Homeಅಂಕಣಗಳು370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

- Advertisement -
- Advertisement -

| ಎಚ್.ಎಸ್. ದೊರೆಸ್ವಾಮಿ |

2019ರ ಆಗಸ್ಟ್ 5ರಂದು 50000 ಸೈನಿಕರನ್ನು ಹಠಾತ್ತನೆ ಕಾಶ್ಮೀರಕ್ಕೆ ಕಳಿಸಲಾಯಿತು. ಕಫ್ರ್ಯೂ ವಿಧಿಸಲಾಯಿತು. ಅಲ್ಲಿ ಏನು ನಡೆಯುತ್ತಿದೆ ಎಂಬ ಸುದ್ದಿ ಭಾರತದ ಇತರ ಭಾಗದ ಜನರಿಗೆ ಗೊತ್ತಾಗದಂತೆ ಅಲ್ಲಿಯ ಸುದ್ದಿ ಸಂಸ್ಥೆಗಳನ್ನು ಸ್ಥಗಿತಗೊಳಿಸಲಾಯಿತು. ಕಾಶ್ಮೀರದ ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಫಾರೂಕ್ ಅಬ್ದುಲ್ಲಾ, ಉಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ ಮುಂತಾದವರನ್ನು ಗೃಹಬಂಧನದಲ್ಲಿ ಇಡಲಾಯಿತು. ಕಾಶ್ಮೀರದ ಭವಿಷ್ಯವನ್ನು ಇತರ ರಾಜ್ಯಗಳ ಬಿಜೆಪಿ ಲೋಕಸಭಾ ಸದಸ್ಯರು ನಿರ್ಧರಿಸಿಬಿಟ್ಟರು. ಆರ್ಟಿಕಲ್ 370ನ್ನು ಹಿಂಪಡೆಯಲಾಯಿತು. ಪಾರ್ಲಿಮೆಂಟಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು, ಇನ್ನೂ ಖಚಿತವಾಗಿ ಹೇಳಬೇಕಾದರೆ ಮೋದಿ ಮತ್ತು ಅಮಿತ್ ಶಾರವರು ಕಾಶ್ಮೀರದ ಭವಿಷ್ಯವನ್ನು ನಿರ್ಧರಿಸಿಬಿಟ್ಟರು.

370ನೇ ವಿಧಿಯನ್ನು ತಿದ್ದುಪಡಿ ಮಾಡುವ ಮೊದಲು ಕಾಶ್ಮೀರ ಜನರ ಅಭಿಪ್ರಾಯ ಕೇಳಬೇಕಾಗಿತ್ತು. ಲೋಕಸಭೆಯ ವಿರೋಧ ಪಕ್ಷದವರ ಅಭಿಪ್ರಾಯ ಏನೆಂದು ತಿಳಿಯಬೇಕಿತ್ತು. ಕೇಂದ್ರ ಸರ್ಕಾರ ಈ ರೀತಿ ಹಠತ್ತಾಗಿ ಕಾಶ್ಮೀರದ ಮೇಲೆ ತಮ್ಮ ತೀರ್ಮಾನ ಹೇರುವ ಬದಲು ಮೇಲೆ ಹೇಳಿದ ಎಲ್ಲರ ಒಟ್ಟು ಅಭಿಪ್ರಾಯವನ್ನು ತಿಳಿಯುವ ಅವಶ್ಯಕತೆ ಇತ್ತು.

ಹಿಂದೆ ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಕೂಡಿಸಿ ವಿಶಾಲಾಂಧ್ರ ರಚಿಸಬೇಕೆಂದು ಸರ್ಕಾರ ತೀರ್ಮಾನಿಸಿತು. ಎಲ್ಲಾ ದೃಷ್ಟಿಯಿಂದಲೂ ಹಿಂದುಳಿದಿದ್ದ ತೆಲಂಗಾಣವನ್ನು ಬುದ್ಧಿವಂತರೂ, ಐಶ್ವರ್ಯವಂತರೂ, ಸಾಹಸಿ ಉದ್ಯಮಿಗಳೂ ಆದ ಆಂಧ್ರ ಪ್ರದೇಶದವರ ವಶಕ್ಕೆ ವಸಾಹತು ನೀಡಿದಂತೆ ನೀಡಬೇಕೆಂಬ ರೀತಿಯಲ್ಲಿ ಈ ಘೋಷಣೆ ಮಾಡಿತು. ಹಾಗೆಯೇ ತೆಲಂಗಾಣದವರಿಗೆ ತಮ್ಮ ನದಿಗಳ ಮೇಲಿನ ಹಕ್ಕುಗಳ ಬಗೆಗೂ ಮತ್ತು ನೀರಿನ ಭದ್ರತೆಯ ಬಗೆಗೂ ಕಾಳಜಿ ಇತ್ತು.

