Homeಮುಖಪುಟಗಾಜಾದಿಂದ ತೆರಳದಿದ್ದರೆ ಭಯೋತ್ಪಾದಕರೆಂದು ಪರಿಗಣಿಸಲಾಗುವುದು: ಪ್ಯಾಲೆಸ್ತೀನಿಯರಿಗೆ ಇಸ್ರೇಲ್ ಎಚ್ಚರಿಕೆ

ಗಾಜಾದಿಂದ ತೆರಳದಿದ್ದರೆ ಭಯೋತ್ಪಾದಕರೆಂದು ಪರಿಗಣಿಸಲಾಗುವುದು: ಪ್ಯಾಲೆಸ್ತೀನಿಯರಿಗೆ ಇಸ್ರೇಲ್ ಎಚ್ಚರಿಕೆ

- Advertisement -
- Advertisement -

ಇಸ್ರೇಲ್-ಹಮಾಸ್‌ನ ನಡುವಿನ ಯುದ್ಧ ಮೂರನೇ ವಾರಕ್ಕೆ ಕಾಲಿಟ್ಟಿದೆ. ಉತ್ತರ ಗಾಜಾದ ಮೇಲೆ ಆಕ್ರಮಣ ಮಾಡುವ ಮುಂಚಿತವಾಗಿ ಇಸ್ರೇಲ್, ದಾಳಿಗಳನ್ನು ತೀವ್ರಗೊಳಿಸುವುದಾಗಿ ಹೇಳಿಕೊಂಡಿದೆ. ರಾತ್ರಿಯಿಡೀ ಗಾಜಾದ ಮೇಲೆ ಇಸ್ರೇಲ್ ಭಾರಿ ಬಾಂಬ್ ಸ್ಫೋಟಿಸಿತು.

ಪ್ಯಾಲೆಸ್ತೀನಿಯನ್ನರಿಗೆ ಉತ್ತರ ಗಾಜಾದಿಂದ ದಕ್ಷಿಣಕ್ಕೆ ತೆರಳುವಂತೆ ಇಸ್ರೇಲ್​ ತುರ್ತು ಎಚ್ಚರಿಕೆ ನೀಡಿದೆ. ಒಂದೊಮ್ಮೆ ಹೋಗದಿದ್ದರೆ ಅಂಥವರನ್ನು ನಾವು ಉಗ್ರರೆಂದು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದೆ. ಗಾಜಾದ ಉತ್ತರ ಭಾಗದಲ್ಲಿರುವುದು ನಿಮ್ಮ ಜೀವಕ್ಕೆ ಅಪಾಯವನ್ನುಂಟು ಮಾಡಲಿದೆ, ನಿಮಗೆ ಈಗಾಗಲೇ ದಕ್ಷಿಣಕ್ಕೆ ತೆರಳುವಂತೆ ನಾವು ಕೇಳಿಕೊಂಡಿದ್ದಾಗಿದೆ. ಇನ್ನೂ ನೀವು ಈ ಜಾಗವನ್ನು ಬಿಟ್ಟು ಹೋಗಿಲ್ಲ ಎಂದಾದರೆ ನಿಮ್ಮನ್ನು ಉಗ್ರರೆಂದು ಪರಿಗಣಿಸಲಾಗುತ್ತದೆ ಎಂದು ಇಸ್ರೇಲ್ ಹೇಳಿದೆ.

ಇಸ್ರೇಲ್​ ಇಂದು ಬೆಳಗ್ಗೆ ಗಾಜಾದ ಮಸೀದಿಯೊಂದರ ಮೇಲೆ ವೈಮಾನಿಕ ದಾಳಿ ನಡೆಸಿದೆ. ಗಾಜಾದ ವೆಸ್ಟ್​ ಬ್ಯಾಂಕ್​ನ ಜೆನಿನ್ ನಗರದಲ್ಲಿರುವ ಅಲ್​-ಅನ್ಸಾರ್ ಮಸೀದಿ ಸಂಕೀರ್ಣದಲ್ಲಿರುವ ಭಯೋತ್ಪಾದಕ ಸಂಘಟನೆ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದ್ ಕಮಾಂಡ್ ಸೆಂಟರ್ ಮೇಲೆ ಇಸ್ರೇಲಿ ಸೇನೆ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ವೈದ್ಯರನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿದೆ.

ಆದರೆ, ಇದು ಇನ್ನೂ ದೃಢಪಟ್ಟಿಲ್ಲ. ಇದಕ್ಕೂ ಮುನ್ನ ನೂರ್ ಶಮ್ಸ್ ನಿರಾಶ್ರಿತರ ಶಿಬಿರದಲ್ಲಿ ಇಸ್ರೇಲ್ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಮಕ್ಕಳು ಸೇರಿದಂತೆ 13 ಪ್ಯಾಲೆಸ್ತೀನ್ ಪ್ರಜೆಗಳು ಸಾವನ್ನಪ್ಪಿದ್ದರು. ಗಾಜಾ ನಗರದ ಜನರು ತಮ್ಮ ಸುರಕ್ಷತೆಗಾಗಿ ದಕ್ಷಿಣ ಗಾಜಾದ ಕಡೆಗೆ ವಲಸೆ ಹೋಗುವಂತೆ ಇಸ್ರೇಲ್ ಕೇಳಿಕೊಂಡಿತ್ತು. ಹಮಾಸ್ ಗುಂಪು ಇಬ್ಬರು ಅಮೆರಿಕದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಮತ್ತೊಮ್ಮೆ ಗಾಜಾವನ್ನು ವಶಪಡಿಸಿಕೊಳ್ಳುವವರೆಗೆ ಯುದ್ಧವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 7ರಂದು ಗಾಜಾದ ನೆಲದ ಮೇಲೆ ಇಸ್ರೇಲ್ ಆಕ್ರಮಣ ಆರಂಭವಾಯಿತು. ಟ್ಯಾಂಕ್‌ಗಳು ಮತ್ತು ಹತ್ತಾರು ಸಾವಿರ ಸೈನಿಕರು ಗಡಿಯಲ್ಲಿ ಜಮಾವಣೆಗೊಂಡರು.

ಅಂದಾಜು 7,00,000 ಜನರು ಈಗಾಗಲೇ ಪಲಾಯನ ಮಾಡಿದ್ದಾರೆ. ಆದರೆ ಇನ್ನೂ ಅನೇಕ ಜನರು ಅಲ್ಲಿಯೇ ಉಳಿದಿದ್ದಾರೆ. ಇದು ನಾಗರಿಕ ಸಾವುನೋವುಗಳಿಗೆ ಕಾರಣವಾಗಿದೆ.

ಹಮಾಸ್‌ನ ಮೂಲಸೌಕರ್ಯ ಮತ್ತು ಭೂಗತ ಸುರಂಗ ವ್ಯವಸ್ಥೆಯು ಗಾಜಾ ನಗರದಲ್ಲಿ ಕೇಂದ್ರೀಕೃತವಾಗಿದೆ. ಅಲ್ಲಿ ಮುಂದಿನ ಹಂತದ ಆಕ್ರಮಣವು ಭೀಕರವಾಗಿರಲಿದೆ ಎಂದು ಇಸ್ರೇಲಿ ಮಿಲಿಟರಿ ಅಧಿಕಾರಿಗಳು ಹೇಳುತ್ತಾರೆ.

ಇದನ್ನೂ ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 117 ಮಕ್ಕಳು ಸೇರಿ 266 ಫೆಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...