಿಚಯಿಸಿದ್ದರು” ಎಂದು ವಿವರಿಸಿದರು.

”ಶೇಖರ್ ಎಸ್.ಪಿ. ನನಗೆ ಪರಿಚಯ ಆದ ಮೇಲೆ, ಮಲ್ಲೇಶ್ವರದ ಬಿಜೆಪಿ ಕಚೇರಿ ಜಗನ್ನಾಥ ವನಕ್ಕೆ ಕರೆದುಕೊಂಡು ಹೋಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನನ್ನ ಆತ್ಮೀಯ ಸ್ನೇಹಿತರೆಂದು ಹೇಳಿ ಪರಿಚಸಿದರು. ನಳಿನ್ ಕುಮಾರ್ ಕಟೀಲು ನನ್ನ ಬಳಿ ಮಾತನಾಡಿ ಟಿಕೆಟ್ ವಿಚಾರದ ಎಲ್ಲ ವ್ಯವಹಾರವನ್ನು ಶೇಖರ್ ಎನ್.ಪಿ. ಅವರ ಬಳಿಯೇ ಮಾತನಾಡಿ” ಎಂದು ತಿಳಿಸಿದರು.

”ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಶೇಖರ್ ಎನ್.ಪಿ. ನನ್ನ ಬಳಿ ಹಣ ಕೇಳಿದರು. ಟಿಕೆಟ್ ಸಿಗದೇ ಇದ್ದ ಪಕ್ಷದಲ್ಲಿ ನಿಮ್ಮ ಹಣವನ್ನು ವಾಪಸ್ ನೀಡುತ್ತೇನೆಂದು ತಿಳಿಸಿದರು. ಹೀಗೆ 2022ರ ಅ.9ರಿಂದ ಆರಂಭವಾದ ನಮ್ಮ ಹಣದ ವ್ಯವಹಾರ ಎಪ್ರಿಲ್ 2023ಕ್ಕೆ 2.55 ಕೋಟಿ ರೂ. ಪಡೆದುಕೊಂಡಿದ್ದಾರೆ” ಎಂದು ಅವರು ದೂರಿದರು.

”2022ರ ಅ.15ರಂದು ಚಿತ್ರದುರ್ಗದಲ್ಲಿ ರಸ್ತೆಯ ಬಳಿ ಶೇಖರ್ ಎನ್.ಪಿ. ಕುಂದಾಪುರದ ಅರ್ಜುನ ಎಂಬವನನ್ನು ಕಳುಹಿಸಿ 50 ಲಕ್ಷ ರೂ. ಪಡೆದಿದ್ದಾರೆ. ಆನಂತರ ಆನ್ಲೈನ್ ಪೇಮೆಂಟ್ ಸೇರಿ ಇದೇ ರೀತಿಯಲ್ಲಿ 1 ಕೋಟಿ 65 ಲಕ್ಷ ರೂ. ಶೇಖರ್ ಎನ್.ಪಿ. ಅವರಿಗೆ ಸಂದಾಯವಾಗಿದೆ” ಎಂದು ಶಿವಮೂರ್ತಿ ವಿವರ ನೀಡಿದರು.

”ಇದರ ಜೊತೆಗೆ ಕೊಟ್ಟೂರು ತಾಲೂಕಿನ, ಬೆನಕನಹಳ್ಳಿ ಗ್ರಾಮದ ಬಿಜೆಪಿ ಮುಖಂಡನಾಗಿದ್ದ ರೇವಣಸಿದ್ದು ಬಿನ್ ಸಿದ್ದಲಿಂಗಪ್ಪ ಒಂದು ಹೋಟೆಲ್‌ ಗೆ ಕರೆದುಕೊಂಡು ಹೋಗಿ, ಬಿಜೆಪಿ ಹಿರಿಯ ನಾಯಕರಿಗೆ ಮತ್ತು ಇತರರಿಗೆ ಕೊಡಬೇಕೆಂದು ಹೇಳಿ 50 ಲಕ್ಷ ರೂ. ನಗದನ್ನು ಕುಗ್ಗಿ ತಾಲೂಕಿನ ಚಿಕ್ಕಹೋಗಿಗಹಳ್ಳಿ ಗ್ರಾಮದ ಆರೆಸೆಸ್ಸ್ ಮುಖಂಡರಾದ ನಾಗಣ್ಣ ಅವರು ಪಡೆದಿರುತ್ತಾರೆ” ಎಂದು ಶಿವಮೂರ್ತಿ ಹೇಳಿದರು.