ಈ ಕಾರಣಗಳಿಗಾಗಿ ತೆಲಂಗಾಣವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಬೇಕೆಂದು ತೆಲಂಗಾಣದ ನಾಯಕರು ಅಭಿಪ್ರಾಯಪಟ್ಟರು. ಆದರೂ 1956ರಲ್ಲಿ ತೆಲಂಗಾಣ ಒಳಗೊಂಡ ಆಂಧ್ರಪ್ರದೇಶ ಅಸ್ತಿತ್ವಕ್ಕೆ ಬಂತು. ಈ ಮಧ್ಯೆ ತೆಲಂಗಾಣದ ಹಿಂದುಳಿದಿರುವಿಕೆಯನ್ನು ಸುಧಾರಿಸುವ ಆಶ್ವಾಸನೆಗಳು ಕೇಂದ್ರ ಸರ್ಕಾರದಿಂದ ಪ್ರಕಟವಾದವು. ಆ ಭರವಸೆಗಳು ಭರವಸೆಗಳಾಗಿಯೇ ಉಳಿದವು.

ಕಾಶ್ಮೀರದ 370ನೇ ವಿಧಿ ಹಾಗೂ ಆಂಧ್ರಪ್ರದೇಶದಲ್ಲಿ ತೆಲಂಗಾಣವನ್ನು ವಿಲೀನಗೊಳಿಸುವ ಮಸೂದೆಗಳನ್ನು ಪಾರ್ಲಿಮೆಂಟ್ ಅಧಿವೇಶನದ ಕೊನೆಯ ದಿನಗಳಲ್ಲಿ ಮಂಡಿಸಲಾಯಿತು. ಚರ್ಚೆಗೆ ಅವಕಾಶ ಮಾಡಿಕೊಡಲಿಲ್ಲ. ಜಂಟಿ ಸಮಿತಿಗೆ ಒಪ್ಪಿಸುವುದಕ್ಕೂ ಸರ್ಕಾರ ಒಪ್ಪಲಿಲ್ಲ. ರಾಜ್ಯ ಸರ್ಕಾರಗಳ ಹಾಗೂ ಶಾಸನಸಭೆಯ ಅಭಿಪ್ರಾಯ ತಿಳಿಯಲು ಅವಕಾಶ ಕಲ್ಪಿಸಲಿಲ್ಲ. ಅಂದಹಾಗೆ ಇದಕ್ಕೆ ಮೊದಲೇ ಕಾಶ್ಮೀರ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತವನ್ನು ಕಾಶ್ಮೀರದ ಮೇಲೆ ಹೇರಲಾಗಿತ್ತು.

ಜಮ್ಮು ಕಾಶ್ಮೀರಗಳ ಗಲಭೆಗಳು, ಭಯೋತ್ಪಾದಕ ಕೃತ್ಯಗಳು 370ನೇ ವಿಧಿಯನ್ನು ತೆಗೆದುಹಾಕುವುದರಿಂದ ಕೊನೆಗೊಳ್ಳುವುದು ಎಂದು ಗೃಹ ಸಚಿವರು ಹೇಳಿದ್ದಾರೆ. ಕಾಶ್ಮೀರದಲ್ಲಿ ಒಂದು ಸಶಕ್ತ ಸಮ್ಮಿಶ್ರ ಸರ್ಕಾರ ಇದ್ದರೆ ಮಾತ್ರ ಅಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುವುದು. ಅದಿಲ್ಲವಾದರೆ ಬೂದಿ ಮುಚ್ಚಿದ ಕೆಂಡದಂತಿರುವ ಈ ಪರಿಸ್ಥಿತಿ ಯಾವಾಗ ಬೇಕಾದರೂ ಹದಗೆಡಬಹುದು. ಅಲ್ಲಿಯ ಸರ್ಕಾರಕ್ಕೂ ಕೇಂದ್ರ ಸರ್ಕಾರಕ್ಕೂ ಒಂದು ಮಧುರ ಬಾಂಧವ್ಯ ಇದ್ದರೆ ಮಾತ್ರ ಶಾಶ್ವತ ಶಾಂತಿ ನೆಲೆಸೀತು. ಒಂದು ಬಹುಮುಖ್ಯ ವಿಚಾರವೆಂದರೆ ಮಿಲಿಟರಿಯ ಮೃಗೀಯ ಶಕ್ತಿ ಬಳಸಿಕೊಂಡು ಕಾಶ್ಮೀರದಲ್ಲಿ ಶಾಂತಿಸ್ಥಾಪನೆ ಮಾಡುವುದು ಆಗದ ಮಾತು.

