Homeಮುಖಪುಟಮಹಾರಾಷ್ಟ್ರ ಸರ್ಕಾರ ಕೊಟ್ಟ ಗಡುವು ಅಂತ್ಯ: ಮರಾಠ ಮೀಸಲಾತಿ ಹೆಚ್ಚಳಕ್ಕೆ ಮತ್ತೆ ಉಪವಾಸ ಸತ್ಯಾಗ್ರಹ

ಮಹಾರಾಷ್ಟ್ರ ಸರ್ಕಾರ ಕೊಟ್ಟ ಗಡುವು ಅಂತ್ಯ: ಮರಾಠ ಮೀಸಲಾತಿ ಹೆಚ್ಚಳಕ್ಕೆ ಮತ್ತೆ ಉಪವಾಸ ಸತ್ಯಾಗ್ರಹ

- Advertisement -
- Advertisement -

ಮರಾಠ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಜಲ್ನಾ ಮೂಲದ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಬುಧವಾರ ಬೆಳಗ್ಗೆ ಅಂತರವಾಲಿ ಸಾರಥಿ ಗ್ರಾಮದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ಹೆಚ್ಚಳಕ್ಕೆ ಜಾರಂಗೆ ಪಾಟೀಲ್ ಅವರು ಮಹಾರಾಷ್ಟ್ರ ಸರ್ಕಾರಕ್ಕೆ 40 ದಿನಗಳ ಗಡುವು ನೀಡಿದ್ದರು. ಗಡುವು ಮಂಗಳವಾರ ಮುಕ್ತಾಯಗೊಂಡಿದೆ.

ಮನೋಜ್ ಜಾರಂಗೆ ಪಾಟೀಲ್ ಗ್ರಾಮದಲ್ಲಿ ಆ.29ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಸೆ.18 ರಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಗ್ರಾಮಕ್ಕೆ ಬಂದು ಮರಾಠ ಮೀಸಲಾತಿ ಬಗ್ಗೆ ಭರವಸೆ ನೀಡಿದ ಬಳಿಕ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸಿದ್ದರು.

ಉಪವಾಸ ಸತ್ಯಾಗ್ರಹ ಕೈಗೊಳ್ಳುವ ಬಗ್ಗೆ ಮಾತನಾಡಿದ ಜಾರಂಗೆ ಪಾಟೀಲ್, ಈ ಬಾರಿ ನಾನು ಯಾವುದೇ ವೈದ್ಯಕೀಯ ಚಿಕಿತ್ಸೆ ತೆಗೆದುಕೊಳ್ಳುವುದಿಲ್ಲ. ನಾನು ನೀರು ಕುಡಿಯುವುದಿಲ್ಲ ಅಥವಾ ಯಾವುದೇ ಆಹಾರವನ್ನು ಸೇವಿಸುವುದಿಲ್ಲ. ನಾವು ನಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ. ಆದರೆ ಅದು ಆಕ್ರಮಣಕಾರಿಯಾಗಿರುವುದಿಲ್ಲ. ಹಳ್ಳಿಗಳಲ್ಲಿ ಸರಣಿ ಉಪವಾಸ ಸತ್ಯಾಗ್ರಹಗಳು ನಡೆಯಲಿದೆ. ಕ್ಯಾಂಡಲ್ ಲೈಟ್ ಮೆರವಣಿಗೆ ಆಯೋಜಿಸಲಾಗುವುದು. ಮರಾಠರಿಗೆ ಮೀಸಲಾತಿ ನೀಡುವವರೆಗೆ ಎಲ್ಲ ಪಕ್ಷಗಳ ರಾಜಕಾರಣಿಗಳು ನಮ್ಮ ಹಳ್ಳಿಗಳಿಗೆ ಬರಬೇಡಿ ಎಂದು ನಾವು ವಿನಂತಿಸುತ್ತೇವೆ ಎಂದು ಹೇಳಿದ್ದಾರೆ.

ಈ ಮಧ್ಯೆ ಮಹಾರಾಷ್ಟ್ರದ ಸಚಿವ ಮತ್ತು ಬಿಜೆಪಿ ನಾಯಕ ಗಿರೀಶ್ ಮಹಾಜನ್, ಜಾರಂಗೆ ಪಾಟೀಲ್‌ಗೆ  ಸಂಪರ್ಕಿಸಿ ಮತ್ತೊಂದು ಉಪವಾಸ ಸತ್ಯಾಗ್ರಹಕ್ಕೆ ಕುಳಿತುಕೊಳ್ಳದಂತೆ ಒತ್ತಾಯಿಸಿದ್ದಾರೆ. ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಸ್ವಲ್ಪ ಕಾಲಾವಕಾಶ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಇದಲ್ಲದೆ ಅವರ ನಾಲ್ಕೈದು ಬೇಡಿಕೆಗಳನ್ನು ತಕ್ಷಣ ಈಡೇರಿಸಲಾಗುವುದು ಎಂದು ಮಹಾಜನ್ ಹೇಳಿದ್ದಾರೆ.

ಪಾಟೀಲ್‌ ಸರಕಾರಕ್ಕೆ ಸಮಯಾವಕಾಶ ನೀಡಲು ನಿರಾಕರಿಸಿದ್ದು, ಮೀಸಲಾತಿ ಘೋಷಣೆ ಬಳಿಕವೇ ಉಪವಾಸ ಸತ್ಯಾಗ್ರಹ ಕೈಬಿಡುವುದಾಗಿ ಹೇಳಿದ್ದಾರೆ. ಮೀಸಲಾತಿ ಘೋಷಣೆಗೆ ಏನು ತೊಂದರೆ? ಸರ್ಕಾರ ಆರಂಭದಲ್ಲಿ 15 ದಿನಗಳ ಕಾಲಾವಕಾಶ ಕೇಳಿತ್ತು. ನಂತರ 30 ದಿನಗಳು ಆಯ್ತು. ಆದರೆ ನಾವು ಅವರಿಗೆ 40 ದಿನಗಳ ಕಾಲಾವಕಾಶ ನೀಡಿದ್ದೇವೆ ಆದರೆ ಏನೂ ಮಾಡಲಾಗಿಲ್ಲ ಎಂದು ಪಾಟೀಲ್ ಹೇಳಿದ್ದಾರೆ.

ಸೆ.1ರಂದು ಜಲ್ನಾದ ಅಂತರವಾಲಿ ಗ್ರಾಮದಲ್ಲಿ ಮರಾಠ ಮೀಸಲಾತಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಿದ್ದರು. ಇದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ವಿರೋಧ ಪಕ್ಷದ ನಾಯಕರು ಬಲಪ್ರಯೋಗ ಮಾಡಿದ್ದಕ್ಕಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನು ಓದಿ: ಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...