Homeಮುಖಪುಟಬಿಹಾರ ಮಾದರಿಯಲ್ಲಿ ಜಾತಿ ಗಣತಿಗೆ ಕರೆ ನೀಡಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್

ಬಿಹಾರ ಮಾದರಿಯಲ್ಲಿ ಜಾತಿ ಗಣತಿಗೆ ಕರೆ ನೀಡಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್

- Advertisement -
- Advertisement -

ಎಲ್ಲಾ ಸಮುದಾಯಗಳ ನಿಖರವಾದ ಜನಸಂಖ್ಯೆಯನ್ನು ಕಂಡುಹಿಡಿಯಲು ಜಾತಿ ಗಣತಿಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ಕರೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸೊಲ್ಲಾಪುರ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ”ಬಿಹಾರ ಸರ್ಕಾರ ಆ ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿ ನಡೆಸಿತು. ಅದರಂತೆ ನಮ್ಮ ರಾಜ್ಯದಲ್ಲೂ ಜಾತಿ ಗಣತಿ ನಡೆಯಲಿ ಎನ್ನುವುದು ನನ್ನ ಅಭಿಪ್ರಾಯವಿದೆ” ಎಂದು ಪವಾರ್ ಹೇಳಿದ್ದಾರೆ.

”ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಪ್ರಯೋಜನಗಳನ್ನು ನೀಡುವುದರಿಂದ OBC, SC, STಗಳು, ಅಲ್ಪಸಂಖ್ಯಾತರು, ಸಾಮಾನ್ಯ ವರ್ಗ ಇತ್ಯಾದಿಗಳ ನಿಖರವಾದ ಜನಸಂಖ್ಯೆಯನ್ನು ನಾವು ತಿಳಿದುಕೊಳ್ಳುತ್ತೇವೆ. ಮಹಾರಾಷ್ಟ್ರದಲ್ಲಿ ಜಾತಿ ಗಣತಿ ನಡೆಸಬೇಕು” ಎಂದು ಅಜಿತ್ ಪವಾರ್ ಹೇಳಿದರು.

”ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಬಿಹಾರದಲ್ಲಿ ನಡೆದ ಜಾತಿ ಸಮೀಕ್ಷೆಯ ಬಗ್ಗೆ ವಿವರಗಳನ್ನು ಕೇಳಿದ್ದೇವೆ” ಎಂದು ಪವಾರ್ ಹೇಳಿದರು.

”ಸರ್ಕಾರವು ಜಾತಿ ಸಮೀಕ್ಷೆಯನ್ನು ಎಂದಿಗೂ ವಿರೋಧಿಸಿಲ್ಲ ಎನ್ನುವುದಾಗಿ ಫಡ್ನವೀಸ್ ಹೇಳಿದರು. ಬಿಹಾರದಲ್ಲಿ ಬಂದಂತಹ ತೊಂದರೆಗಳು ಇಲ್ಲಿ ಉದ್ಭವಿಸದಂತೆ ನಾವು ಖಚಿತಪಡಿಸಿಕೊಳ್ಳಬೇಕು” ಎಂದು ಅವರು ಹೇಳಿದರು.

ಜನವರಿಯಲ್ಲಿ ಪ್ರಾರಂಭವಾದ ಬಿಹಾರ ಸಮೀಕ್ಷೆಯ ಫಲಿತಾಂಶಗಳನ್ನು ಈ ತಿಂಗಳ ಆರಂಭದಲ್ಲಿ ಬಿಡುಗಡೆ ಮಾಡಲಾಗಿದೆ. ಇತರ ಹಿಂದುಳಿದ ವರ್ಗಗಳು ಮತ್ತು ಅತ್ಯಂತ ಹಿಂದುಳಿದ ವರ್ಗಗಳು ರಾಜ್ಯದ ಜನಸಂಖ್ಯೆಯ 63% ಕ್ಕಿಂತ ಹೆಚ್ಚು ಇದ್ದಾರೆ ಎಂದು ಅದು ಬಹಿರಂಗಪಡಿಸಿತು. ಬಿಹಾರದ ಒಟ್ಟು ಜನಸಂಖ್ಯೆಯ 13.07 ಕೋಟಿಗಿಂತ ಸ್ವಲ್ಪ ಹೆಚ್ಚು ಜನಸಂಖ್ಯೆಯಲ್ಲಿ, ಅತ್ಯಂತ ಹಿಂದುಳಿದ ವರ್ಗಗಳು 36% ಅನ್ನು ಒಳಗೊಂಡಿವೆ, ಇದು ಅತಿದೊಡ್ಡ ಸಾಮಾಜಿಕ ವಿಭಾಗವಾಗಿದೆ, ನಂತರ ಇತರ ಹಿಂದುಳಿದ ವರ್ಗಗಳು 27.13% ಜನಸಂಖ್ಯೆ ಇದೆ ಎಂದು ವರದಿ ಹೇಳಿದೆ.

ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7% ಪರಿಶಿಷ್ಟ ಜಾತಿಯ ಜನ ಮತ್ತು 1.7%  ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು 15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3 ರಷ್ಟಿದ್ದಾರೆ.

ಮರಾಠ ಕೋಟಾ ಬೇಡಿಕೆಗೆ ರಾಜ್ಯ ಸರ್ಕಾರ ಸಕಾರಾತ್ಮಕ: ಪವಾರ್

”ಮರಾಠರಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಬಗ್ಗೆ ರಾಜ್ಯ ಸರ್ಕಾರವು ಸಕಾರಾತ್ಮಕವಾಗಿದೆ” ಎಂದು ಪವಾರ್ ಸೋಮವಾರ ಹೇಳಿದ್ದಾರೆ.

”ಸಧ್ಯಕ್ಕೆ ನಮ್ಮ ರಾಜ್ಯದಲ್ಲಿ 62% ಕ್ಕಿಂತ ಹೆಚ್ಚಿನ ಮೀಸಲಾತಿ ಕೋಟಾವನ್ನು ನೀಡುವ ವಿಚಾರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಇದೆ. ಅದು ಕಾನೂನುಬದ್ಧವಾಗಿ ಮಾಡಬೇಕಿದೆ” ಎಂದು ಪವಾರ್ ಹೇಳಿದರು.

”ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ-ಪಾಟೀಲ್ ಅವರು ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರವನ್ನು ಕೋರಿದ್ದರೆ, ಒಬಿಸಿಗಳು ಯಾವುದೇ ಸಮುದಾಯವನ್ನು ವರ್ಗಕ್ಕೆ ಸೇರಿಸಬಾರದು ಎಂದು ಒತ್ತಾಯಿಸಿ ಜ್ಞಾಪಕ ಪತ್ರಗಳನ್ನು ಸಲ್ಲಿಸಿದ್ದಾರೆ” ಎಂದು ಅವರು ಹೇಳಿದರು.

ಮಹಾರಾಷ್ಟ್ರ ಸರ್ಕಾರ ಮರಾಠರಿಗೆ ಮೀಸಲಾತಿ ನೀಡಲು ವಿಫಲವಾದರೆ ಅಕ್ಟೋಬರ್ 25 ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಭಾನುವಾರ ಜಾರಂಗೆ-ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿ: ಪತ್ರಕರ್ತರಿಗೆ ರಾಹುಲ್ ಗಾಂಧಿ ಕೇಳಿದ ಪ್ರಶ್ನೆ ದೇಶದ ವಾಸ್ತವಕ್ಕೆ ಹಿಡಿದ ಕನ್ನಡಿ- ನಟ ಕಿಶೋರ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....