ಶ್ರೀಲಂಕಾದಲ್ಲಿ ತಮಿಳರಿಗೆ ಸ್ವತಂತ್ರವಾಗಿ ಬದುಕಲು ಸಿಂಹಳೀಯರು ಅವಕಾಶ ಮಾಡಿಕೊಡಲು ನಿರಾಕರಿಸಿ ಅವರಿಗೆ ಕಿರುಕುಳ ಕೊಟ್ಟಿದ್ದರಿಂದ ಅಲ್ಲಿ ಎಲ್.ಟಿ.ಟಿ.ಈಗೂ ಸಿಂಹಳ ಸರ್ಕಾರಕ್ಕೂ ಯುದ್ಧವೇ ನಡೆದುಹೋಯಿತು ಎಂಬುದನ್ನು ನಾವು ಮರೆಯಬಾರದು. ಅಂತಹ ಯುದ್ಧದಲ್ಲಿ ಮನುಷ್ಯತ್ವವೇ ಕರಗಿಹೋಗುವ ಮಾರಣಹೋಮಗಳು ನಡೆದವು.

370ನೇ ವಿಧಿಯನ್ನು ಆಗ ರಾಷ್ಟ್ರಾಧ್ಯಕ್ಷರ ಆದೇಶದ ಮೇರೆಗೆ ಜಾರಿಗೆ ತರಲಾಗಿತ್ತು. ಈಗ ರಾಷ್ಟ್ರಾಧ್ಯಕ್ಷರ ಆದೇಶದಿಂದಲೇ ಕಿತ್ತು ಹಾಕುತ್ತೇವೆ ಆದ್ದರಿಂದ ಅದು ರಾಜ್ಯಾಂಗದ ಉಲ್ಲಂಘನೆಯಲ್ಲ ಎಂದು ಅಮಿತ್ ಶಾ ಅವರು ಹೇಳುತ್ತಾರೆ. ಇದು ಅಷ್ಟು ಸರಳ ಸಂಗತಿಯಾಗಿಲ್ಲ. ನಾವು ಪ್ರೀತಿಯಿಂದ ಒಲಿಸಿಕೊಳ್ಳಬೇಕಿದ್ದ, ಒಂದು ಭೂಭಾಗವು ನಮ್ಮೊಡನೆ ಸೇರಲು ಮಾಡಿಕೊಂಡಿದ್ದ ಕರಾರು ಅದು. ದೇಶ ರೂಪುಗೊಳ್ಳಬೇಕಾದ ಸಂದರ್ಭದಲ್ಲಿ ಮಾಡಿಕೊಳ್ಳಲಾಗಿದ್ದ ಅಂತಹ ರಾಜ್ಯಾಂಗ ಬದಲಾವಣೆಗಳನ್ನು ಹೀಗೆ ಅಧಿಕಾರಬಲದಿಂದ ಹಿಂತೆಗೆದುಕೊಳ್ಳುವ ಅಧಿಕಾರ ರಾಷ್ಟ್ರಾಧ್ಯಕ್ಷರಿಗೆ ಇದೆಯೇ ಎಂಬುದು ಚರ್ಚೆಗೆ ಬರುವ ಸಂಭವವಿದೆ. ಕಾಲ ನಿಂತ ನೀರಲ್ಲ. ಬದಲಾವಣೆಗಳು ಬೇಕಾಗಬಹುದು. ಅಂತಹ ಸಂದರ್ಭದಲ್ಲಿ ಮೆಜಾರಿಟಿ ಇದೆ, ಬದಲಿಸಿಕೊಳ್ಳುತ್ತೇವೆ ಎಂಬ ಧೋರಣೆಗಿಂತ, ಯಾರ ಮೇಲೆ ಇದರ ಹೆಚ್ಚಿನ ಪರಿಣಾಮ ಆಗುತ್ತದೋ, ಅವರ ಅಭಿಪ್ರಾಯವನ್ನು ಪರಿಗಣಿಸುವುದಕ್ಕೆ ಹೆಚ್ಚಿನ ಮುತುವರ್ಜಿ ಇರಬೇಕು.

