Homeಮುಖಪುಟಮಹಾರಾಷ್ಟ್ರ ಸರ್ಕಾರ ಕೊಟ್ಟ ಗಡುವು ಅಂತ್ಯ: ಮರಾಠ ಮೀಸಲಾತಿ ಹೆಚ್ಚಳಕ್ಕೆ ಮತ್ತೆ ಉಪವಾಸ ಸತ್ಯಾಗ್ರಹ

ಮಹಾರಾಷ್ಟ್ರ ಸರ್ಕಾರ ಕೊಟ್ಟ ಗಡುವು ಅಂತ್ಯ: ಮರಾಠ ಮೀಸಲಾತಿ ಹೆಚ್ಚಳಕ್ಕೆ ಮತ್ತೆ ಉಪವಾಸ ಸತ್ಯಾಗ್ರಹ

- Advertisement -
- Advertisement -

ಮರಾಠ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಜಲ್ನಾ ಮೂಲದ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಬುಧವಾರ ಬೆಳಗ್ಗೆ ಅಂತರವಾಲಿ ಸಾರಥಿ ಗ್ರಾಮದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ಹೆಚ್ಚಳಕ್ಕೆ ಜಾರಂಗೆ ಪಾಟೀಲ್ ಅವರು ಮಹಾರಾಷ್ಟ್ರ ಸರ್ಕಾರಕ್ಕೆ 40 ದಿನಗಳ ಗಡುವು ನೀಡಿದ್ದರು. ಗಡುವು ಮಂಗಳವಾರ ಮುಕ್ತಾಯಗೊಂಡಿದೆ.

ಮನೋಜ್ ಜಾರಂಗೆ ಪಾಟೀಲ್ ಗ್ರಾಮದಲ್ಲಿ ಆ.29ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಸೆ.18 ರಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಗ್ರಾಮಕ್ಕೆ ಬಂದು ಮರಾಠ ಮೀಸಲಾತಿ ಬಗ್ಗೆ ಭರವಸೆ ನೀಡಿದ ಬಳಿಕ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸಿದ್ದರು.

ಉಪವಾಸ ಸತ್ಯಾಗ್ರಹ ಕೈಗೊಳ್ಳುವ ಬಗ್ಗೆ ಮಾತನಾಡಿದ ಜಾರಂಗೆ ಪಾಟೀಲ್, ಈ ಬಾರಿ ನಾನು ಯಾವುದೇ ವೈದ್ಯಕೀಯ ಚಿಕಿತ್ಸೆ ತೆಗೆದುಕೊಳ್ಳುವುದಿಲ್ಲ. ನಾನು ನೀರು ಕುಡಿಯುವುದಿಲ್ಲ ಅಥವಾ ಯಾವುದೇ ಆಹಾರವನ್ನು ಸೇವಿಸುವುದಿಲ್ಲ. ನಾವು ನಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ. ಆದರೆ ಅದು ಆಕ್ರಮಣಕಾರಿಯಾಗಿರುವುದಿಲ್ಲ. ಹಳ್ಳಿಗಳಲ್ಲಿ ಸರಣಿ ಉಪವಾಸ ಸತ್ಯಾಗ್ರಹಗಳು ನಡೆಯಲಿದೆ. ಕ್ಯಾಂಡಲ್ ಲೈಟ್ ಮೆರವಣಿಗೆ ಆಯೋಜಿಸಲಾಗುವುದು. ಮರಾಠರಿಗೆ ಮೀಸಲಾತಿ ನೀಡುವವರೆಗೆ ಎಲ್ಲ ಪಕ್ಷಗಳ ರಾಜಕಾರಣಿಗಳು ನಮ್ಮ ಹಳ್ಳಿಗಳಿಗೆ ಬರಬೇಡಿ ಎಂದು ನಾವು ವಿನಂತಿಸುತ್ತೇವೆ ಎಂದು ಹೇಳಿದ್ದಾರೆ.

ಈ ಮಧ್ಯೆ ಮಹಾರಾಷ್ಟ್ರದ ಸಚಿವ ಮತ್ತು ಬಿಜೆಪಿ ನಾಯಕ ಗಿರೀಶ್ ಮಹಾಜನ್, ಜಾರಂಗೆ ಪಾಟೀಲ್‌ಗೆ  ಸಂಪರ್ಕಿಸಿ ಮತ್ತೊಂದು ಉಪವಾಸ ಸತ್ಯಾಗ್ರಹಕ್ಕೆ ಕುಳಿತುಕೊಳ್ಳದಂತೆ ಒತ್ತಾಯಿಸಿದ್ದಾರೆ. ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಸ್ವಲ್ಪ ಕಾಲಾವಕಾಶ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಇದಲ್ಲದೆ ಅವರ ನಾಲ್ಕೈದು ಬೇಡಿಕೆಗಳನ್ನು ತಕ್ಷಣ ಈಡೇರಿಸಲಾಗುವುದು ಎಂದು ಮಹಾಜನ್ ಹೇಳಿದ್ದಾರೆ.

ಪಾಟೀಲ್‌ ಸರಕಾರಕ್ಕೆ ಸಮಯಾವಕಾಶ ನೀಡಲು ನಿರಾಕರಿಸಿದ್ದು, ಮೀಸಲಾತಿ ಘೋಷಣೆ ಬಳಿಕವೇ ಉಪವಾಸ ಸತ್ಯಾಗ್ರಹ ಕೈಬಿಡುವುದಾಗಿ ಹೇಳಿದ್ದಾರೆ. ಮೀಸಲಾತಿ ಘೋಷಣೆಗೆ ಏನು ತೊಂದರೆ? ಸರ್ಕಾರ ಆರಂಭದಲ್ಲಿ 15 ದಿನಗಳ ಕಾಲಾವಕಾಶ ಕೇಳಿತ್ತು. ನಂತರ 30 ದಿನಗಳು ಆಯ್ತು. ಆದರೆ ನಾವು ಅವರಿಗೆ 40 ದಿನಗಳ ಕಾಲಾವಕಾಶ ನೀಡಿದ್ದೇವೆ ಆದರೆ ಏನೂ ಮಾಡಲಾಗಿಲ್ಲ ಎಂದು ಪಾಟೀಲ್ ಹೇಳಿದ್ದಾರೆ.

ಸೆ.1ರಂದು ಜಲ್ನಾದ ಅಂತರವಾಲಿ ಗ್ರಾಮದಲ್ಲಿ ಮರಾಠ ಮೀಸಲಾತಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಿದ್ದರು. ಇದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ವಿರೋಧ ಪಕ್ಷದ ನಾಯಕರು ಬಲಪ್ರಯೋಗ ಮಾಡಿದ್ದಕ್ಕಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನು ಓದಿ: ಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...