”ಈ ಹಣವನ್ನು ನನ್ನ ಸ್ವಂತ ನಿವೇಶನವನ್ನು ಮಾರಾಟ ಮಾರಿ ನನ್ನ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ಮಾಡಿ, ನನ್ನ ಆಪ್ತ ಸ್ನೇಹಿತರಿಂದ ಸಾಲ ಪಡೆದು ಹಾಗೂ ನಿವೃತ್ತಿಯಿಂದ ಬಂದ ಹಣವನ್ನೆಲ್ಲಾ ಸೇರಿಸಿ ಇವರಿಗೆ ಕೊಟ್ಟಿರುತ್ತೇನೆ. ಇದಾದ ನಂತರದ ದಿನಗಳಲ್ಲಿ 2023ರ ಎಪ್ರಿಲ್ ತಿಂಗಳಿನಲ್ಲಿ ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರ(ಎಸ್ಸಿ)ದ ಬಿಜೆಪಿ ಟಿಕೆಟ್ ನನಗೆ ಬರುವುದಿಲ್ಲ. ಬದಲಿಗೆ ಬಿ.ರಾಮು ಎಂಬವರಿಗೆ ಸಿಗುತ್ತದೆ” ಎಂದು ಬೇಸರ ಹೊರಹಾಕಿದರು.

”ಇದರಿಂದ ಆಘಾತವಾದ ನನಗೆ ಏನು ಮಾಡಬೇಕೆಂದು ತಿಳಿಯದೆ ಮೇಲೆ ತಿಳಿಸಿರುವ ಹಣ ಪಡೆದವರಿಗೆ ಕರೆ ಮಾಡಿದಾಗ ಒಂದು ತಿಂಗಳು ಅವರು ನನ್ನ ಕರೆಯನ್ನು ಸ್ವೀಕರಿಸಲಿಲ್ಲ. ಬೇರೆಯವರ ನಂಬರಿನಿಂದ ಕರೆ ಮಾಡಿದಾಗ ಸ್ವೀಕರಿಸಿದ್ದಾರೆ. ಆಗ ನನ್ನ ಬಳಿ ಮಾತನಾಡಿದ ಇವರು ಹಣ ವಾಪಸ್ ನೀಡಲು ಹಲವಾರು ದಿನಾಂಕಗಳು, ಸಬೂಬುಗಳನ್ನು ನೀಡುತ್ತಾ ಬಂದಿದ್ದು, ಈವರೆಗೆ ಹಣ ನೀಡಲು ಸತಾಯಿಸುತ್ತಿದ್ದಾರೆ” ಎಂದು ಅವರು ದೂರಿದರು.

”ನನ್ನ ತಮ್ಮನ ಸ್ನೇಹಿತರು, ಕೆಲ ಸಂಘಟನೆಯವರ ಬಳಿ ಮಾತನಾಡಿದಾಗ ಚೆಕ್ ಕೊಟ್ಟರು. ಅವುಗಳು ಬೌನ್ಸ್ ಆಗಿವೆ. ಹಾಗಾಗಿ ನಾನು ಅನಿವಾರ್ಯವಾಗಿ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದೇನೆ. ಈಗ ಹಣ ಕೊಡುವಂತೆ ಒತ್ತಾಯಿಸಿದರೆ ನನಗೆ ಜೀವ ಬೆದರಿಕೆಯನ್ನು ಒಡ್ಡುತ್ತಿದ್ದಾರೆ. ಹಾಗಾಗಿ ನನ್ನ ಹಣವನ್ನು ನನಗೆ ಕೊಡಿಸಿ, ನ್ಯಾಯ ಒದಗಿಸಬೇಕು” ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯಿಸಿದರು.

ಹಣ ವಾಪಸ್ ಕೇಳಿದ್ದಕ್ಕೆ ಧಮಕಿ ಆರೋಪ

”ನಾಲ್ವರು ತಂಡದಿಂದ ಹಂತ ಹಂತವಾಗಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ನಿವೃತ್ತ ಎಂಜಿನಿಯರ್ ಶಿವಮೂರ್ತಿ ಅವರು 1.90 ಕೋಟಿ ಹಣ ಪ್ರೂಫ್ ಸಮೇತ ನೀಡಿದ್ದಾರೆ. ಇನ್ನೂ ಪಡೆದ ಹಣ ವಾಪಸ್ ಕೇಳಿದ್ದಕ್ಕೆ ಧಮಕಿ ಹಾಕುತ್ತಿದ್ದಾರೆ” ಎಂದು ಆರೋಪ ಅವರು ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...