ಸ್ವಾತಂತ್ರ್ಯ ಬಂದಮೇಲೆ ಸಂಸ್ಥಾನಗಳ ರಾಜರುಗಳು, ಇಂಡಿಯನ್ ಯೂನಿಯನ್ ಜೊತೆಗೆ ಕೂಡಿಕೊಂಡಾಗ ಅವರಿಗೆ ರಾಜಧನ ನೀಡಬೇಕೆಂದು ಒಪ್ಪಂದ ಆಗಿತ್ತು. ಮುಂದೆ ರಾಜಧನ ಕೊಡುವುದಿಲ್ಲವೆಂದು ರಾಷ್ಟ್ರಾಧ್ಯಕ್ಷರು ತೀರ್ಮಾನ ತೆಗೆದುಕೊಂಡಾಗ ಮಾಜಿ ರಾಜರು ಸವ್ರ್ಚೊಚ್ಚ ನ್ಯಾಯಾಲಯದ ಮೆಟ್ಟಿಲು ಏರಿದರು. ಒಮ್ಮೆ ಕೊಡಲು ಒಪ್ಪಿಕೊಂಡಿರುವ ರಾಜಧನವನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿತು. ಅಂದಿನ ಕಾಶ್ಮೀರ ರಾಜರೊಡನೆ ಮಾಡಿಕೊಂಡಿರುವ ಒಪ್ಪಂದವನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದು ಕಾನೂನಾತ್ಮಕವಾಗಿ ಮತ್ತು ನ್ಯಾಯಯುತವಾಗಿ ಸಾಧುವೇ? ಈ ಪ್ರಶ್ನೆಯನ್ನು ಈ ಸಂದರ್ಭದಲ್ಲಿ ಎತ್ತಲು ಸಾಧ್ಯವೇ ಎಂಬುದನ್ನು ಕಾನೂನುಪಂಡಿತರು ಜನರಿಗೆ ತಿಳಿಸಿ ಹೇಳಬೇಕು.

ಈ ದೇಶದ ಆಡಳಿತದ ಹೊಣೆಗಾರಿಕೆ ಪ್ರಜೆಯದು. ರಾಷ್ಟ್ರಾಧ್ಯಕ್ಷರಾಗಲಿ, ಸರ್ಕಾರವೇ ಆಗಲಿ ತಮ್ಮ ಸಾರ್ವಭೌಮತ್ವವನ್ನು ಪ್ರಜೆಗಳ ಮೇಲೆ ಕಾನೂನುಬಾಹಿರವಾಗಿ ಹೇರುವುದು ಸರಿಯಿಲ್ಲ. ಆರ್ಥಿಕ ಸಂಯೋಜನೆ ಮತ್ತು ಅಭಿವೃದ್ಧಿ ಮಂತ್ರ ಮಾತ್ರ ಸಂಯೋಜನೆಗೆ ಮಾರ್ಗಸೂಚಿ ಅಲ್ಲ. ಜಮ್ಮು ಕಾಶ್ಮೀರದ ಜನತೆಯ ಅನುಮತಿ ಮತ್ತು ಸಹಕಾರವಿಲ್ಲದೆ ಇದ್ದರೆ ಆ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಲಿ, 370ರ ವಿಧಿಯನ್ನು ರದ್ದು ಮಾಡುವುದಾಗಲೀ ಸುಸೂತ್ರವಾಗಿ ನಡೆಯಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...